HomeಮುಖಪುಟBJP ನಾಯಕ ಕಪಿಲ್ ಮಿಶ್ರಾ ಭಾಗವಹಿಸಿದ್ದ ಸಭೆಯಲ್ಲಿ ಮತ್ತೆ ‘ಗೋಲಿ ಮಾರೋ’ ಘೋಷಣೆ

BJP ನಾಯಕ ಕಪಿಲ್ ಮಿಶ್ರಾ ಭಾಗವಹಿಸಿದ್ದ ಸಭೆಯಲ್ಲಿ ಮತ್ತೆ ‘ಗೋಲಿ ಮಾರೋ’ ಘೋಷಣೆ

ಈಶಾನ್ಯ ದೆಹಲಿಯಲ್ಲಿ ಕಪಿಲ್ ಮಿಶ್ರಾ ನಡೆಸುತ್ತಿದ್ದ ರ್‍ಯಾಲಿಯಲ್ಲಿ ಕೂಡಾ ‘ಗೋಲಿ ಮಾರೊ’ ಘೋಷಣೆಗಳು ಕೂಗಲಾಗಿತ್ತು, ನಂತರ ಅಲ್ಲಿ ಕೋಮು ಗಲಭೆಗಳು ಭುಗಿಲೆದ್ದವು

- Advertisement -
- Advertisement -

ಈ ವರ್ಷ ದೆಹಲಿಯಲ್ಲಿ ನಡೆದ ಕೋಮುಗಲಭೆಯ ಪ್ರಚೋದಕ ಎಂದು ಆರೋಪಿಸಲಾಗಿರುವ ಬಿಜೆಪಿ ನಾಯಕ ಕಪಿಲ್ ಮಿಶ್ರಾ ಅವರು ಭಾಗವಹಿಸಿದ್ದ ಕಾರ್ಯಕ್ರಮವೊಂದರಲ್ಲಿ ‘ಗೋಲಿ ಮಾರೋ’ (ಗುಂಡು ಹೊಡೆಯಿರಿ) ಎಂಬ ಘೋಷಣೆಗಳು ‘ಮತ್ತೇ’ ಮೊಳಗಿವೆ. ಪ್ರತಿ ಶುಕ್ರವಾರ ನಮಾಜ್ ನಡೆಯುತ್ತಿದ್ದ ಗುರ್ಗಾಂವ್‌ನ ಸೆಕ್ಟರ್ 12 ಎ ಪ್ರದೇಶದಲ್ಲಿ ಬಿಜೆಪಿ ಬೆಂಬಲಿತ ಕೋಮು ಆಧಾರಿತ ಸಂಘಟನೆ ಆಯೋಜಿಸಿದ್ದ ಗೋವರ್ಧನ ಪೂಜೆಯಲ್ಲಿ ಅವರು ಶುಕ್ರವಾರ ಪಾಲ್ಗೊಂಡಿದ್ದರು. ಈ ವೇಳೆ ಅಲ್ಲಿ ‘ಗೋಲಿ ಮಾರೋ’ ಘೋಷಣೆಗಳನ್ನು ಕೂಗಲಾಗಿದೆ.

ಕಳೆದು ವರ್ಷ ಸಿಎಎ ವಿರೋಧಿಸಿ ನಡೆಯುತ್ತಿದ್ದ ಪ್ರತಿಭಟನೆಯನ್ನು ವಿರೋಧಿಸಿ ಈಶಾನ್ಯ ದೆಹಲಿಯಲ್ಲಿ ಕಪಿಲ್ ಮಿಶ್ರಾ ನಡೆಸುತ್ತಿದ್ದ ರ್‍ಯಾಲಿಯಲ್ಲಿ ಕೂಡಾ ‘ಗೋಲಿ ಮಾರೊ’ ಘೋಷಣೆಗಳು ಕೂಗಲಾಗಿತ್ತು. ಇದರ ನಂತರ ಅಲ್ಲಿ ಕೋಮುಗಲಭೆ ನಡೆದು ಐವತ್ತಕ್ಕೂ ಹೆಚ್ಚು ಜನರು ಸಾವನಪ್ಪಿದ್ದರು ಹಾಗೂ ಸಾವಿರಾರು ಜನರು ಗಾಯಗೊಂಡು ಕೋಟ್ಯಾಂತರ ರುಪಾಯಿಗಳ ಆಸ್ತಿಪಾಸ್ತಿ ನಷ್ಟವಾಗಿದ್ದವು.

ಇದನ್ನೂ ಓದಿ: ದೆಹಲಿ: ಸ್ಥಳೀಯರ ವಿರೋಧದಿಂದ ನಮಾಜ್‌ಗೆ ನಿಗದಿಪಡಿಸಿದ್ದ 8 ಸ್ಥಳಗಳ ಅನುಮತಿ ವಾಪಸ್

ಗುರುಗಾಂವ್‌ನ ಸೆಕ್ಟರ್ 12ಎ ಸೈಟ್‌ನಲ್ಲಿ ಪ್ರತಿ ಶುಕ್ರವಾರ ನಮಾಜ್‌ ಅನ್ನು ನಿರ್ವಹಿಸಲಾಗುತ್ತಿತ್ತು. ಆದರೆ ಇದಕ್ಕೆ ಬಿಜೆಪಿ ಬೆಂಬಲಿತ ಕೋಮು ಆಧಾರಿತ ಸಂಘಟನೆಗಳು ಕಳೆದ ಎರಡು ವಾರಗಳಿಂದ ವಿರೋಧ ವ್ಯಕ್ತಪಡಿಸಿ, ನಮಾಜ್‌ಗೆ ಅಡ್ಡಿಪಡಿಸಿವೆ. ಕಳೆದ ತಿಂಗಳ ಕೊನೆಯಲ್ಲಿ, 26 ಜನರ ಬಿಜೆಪಿ ಬೆಂಬಲಿತ ಗುಂಪು ನಮಾಜ್ ಮಾಡುವುದನ್ನು ಅಡ್ಡಿ ಪಡಿಸಿದ್ದಕ್ಕಾಗಿ ಬಂಧಿಸಲಾಗಿತ್ತು.

ಈ ನಡುವೆ ಗುರುಗ್ರಾಮ್ ಆಡಳಿತವು ಮುಸ್ಲಿಮರಿಗೆ ನಮಾಜ್ ಮಾಡಲು ಗೊತ್ತುಪಡಿಸಿದ 37 ಸ್ಥಳಗಳ ಪೈಕಿ ಎಂಟರಲ್ಲಿ ಸ್ಥಳೀಯರ ವಿರೋಧದಿಂದ ಮಂಗಳವಾರ ಅನುಮತಿ ವಾಪಸ್ ಪಡೆದಿದೆ. ಗುರುಗ್ರಾಮ್ ಜಿಲ್ಲಾಡಳಿತದ ಅಧಿಕೃತ ಹೇಳಿಕೆಯ ಪ್ರಕಾರ, ಸ್ಥಳೀಯ ಜನರು ಮತ್ತು ಆರ್‌ಡಬ್ಲ್ಯೂಎಯಿಂದ ಆಕ್ಷೇಪಣೆ ಬಂದಿರುವ ಕಾರಣ ಅನುಮತಿಯನ್ನು ರದ್ದುಗೊಳಿಸಲಾಗಿದೆ ಎಂದು ತಿಳಿಸಿದೆ.

ಶುಕ್ರವಾರ ಅದೇ ಸ್ಥಳದಲ್ಲಿ ಗೋವರ್ಧನ ಕಾರ್ಯಕ್ರಮದಲ್ಲಿ ಹಿಂದೂ ವಿರೋಧಿಗಳಿಗೆ ಗುಂಡು ಹೊಡೆಯಿರಿ ಎಂದು ಘೋಷಣೆಗಳನ್ನು ಕೂಗಲಾಗಿದೆ. ಕಾರ್ಯಕ್ರಮದಲ್ಲಿ ಭಾಷಣ ಮಾಡಿದ ಕಪಿಲ್ ಮಿಶ್ರಾ ಪಟಾಕಿ ನಿಷೇಧದ ಬಗ್ಗೆ ವಿರೋಧ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: Fact check: ಕಟ್ಟಡದ ಮೇಲೆ ಒಟ್ಟಾಗಿ ನಮಾಜ್ ಮಾಡುತ್ತಿರುವುದು ನಿಜವೇ??

“ನಿಮ್ಮ ರಾಜಕೀಯಕ್ಕಾಗಿ ರಸ್ತೆಗಳನ್ನು ಬಳಸಬೇಡಿ. ನಾವು ಶಾಹೀನ್ ಬಾಗ್‌ನಲ್ಲಿ ಇದನ್ನು ನೋಡಿದ್ದೆವು. ರಸ್ತೆಗಳನ್ನೆಲ್ಲ ಬಂದ್ ಮಾಡಿ ಮನೋರಂಜನೆ ತೋರಿಸಿದ್ರು. ಸಿಎಎ ಹಿಂಪಡೆಯಲಾಗಿದೆಯೇ? ಅಪಧಮನಿಗಳು ಮತ್ತು ನರಗಳನ್ನು ನಿರ್ಬಂಧಿಸಿದರೆ, ದೇಹದ ಚಲನೆಯನ್ನು ನಿಲ್ಲಿಸುತ್ತದೆ. ಹಾಗೆಯೆ ರಸ್ತೆಗಳನ್ನು ನಿರ್ಬಂಧಿಸಿದರೆ, ನಗರ ಮತ್ತು ದೇಶವು ನಿಲ್ಲುತ್ತದೆ” ಎಂದು ಹೇಳಿದ್ದಾರೆ.

“ರಸ್ತೆಗಳನ್ನು ಮುಚ್ಚುವ ಹಕ್ಕು ಯಾರಿಗೂ ಇಲ್ಲ. ಇದು ಯಾವುದೇ ಧರ್ಮದ ಭಾಗವಲ್ಲ ಅಥವಾ ಆಗಲೂ ಸಾಧ್ಯವಿಲ್ಲ… ಗುರ್ಗಾಂವ್‌ನಲ್ಲಿ ಬೀದಿಗಳನ್ನು ನಿರ್ಬಂಧಿಸುತ್ತೀರಾ? ನೀವು ದೆಹಲಿಯಲ್ಲಿ ರಸ್ತೆಗಳನ್ನು ನಿರ್ಬಂಧಿಸುತ್ತೀರಾ? ರಸ್ತೆ ತಡೆ ಮಾಡುವುದು ಧರ್ಮದ ಭಾಗವಲ್ಲ, ಅದು ದೇಶ, ಸೌಲಭ್ಯಗಳು ಮತ್ತು ಆರ್ಥಿಕತೆಯನ್ನು ತಡೆಯುವುದಾಗಿದೆ” ಎಂದು ಅವರು ತಿಳಿಸಿದ್ದಾರೆ.

ಕಪಿಲ್‌ ಮಿಶ್ರಾ ಭಾಷಣದ ಸಮಯದಲ್ಲಿ, ನೆರೆದಿದ್ದವರು “ಸೆಕ್ಟರ್ 12 ಸರ್ಫ್ ಜಾಂಕಿ ಹೈ, ಪುರ ಗುರುಗ್ರಾಮ್ ಬಾಕಿ ಹೈ” ಎಂಬ ಘೋಷಣೆಯನ್ನು ಕೂಗಿದ್ದಾರೆ. ಜೊತೆಗೆ ಸದಾ ದ್ವೇಷ ಭಾಷಣಗಳಿಗೆ ಹೆಸರುವಾಸಿಯಾಗಿರುವ ಯತಿ ನರಸಿಂಹಾನಂದ ಸಂಗಡಿಗರು ಕೂಡಾ ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ಕಪಿಲ್‌ ಮಿಶ್ರಾ ಶಾಂತವಾಗಿ ಭಾಷಣ ಮಾಡಿದ್ದಾರಾದರೂ, ಸಭೆಯಲ್ಲಿ ಪ್ರಚೋಧನಕಾರಿ ಘೋಷಣೆಗಳನ್ನು ಮಾಡಲಾಗಿದೆ. ಅಮಿತ್ ಹಿಂದೂ ಎಂಬ ಕಾರ್ಯಕರ್ತನೊಬ್ಬ, “ಹಿಂದೂ ದ್ರೋಹಿಗಳನ್ನು ಶೂಟ್ ಮಾಡಿ” ಎಂಬ ಘೋಷಣೆಯನ್ನು ಕೂಗಿದ್ದಾನೆ. ಈತ ಯತಿ ನರಸಿಂಹಾನಂದ ಸರಸ್ವತಿ ಅವರ ಆಪ್ತ ಎಂದು ದಿ ವೈರ್‌ ವರದಿ ಮಾಡಿದೆ.

ಇದನ್ನೂ ಓದಿ: ಹಲಾಲ್ ಮಾಡದಿದ್ದಕ್ಕೆ ಮುಸ್ಲಿಮರಿಂದ ಹಲ್ಲೆ ಎಂಬ ಸುಳ್ಳು ಆರೋಪ: ರೆಸ್ಟೋರೆಂಟ್‌ ಮಾಲೀಕರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...