Homeಕರ್ನಾಟಕ‘ಆಕ್ಟ್‌-1978' ಸೇರಿ ನಾಲ್ಕು ಕನ್ನಡ ಸಿನಿಮಾಗಳು ಭಾರತೀಯ ಪನೋರಮಾ ವಿಭಾಗಕ್ಕೆ ಆಯ್ಕೆ

‘ಆಕ್ಟ್‌-1978′ ಸೇರಿ ನಾಲ್ಕು ಕನ್ನಡ ಸಿನಿಮಾಗಳು ಭಾರತೀಯ ಪನೋರಮಾ ವಿಭಾಗಕ್ಕೆ ಆಯ್ಕೆ

- Advertisement -
- Advertisement -

ಲಾಕ್‌ಡೌನ್‌ ತೆರವಿನ ಬಳಿಕ ಚಿತ್ರಮಂದಿರದಲ್ಲಿ ಬಿಡುಗಡೆಯಾಗಿ ಕನ್ನಡಿಗರ ಮನಗೆದ್ದಿರುವ ‘ಆಕ್ಟ್-1978′ ಸೇರಿ ನಾಲ್ಕು ಸಿನಿಮಾಗಳು ಭಾರತ ಸರಕಾರ ಆಯೋಜಿಸುವ ಪ್ರತಿಷ್ಟಿತ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಭಾರತೀಯ ಪನೋರಮಾ ವಿಭಾಗಕ್ಕೆ ಆಯ್ಕೆಯಾಗಿವೆ.

‘ಹರಿವು’, ‘ನಾತಿಚರಾಮಿ’ ಸಿನಿಮಾಗಳ ನಿರ್ದೇಶಕರಾದ ಮಂಸೋರೆಯವರ ‘ಆಕ್ಟ್‌‌- 1978′, ಅಕಾಲಿಕ ಮರಣದಕ್ಕೆ ತುತ್ತಾದ ನಟ ಸಂಚಾರಿ ವಿಜಯ್‌ ಅಭಿನಯದ ಕೊನೆಯ ಸಿನಿಮಾ ‘ತಲೆದಂಡ’, ನಿರ್ದೇಶಕ ಪವನ್ ಒಡೆಯರ್ ನಿರ್ಮಾಣದ ‘ಡೊಳ್ಳು’ (ನಿರ್ದೇಶಕ ಸಾಗರ್‌ ಪುರಾಣಿಕ್‌), ಗಣೇಶ್‌ ಹೆಗಡೆ ನಿರ್ದೇಶನದ ‘ನೀಲಿ ಹಕ್ಕಿ’ ಸಿನಿಮಾಗಳು ಭಾರತೀಯ ಪನೋರಮಾ ವಿಭಾಗಕ್ಕೆ ಆಯ್ಕೆಯಾಗಿವೆ.

ನಿರ್ದೇಶಕ ಮಂಸೋರೆಯವರು ಈ ಕುರಿತು ಫೇಸ್‌ಬುಕ್‌ ಪೋಸ್ಟ್‌ ಹಾಕಿದ್ದು, ಅಪಘಾತದಲ್ಲಿ ನಿಧನರಾದ ಸಂಚಾರಿ ವಿಜಯ್ ಅವರನ್ನು ನೆನೆದಿದ್ದಾರೆ. “ಸಂಚಾರಿ ವಿಜಯ್‌ ಸರ್ ಅಭಿನಂದನೆಗಳು. ನೀವು ನಟಿಸಿರುವ ಎರಡು ಸಿನೆಮಾಗಳು ಭಾರತೀಯ ಪನೋರಮಾ ವಿಭಾಗಕ್ಕೆ ಆಯ್ಕೆಯಾಗಿದೆ. ನಿಮ್ಮೊಂದಿಗೆ ಹಂಚಿಕೊಂಡಿದ್ದ ದೀರ್ಘಕಾಲದ ಕನಸೊಂದು ಇಂದು ನನಸಾಗಿದೆ” ಎಂದಿದ್ದಾರೆ.

ಮುಂದುವರಿದು, “ನಮ್ಮ-ನಿಮ್ಮ ಆಕ್ಟ್-1978 ಸಿನಿಮಾ ‘ಭಾರತ ಸರಕಾರ’ ಆಯೋಜಿಸುವ ಪ್ರತಿಷ್ಟಿತ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ, ಭಾರತೀಯ ಪನೋರಮಾ ವಿಭಾಗಕ್ಕೆ ಆಯ್ಕೆ ಆಗಿರುವುದು ಹೆಮ್ಮೆ ಮತ್ತು ಖುಷಿಯ ವಿಚಾರ. ನಮ್ಮ ಖುಷಿಯನ್ನು ನಿಮ್ಮೊಡನೆ ಹಂಚಿಕೊಳ್ಳುತ್ತಿದ್ದೇವೆ. ಕೊರೋನಾ ನಂತರದ ದುರಿತ ಕಾಲದಲ್ಲಿ ಸಿನಿಮಾ ಬಿಡುಗಡೆ ಮಾಡಿದಾಗಲೂ ಕೈ ಹಿಡಿದು ಪೊರೆದು, ನಮಗೂ ಚಿತ್ರರಂಗಕ್ಕೂ ಧೈರ್ಯ ತುಂಬಿದ ಪ್ರೇಕ್ಷಕರಿಗೂ, ಎಲ್ಲಾ ಹಂತಗಳಲ್ಲೂ ನಮ್ಮ ಬೆಂಬಲಕ್ಕೆ ನಿಂತ ಪ್ರತಿಯೊಬ್ಬರಿಗೂ ತಂಡದ ಪರವಾಗಿ ಧನ್ಯವಾದಗಳು” ಎಂದು ಮಂಸೋರೆ ತಿಳಿಸಿದ್ದಾರೆ.

ಭಾರತೀಯ ಪನೋರಮಾದ 52ನೇ ಆವೃತ್ತಿ ಗೋವಾದಲ್ಲಿ ನಡೆಯಲಿದೆ. ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯ, ಗೋವಾ ಸರ್ಕಾರ ವತಿಯಿಂದ ನವೆಂಬರ್‌ 20ರಿಂದ 28ರವರೆಗೆ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ನಡೆಯಲಿದೆ.

ಒಟ್ಟು 25 ಚಲನಚಿತ್ರಗಳನ್ನು ಆಯ್ಕೆ ಮಾಡಲಾಗಿದೆ. 221 ಸಮಕಾಲೀನ ಭಾರತೀಯ ಚಲನಚಿತ್ರಗಳ ಪೈಕಿ ಈ ಸಿನಿಮಾಗಳನ್ನು ಆಯ್ಕೆಮಾಡಲಾಗಿದೆ. ಬಂಗಾಳಿ ಭಾಷೆಯ ಐದು ಸಿನಿಮಾ, ಬೊಡೊ-1, ಸಿನಿಮಾ, ದಿಮಸ- 1, ಗುಜರಾತಿ- 1, ಹಿಂದಿ- 2, ಕನ್ನಡ- 4, ಮಲಯಾಳಂ- 2, ಮರಾಠಿ- 5, ಮಿಶಿಂಗ್‌-1, ಸಂಸ್ಕೃತ- 1, ತಮಿಳು- 1, ತೆಲುಗು- 1 ಸಿನಿಮಾಗಳು ಪ್ರದರ್ಶನ ಕಾಣಲಿವೆ.


ಇದನ್ನೂ ಓದಿರಿ: ಕೊಳೆತು ನಾರುತ್ತಿರುವ ವ್ಯವಸ್ಥೆಯ ಕಥೆ ಹೇಳುವ ‘ಜೈ ಭೀಮ್’…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...