Homeಸಿನಿಮಾಕ್ರೀಡೆಸ್ಕಾಟ್ಲೆಂಡ್ ವಿರುದ್ಧ ಕೇವಲ 39 ಎಸೆತಗಳಲ್ಲಿ ಜಯಗಳಿಸಿದ ಭಾರತ: ಸೆಮಿಫೈನಲ್ ಆಸೆ ಜೀವಂತ

ಸ್ಕಾಟ್ಲೆಂಡ್ ವಿರುದ್ಧ ಕೇವಲ 39 ಎಸೆತಗಳಲ್ಲಿ ಜಯಗಳಿಸಿದ ಭಾರತ: ಸೆಮಿಫೈನಲ್ ಆಸೆ ಜೀವಂತ

- Advertisement -
- Advertisement -

ಐಸಿಸಿ ಪುರುಷರ ಟಿ20 ವಿಶ್ವಕಪ್ ಗ್ರೂಪ್ 2 ರ ಪಂದ್ಯದಲ್ಲಿ ಸ್ಕಾಟ್ಲೆಂಡ್ ವಿರುದ್ಧ ಭಾರತವು ಭರ್ಜರಿ ಜಯ ಸಾಧಿಸಿದೆ. ಆ ಮೂಲಕ ಗ್ರೂಪ್ 2 ರಲ್ಲಿ ಪಾಕಿಸ್ತಾನದ ನಂತರ ಸೆಮಿಫೈನಲ್ ತಲುಪುವ ಆಸೆ ಜೀವಂತವಾಗಿರಿಸಿಕೊಂಡಿದೆ. ಮೊದಲು ಬ್ಯಾಟ್ ಮಾಡಿದ ಸ್ಕಾಟ್ಲೆಂಡ್ 85 ರನ್‌ಗಳಿಗೆ ಆಲೌಟ್‌ ಆಯಿತು. ಭಾರತದ ಪರ ಮೊಹಮ್ಮದ್ ಶಮಿ ಮತ್ತು ರವೀಂದ್ರ ಜಡೇಜಾ ತಲಾ ಮೂರು ವಿಕೆಟ್ ಪಡೆದು ಮಾರಕ ದಾಳಿ ನಡೆಸಿದರೆ, ಜಸ್ಪ್ರಿತ್ ಬೂಮ್ರ ಎರಡು ವಿಕೆಟ್ ಪಡೆದು ಮಿಂಚಿದರು. ನಂತರ ಬ್ಯಾಟ್ ಮಾಡಿದ ಭಾರತ ಕೇವಲ 39 ಎಸೆತಗಳಲ್ಲಿ 89 ರನ್ ಗಳಿಸಿ 8 ವಿಕೆಟ್‌ಗಳ ಬೃಹತ್ ಗೆಲುವು ದಾಖಲಿಸಿತು. ಆರಂಭಿಕ ಆಟಗಾರರಾದ ಕೆ.ಎಲ್ ರಾಹುಲ್ ಮತ್ತು ರೋಹಿತ್ ಶರ್ಮಾ ಆಕ್ರಮಣಕಾರಿ ಆಟವಾಡಿದರು.

ಕೆ.ಎಲ್ ರಾಹುಲ್ ಕೇವಲ 19 ಎಸೆತಗಳಲ್ಲಿ 50 ರನ್ ಚಚ್ಚಿದರೆ, ರೋಹಿತ್ ಶರ್ಮಾ 16 ಎಸೆತಗಳಲ್ಲಿ 30 ರನ್ ಬಾರಿಸಿದರು. ಇವರಿಬ್ಬರೂ ಔಟ್ ಆದ ನಂತರ ವಿರಾಟ್ ಕೊಹ್ಲಿ ಎರಡು ರನ್ ಗಳಿಸಿದರು. ಕೊನೆಗೆ ಬಂದ ಸೂರ್ಯಕುಮಾರ್ ಯಾದವ್ ಗೆಲುವಿಗೆ 2 ರನ್ ಬೇಕಿದ್ದಾಗ ಭರ್ಜರಿ ಸಿಕ್ಸರ್ ಎತ್ತಿ ಗೆಲುವಿಗೆ ಸಹಕರಿಸಿದರು.

ಭಾರತದ ಸೆಮಿಫೈನಲ್‌ ಗೆ ಎರಡೇ ಹೆಜ್ಜೆ

ಈ ಗೆಲುವಿನೊಂದಿಗೆ ಭಾರತ 4 ಪಾಯಿಂಟ್ ಮತ್ತು ಉತ್ತಮ ನೆಟ್ ರನ್‌ ರೇಟ್ (+1.619) ಹೊಂದಿದೆ. ಪಾಕಿಸ್ತಾನವು 4ಕ್ಕೆ 4 ಪಂದ್ಯ ಜಯಿಸಿ ಈಗಾಗಲೇ ಸೆಮಿಫೈನಲ್ ತಲುಪಿದೆ. ನ್ಯೂಜಿಲೆಂಡ್ ತಂಡವು 4 ಪಂದ್ಯಗಳಲ್ಲಿ 3 ನ್ನು ಜಯಿಸಿ +1.277 ನೆಟ್‌ ರನ್‌ ರೇಟ್ ಪಡೆದು ಎರಡನೇ ಸ್ಥಾನದಲ್ಲಿದೆ. ನ್ಯೂಜಿಲೆಂಡ್ ಮತ್ತು ಆಫ್ಘಾನಿಸ್ತಾನದ ಕೊನೆಯ ಪಂದ್ಯ ನವೆಂಬರ್ 7 ರಂದು ನಡೆಯಲಿದೆ. ಅಂದು ನ್ಯೂಜಿಲೆಂಡ್ ಗೆದ್ದರೆ ಭಾರತದ ಕನಸು ನುಚ್ಚು ನೂರಾಗುತ್ತದೆ. ಏಕೆಂದರೆ 8 ಪಾಯಿಂಟ್ ಪಡೆದು ಅದು ಸೆಮಿಫೈನಲ್ ಪ್ರವೇಶಿಸುತ್ತದೆ. ಒಂದು ವೇಳೆ ನ್ಯೂಜಿಲೆಂಡ್ ಕಡಿಮೆ ಅಂತರದಲ್ಲಿ ಸೋತರೆ, ಭಾರತಕ್ಕೆ ಅವಕಾಶ ತೆರೆದುಕೊಳ್ಳುತ್ತದೆ. ಏಕೆಂದರೆ ಆಗ ನ್ಯೂಜಿಲೆಂಡ್ 6 ಪಾಯಿಂಟ್, ಆಫ್ಘಾನಿಸ್ತಾನ 6 ಪಾಯಿಂಟ್ ಪಡೆದಿರುತ್ತವೆ (ನೆಟ್ ರನ್ ರೇಟ್ +1.481). ಅದೇ ರೀತಿಯಾಗಿ ಭಾರತವು ನಮೀಬಿಯಾ ಎದುರಿನ ಕೊನೆಯ ಪಂದ್ಯದಲ್ಲಿ ಭಾರೀ ಅಂತರದಿಂದ ಗೆದ್ದರೆ ಅದು ಸಹ 6 ಪಾಯಿಂಟ್ ಗಳಿಸುತ್ತದೆ. ಭಾರತದ ನೆಟ್‌ ರನ್ ರೇಟ್ ಮತ್ತಷ್ಟು ಹೆಚ್ಚಾಗುವುದರಿಂದ ಸೆಮಿಫೈನಲ್ ತಲುಪುವ ಅವಕಾಶವಿದೆ.

ಆದರೆ ಇಷ್ಟೆಲ್ಲಾ ಆಗಬೇಕಾದರೆ ಎರಡು ಹೆಜ್ಜೆ ಭಾರತಕ್ಕೆ ಪ್ರಮುಖವಾಗುತ್ತವೆ. 1. ನ್ಯೂಜಿಲೆಂಡ್ ನವೆಂಬರ್ 7 ರಂದು ಆಫ್ಘಾನಿಸ್ತಾನ ಎದುರು ಕಡಿಮೆ ಅಂತರದಿಂದ ಸೋಲಲೇಬೇಕು ಮತ್ತು ಭಾರತವು ನಮೀಬಿಯಾ ಎದುರು ಭಾರೀ ಅಂತರದಿಂದ ಗೆಲ್ಲಲೇಬೇಕು. ಕ್ರಿಕೆಟ್ ನಲ್ಲಿ ಎಂತಹ ಪವಾಡಗಳು ಸಹ ನಡೆಯಬಹುದು. ಅದು ಸಾಧ್ಯವೇ ಎಂಬುದು ನವೆಂಬರ್ 7 ರಂದು ತೀರ್ಮಾನವಾಗಲಿದೆ. ಅಲ್ಲಿಯವರೆಗೂ ಕಾಯೋಣ.


ಇದನ್ನೂ ಓದಿ: ‘ಇಡೀ ಭಾರತ ನಿನ್ನ ಹಿಂದೆ ಇದೆ’: ಸ್ಕಾಟ್ಲೆಂಡ್ ವಿಕೆಟ್‌ಕೀಪರ್‌ ಹೇಳಿಕೆ ಸ್ಟಂಪ್ ಮೈಕ್‌ನಲ್ಲಿ ಸೆರೆ- ವೈರಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಸರ್, ಆರ್, ಜಡೇಜಾ ಕೊಡ 4.15/3wicket ಅನ್ನು ಪಡೆದಿದ್ದಾರೆ …. ನೀವು ಎರಡು ಅಂತ ಬರೆದಿರ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...