Homeಮುಖಪುಟಬಾಲಕಿಗೆ ಬಲವಂತವಾಗಿ ಮುತ್ತು ಕೊಟ್ಟ ಪ್ರಕರಣ: ಶಿಕ್ಷೆ ಎತ್ತಿಹಿಡಿದ ದೆಹಲಿ ಹೈಕೋರ್ಟ್‌

ಬಾಲಕಿಗೆ ಬಲವಂತವಾಗಿ ಮುತ್ತು ಕೊಟ್ಟ ಪ್ರಕರಣ: ಶಿಕ್ಷೆ ಎತ್ತಿಹಿಡಿದ ದೆಹಲಿ ಹೈಕೋರ್ಟ್‌

- Advertisement -
- Advertisement -

ವ್ಯಕ್ತಿಯೊಬ್ಬ 10 ವರ್ಷದ ಬಾಲಕಿಗೆ ಬಲವಂತವಾಗಿ ಮುತ್ತು ಕೊಟ್ಟಿದ್ದ ಪ್ರಕರಣದಲ್ಲಿ, ‘ಇದು ಆಕಸ್ಮಿಕ ಸ್ಪರ್ಶ’ ಎಂಬ ಆರೋಪಿಯ ವಾದವನ್ನು ತಳ್ಳಿ ಹಾಕಿರುವ ದೆಹಲಿ ಹೈಕೋರ್ಟ್‌, ಆ ವ್ಯಕ್ತಿಯನ್ನು ಅಪರಾಧಿ ಎಂದು ಪರಿಗಣಿಸಿದ್ದು, ವಿಚಾರಣಾ ನ್ಯಾಯಾಲಯದ ತೀರ್ಪನ್ನು ಎತ್ತಿ ಹಿಡಿದಿದೆ. ಇದರೊಂದಿಗೆ ನ್ಯಾಯಾಲಯವು ಅಪರಾಧಿಯ ಶಿಕ್ಷೆಯನ್ನು ಆರು ವರ್ಷದಿಂದ ಐದು ವರ್ಷಕ್ಕೆ ಇಳಿಸಿದೆ.

ಶಾಲೆಯತ್ತ ನಡೆದು ಹೋಗುತ್ತಿದ್ದ ಬಾಲಕಿಗೆ ಬಲವಂತವಾಗಿ ಮುತ್ತು ಕೊಟ್ಟಿದ್ದ ಘಟನೆ 2017ರ ಫೆಬ್ರುವರಿಯಲ್ಲಿ ದೆಹಲಿಯಲ್ಲಿ ನಡೆದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದ ದೆಹಲಿ ವಿಚಾರಣಾ ನ್ಯಾಯಾಲಯವು ಆರೋಪಿಯನ್ನು ದೋಷಿ ಎಂದು ಸೆಪ್ಟೆಂಬರ್‌ 2019ರಲ್ಲಿ ತೀರ್ಪು ನೀಡಿತ್ತು.

ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣಾ ಕಾಯ್ದೆ (ಪೋಕ್ಸೊ) ಸೆಕ್ಷನ್‌ 10 (ಉಲ್ಬಣಗೊಂಡ ಲೈಂಗಿಕ ದೌರ್ಜನ್ಯ) ಅಡಿಯಲ್ಲಿ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಮುಕ್ತಾ ಗುಪ್ತಾ ಅವರು ಪ್ರಾಸಿಕ್ಯೂಷನ್‌, ಅನುಮಾನಗಳನ್ನು ಮೀರಿ ಸಾಕ್ಷಿಯನ್ನು ಸಾಬೀತುಪಡಿಸುತ್ತದೆ ಎಂದು ತಿಳಿಸಿದರು. ಆರೋಪಿ ಸ್ಥಳದಲ್ಲಿ ಇದ್ದಾನೆ ಎಂಬುದು ನಿರ್ವಿವಾದ ಎಂದಿರುವ ನ್ಯಾಯಾಲಯ, ಆತನ ಕೈ ಆಕಸ್ಮಿಕವಾಗಿ ಬಲಿಪಶುವಿಗೆ ತಾಗಿದೆಯೇ ಅಥವಾ ಸಂತ್ರಸ್ತೆ ಆರೋಪಿಸಿದಂತೆ ಘಟನೆ ನಡೆದಿದೆಯೇ ಎಂಬುದು ಮಾತ್ರ ಸಮಸ್ಯೆಯಾಗಿ ಉಳಿದಿದೆ ಎಂದು ಹೇಳಿದೆ.

ಈ ಘಟನೆ ನಡೆದಿದ್ದ ಸಂದರ್ಭದಲ್ಲಿ ಬಾಲಕಿಯ ತಂದೆ ಅವಳಿಂದ ಕೇವಲ 10-15 ಹೆಜ್ಜೆಗಳ ಹಿಂದೆ ಇದ್ದರು. ಶಾಲೆಗೆ ಹೋಗುವ ರಸ್ತೆಯ ತಿರುವಿನಲ್ಲಿ ಘಟನೆ ನಡೆದಿದ್ದು, ಬಾಲಕಿಯ ತಂದೆಯೇ ಪ್ರಾಥಮಿಕ ಸಾಕ್ಷಿ ಎಂದು ವಕೀಲರು ದೃಢೀಕರಿಸಿದ್ದರು. ಈ ಘಟನೆ ನಂತರ ಸಂತ್ರಸ್ತೆಯನ್ನು ಪೊಲೀಸ್‌ ಠಾಣೆಗೆ ಕರೆದೊಯ್ದು ದೂರು ನಿಡಲಾಯಿತು. ಮರುದಿನವೇ ಸೆಕ್ಷನ್‌ 164 ರಡಿಯಲ್ಲಿ ಸಂತ್ರಸ್ತೆಯ ಹೇಳಿಕೆಯನ್ನು ದಾಖಲಿಸಿದ್ದರಿಂದ, ಸಾಕ್ಷ್ಯಾಧಾರಗಳನ್ನು ತಿದ್ದುವ ಅಥವಾ ತಿರುಚುವ ಸಾಧ್ಯತೆ ಕಡಿಮೆ ಎಂದು ನ್ಯಾಯಾಲಯ ಹೇಳಿದೆ.

ಇಂತಹ ಅಪರಾಧಗಳಿಗೆ ಸೂಚಿಸಲಾದ ಕನಿಷ್ಟ ಶಿಕ್ಷೆ ಐದು ವರ್ಷ ಮತ್ತು ಗರಿಷ್ಠ ಏಳು ವರ್ಷಗಳು ಎಂದಿರುವ ನ್ಯಾಯಾಲಯವು, ’ಅಪೀಲುದಾರರು ಈ ಹಿಂದೆ ಯಾವುದೇ ಪ್ರಕರಣಗಳನ್ನು ಒಳಗೊಂಡಿಲ್ಲ. ವಿಚಾರಣೆ ಸಮಯದಲ್ಲಿ ಮತ್ತು ಮೇಲ್ಮನವಿ ವಿಚಾರಣೆ ನಡೆಯುವಾಗಲು, ನಿರಂತರ ಸೆರೆವಾಸದಲ್ಲಿದ್ದರು’ ಎಂದಿರುವ ನ್ಯಾಯಮೂರ್ತಿ ಗುಪ್ತಾ ಅವರು ಶಿಕ್ಷೆಯನ್ನು ಒಂದು ವರ್ಷ ಕಡಿಮೆಗೊಳಿಸಿದರು.

ಪೊಲೀಸರ ಪ್ರಕಾರ, ಶಾಲೆಗೆ ಹೋಗುತ್ತಿದ್ದ 5ನೇ ತರಗತಿಯ ವಿದ್ಯಾರ್ಥಿನಿಯನ್ನು ಇದ್ದಕ್ಕಿದ್ದಂತೆ ಹಿಡಿದುಕೊಂಡು, ಅವಳ ಕೆನ್ನೆಗೆ ಬಲವಂತವಾಗಿ ಚುಂಬಿಸಿದ್ದನು. ಬಾಲಕಿಯು ಕಿರುಚಿಕೊಂಡಾಗ ಸ್ಥಳಕ್ಕೆ ಧಾವಿಸಿದ ಬಾಲಕಿಯ ತಂದೆ, ಸಾರ್ವಜನಿಕರ ಸಹಾಯದಿಂದ ಆರೋಪಿಯನ್ನು ಥಳಿಸಿದ್ದಾರೆ’ ಎಂದು ವಕೀಲರು ವಿಚಾರಣಾ ನ್ಯಾಯಾಲಯಕ್ಕೆ ತಿಳಿಸಿದ್ದರು.

ಆರೋಪಿಯು ಶಿಕ್ಷೆಗೆ ಒಳಗಾಗುವ ಮೊದಲು, ‘ತಾನು  ಶಾಲಾ ಮಾರ್ಗದ ಮೂಲಕ ಹಾದು ಹೋಗುತ್ತಿದ್ದಾಗ, ಬಾಲಕಿಯು ವಿರುದ್ಧ ದಿಕ್ಕಿನಿಂದ ಬರುತ್ತಿದ್ದಳು. ಆ ಸಮಯದಲ್ಲಿ ಆಕಸ್ಮಿಕವಾಗಿ ನನ್ನ ಕೈ ಬಾಲಕಿಗೆ ತಗುಲಿತ್ತು. ಅದಕ್ಕಾಗಿ ತಕ್ಷಣವೇ ಆಕೆಯ ತಂದೆಗೆ ಕ್ಷಮೆಯಾಚಿಸಿದೆ. ಆದರೆ ಬಾಲಕಿಯ ತಂದೆ ಕ್ಷಮಾಪಣೆ ಸ್ವೀಕರಿಸದೇ ಥಳಿಸಲು ಆರಂಭಿಸಿದರು’ ಎಂದು ವಿಚಾರಣಾ ನ್ಯಾಯಾಲಯಕ್ಕೆ ತಿಳಿಸಿದ್ದನು.

(ದೇಶದಲ್ಲಿ ಮಕ್ಕಳು ಮತ್ತು ಮಹಿಳೆಯರ ಮೇಲಿನ ಹಿಂಸಾಚಾರಗಳು ಹೆಚ್ಚುತ್ತಿವೆ. ಇದು ಇಡೀ ನಾಗರಿಕ ಸಮಾಜ ತಲೆ ತಗ್ಗಿಸುವಂತಹ ವಿಚಾರ. ಮಹಿಳಾ ಮತ್ತು ಪ್ರಜ್ಞಾವಂತ ಸಂಘಟನೆಗಳ ಹೋರಾಟದಿಂದ ಹಲವಾರು ಕಾನೂನು ಬದಲಾವಣೆಗಳು ಬಂದಿವೆ. ಈ ಪ್ರಕರಣಗಳಲ್ಲಿ ಆರೋಪಿಗೆ ಗರಿಷ್ಟ ಶಿಕ್ಷೆಯ ಸಂಭವವಿದೆ. 18 ವರ್ಷದೊಳಗಿನ ಹೆಣ್ಣು ಮಕ್ಕಳ ಮೇಲಿನ ಲೈಂಗಿಕ ಕಿರುಕುಳ ಪೋಕ್ಸೊ ಅಡಿಯಲ್ಲಿ ಬರುತ್ತದೆ. ಆಗ ಅಪರಾಧ ನಡೆದಿಲ್ಲ ಎಂದು ಸಾಬೀತುಪಡಿಸುವ ಹೊಣೆ ಆರೋಪಿಯ ಮೇಲಿರುತ್ತದೆ. ಲೈಂಗಿಕ ಹಿಂಸೆ, ಅತ್ಯಾಚಾರದ ವಿರುದ್ಧ ದನಿಯೆತ್ತೋಣ. ಆರೋಗ್ಯಕರ ಸಮಾಜ ನಮ್ಮದಾಗಿಸಿಕೊಳ್ಳೋಣ)


ಇದನ್ನೂ ಓದಿ: ರಾಜಸ್ಥಾನ: ಮಗುವಿನ ಮೇಲೆ ಅತ್ಯಾಚಾರ, ಹತ್ಯೆ; ಅಪರಾಧಿಗೆ 24 ದಿನಗಳಲ್ಲಿ ಮರಣದಂಡನೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....