Homeಮುಖಪುಟನೋಟು ರದ್ಧತಿಗೆ ಐದು ವರ್ಷ: ನಗದು ಬಳಕೆ ಕಡಿಮೆಯಾಯಿತೆ?

ನೋಟು ರದ್ಧತಿಗೆ ಐದು ವರ್ಷ: ನಗದು ಬಳಕೆ ಕಡಿಮೆಯಾಯಿತೆ?

- Advertisement -
- Advertisement -

ನವೆಂಬರ್‌‌ 8, 2016ರಂದು ನೋಟು ರದ್ಧತಿಯನ್ನು ಘೋಷಿಸಲಾಯಿತು. ಆ ನಂತರದಲ್ಲಿ ಕಡಿಮೆ ನಗದು ಬಳಕೆಗೆ ಸರ್ಕಾರ ಪ್ರೋತ್ಸಾಹಿಸಿತು. ಆದರೆ ನೋಟು ರದ್ಧತಿಯಾಗಿ ಐದು ವರ್ಷಗಳಾಗುತ್ತಿದ್ದರೂ ನೋಟಿನ ಬಳಕೆ ಹೆಚ್ಚಳ ಕಾಣುತ್ತಲೇ ಇದೆ ಎಂಬುದನ್ನು ಇಂಡಿಯನ್‌ ಎಕ್ಸ್‌ಪ್ರೆಸ್‌ ವರದಿ ಸ್ಪಷ್ಟಪಡಿಸಿದೆ.

ನಗದು ರಹಿತ ಭಾರತವನ್ನಾಗಿ ಮಾಡಲಾಗುವುದು ಎಂದು ಸರ್ಕಾರ ಹೇಳಿದೆ. ಆದರೆ ಭಾರತದ ಆರ್ಥಿಕತೆ ಭೌತಿಕ ಹಣಕಾಸಿನ ವ್ಯವಹಾರದ ಮೇಲೆ ನಿಂತಿದೆ. ಹೀಗಾಗಿ ಸರ್ಕಾರದ ನಿರ್ಧಾರ ವ್ಯತಿರಿಕ್ತವಾಗಿದೆ ಎಂಬುದನ್ನು ನೋಟಿನ ಬಳಕೆ ಹೆಚ್ಚಾಗಿರುವುದು ಸೂಚಿಸುತ್ತದೆ.

ನಗದು ಪಾವತಿಯು ಆದ್ಯತೆಯ ವಿಧಾನವಾಗಿ ಉಳಿದಿರುವುದರಿಂದ, ಅಕ್ಟೋಬರ್ 8, 2021ರ ವೇಳೆಗೆ ಕಳೆದ ಹದಿನೈದು ದಿನಗಳಲ್ಲಿ ಸಾರ್ವಜನಿಕರೊಂದಿಗಿನ ನಗದು ಗರಿಷ್ಠ ಮಟ್ಟದ್ದಾಗಿದ್ದು, 28.30 ಲಕ್ಷ ಕೋಟಿ ರೂ. ಆಗಿದೆ.

ನವೆಂಬರ್‌ 4, 2016ರಂದು ಜನರು ಹೊಂದಿದ್ದ ನಗದಿಗಿಂತ 10.33 ಲಕ್ಷ ಕೋಟಿ ರೂ. ಹೆಚ್ಚಿನ ನಗದನ್ನು ಹೊಂದಿರುವುದು ತಿಳಿದುಬಂದಿದೆ.  2016ರ ನವೆಂಬರ್‌ 4ರಂದು 17.97 ಲಕ್ಷ ಕೋಟಿ ರೂ. ನಗದು ಜನರೊಂದಿಗೆ ಇತ್ತು. ನವೆಂಬರ್ 25, 2016 ರಂದು ದಾಖಲಾದಂತೆ ಸಾರ್ವಜನಿಕರ ಬಳಿ ಇದ್ದ 9.11 ಲಕ್ಷ ಕೋಟಿ ರೂ.ಗಳಿಗಿಂತ ನಗದು ಪ್ರಮಾಣ ಶೇಕಡಾ 211 ರಷ್ಟು ಈಗ ಹೆಚ್ಚಾಗಿದೆ.

ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಅಂಕಿಅಂಶಗಳ ಪ್ರಕಾರ, ಅಕ್ಟೋಬರ್ 23, 2020ಕ್ಕೆ ಕೊನೆಗೊಂಡ ಹದಿನೈದು ದಿನಗಳಲ್ಲಿ, ದೀಪಾವಳಿ ಹಬ್ಬದ ಮೊದಲು ಸಾರ್ವಜನಿಕರ ಕರೆನ್ಸಿ 15,582 ಕೋಟಿ ರೂ. ಇದೆ. ನಗದು ಪ್ರಮಾಣ ವರ್ಷದಿಂದ ವರ್ಷಕ್ಕೆ ಶೇ.8.5ರಷ್ಟು ಅಂದರೆ 2.21 ಲಕ್ಷ ಕೋಟಿ ರೂ. ಹೆಚ್ಚಳ ಕಂಡಿದೆ.

ನವೆಂಬರ್ 2016ರಲ್ಲಿ 500 ಮತ್ತು 1,000 ರೂಪಾಯಿ ನೋಟುಗಳನ್ನು ಹಿಂತೆಗೆದುಕೊಂಡ ನಂತರ, ನವೆಂಬರ್ 4, 2016 ರಂದು 17.97 ಲಕ್ಷ ಕೋಟಿ ರೂಪಾಯಿಗಳ ಸಾರ್ವಜನಿಕರ ಬಳಿಯಿದ್ದ ಕರೆನ್ಸಿ 2017ರ ಜನವರಿಯಲ್ಲಿ 7.8 ಲಕ್ಷ ಕೋಟಿ ರೂಪಾಯಿಗಳಿಗೆ ಕುಸಿಯಿತು.

ಸರ್ಕಾರ ಮತ್ತು ಆರ್‌ಬಿಐ “ಕಡಿಮೆ ನಗದು ಸಮಾಜ”, ಪಾವತಿಗಳ ಡಿಜಿಟಲೀಕರಣ ಮತ್ತು ವಿವಿಧ ವಹಿವಾಟುಗಳಲ್ಲಿ ನಗದು ಬಳಕೆಯ ಮೇಲೆ ನಿರ್ಬಂಧಗಳನ್ನು ಹೇರಿದ್ದರೂ ಸಹ, ವ್ಯವಸ್ಥೆಯಲ್ಲಿ ನಗದು ಸ್ಥಿರವಾಗಿ ಏರುತ್ತಿದೆ.

ಕೋವಿಡ್ ಸಾಂಕ್ರಾಮಿಕದ ತಡೆಯಲು ಸರ್ಕಾರವು ಕಟ್ಟುನಿಟ್ಟಾದ ಲಾಕ್‌ಡೌನ್ ಘೋಷಿಸಿದ್ದರಿಂದ 2020ರಲ್ಲಿ ಜನರು ನಗದನ್ನು ಹೆಚ್ಚಿನ ಪ್ರಮಾಣದಲ್ಲಿ ಹೊಂದಲು ಮುಂದಾದರು. ಫೆಬ್ರವರಿಯಲ್ಲಿ ಪ್ರಪಂಚದಾದ್ಯಂತ ರಾಷ್ಟ್ರಗಳು ಲಾಕ್‌ಡೌನ್‌ಗಳನ್ನು ಘೋಷಿಸುತ್ತಿದ್ದಂತೆ ಮತ್ತು ಭಾರತ ಸರ್ಕಾರವು ಲಾಕ್‌ಡೌನ್ ಘೋಷಿಸಲು ಸಿದ್ಧವಾಗುತ್ತಿದ್ದಂತೆ, ಜನರು ತಮ್ಮ ದಿನಸಿ ಮತ್ತು ಇತರ ಅಗತ್ಯ ಅಗತ್ಯಗಳನ್ನು ಪೂರೈಸಲು ಹಣವನ್ನು ಸಂಗ್ರಹಿಸಲು ಪ್ರಾರಂಭಿಸಿದರು.

ನವೆಂಬರ್ 2016ರಲ್ಲಿ ನೋಟುಗಳ ಹಠಾತ್ ರದ್ಧತಿಯು ಆರ್ಥಿಕತೆಯನ್ನು ಹಳ್ಳ ಹಿಡಿಸಿತು. ಬೇಡಿಕೆ ಇಲ್ಲವಾಯಿತು, ವ್ಯವಹಾರಗಳು ಕುಸಿದವು. ಜಿಡಿಪಿ ಬೆಳವಣಿಗೆಯು ಸುಮಾರು ಶೇಕಡಾ 1.5ರಷ್ಟು ಕುಸಿಯಿತು. ನೋಟು ನಿಷೇಧದ ನಂತರ ಹಲವು ಸಣ್ಣ ಕೈಗಾರಿಕೆಗಳು ಬಾಗಿಲು ಮುಚ್ಚಿದವು.


ಇದನ್ನೂ ಓದಿರಿ: ಸ್ಕೂಟರ್‌ನಲ್ಲಿ ತೆರಳುತ್ತಿದ್ದಾಗ ಭೀಕರ ಸ್ಪೋಟ: ತಂದೆ-ಮಗ ಸ್ಥಳದಲ್ಲೇ ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...