Homeಮುಖಪುಟಲಂಡನ್‌ನಲ್ಲಿ 300 ಎಕರೆ ಎಸ್ಟೇಟ್ ಖರೀದಿಸಿದ ಅಂಬಾನಿ: ಭಾರತ ಬಿಟ್ಟು ಹೋಗುವುದಿಲ್ಲ ಎಂದು ಸ್ಪಷ್ಟನೆ

ಲಂಡನ್‌ನಲ್ಲಿ 300 ಎಕರೆ ಎಸ್ಟೇಟ್ ಖರೀದಿಸಿದ ಅಂಬಾನಿ: ಭಾರತ ಬಿಟ್ಟು ಹೋಗುವುದಿಲ್ಲ ಎಂದು ಸ್ಪಷ್ಟನೆ

- Advertisement -
- Advertisement -

ರಿಲಯನ್ಸ್‌ ಇಂಡಸ್ಟ್ರೀಸ್‌ ಲಿಮಿಟೆಡ್‌ನ ಮುಖ್ಯಸ್ಥ ಮುಖೇಶ್ ಅಂಬಾನಿ ಕುಟುಂಬ ಸಮೇತ ಲಂಡನ್‌ಗೆ ತೆರಳಿ ಅಲ್ಲಿಯೇ ವಾಸಿಸುವ ಸಾಧ್ಯತೆ ಇದೆ ಎಂಬ ಸುದ್ದಿ ಹಲವು ಕಡೆಗಳಿಂದ ಕೇಳಿಬಂದಿತ್ತು. ಈ ಸುದ್ದಿಯನ್ನು ಅಲ್ಲಗಳೆದಿರುವ ರಿಲಯನ್ಸ್‌ ಗ್ರೂಪ್‌ ಇದು ‘ಆಧಾರ ರಹಿತ’ ಎಂದು ಹೇಳಿಕೆ ನೀಡಿದೆ.

ರಿಲಯನ್ಸ್‌ ಗ್ರೂಪ್‌, ಶುಕ್ರವಾರ ಲಂಡನ್‌ನ ಸ್ಟೋಕ್‌ ಪಾರ್ಕ್‌ ಎಸ್ಟೇಟ್‌ ಅನ್ನು ಸ್ವಾಧೀನಪಡಿಸಿಕೊಂಡಿದ್ದು, ಅಂಬಾನಿ ಸ್ಥಳಾಂತರದ ಉಹಾಪೂಹಗಳಿಗೆ ತೆರೆ ಎಳೆದಿದೆ. ಅಂಬಾನಿ ಮತ್ತು ಅವರ ಕುಟುಂಬವು, ’ಲಂಡನ್ ಅಥವಾ ಪ್ರಪಂಚದ ಬೇರೆಲ್ಲಿಗೂ ಸ್ಥಳಾಂತರಗೊಳ್ಳುವ ಅಥವಾ ವಾಸಿಸುವ ಯಾವುದೇ ಯೋಜನೆಗಳನ್ನು ಹೊಂದಿಲ್ಲ ಎಂದು ಸ್ಪಷ್ಟಪಡಿಸಲು ಬಯಸುತ್ತೇವೆ ಎಂದು ಕಂಪನಿ ಹೇಳಿದೆ.

ಇತ್ತೀಚೆಗೆ ಪತ್ರಿಕೆಯೊಂದರಲ್ಲಿ, ’ಅಂಬಾನಿ ಕುಟುಂಬವು ಲಂಡನ್‌ನ ಸ್ಟೋಕ್‌ ಪಾರ್ಕ್‌‌ನಲ್ಲಿ ಭಾಗಶಃ ವಾಸಿಸುವ ಯೋಜನೆಯಿದೆ ಎಂಬ ಸುದ್ದಿ ಸಾಮಾಜಿಕ ಮಾಧ್ಯಮಗಳಲ್ಲಿ ಚರ್ಚೆಯಾಗಿದ್ದು, ಅನಗತ್ಯ ಮತ್ತು ಆಧಾರ ರಹಿತ ಉಹಾಪೋಹಗಳಿಗೆ ಕಾರಣವಾಗಿದೆ’ ಎಂದು ವರದಿಯಲ್ಲಿ ತಿಳಿಸಿತ್ತು.

ಏಷ್ಯಾದ ಅತ್ಯಂತ ಶ್ರೀಮಂತ ವ್ಯಕ್ತಿಯಾದ ಮುಖೇಶ್ ಅಂಬಾನಿ ಅವರು ತಮ್ಮ ಕುಟುಂಬದೊಂದಿಗೆ ಮಹಾರಾಷ್ಟ್ರದ ಮುಂಬೈನ ಅಲ್ಟಾಮೌಂಟ್ ರಸ್ತೆಯಲ್ಲಿರುವ 4,00,000 ಚದರ ಅಡಿ ವಿಸ್ತೀರ್ಣದ ಆಂಟಿಲ್ಲಾ ನಿವಾಸದಲ್ಲಿ ವಾಸಿಸುತ್ತಿದ್ದಾರೆ. ಸ್ಟೋಕ್ ಪಾರ್ಕ್‌ನ ಬಕಿಂಗ್‌ಹ್ಯಾಮ್‌ಶೈರ್‌ನಲ್ಲಿರುವ 300 ಎಕರೆ ಕಂಟ್ರಿ ಕ್ಲಬ್‌ ಅನ್ನು ಅಂಬಾನಿ ಕುಟುಂಬವು ತಮ್ಮ ಪ್ರಾಥಮಿಕ ನಿವಾಸವನ್ನಾಗಿ ಮಾಡುವ ನಿರೀಕ್ಷೆಯಿದೆ ಎಂದು ಇತ್ತೀಚಿನ ವರದಿಗಳು ತಿಳಿಸಿವೆ.

ರಿಲಯನ್ಸ್‌ ಸಮೂಹದ, ರಿಲಯನ್ಸ್‌ ಇಂಡಸ್ಟ್ರಿಯಲ್ ಇನ್‌ವೆಸ್ಟ್‌ಮೆಂಟ್‌ ಮತ್ತು ಹೋಲ್ಡಿಂಗ್ಸ್‌ ಲಿಮಿಟಡ್‌, ‘ಇತ್ತೀಚೆಗಷ್ಟೆ ಸ್ಟೋಕ್‌ ಪಾರ್ಕ್ ಎಸ್ಟೇಟ್‌ ಅನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಈ ಪಾರಂಪರಿಕ ಸ್ಥಳದಲ್ಲಿ ಪ್ರಧಾನವಾಗಿ ಗಾಲ್ಫಿಂಗ್‌ ಮತ್ತು ಕ್ರೀಡಾ ರೆಸಾರ್ಟ್‌ ನಿರ್ಮಿಸುವ ಗುರಿಯನ್ನು ಹೊಂದಿದೆ. ಸ್ಥಳೀಯ ನಿಬಂಧನೆಗಳನ್ನು ಸಂಪೂರ್ಣವಾಗಿ ಅನುಸರಿಸುತ್ತಾ ಯೋಜನಾ ಮಾರ್ಗಸೂಚಿಗಳನ್ನು ತಯಾರಿಸಲಾಗುವುದು’ ಎಂದು ಗ್ರೂಪ್ ಸ್ಪಷ್ಟಪಡಿಸಿದೆ.

ಅಂಬಾನಿ ಏಷ್ಯಾದ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿದ್ದು, ಜಾಗತಿಕ ಬಿಲಿಯನೇರ್‌ಗಳ ಪಟ್ಟಿಯಲ್ಲಿ 10 ನೇ ಸ್ಥಾನದಲ್ಲಿದ್ದಾರೆ. ಅವರ ಆಸ್ತಿ ಅಂದಾಜು 84.5 ಬಿಲಿಯನ್ ಡಾಲರ್‌ಗಳಾಗಿದ್ದು, ಅವರು ವರ್ಷದ ಹಿಂದೆ ಏಷ್ಯಾದ ಅತ್ಯಂತ ಶ್ರೀಮಂತ ವ್ಯಕ್ತಿಯಾದ ಚೀನಾದ ಜ್ಯಾಕ್ ಮಾ ಅವರನ್ನು ಹಿಂದಿಕ್ಕಿದ್ದಾರೆ” ಎಂದು ಫೋರ್ಬ್ಸ್ ಹೇಳಿದೆ.

ಭಾರತದ ಆರ್ಥಿಕತೆ ಕಳೆದ ಕೆಲವು ವರ್ಷಗಳಿಂದ ನಿರಂತರವಾಗಿ ಕುಸಿಯುತ್ತಿವೆ ಎಂದು ವರದಿಗಳು ಹೇಳುತ್ತಿವೆ. ಕೊರಾನಾ ಸಾಂಕ್ರಾಮಿಕದಿಂದ ಭಾರತದ ಆರ್ಥಿಕತೆ ಮತ್ತಷ್ಟು ಹದಗೆಟ್ಟಿದೆ. ಆದರೆ ಈ ಎರಡು ವರ್ಷಗಳಲ್ಲಿ ಮುಖೇಶ್ ಅಂಬಾನಿ ಆಸ್ತಿ ಮಾತ್ರ ನಿರಂತರ ಏರುಗತಿಯಲ್ಲಿದೆ. ಎಲ್ಲಾ ವಲಯಗಳು ನಷ್ಟಕ್ಕೀಡಾಗಿದ್ದರೂ ಅಂಬಾನಿ ಮತ್ತು ಗೌತಮ್ ಅದಾನಿ ಮಾತ್ರ ಹೇಗೆ ಲಾಭ ಮಾಡಲು ಸಾಧ್ಯ? ಸರ್ಕಾರದ ನೀತಿಗಳು ಜನರ ಪರವಾಗಿರುವ ಬದಲು ಇಂತಹ ಶ್ರೀಮಂತ ಉದ್ಯಮಿಗಳ ಪರವಾಗಿವೆ ಎಂಬ ಟೀಕೆಗಳು ಕೇಳಿಬಂದಿವೆ.


ಇದನ್ನು ಓದಿ: ಇನ್ನೆಂದೂ ಆಗಿರದಷ್ಟು ಬಡತನ ಕಳೆದ 8 ವರ್ಷಗಳಲ್ಲಿ ಭಾರತದಲ್ಲಿ ಹೆಚ್ಚಳ: ಅಧ್ಯಯನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...