Homeಕರ್ನಾಟಕ‘ಆಕ್ಟ್‌-1978' ಸೇರಿ ನಾಲ್ಕು ಕನ್ನಡ ಸಿನಿಮಾಗಳು ಭಾರತೀಯ ಪನೋರಮಾ ವಿಭಾಗಕ್ಕೆ ಆಯ್ಕೆ

‘ಆಕ್ಟ್‌-1978′ ಸೇರಿ ನಾಲ್ಕು ಕನ್ನಡ ಸಿನಿಮಾಗಳು ಭಾರತೀಯ ಪನೋರಮಾ ವಿಭಾಗಕ್ಕೆ ಆಯ್ಕೆ

- Advertisement -
- Advertisement -

ಲಾಕ್‌ಡೌನ್‌ ತೆರವಿನ ಬಳಿಕ ಚಿತ್ರಮಂದಿರದಲ್ಲಿ ಬಿಡುಗಡೆಯಾಗಿ ಕನ್ನಡಿಗರ ಮನಗೆದ್ದಿರುವ ‘ಆಕ್ಟ್-1978′ ಸೇರಿ ನಾಲ್ಕು ಸಿನಿಮಾಗಳು ಭಾರತ ಸರಕಾರ ಆಯೋಜಿಸುವ ಪ್ರತಿಷ್ಟಿತ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಭಾರತೀಯ ಪನೋರಮಾ ವಿಭಾಗಕ್ಕೆ ಆಯ್ಕೆಯಾಗಿವೆ.

‘ಹರಿವು’, ‘ನಾತಿಚರಾಮಿ’ ಸಿನಿಮಾಗಳ ನಿರ್ದೇಶಕರಾದ ಮಂಸೋರೆಯವರ ‘ಆಕ್ಟ್‌‌- 1978′, ಅಕಾಲಿಕ ಮರಣದಕ್ಕೆ ತುತ್ತಾದ ನಟ ಸಂಚಾರಿ ವಿಜಯ್‌ ಅಭಿನಯದ ಕೊನೆಯ ಸಿನಿಮಾ ‘ತಲೆದಂಡ’, ನಿರ್ದೇಶಕ ಪವನ್ ಒಡೆಯರ್ ನಿರ್ಮಾಣದ ‘ಡೊಳ್ಳು’ (ನಿರ್ದೇಶಕ ಸಾಗರ್‌ ಪುರಾಣಿಕ್‌), ಗಣೇಶ್‌ ಹೆಗಡೆ ನಿರ್ದೇಶನದ ‘ನೀಲಿ ಹಕ್ಕಿ’ ಸಿನಿಮಾಗಳು ಭಾರತೀಯ ಪನೋರಮಾ ವಿಭಾಗಕ್ಕೆ ಆಯ್ಕೆಯಾಗಿವೆ.

ನಿರ್ದೇಶಕ ಮಂಸೋರೆಯವರು ಈ ಕುರಿತು ಫೇಸ್‌ಬುಕ್‌ ಪೋಸ್ಟ್‌ ಹಾಕಿದ್ದು, ಅಪಘಾತದಲ್ಲಿ ನಿಧನರಾದ ಸಂಚಾರಿ ವಿಜಯ್ ಅವರನ್ನು ನೆನೆದಿದ್ದಾರೆ. “ಸಂಚಾರಿ ವಿಜಯ್‌ ಸರ್ ಅಭಿನಂದನೆಗಳು. ನೀವು ನಟಿಸಿರುವ ಎರಡು ಸಿನೆಮಾಗಳು ಭಾರತೀಯ ಪನೋರಮಾ ವಿಭಾಗಕ್ಕೆ ಆಯ್ಕೆಯಾಗಿದೆ. ನಿಮ್ಮೊಂದಿಗೆ ಹಂಚಿಕೊಂಡಿದ್ದ ದೀರ್ಘಕಾಲದ ಕನಸೊಂದು ಇಂದು ನನಸಾಗಿದೆ” ಎಂದಿದ್ದಾರೆ.

ಮುಂದುವರಿದು, “ನಮ್ಮ-ನಿಮ್ಮ ಆಕ್ಟ್-1978 ಸಿನಿಮಾ ‘ಭಾರತ ಸರಕಾರ’ ಆಯೋಜಿಸುವ ಪ್ರತಿಷ್ಟಿತ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ, ಭಾರತೀಯ ಪನೋರಮಾ ವಿಭಾಗಕ್ಕೆ ಆಯ್ಕೆ ಆಗಿರುವುದು ಹೆಮ್ಮೆ ಮತ್ತು ಖುಷಿಯ ವಿಚಾರ. ನಮ್ಮ ಖುಷಿಯನ್ನು ನಿಮ್ಮೊಡನೆ ಹಂಚಿಕೊಳ್ಳುತ್ತಿದ್ದೇವೆ. ಕೊರೋನಾ ನಂತರದ ದುರಿತ ಕಾಲದಲ್ಲಿ ಸಿನಿಮಾ ಬಿಡುಗಡೆ ಮಾಡಿದಾಗಲೂ ಕೈ ಹಿಡಿದು ಪೊರೆದು, ನಮಗೂ ಚಿತ್ರರಂಗಕ್ಕೂ ಧೈರ್ಯ ತುಂಬಿದ ಪ್ರೇಕ್ಷಕರಿಗೂ, ಎಲ್ಲಾ ಹಂತಗಳಲ್ಲೂ ನಮ್ಮ ಬೆಂಬಲಕ್ಕೆ ನಿಂತ ಪ್ರತಿಯೊಬ್ಬರಿಗೂ ತಂಡದ ಪರವಾಗಿ ಧನ್ಯವಾದಗಳು” ಎಂದು ಮಂಸೋರೆ ತಿಳಿಸಿದ್ದಾರೆ.

ಭಾರತೀಯ ಪನೋರಮಾದ 52ನೇ ಆವೃತ್ತಿ ಗೋವಾದಲ್ಲಿ ನಡೆಯಲಿದೆ. ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯ, ಗೋವಾ ಸರ್ಕಾರ ವತಿಯಿಂದ ನವೆಂಬರ್‌ 20ರಿಂದ 28ರವರೆಗೆ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ನಡೆಯಲಿದೆ.

ಒಟ್ಟು 25 ಚಲನಚಿತ್ರಗಳನ್ನು ಆಯ್ಕೆ ಮಾಡಲಾಗಿದೆ. 221 ಸಮಕಾಲೀನ ಭಾರತೀಯ ಚಲನಚಿತ್ರಗಳ ಪೈಕಿ ಈ ಸಿನಿಮಾಗಳನ್ನು ಆಯ್ಕೆಮಾಡಲಾಗಿದೆ. ಬಂಗಾಳಿ ಭಾಷೆಯ ಐದು ಸಿನಿಮಾ, ಬೊಡೊ-1, ಸಿನಿಮಾ, ದಿಮಸ- 1, ಗುಜರಾತಿ- 1, ಹಿಂದಿ- 2, ಕನ್ನಡ- 4, ಮಲಯಾಳಂ- 2, ಮರಾಠಿ- 5, ಮಿಶಿಂಗ್‌-1, ಸಂಸ್ಕೃತ- 1, ತಮಿಳು- 1, ತೆಲುಗು- 1 ಸಿನಿಮಾಗಳು ಪ್ರದರ್ಶನ ಕಾಣಲಿವೆ.


ಇದನ್ನೂ ಓದಿರಿ: ಕೊಳೆತು ನಾರುತ್ತಿರುವ ವ್ಯವಸ್ಥೆಯ ಕಥೆ ಹೇಳುವ ‘ಜೈ ಭೀಮ್’…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...