Homeಮುಖಪುಟಅನುಮಾನದ ರೋಗ: ಹೆಣ್ಣುಮಕ್ಕಳ ಫೋಟೋ ಎಫ್‌ಬಿಯಲ್ಲಿ ಪೋಸ್ಟ್‌ ಮಾಡಿ ವಿಕೃತಿ

ಅನುಮಾನದ ರೋಗ: ಹೆಣ್ಣುಮಕ್ಕಳ ಫೋಟೋ ಎಫ್‌ಬಿಯಲ್ಲಿ ಪೋಸ್ಟ್‌ ಮಾಡಿ ವಿಕೃತಿ

- Advertisement -
- Advertisement -

ಕೆಲವು ಹಣವಂತರ ಅಹಂಕಾರ ಹೇಗೆಲ್ಲ ಪ್ರದರ್ಶನವಾಗುತ್ತದೆ, ಮಾನವ ಹಕ್ಕುಗಳು ಹೇಗೆಲ್ಲ ಉಲ್ಲಂಘನೆಯಾಗುತ್ತವೆ ಎಂಬುದಕ್ಕೆ ತಾಜಾ ನಿದರ್ಶನವಾಗಿ ‘ಹೆಲ್ಪ್‌ಚೆಕ್ಕರ್‌ ಹೆಲ್ಪಿಂಗ್ ಟ್ರೀ’ ಎಂಬ ಫೇಸ್‌ಬುಕ್‌ ಗ್ರೂಪ್‌ನ ಚಟುವಟಿಕೆಗಳು ಕಾಣಿಸಿಕೊಂಡಿವೆ.

ಪ್ರೈವೇಟ್‌ ಗ್ರೂಪ್ ಆಗಿರುವ ‘HelpChecker – Helping Tree’ ಮನೆಗೆಲಸದ ಹೆಣ್ಣುಮಕ್ಕಳ ಫೋಟೋಗಳನ್ನು ಹಾಕಿ ವಿಕೃತಿ ಮೆರೆಯುತ್ತಿದೆ. 13,227 ಸದಸ್ಯರನ್ನು ಹೊಂದಿರುವ ಈ ಗ್ರೂಪ್‌ 2015ರಿಂದಲೂ ಚಾಲ್ತಿಯಲ್ಲಿದೆ. ಏಪ್ರಿಲ್‌ 15, 2015ರಂದು ಗ್ರೂಪ್‌ ರಚನೆಯಾಗಿದೆ. ಕಾಲಕಾಲಕ್ಕೆ ಹೆಸರನ್ನು ಬದಲಾಯಿಸಲಾಗಿದೆ.

HELPCHECKER- MOMS & DADS WATCH OUT FOR THESE, MOMS & DADS WATCH OUT FOR THESE- HELPCHECKER, HELPCHECKER – Domestic Diaries ಹೀಗೆ ಆಗಾಗ್ಗೆ ಹೆಸರುಗಳನ್ನು ಬದಲಾಯಿಸಲಾಗಿದೆ. ಈಗ ಹೆಲ್ಪ್‌ಚೆಕ್ಕರ್‌- ಹೆಲ್ಪಿಂಗ್ ಟ್ರೀ ಎಂಬ ಅಂದದ ಹೆಸರನ್ನು ಇಟ್ಟುಕೊಂಡಿದ್ದು, ಮಾಡುತ್ತಿರುವ ಪೋಸ್ಟ್‌ಗಳು ಮಾತ್ರ ಆಘಾತಕಾರಿಯಾಗಿವೆ. ರುತ್ವಿಕ್‌ ಚಟರ್ಜಿ ಮತ್ತು ರಾಚೆಲ್‌ ಫರ್ನಾಂಡೀಸ್‌ ಚಟರ್ಜಿ ಎಂಬವರು ಈ ಗ್ರೂಪ್‌ನ ಅಡ್ಮಿನ್‌ ಆಗಿದ್ದಾರೆ. ರುತ್ವಿಕ್‌ ಅವರು ಆಸ್ಟ್ರೇಲಿಯಾದ ಮೊನಷ ವಿವಿಯಲ್ಲಿ ಓದಿದವರೆಂದು ಪ್ರೊಫೈಲ್‌ ಹೇಳುತ್ತದೆ. ರಾಚೆಲ್ ಅವರು ಮುಂಬೈ ಮೂಲದವರಾಗಿದ್ದಾರೆ.

“ಅತ್ಯಂತ ಅನಿರೀಕ್ಷಿತ ಮೂಲಗಳಿಂದ ಸಹಾಯವು ಎಲ್ಲಾ ರೂಪಗಳಲ್ಲಿ ಬರಲಿದೆ. ಈ ಸಮುದಾಯವು ನಿಮಗೆ ಸರಿಯಾದ ಸಹಾಯವನ್ನು ನೀಡುತ್ತದೆ” ಎಂದು ಗ್ರೂಪ್‌‌ನ ಅಡ್ಮಿನ್ ಬರೆದುಕೊಂಡಿದ್ದಾರೆ.

“ಒಂದೆರಡು ವರ್ಷಗಳ ಹಿಂದೆ ನಾನು ತುಂಬಾ ಜವಾಬ್ದಾರಿಯುತ ಮತ್ತು ವಿಶ್ವಾಸಾರ್ಹ ಎಂದು ತೋರುವ ದಾದಿಯನ್ನು ನೇಮಿಸಿಕೊಂಡಾಗ ಕೆಟ್ಟ ಅನುಭವವಾಯಿತು. ಆಕೆ ಕೋಪಗೊಳ್ಳುತ್ತಿದ್ದಳು, ನನ್ನ ಮಗನನ್ನು ಹಿಂಸಿಸಿದಳು. ಆಗ ನಾನು ಅರಿತುಕೊಂಡೆ, ನಮ್ಮ ಮನೆಗಳಿಗೆ ಯಾರನ್ನಾದರೂ ಕರೆತರುವ ಮೊದಲು ಅವರ ಎಲ್ಲ ಪೂರ್ವಪರವನ್ನು ತಿಳಿಯಬೇಕು ಎಂದು.”

ಇದನ್ನೂ ಓದಿರಿ: ಲಂಡನ್‌ನಲ್ಲಿ 300 ಎಕರೆ ಎಸ್ಟೇಟ್ ಖರೀದಿಸಿದ ಅಂಬಾನಿ: ಭಾರತ ಬಿಟ್ಟು ಹೋಗುವುದಿಲ್ಲ ಎಂದು ಸ್ಪಷ್ಟನೆ

“ಅವರು ನಮ್ಮ ಮನೆಗಳನ್ನು ಸ್ವಚ್ಛವಾಗಿಡುತ್ತಾರೆ, ಅವರು ನಮ್ಮ ಮೇಜಿನ ಮೇಲೆ ಬಿಸಿಬಿಸಿ ಊಟವಿಡುತ್ತಾರೆ, ನಮ್ಮ ಮಕ್ಕಳನ್ನು ನೋಡಿಕೊಳ್ಳುತ್ತಾರೆ, ನಮ್ಮ ಕಾರುಗಳನ್ನು ಓಡಿಸುತ್ತಾರೆ, ನಮ್ಮ ಕೆಲಸಗಳನ್ನು ಮಾಡುತ್ತಾರೆ, ಕಚೇರಿಗಳಲ್ಲಿ ಸಹಾಯ ಮಾಡುತ್ತಾರೆ ಮತ್ತು ಇನ್ನೂ ಹೆಚ್ಚಿನ ಕೆಲಸಗಳನ್ನು ಮಾಡುತ್ತಾರೆ. ನಾವು ಅವರಿಲ್ಲದೆ ಬದುಕಲು ಸಾಧ್ಯವಿಲ್ಲ. ನಾವು ಯಾವಾಗಲೂ ಅವರಿಗೆ ಕೃತಜ್ಞರಾಗಿರುತ್ತೇವೆ. ಆದರೆ ಪ್ರತಿ ನಾಣ್ಯಕ್ಕೂ ಯಾವಾಗಲೂ ಎರಡು ಮುಖಗಳಿರುತ್ತವೆ. ಆದ್ದರಿಂದ ನಾವು ಯಾರನ್ನು ನೇಮಿಸಿಕೊಳ್ಳುತ್ತಿದ್ದೇವೆ, ಯಾರನ್ನು ನಮ್ಮ ಮನೆಗೆ ಬಿಡುತ್ತಿದ್ದೇವೆ ಎಂಬುದು ನಮಗೆ ತಿಳಿದಿರುವುದು ಬಹಳ ಮುಖ್ಯ” ಎಂದು ಅಡ್ಮಿನ್ ಹೇಳಿಕೊಂಡಿದ್ದಾರೆ.

“ಮನೆ ನಮ್ಮ ವೈಯಕ್ತಿಕ ಜಾಗ. ಕಳ್ಳತನ ಮಾಡಿದವರು, ಯಾರೊಬ್ಬರ ಮಗುವನ್ನು ಹೊಡೆದವರು, ವೃದ್ಧ ದಂಪತಿಯನ್ನು ಕೊಂದವರು, ಜೈಲಿನಿಂದ ಹೊರಬಂದಿದ್ದಾರೆಯೇ ಎಂದು ಖಚಿತಪಡಿಸಿಕೊಳ್ಳಬೇಕು. ಕೆಲಸಕ್ಕೆ ತೆಗೆದುಕೊಳ್ಳುವ ಮುನ್ನ ಈ ಹಿಂದೆ ಇವರು ಎಲ್ಲಿ ಕೆಲಸ ಮಾಡುತ್ತಿದ್ದರೆಂದು ತಿಳಿದು, ಅಲ್ಲಿನ ಮಾಲೀಕರಿಂದ ಪ್ರತಿಕ್ರಿಯೆ ಪಡೆಯಬೇಕು…”

– ಹೀಗೆ ಗ್ರೂಪ್‌ನ ಉದ್ದೇಶವನ್ನು ಅಡ್ಮಿನ್‌ ಬರೆದುಕೊಂಡಿದ್ದಾರೆ. ನಿತ್ಯವೂ ಒಂದಲ್ಲ ಒಂದು ಹೆಣ್ಣುಮಕ್ಕಳ ಫೋಟೋ ಹಾಕಿ ಅಭಿಪ್ರಾಯ ಕೇಳಲಾಗುತ್ತಿದೆ. ಎಲ್ಲೋ ಒಂದು ಕಡೆ ಆಗಿದ್ದನ್ನು ನೆಪವಾಗಿಟ್ಟುಕೊಂಡು ಮನೆಗೆಲಸಕ್ಕೆ ಸೇರುವ ಎಲ್ಲ ಹೆಣ್ಣು ಮಕ್ಕಳ ಮೇಲೆ ಅನುಮಾನಪಡುವುದು ಎಷ್ಟು ಸರಿ? ಅವರ ಫೋಟೋಗಳನ್ನು ಸಾರ್ವಜನಿಕ ವೇದಿಕೆಯಲ್ಲಿ ಹಾಕಿ ಅಭಿಪ್ರಾಯ ಕೇಳುವುದು ವಿಕೃತಿಯಲ್ಲವೇ?

ಈ ಖಾಸಗಿ ಗ್ರೂಪ್‌ನಲ್ಲಿದ್ದ ಒಬ್ಬರು ‘ನಾನುಗೌರಿ.ಕಾಂ’ಗೆ ಮಾಹಿತಿ ನೀಡಿದ್ದಾರೆ. ಗ್ರೂಪ್‌ನಲ್ಲಿ ಹಾಕಿರುವ ಫೋಟೋಗಳ ಸ್ಕ್ರೀನ್‌ಶಾಟ್‌ಗಳನ್ನು ನಮ್ಮೊಂದಿಗೆ ಹಂಚಿಕೊಂಡಿದ್ದಾರೆ. ಮನೆಗೆಲಸದವರ ಖಾಸಗಿತನ ಹಾಗೂ ಮಾನವ ಹಕ್ಕುಗಳಿಗೆ ಈ ಗ್ರೂಪ್‌ನಲ್ಲಿ ಬೆಲೆ ಇಲ್ಲವಾಗಿದೆ ಎಂದು ವಿಷಾದಿಸಿದ್ದಾರೆ.

ಕೆಲವು ಹೆಣ್ಣು ಮಕ್ಕಳ ಫೋಟೋವನ್ನು ಹಾಕಿ, ಇವರನ್ನು ಯಾರೂ ಕೆಲಸಕ್ಕೆ ತೆಗೆದುಕೊಳ್ಳಬೇಡಿ, ನಾವು ಬ್ಲಾಕ್‌ಲಿಸ್ಟ್‌ಗೆ ಹಾಕಿದ್ದೇವೆ ಎಂದು ಪೋಸ್ಟ್‌ ಮಾಡಲಾಗಿದೆ. ಇದನ್ನು ಪ್ರಶ್ನಿಸಿದವರನ್ನು ಗ್ರೂಪ್‌ನಿಂದ ಹೊರಹಾಕುವ ಕೆಲಸವೂ ನಡೆಯುತ್ತಿದೆ. ಹೆಚ್ಚಿನ ವಿವರ ಪಡೆಯಲು ನಾನುಗೌರಿ.ಕಾಂ ತಂಡವು ಗ್ರೂಪ್‌ಗೆ ಪ್ರವೇಶಿಸಲು ಯತ್ನಿಸಿತು. ಅಡ್ಮಿನ್‌ ಅವಕಾಶ ನೀಡದ ಕಾರಣ, ಹೆಚ್ಚಿನ ವಿವರಗಳು ಲಭ್ಯವಾಗಿಲ್ಲ.

ಬದುಕಿನ ಅನಿವಾರ್ಯತೆಗೆ ಸಿಲುಕಿ ಮನೆಗೆಲಸಕ್ಕೆ ಹೋಗುವ ಹೆಣ್ಣುಮಕ್ಕಳ ಮೇಲೆ ಈ ರೀತಿಯ ಅಮಾನುಷವಾಗಿ ವರ್ತಿಸುವುದು ಜಗತ್ತಿನ ಯಾವ ಮೂಲೆಯಲ್ಲಿ ನಡೆದರೂ ಖಂಡನೀಯ. ಇದೇ ರೀತಿಯ ಖಾಸಗಿ ಗ್ರೂಪ್‌ಗಳು ಬೆಂಗಳೂರಿನಲ್ಲಿಯೂ ಇರಬಹುದು.

ಮಹಿಳೆಯರ ಹಕ್ಕುಗಳ ಪರವಾಗಿ ದನಿ ಜೋರಾಗುತ್ತಿರುವ ಈ ಹೊತ್ತಿನಲ್ಲಿ ಇಂತಹ ವಿದ್ಯಮಾನಗಳು ಬೆಳಕಿಗೆ ಬರುವುದು ಆತಂಕಕಾರಿ. ಈ ರೀತಿ ಪ್ರಕರಣಗಳು ಕಂಡು ಬಂದಲ್ಲಿ ಪ್ರಜ್ಞಾವಂತರು ರಿಪೋರ್ಟ್ ಮಾಡಬೇಕಾಗಿ ವಿನಂತಿ. ಸಾಮಾಜಿಕ ಮಾಧ್ಯಮಗಳು ಹೀಗೆಲ್ಲ ದುರ್ಬಳಕೆ ಆಗುವುದು ತಪ್ಪಬೇಕಿದೆ.

ಯಾವುದೇ ಜೀವನ ಭದ್ರತೆ ಇಲ್ಲದೆ ಅತ್ಯಂತ ಕಡಿಮೆ ಸಂಬಳಕ್ಕೆ ದುಡಿಯುತ್ತಿರುವ ಮನೆಗೆಲಸದ ಹೆಣ್ಣು ಮಕ್ಕಳನ್ನು ಇಷ್ಟು ಕ್ರೂರವಾಗಿ ನಡೆಸಿಕೊಳ್ಳುವುದು ದುರಾದೃಷ್ಟಕರ. ಆಧುನಿಕವಾಗಿ ಮುಂದುವರಿಯುತ್ತಿರುವ ಸಮಾಜವು ಇವುಗಳ ವಿರುದ್ಧ ದನಿ ಎತ್ತಬೇಕಿದೆ.


ಇದನ್ನೂ ಓದಿರಿ: ಇನ್ನೆಂದೂ ಆಗಿರದಷ್ಟು ಬಡತನ ಕಳೆದ 8 ವರ್ಷಗಳಲ್ಲಿ ಭಾರತದಲ್ಲಿ ಹೆಚ್ಚಳ: ಅಧ್ಯಯನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...