Homeಮುಖಪುಟಅನುಮಾನದ ರೋಗ: ಹೆಣ್ಣುಮಕ್ಕಳ ಫೋಟೋ ಎಫ್‌ಬಿಯಲ್ಲಿ ಪೋಸ್ಟ್‌ ಮಾಡಿ ವಿಕೃತಿ

ಅನುಮಾನದ ರೋಗ: ಹೆಣ್ಣುಮಕ್ಕಳ ಫೋಟೋ ಎಫ್‌ಬಿಯಲ್ಲಿ ಪೋಸ್ಟ್‌ ಮಾಡಿ ವಿಕೃತಿ

- Advertisement -
- Advertisement -

ಕೆಲವು ಹಣವಂತರ ಅಹಂಕಾರ ಹೇಗೆಲ್ಲ ಪ್ರದರ್ಶನವಾಗುತ್ತದೆ, ಮಾನವ ಹಕ್ಕುಗಳು ಹೇಗೆಲ್ಲ ಉಲ್ಲಂಘನೆಯಾಗುತ್ತವೆ ಎಂಬುದಕ್ಕೆ ತಾಜಾ ನಿದರ್ಶನವಾಗಿ ‘ಹೆಲ್ಪ್‌ಚೆಕ್ಕರ್‌ ಹೆಲ್ಪಿಂಗ್ ಟ್ರೀ’ ಎಂಬ ಫೇಸ್‌ಬುಕ್‌ ಗ್ರೂಪ್‌ನ ಚಟುವಟಿಕೆಗಳು ಕಾಣಿಸಿಕೊಂಡಿವೆ.

ಪ್ರೈವೇಟ್‌ ಗ್ರೂಪ್ ಆಗಿರುವ ‘HelpChecker – Helping Tree’ ಮನೆಗೆಲಸದ ಹೆಣ್ಣುಮಕ್ಕಳ ಫೋಟೋಗಳನ್ನು ಹಾಕಿ ವಿಕೃತಿ ಮೆರೆಯುತ್ತಿದೆ. 13,227 ಸದಸ್ಯರನ್ನು ಹೊಂದಿರುವ ಈ ಗ್ರೂಪ್‌ 2015ರಿಂದಲೂ ಚಾಲ್ತಿಯಲ್ಲಿದೆ. ಏಪ್ರಿಲ್‌ 15, 2015ರಂದು ಗ್ರೂಪ್‌ ರಚನೆಯಾಗಿದೆ. ಕಾಲಕಾಲಕ್ಕೆ ಹೆಸರನ್ನು ಬದಲಾಯಿಸಲಾಗಿದೆ.

HELPCHECKER- MOMS & DADS WATCH OUT FOR THESE, MOMS & DADS WATCH OUT FOR THESE- HELPCHECKER, HELPCHECKER – Domestic Diaries ಹೀಗೆ ಆಗಾಗ್ಗೆ ಹೆಸರುಗಳನ್ನು ಬದಲಾಯಿಸಲಾಗಿದೆ. ಈಗ ಹೆಲ್ಪ್‌ಚೆಕ್ಕರ್‌- ಹೆಲ್ಪಿಂಗ್ ಟ್ರೀ ಎಂಬ ಅಂದದ ಹೆಸರನ್ನು ಇಟ್ಟುಕೊಂಡಿದ್ದು, ಮಾಡುತ್ತಿರುವ ಪೋಸ್ಟ್‌ಗಳು ಮಾತ್ರ ಆಘಾತಕಾರಿಯಾಗಿವೆ. ರುತ್ವಿಕ್‌ ಚಟರ್ಜಿ ಮತ್ತು ರಾಚೆಲ್‌ ಫರ್ನಾಂಡೀಸ್‌ ಚಟರ್ಜಿ ಎಂಬವರು ಈ ಗ್ರೂಪ್‌ನ ಅಡ್ಮಿನ್‌ ಆಗಿದ್ದಾರೆ. ರುತ್ವಿಕ್‌ ಅವರು ಆಸ್ಟ್ರೇಲಿಯಾದ ಮೊನಷ ವಿವಿಯಲ್ಲಿ ಓದಿದವರೆಂದು ಪ್ರೊಫೈಲ್‌ ಹೇಳುತ್ತದೆ. ರಾಚೆಲ್ ಅವರು ಮುಂಬೈ ಮೂಲದವರಾಗಿದ್ದಾರೆ.

“ಅತ್ಯಂತ ಅನಿರೀಕ್ಷಿತ ಮೂಲಗಳಿಂದ ಸಹಾಯವು ಎಲ್ಲಾ ರೂಪಗಳಲ್ಲಿ ಬರಲಿದೆ. ಈ ಸಮುದಾಯವು ನಿಮಗೆ ಸರಿಯಾದ ಸಹಾಯವನ್ನು ನೀಡುತ್ತದೆ” ಎಂದು ಗ್ರೂಪ್‌‌ನ ಅಡ್ಮಿನ್ ಬರೆದುಕೊಂಡಿದ್ದಾರೆ.

“ಒಂದೆರಡು ವರ್ಷಗಳ ಹಿಂದೆ ನಾನು ತುಂಬಾ ಜವಾಬ್ದಾರಿಯುತ ಮತ್ತು ವಿಶ್ವಾಸಾರ್ಹ ಎಂದು ತೋರುವ ದಾದಿಯನ್ನು ನೇಮಿಸಿಕೊಂಡಾಗ ಕೆಟ್ಟ ಅನುಭವವಾಯಿತು. ಆಕೆ ಕೋಪಗೊಳ್ಳುತ್ತಿದ್ದಳು, ನನ್ನ ಮಗನನ್ನು ಹಿಂಸಿಸಿದಳು. ಆಗ ನಾನು ಅರಿತುಕೊಂಡೆ, ನಮ್ಮ ಮನೆಗಳಿಗೆ ಯಾರನ್ನಾದರೂ ಕರೆತರುವ ಮೊದಲು ಅವರ ಎಲ್ಲ ಪೂರ್ವಪರವನ್ನು ತಿಳಿಯಬೇಕು ಎಂದು.”

ಇದನ್ನೂ ಓದಿರಿ: ಲಂಡನ್‌ನಲ್ಲಿ 300 ಎಕರೆ ಎಸ್ಟೇಟ್ ಖರೀದಿಸಿದ ಅಂಬಾನಿ: ಭಾರತ ಬಿಟ್ಟು ಹೋಗುವುದಿಲ್ಲ ಎಂದು ಸ್ಪಷ್ಟನೆ

“ಅವರು ನಮ್ಮ ಮನೆಗಳನ್ನು ಸ್ವಚ್ಛವಾಗಿಡುತ್ತಾರೆ, ಅವರು ನಮ್ಮ ಮೇಜಿನ ಮೇಲೆ ಬಿಸಿಬಿಸಿ ಊಟವಿಡುತ್ತಾರೆ, ನಮ್ಮ ಮಕ್ಕಳನ್ನು ನೋಡಿಕೊಳ್ಳುತ್ತಾರೆ, ನಮ್ಮ ಕಾರುಗಳನ್ನು ಓಡಿಸುತ್ತಾರೆ, ನಮ್ಮ ಕೆಲಸಗಳನ್ನು ಮಾಡುತ್ತಾರೆ, ಕಚೇರಿಗಳಲ್ಲಿ ಸಹಾಯ ಮಾಡುತ್ತಾರೆ ಮತ್ತು ಇನ್ನೂ ಹೆಚ್ಚಿನ ಕೆಲಸಗಳನ್ನು ಮಾಡುತ್ತಾರೆ. ನಾವು ಅವರಿಲ್ಲದೆ ಬದುಕಲು ಸಾಧ್ಯವಿಲ್ಲ. ನಾವು ಯಾವಾಗಲೂ ಅವರಿಗೆ ಕೃತಜ್ಞರಾಗಿರುತ್ತೇವೆ. ಆದರೆ ಪ್ರತಿ ನಾಣ್ಯಕ್ಕೂ ಯಾವಾಗಲೂ ಎರಡು ಮುಖಗಳಿರುತ್ತವೆ. ಆದ್ದರಿಂದ ನಾವು ಯಾರನ್ನು ನೇಮಿಸಿಕೊಳ್ಳುತ್ತಿದ್ದೇವೆ, ಯಾರನ್ನು ನಮ್ಮ ಮನೆಗೆ ಬಿಡುತ್ತಿದ್ದೇವೆ ಎಂಬುದು ನಮಗೆ ತಿಳಿದಿರುವುದು ಬಹಳ ಮುಖ್ಯ” ಎಂದು ಅಡ್ಮಿನ್ ಹೇಳಿಕೊಂಡಿದ್ದಾರೆ.

“ಮನೆ ನಮ್ಮ ವೈಯಕ್ತಿಕ ಜಾಗ. ಕಳ್ಳತನ ಮಾಡಿದವರು, ಯಾರೊಬ್ಬರ ಮಗುವನ್ನು ಹೊಡೆದವರು, ವೃದ್ಧ ದಂಪತಿಯನ್ನು ಕೊಂದವರು, ಜೈಲಿನಿಂದ ಹೊರಬಂದಿದ್ದಾರೆಯೇ ಎಂದು ಖಚಿತಪಡಿಸಿಕೊಳ್ಳಬೇಕು. ಕೆಲಸಕ್ಕೆ ತೆಗೆದುಕೊಳ್ಳುವ ಮುನ್ನ ಈ ಹಿಂದೆ ಇವರು ಎಲ್ಲಿ ಕೆಲಸ ಮಾಡುತ್ತಿದ್ದರೆಂದು ತಿಳಿದು, ಅಲ್ಲಿನ ಮಾಲೀಕರಿಂದ ಪ್ರತಿಕ್ರಿಯೆ ಪಡೆಯಬೇಕು…”

– ಹೀಗೆ ಗ್ರೂಪ್‌ನ ಉದ್ದೇಶವನ್ನು ಅಡ್ಮಿನ್‌ ಬರೆದುಕೊಂಡಿದ್ದಾರೆ. ನಿತ್ಯವೂ ಒಂದಲ್ಲ ಒಂದು ಹೆಣ್ಣುಮಕ್ಕಳ ಫೋಟೋ ಹಾಕಿ ಅಭಿಪ್ರಾಯ ಕೇಳಲಾಗುತ್ತಿದೆ. ಎಲ್ಲೋ ಒಂದು ಕಡೆ ಆಗಿದ್ದನ್ನು ನೆಪವಾಗಿಟ್ಟುಕೊಂಡು ಮನೆಗೆಲಸಕ್ಕೆ ಸೇರುವ ಎಲ್ಲ ಹೆಣ್ಣು ಮಕ್ಕಳ ಮೇಲೆ ಅನುಮಾನಪಡುವುದು ಎಷ್ಟು ಸರಿ? ಅವರ ಫೋಟೋಗಳನ್ನು ಸಾರ್ವಜನಿಕ ವೇದಿಕೆಯಲ್ಲಿ ಹಾಕಿ ಅಭಿಪ್ರಾಯ ಕೇಳುವುದು ವಿಕೃತಿಯಲ್ಲವೇ?

ಈ ಖಾಸಗಿ ಗ್ರೂಪ್‌ನಲ್ಲಿದ್ದ ಒಬ್ಬರು ‘ನಾನುಗೌರಿ.ಕಾಂ’ಗೆ ಮಾಹಿತಿ ನೀಡಿದ್ದಾರೆ. ಗ್ರೂಪ್‌ನಲ್ಲಿ ಹಾಕಿರುವ ಫೋಟೋಗಳ ಸ್ಕ್ರೀನ್‌ಶಾಟ್‌ಗಳನ್ನು ನಮ್ಮೊಂದಿಗೆ ಹಂಚಿಕೊಂಡಿದ್ದಾರೆ. ಮನೆಗೆಲಸದವರ ಖಾಸಗಿತನ ಹಾಗೂ ಮಾನವ ಹಕ್ಕುಗಳಿಗೆ ಈ ಗ್ರೂಪ್‌ನಲ್ಲಿ ಬೆಲೆ ಇಲ್ಲವಾಗಿದೆ ಎಂದು ವಿಷಾದಿಸಿದ್ದಾರೆ.

ಕೆಲವು ಹೆಣ್ಣು ಮಕ್ಕಳ ಫೋಟೋವನ್ನು ಹಾಕಿ, ಇವರನ್ನು ಯಾರೂ ಕೆಲಸಕ್ಕೆ ತೆಗೆದುಕೊಳ್ಳಬೇಡಿ, ನಾವು ಬ್ಲಾಕ್‌ಲಿಸ್ಟ್‌ಗೆ ಹಾಕಿದ್ದೇವೆ ಎಂದು ಪೋಸ್ಟ್‌ ಮಾಡಲಾಗಿದೆ. ಇದನ್ನು ಪ್ರಶ್ನಿಸಿದವರನ್ನು ಗ್ರೂಪ್‌ನಿಂದ ಹೊರಹಾಕುವ ಕೆಲಸವೂ ನಡೆಯುತ್ತಿದೆ. ಹೆಚ್ಚಿನ ವಿವರ ಪಡೆಯಲು ನಾನುಗೌರಿ.ಕಾಂ ತಂಡವು ಗ್ರೂಪ್‌ಗೆ ಪ್ರವೇಶಿಸಲು ಯತ್ನಿಸಿತು. ಅಡ್ಮಿನ್‌ ಅವಕಾಶ ನೀಡದ ಕಾರಣ, ಹೆಚ್ಚಿನ ವಿವರಗಳು ಲಭ್ಯವಾಗಿಲ್ಲ.

ಬದುಕಿನ ಅನಿವಾರ್ಯತೆಗೆ ಸಿಲುಕಿ ಮನೆಗೆಲಸಕ್ಕೆ ಹೋಗುವ ಹೆಣ್ಣುಮಕ್ಕಳ ಮೇಲೆ ಈ ರೀತಿಯ ಅಮಾನುಷವಾಗಿ ವರ್ತಿಸುವುದು ಜಗತ್ತಿನ ಯಾವ ಮೂಲೆಯಲ್ಲಿ ನಡೆದರೂ ಖಂಡನೀಯ. ಇದೇ ರೀತಿಯ ಖಾಸಗಿ ಗ್ರೂಪ್‌ಗಳು ಬೆಂಗಳೂರಿನಲ್ಲಿಯೂ ಇರಬಹುದು.

ಮಹಿಳೆಯರ ಹಕ್ಕುಗಳ ಪರವಾಗಿ ದನಿ ಜೋರಾಗುತ್ತಿರುವ ಈ ಹೊತ್ತಿನಲ್ಲಿ ಇಂತಹ ವಿದ್ಯಮಾನಗಳು ಬೆಳಕಿಗೆ ಬರುವುದು ಆತಂಕಕಾರಿ. ಈ ರೀತಿ ಪ್ರಕರಣಗಳು ಕಂಡು ಬಂದಲ್ಲಿ ಪ್ರಜ್ಞಾವಂತರು ರಿಪೋರ್ಟ್ ಮಾಡಬೇಕಾಗಿ ವಿನಂತಿ. ಸಾಮಾಜಿಕ ಮಾಧ್ಯಮಗಳು ಹೀಗೆಲ್ಲ ದುರ್ಬಳಕೆ ಆಗುವುದು ತಪ್ಪಬೇಕಿದೆ.

ಯಾವುದೇ ಜೀವನ ಭದ್ರತೆ ಇಲ್ಲದೆ ಅತ್ಯಂತ ಕಡಿಮೆ ಸಂಬಳಕ್ಕೆ ದುಡಿಯುತ್ತಿರುವ ಮನೆಗೆಲಸದ ಹೆಣ್ಣು ಮಕ್ಕಳನ್ನು ಇಷ್ಟು ಕ್ರೂರವಾಗಿ ನಡೆಸಿಕೊಳ್ಳುವುದು ದುರಾದೃಷ್ಟಕರ. ಆಧುನಿಕವಾಗಿ ಮುಂದುವರಿಯುತ್ತಿರುವ ಸಮಾಜವು ಇವುಗಳ ವಿರುದ್ಧ ದನಿ ಎತ್ತಬೇಕಿದೆ.


ಇದನ್ನೂ ಓದಿರಿ: ಇನ್ನೆಂದೂ ಆಗಿರದಷ್ಟು ಬಡತನ ಕಳೆದ 8 ವರ್ಷಗಳಲ್ಲಿ ಭಾರತದಲ್ಲಿ ಹೆಚ್ಚಳ: ಅಧ್ಯಯನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...