Homeಮುಖಪುಟತ್ರಿಪುರ ಕೋಮು ಗಲಭೆ: 68 ಜನರ ಟ್ವಿಟರ್‌ ಖಾತೆ ಅಮಾನತುಗೊಳಿಸುವಂತೆ ಟ್ವಿಟರ್‌ಗೆ ಪತ್ರ ಬರೆದ ಪೊಲೀಸರು

ತ್ರಿಪುರ ಕೋಮು ಗಲಭೆ: 68 ಜನರ ಟ್ವಿಟರ್‌ ಖಾತೆ ಅಮಾನತುಗೊಳಿಸುವಂತೆ ಟ್ವಿಟರ್‌ಗೆ ಪತ್ರ ಬರೆದ ಪೊಲೀಸರು

- Advertisement -
- Advertisement -

ತ್ರಿಪುರ ರಾಜ್ಯದಲ್ಲಿ ನಡೆದ ಕೋಮು ಘರ್ಷಣೆಗಳ ಕುರಿತು ‘ಆಕ್ಷೇಪಾರ್ಹ’ ವಿಷಯಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡ 68 ಜನರ ಟ್ವಿಟರ್‌ ಖಾತೆಗಳನ್ನು ಅಮಾನತುಗೊಳಿಸುವಂತೆ ಸಾಮಾಜಿಕ ಮಾಧ್ಯಮ ಸಂಸ್ಥೆ ಟ್ವಿಟರ್‌ ಅನ್ನು ತ್ರಿಪುರ ಪೊಲೀಸರು ಕೇಳಿಕೊಂಡಿದ್ದಾರೆ.

ರಾಜ್ಯದಲ್ಲಿ ಮಸೀದಿ ಧ್ವಂಸಕ್ಕೆ ಸಂಬಂಧಿಸಿದಂತೆ ‘ವಿಕೃತ ಮತ್ತು ಆಕ್ಷೇಪಾರ್ಹ’ ವಿಷಯಗಳನ್ನು ಪೋಸ್ಟ್‌ ಮಾಡಲು ಟ್ವಿಟರ್‌ ಖಾತೆಗಳನ್ನು ಬಳಸಲಾಗಿದೆ. ಅಂತಹ 68 ಟ್ವಿಟರ್‌ ಖಾತೆಗಳ ಮೇಲೆ ಯುಎಪಿಎ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಕುರಿತು ಪಶ್ಚಿಮ ತ್ರಿಪುರಾದ ಪೊಲೀಸರು ಟ್ವಿಟರ್‌ನ ಕುಂದುಕೊರತೆ ಅಧಿಕಾರಿಗಳಿಗೆ ಪತ್ರ ಬರೆದಿದ್ದು, ಅದರಲ್ಲಿ ಅಮಾನತುಮಾಡಬೇಕಾದ 68 ಜನರ ಟ್ವಿಟರ್‌ ಖಾತೆಗಳ ಲಿಂಕ್‌ಗಳನ್ನು ನಮೂದಿಸಿದ್ದಾರೆ.

’ರಾಜ್ಯದಲ್ಲಿನ ಮುಸ್ಲಿಂ ಸಮುದಾಯಗಳ ಮಸೀದಿಗಳ ಮೇಲೆ ನಡೆದ ಇತ್ತೀಚಿನ ಘರ್ಷಣೆ ಮತ್ತು ಆಪಾದಿತ ದಾಳಿಗೆ ಸಂಬಂಧಿಸಿದಂತೆ ಕೆಲವು ವ್ಯಕ್ತಿಗಳು / ಸಂಘಟನೆಗಳು ಟ್ವಿಟರ್‌ನಲ್ಲಿ ತಿರುಚಿದ ಮತ್ತು ಆಕ್ಷೇಪಾರ್ಹ ಸುದ್ದಿಗಳು / ಹೇಳಿಕೆಗಳನ್ನು ಪ್ರಕಟಿಸುತ್ತಿದ್ದಾರೆ / ಪೋಸ್ಟ್ ಮಾಡುತ್ತಿದ್ದಾರೆ’ ಎಂದು ಪತ್ರದಲ್ಲಿ ತಿಳಿಸಲಾಗಿದೆ.

‘ಈ ಟ್ವಿಟರ್‌ ಖಾತೆಗಳಲ್ಲಿನ ಕೆಲವು ಸುದ್ದಿಗಳು ಅಥವಾ ಪೋಸ್ಟ್‌ಗಳು ಇತರ ಕೆಲವು ಘಟನೆಗಳ ಛಾಯಾಚಿತ್ರಗಳು ಅಥವಾ ವೀಡಿಯೊಗಳು, ಧಾರ್ಮಿಕ ಗುಂಪುಗಳು ಮತ್ತು ಸಮುದಾಯಗಳ ನಡುವೆ ದ್ವೇಷವನ್ನು ಉತ್ತೇಜಿಸುವ ಕಲ್ಪಿತ ಹೇಳಿಕೆಗಳು ಅಥವಾ ವ್ಯಾಖ್ಯಾನಗಳನ್ನು ಒಳಗೊಂಡಿವೆ’ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ

’ಈ ಪೋಸ್ಟ್‌ಗಳು ತ್ರಿಪುರಾ ರಾಜ್ಯದಲ್ಲಿ ವಿವಿಧ ಧಾರ್ಮಿಕ ಸಮುದಾಯಗಳ ನಡುವೆ ಕೋಮು ಉದ್ವಿಗ್ನತೆಯನ್ನು ಉಂಟುಮಾಡುವ ಸಾಮರ್ಥ್ಯವನ್ನು ಹೊಂದಿವೆ, ಇದು ಕೋಮು ಗಲಭೆಗೆ ಕಾರಣವಾಗಬಹುದು’ ಎಂದು ಪತ್ರದಲ್ಲಿ ವಿವಿರಿಸಲಾಗಿದೆ.

ಬಳಕೆದಾರರು ಟ್ವಿಟರ್‌ ಖಾತೆಗಳಿಗೆ ಲಾಗ್ ಇನ್ ಆಗಿರುವ ಐಪಿ ವಿಳಾಸ ಮತ್ತು ಟ್ವಿಟರ್ ಖಾತೆಗಳಿಗೆ ಸೇರಿಸಲಾದ ಮೊಬೈಲ್ ಸಂಖ್ಯೆಗಳ ವಿವರಗಳನ್ನು ಪೊಲೀಸರು ಕೇಳಿದ್ದಾರೆ.

ಇತ್ತೀಚೆಗೆ ಬಾಂಗ್ಲಾದೇಶದಲ್ಲಿ ದುರ್ಗಾಪೂಜಾ ಮಂಟಪವನ್ನು ಧ್ವಂಸಗೊಳಿಸಿದ್ದನ್ನು ವಿರೋಧಿಸಿ ತ್ರಿಪುರಾದ ಪಾಣಿಸಾಗರ್‌ನಲ್ಲಿ ಬಿಜೆಪಿ ಬೆಂಬಲಿತ ಸಂಘಟನೆಗಳಾದ ವಿಎಚ್‌ಪಿ ಮತ್ತು ಬಜರಂಗದಳ ರ್‍ಯಾಲಿ ನಡೆಸಿದ್ದವು. ಈ ವೇಳೆ ಚಮ್ಟಿಲ್ಲಾ ಪ್ರದೇಶದ ಮಸೀದಿ ಮತ್ತು ಕೆಲವು ಅಂಗಡಿಗಳನ್ನು ಧ್ವಂಸಗೊಳಿಸಲಾಗಿದ್ದು ಎರಡು ಅಂಗಡಿಗಳಿಗೆ ಬೆಂಕಿ ಹಚ್ಚಿದ್ದರು.

“ಪಾಣಿಸಾಗರದಲ್ಲಿ ವಿಎಚ್‌ಪಿ ಸುಮಾರು 3,500 ಜನರ ಪ್ರತಿಭಟನಾ ರ್‍ಯಾಲಿಯನ್ನು ಆಯೋಜಿಸಿತ್ತು. ರ್‍ಯಾಲಿಯಲ್ಲಿ ವಿಎಚ್‌ಪಿ ಕಾರ್ಯಕರ್ತರ ಒಂದು ವಿಭಾಗವು ಚಮ್ಟಿಲ್ಲಾ ಪ್ರದೇಶದಲ್ಲಿ ಮಸೀದಿಯನ್ನು ಧ್ವಂಸಗೊಳಿಸಿದೆ. ನಂತರ, ಅಲ್ಲಿಂದ ಸುಮಾರು 800 ಗಜಗಳಷ್ಟು ದೂರದಲ್ಲಿರುವ ರೋವಾ ಬಜಾರ್ ಪ್ರದೇಶದ ಮೂರು ಮನೆಗಳು ಮತ್ತು ಮೂರು ಅಂಗಡಿಗಳನ್ನು ಧ್ವಂಸಗೊಳಿಸಲಾಗಿದೆ ಮತ್ತು ಎರಡು ಅಂಗಡಿಗಳಿಗೆ ಬೆಂಕಿ ಹಚ್ಚಲಾಗಿದೆ” ಪಾಣಿಸಾಗರ ಉಪವಿಭಾಗೀಯ ಪೊಲೀಸ್ ಅಧಿಕಾರಿ (SDPO) ಸೌಭಿಕ್ ಡೇ ಹೇಳಿದ್ದರು.

ಇದೇ ಸಂದರ್ಭದಲ್ಲಿ ತ್ರಿಪುರಾದಲ್ಲಿ ನಡೆದ ಕೋಮುಗಲಭೆ ಕುರಿತು ಸತ್ಯಶೋಧನೆ ನಡೆಸಿದ ತಂಡದ ಭಾಗವಾಗಿದ್ದ ಇಬ್ಬರು ವಕೀಲರ ಮೇಲೆ ಕಾನೂನು ಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಲಾಗಿದ್ದು, ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ. ಪೊಲೀಸರ ಈ ಕ್ರಮಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದೆ.


ಇದನ್ನೂ ಓದಿ: ತ್ರಿಪುರಾ ಹಿಂಸಾಚಾರದ ಸತ್ಯಶೋಧನೆ ನಡೆಸಿದ ವಕೀಲರ ಮೇಲೆ ಯುಎಪಿಎ ಪ್ರಕರಣ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...