Homeಮುಖಪುಟಬಾಲಕಿಗೆ ಬಲವಂತವಾಗಿ ಮುತ್ತು ಕೊಟ್ಟ ಪ್ರಕರಣ: ಶಿಕ್ಷೆ ಎತ್ತಿಹಿಡಿದ ದೆಹಲಿ ಹೈಕೋರ್ಟ್‌

ಬಾಲಕಿಗೆ ಬಲವಂತವಾಗಿ ಮುತ್ತು ಕೊಟ್ಟ ಪ್ರಕರಣ: ಶಿಕ್ಷೆ ಎತ್ತಿಹಿಡಿದ ದೆಹಲಿ ಹೈಕೋರ್ಟ್‌

- Advertisement -
- Advertisement -

ವ್ಯಕ್ತಿಯೊಬ್ಬ 10 ವರ್ಷದ ಬಾಲಕಿಗೆ ಬಲವಂತವಾಗಿ ಮುತ್ತು ಕೊಟ್ಟಿದ್ದ ಪ್ರಕರಣದಲ್ಲಿ, ‘ಇದು ಆಕಸ್ಮಿಕ ಸ್ಪರ್ಶ’ ಎಂಬ ಆರೋಪಿಯ ವಾದವನ್ನು ತಳ್ಳಿ ಹಾಕಿರುವ ದೆಹಲಿ ಹೈಕೋರ್ಟ್‌, ಆ ವ್ಯಕ್ತಿಯನ್ನು ಅಪರಾಧಿ ಎಂದು ಪರಿಗಣಿಸಿದ್ದು, ವಿಚಾರಣಾ ನ್ಯಾಯಾಲಯದ ತೀರ್ಪನ್ನು ಎತ್ತಿ ಹಿಡಿದಿದೆ. ಇದರೊಂದಿಗೆ ನ್ಯಾಯಾಲಯವು ಅಪರಾಧಿಯ ಶಿಕ್ಷೆಯನ್ನು ಆರು ವರ್ಷದಿಂದ ಐದು ವರ್ಷಕ್ಕೆ ಇಳಿಸಿದೆ.

ಶಾಲೆಯತ್ತ ನಡೆದು ಹೋಗುತ್ತಿದ್ದ ಬಾಲಕಿಗೆ ಬಲವಂತವಾಗಿ ಮುತ್ತು ಕೊಟ್ಟಿದ್ದ ಘಟನೆ 2017ರ ಫೆಬ್ರುವರಿಯಲ್ಲಿ ದೆಹಲಿಯಲ್ಲಿ ನಡೆದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದ ದೆಹಲಿ ವಿಚಾರಣಾ ನ್ಯಾಯಾಲಯವು ಆರೋಪಿಯನ್ನು ದೋಷಿ ಎಂದು ಸೆಪ್ಟೆಂಬರ್‌ 2019ರಲ್ಲಿ ತೀರ್ಪು ನೀಡಿತ್ತು.

ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣಾ ಕಾಯ್ದೆ (ಪೋಕ್ಸೊ) ಸೆಕ್ಷನ್‌ 10 (ಉಲ್ಬಣಗೊಂಡ ಲೈಂಗಿಕ ದೌರ್ಜನ್ಯ) ಅಡಿಯಲ್ಲಿ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಮುಕ್ತಾ ಗುಪ್ತಾ ಅವರು ಪ್ರಾಸಿಕ್ಯೂಷನ್‌, ಅನುಮಾನಗಳನ್ನು ಮೀರಿ ಸಾಕ್ಷಿಯನ್ನು ಸಾಬೀತುಪಡಿಸುತ್ತದೆ ಎಂದು ತಿಳಿಸಿದರು. ಆರೋಪಿ ಸ್ಥಳದಲ್ಲಿ ಇದ್ದಾನೆ ಎಂಬುದು ನಿರ್ವಿವಾದ ಎಂದಿರುವ ನ್ಯಾಯಾಲಯ, ಆತನ ಕೈ ಆಕಸ್ಮಿಕವಾಗಿ ಬಲಿಪಶುವಿಗೆ ತಾಗಿದೆಯೇ ಅಥವಾ ಸಂತ್ರಸ್ತೆ ಆರೋಪಿಸಿದಂತೆ ಘಟನೆ ನಡೆದಿದೆಯೇ ಎಂಬುದು ಮಾತ್ರ ಸಮಸ್ಯೆಯಾಗಿ ಉಳಿದಿದೆ ಎಂದು ಹೇಳಿದೆ.

ಈ ಘಟನೆ ನಡೆದಿದ್ದ ಸಂದರ್ಭದಲ್ಲಿ ಬಾಲಕಿಯ ತಂದೆ ಅವಳಿಂದ ಕೇವಲ 10-15 ಹೆಜ್ಜೆಗಳ ಹಿಂದೆ ಇದ್ದರು. ಶಾಲೆಗೆ ಹೋಗುವ ರಸ್ತೆಯ ತಿರುವಿನಲ್ಲಿ ಘಟನೆ ನಡೆದಿದ್ದು, ಬಾಲಕಿಯ ತಂದೆಯೇ ಪ್ರಾಥಮಿಕ ಸಾಕ್ಷಿ ಎಂದು ವಕೀಲರು ದೃಢೀಕರಿಸಿದ್ದರು. ಈ ಘಟನೆ ನಂತರ ಸಂತ್ರಸ್ತೆಯನ್ನು ಪೊಲೀಸ್‌ ಠಾಣೆಗೆ ಕರೆದೊಯ್ದು ದೂರು ನಿಡಲಾಯಿತು. ಮರುದಿನವೇ ಸೆಕ್ಷನ್‌ 164 ರಡಿಯಲ್ಲಿ ಸಂತ್ರಸ್ತೆಯ ಹೇಳಿಕೆಯನ್ನು ದಾಖಲಿಸಿದ್ದರಿಂದ, ಸಾಕ್ಷ್ಯಾಧಾರಗಳನ್ನು ತಿದ್ದುವ ಅಥವಾ ತಿರುಚುವ ಸಾಧ್ಯತೆ ಕಡಿಮೆ ಎಂದು ನ್ಯಾಯಾಲಯ ಹೇಳಿದೆ.

ಇಂತಹ ಅಪರಾಧಗಳಿಗೆ ಸೂಚಿಸಲಾದ ಕನಿಷ್ಟ ಶಿಕ್ಷೆ ಐದು ವರ್ಷ ಮತ್ತು ಗರಿಷ್ಠ ಏಳು ವರ್ಷಗಳು ಎಂದಿರುವ ನ್ಯಾಯಾಲಯವು, ’ಅಪೀಲುದಾರರು ಈ ಹಿಂದೆ ಯಾವುದೇ ಪ್ರಕರಣಗಳನ್ನು ಒಳಗೊಂಡಿಲ್ಲ. ವಿಚಾರಣೆ ಸಮಯದಲ್ಲಿ ಮತ್ತು ಮೇಲ್ಮನವಿ ವಿಚಾರಣೆ ನಡೆಯುವಾಗಲು, ನಿರಂತರ ಸೆರೆವಾಸದಲ್ಲಿದ್ದರು’ ಎಂದಿರುವ ನ್ಯಾಯಮೂರ್ತಿ ಗುಪ್ತಾ ಅವರು ಶಿಕ್ಷೆಯನ್ನು ಒಂದು ವರ್ಷ ಕಡಿಮೆಗೊಳಿಸಿದರು.

ಪೊಲೀಸರ ಪ್ರಕಾರ, ಶಾಲೆಗೆ ಹೋಗುತ್ತಿದ್ದ 5ನೇ ತರಗತಿಯ ವಿದ್ಯಾರ್ಥಿನಿಯನ್ನು ಇದ್ದಕ್ಕಿದ್ದಂತೆ ಹಿಡಿದುಕೊಂಡು, ಅವಳ ಕೆನ್ನೆಗೆ ಬಲವಂತವಾಗಿ ಚುಂಬಿಸಿದ್ದನು. ಬಾಲಕಿಯು ಕಿರುಚಿಕೊಂಡಾಗ ಸ್ಥಳಕ್ಕೆ ಧಾವಿಸಿದ ಬಾಲಕಿಯ ತಂದೆ, ಸಾರ್ವಜನಿಕರ ಸಹಾಯದಿಂದ ಆರೋಪಿಯನ್ನು ಥಳಿಸಿದ್ದಾರೆ’ ಎಂದು ವಕೀಲರು ವಿಚಾರಣಾ ನ್ಯಾಯಾಲಯಕ್ಕೆ ತಿಳಿಸಿದ್ದರು.

ಆರೋಪಿಯು ಶಿಕ್ಷೆಗೆ ಒಳಗಾಗುವ ಮೊದಲು, ‘ತಾನು  ಶಾಲಾ ಮಾರ್ಗದ ಮೂಲಕ ಹಾದು ಹೋಗುತ್ತಿದ್ದಾಗ, ಬಾಲಕಿಯು ವಿರುದ್ಧ ದಿಕ್ಕಿನಿಂದ ಬರುತ್ತಿದ್ದಳು. ಆ ಸಮಯದಲ್ಲಿ ಆಕಸ್ಮಿಕವಾಗಿ ನನ್ನ ಕೈ ಬಾಲಕಿಗೆ ತಗುಲಿತ್ತು. ಅದಕ್ಕಾಗಿ ತಕ್ಷಣವೇ ಆಕೆಯ ತಂದೆಗೆ ಕ್ಷಮೆಯಾಚಿಸಿದೆ. ಆದರೆ ಬಾಲಕಿಯ ತಂದೆ ಕ್ಷಮಾಪಣೆ ಸ್ವೀಕರಿಸದೇ ಥಳಿಸಲು ಆರಂಭಿಸಿದರು’ ಎಂದು ವಿಚಾರಣಾ ನ್ಯಾಯಾಲಯಕ್ಕೆ ತಿಳಿಸಿದ್ದನು.

(ದೇಶದಲ್ಲಿ ಮಕ್ಕಳು ಮತ್ತು ಮಹಿಳೆಯರ ಮೇಲಿನ ಹಿಂಸಾಚಾರಗಳು ಹೆಚ್ಚುತ್ತಿವೆ. ಇದು ಇಡೀ ನಾಗರಿಕ ಸಮಾಜ ತಲೆ ತಗ್ಗಿಸುವಂತಹ ವಿಚಾರ. ಮಹಿಳಾ ಮತ್ತು ಪ್ರಜ್ಞಾವಂತ ಸಂಘಟನೆಗಳ ಹೋರಾಟದಿಂದ ಹಲವಾರು ಕಾನೂನು ಬದಲಾವಣೆಗಳು ಬಂದಿವೆ. ಈ ಪ್ರಕರಣಗಳಲ್ಲಿ ಆರೋಪಿಗೆ ಗರಿಷ್ಟ ಶಿಕ್ಷೆಯ ಸಂಭವವಿದೆ. 18 ವರ್ಷದೊಳಗಿನ ಹೆಣ್ಣು ಮಕ್ಕಳ ಮೇಲಿನ ಲೈಂಗಿಕ ಕಿರುಕುಳ ಪೋಕ್ಸೊ ಅಡಿಯಲ್ಲಿ ಬರುತ್ತದೆ. ಆಗ ಅಪರಾಧ ನಡೆದಿಲ್ಲ ಎಂದು ಸಾಬೀತುಪಡಿಸುವ ಹೊಣೆ ಆರೋಪಿಯ ಮೇಲಿರುತ್ತದೆ. ಲೈಂಗಿಕ ಹಿಂಸೆ, ಅತ್ಯಾಚಾರದ ವಿರುದ್ಧ ದನಿಯೆತ್ತೋಣ. ಆರೋಗ್ಯಕರ ಸಮಾಜ ನಮ್ಮದಾಗಿಸಿಕೊಳ್ಳೋಣ)


ಇದನ್ನೂ ಓದಿ: ರಾಜಸ್ಥಾನ: ಮಗುವಿನ ಮೇಲೆ ಅತ್ಯಾಚಾರ, ಹತ್ಯೆ; ಅಪರಾಧಿಗೆ 24 ದಿನಗಳಲ್ಲಿ ಮರಣದಂಡನೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...