Homeಕರ್ನಾಟಕನಿವೃತ್ತ ಉಪ-ಕುಲಪತಿ ಸೇರಿದಂತೆ ಹಲವು ನಿವೃತ್ತ ಪ್ರಾಧ್ಯಾಪಕರ ಲಕ್ಷಾಂತರ ರೂ. ಪಿಂಚಣಿ ಸಂದಾಯ ಮಾಡದ ಹಂಪಿ...

ನಿವೃತ್ತ ಉಪ-ಕುಲಪತಿ ಸೇರಿದಂತೆ ಹಲವು ನಿವೃತ್ತ ಪ್ರಾಧ್ಯಾಪಕರ ಲಕ್ಷಾಂತರ ರೂ. ಪಿಂಚಣಿ ಸಂದಾಯ ಮಾಡದ ಹಂಪಿ ಕನ್ನಡ ವಿಶ್ವವಿದ್ಯಾಲಯ

- Advertisement -
- Advertisement -

ಕನ್ನಡ ವಿಶ್ವವಿದ್ಯಾಲಯ ಹಂಪಿ ಇದರ ನಿವೃತ್ತ ಉಪ ಕುಲಪತಿ ಸೇರಿದಂತೆ ಹಲವು ನಿವೃತ್ತ ಪ್ರಾಧ್ಯಾಪಕರಿಗೆ ವಿಶ್ವವಿದ್ಯಾಲಯವು ಪಿಂಚಣಿ ಮತ್ತು ಪಿಂಚಣಿ ಸೌಲಭ್ಯಗಳನ್ನು ಸಂದಾಯ ಮಾಡದೆ ಲಕ್ಷಾಂತರ ರುಪಾಯಿ ಬಾಕಿಯಿಟ್ಟಿರುವ ಘಟನೆ ನಡೆದಿದೆ. ಹೀಗಾಗಿ ಮಾಜಿ ಉಪಕುಲಪತಿಗಳು ಹಾಗೂ ನಿವೃತ್ತ ಪ್ರಾಧ್ಯಾಪಕರು ವಿಶ್ವವಿದ್ಯಾಲಯದ ಕುಲಸಚಿವರಿಗೆ ತಮ್ಮ ಪಿಂಚಣಿಯನ್ನು ಕಾಲಕಾಲಕ್ಕೆ ಸಂದಾಯ ಮಾಡುವಂತೆ ಪತ್ರ ಬರೆದಿದ್ದಾರೆ.

ಪ್ರಾಧ್ಯಾಪಕರು ಕುಲಸಚಿವರಿಗೆ ಬರೆದಿರುವ ಪತ್ರದಲ್ಲಿ, “ನಮಗೆ ಸಲ್ಲಬೇಕಾದ ಪಿಂಚಣಿ ಮತ್ತು ಪಿಂಚಣಿ ಸವಲತ್ತುಗಳನ್ನು ತಕ್ಷಣ ಸಂದಾಯ ಮಾಡಬೇಕೆಂದು ಮತ್ತು ಸಂಬಂಧಿತ ಇತರ ಸಮಸ್ಯೆಗಳನ್ನು ತಕ್ಷಣ ಪರಿಹರಿಸಬೇಕೆಂದು” ಕೋರಿದ್ದಾರೆ.

ಇದನ್ನೂ ಓದಿ: ಚಾಣಕ್ಯ ವಿವಿ, ಮನುವಾದಿಗಳ ವಿಶ್ವವಿದ್ಯಾಲಯ ಇದರ ಸ್ಥಾಪನೆಗೆ ಅವಕಾಶ ನೀಡಬಾರದು: ಸಿದ್ದರಾಮಯ್ಯ

ಗಳಿಕೆ ರಜೆ ಮೊತ್ತ ವರ್ಗಾವಣೆ ಆಗದೆ ಪಿಂಚಣಿ ನಿಗದಿತವಾಗಿಲ್ಲ ಎಂದು ದೂರಿರುವ ಅವರು, “ಕೆಲವರಿಗೆ ಪಿಂಚಣಿ ಸೌಲಭ್ಯಗಳು ಸಂದಾಯವಾಗದೆ ಮೂರು ವರ್ಷಗಳಾದರೆ, ಇನ್ನು ಕೆಲವರಿಗೆ ಒಂದೆರಡು ವರ್ಷಗಳಾಗಿವೆ, ಮತ್ತೂ ಕೆಲವರಿಗೆ ಎರಡರಿಂದ ಐದಾರು ತಿಂಗಳುಗಳಾಗಿವೆ” ಎಂದು ಪತ್ರದಲ್ಲಿ ದೂರಿದ್ದಾರೆ.

“ಕೆಲವು ಪ್ರಾಧ್ಯಾಪಕರು ನಿವೃತ್ತರಾಗಿ ಐದಾರು ತಿಂಗಳುಗಳಾದರೂ ಪಿಂಚಣಿ ನಿಗದಿತವಾಗಿಲ್ಲ. ಪಿ೦ಜಣಿ ನಿಗದಿತವಾದವರಿಗೆ ಕಾಲಕಾಲಕ್ಕೆ ಪಿಂಚಣಿ ಸಂದಾಯವಾಗುತ್ತಿಲ್ಲ. ಆದಾಯ ತೆರಿಗೆ ಹೆಸರಲ್ಲಿ, ಹಿಂದಿನ ಬಾಕಿ ಹೆಸರಲ್ಲಿ ನಿವೃತ್ತರಾದವರ ಒಪ್ಪಿಗೆ ಇಲ್ಲದೆ ಅವರ ಪಿಂಚಣಿಯಿಂದ ವಿಶ್ವವಿದ್ಯಾಲಯ ಬೇಕಾಬಿಟ್ಟಿ ಕಡಿತ ಮಾಡುತ್ತಿದೆ” ಎಂದು ಪತ್ರದಲ್ಲಿ ಹೇಳಿದ್ದು, ಈ ಎಲ್ಲ ಸಮಸ್ಯೆಗಳ ಕುರಿತು ದೂರು ನೀಡಿದರೆ ಸಮಸ್ಯೆಗಳನ್ನು ಪರಿಹರಿಸುವ ಅಥವಾ ಪತ್ರಗಳಿಗೆ ಉತ್ತರಿಸುವ ಸೌಜನ್ಯವನ್ನು ವಿಶ್ವವಿದ್ಯಾಲಯ ತೋರಿಸುತ್ತಿಲ್ಲ ಎಂದು ಪ್ರಾಧ್ಯಾಪಕರು ತಿಳಿಸಿದ್ದಾರೆ.

ಇದನ್ನೂ ಓದಿ: ವಿಶ್ವವಿದ್ಯಾಲಯಗಳಲ್ಲಿ ಮೋದಿಗೆ ಧನ್ಯವಾದ ಸಲ್ಲಿಸುವ ಬ್ಯಾನರ್‌ ಹಾಕಲು ಯುಜಿಸಿ ಸೂಚನೆ

ಪಿಂಚಣಿ ಸಮಸ್ಯೆಗಳನ್ನು ಹದಿನೈದು ದಿನಗಳೊಳಗೆ ಪರಿಹರಿಸಿ ಎಂದು ವಿನಂತಿಸಿರುವ ಪ್ರಾಧ್ಯಾಪಕರು, “ಒಂದು ವೇಳೆ ವಿಶ್ವವಿದ್ಯಾಲಯ ಹಿಂದಿನಂತೆ ನಮ್ಮ ಬೇಡಿಕೆಯನ್ನು ನಿರ್ಲಕ್ಷಿಸಿದರೆ ನಾವು ವಿಶ್ವವಿದ್ಯಾಲಯಕ್ಕೆ ಬಂದು ನಮ್ಮ ಬೇಡಿಕೆಯನ್ನು ಈಡೇರಿಸಲು ಒತ್ತಾಯಿಸುವ ಅನಿವಾರ್ಯತೆ ಸೃಷ್ಟಿ ಅಗಬಹುದು” ಎಂದು ಎಚ್ಚರಿಸಿದ್ದಾರೆ.

ಪತ್ರಕ್ಕೆ, ಹಂಪಿ ವಿಶ್ವವಿದ್ಯಾಲಯದ ನಿವೃತ್ತ ಉಪಕುಲತಿಯಾದ ಡಾ. ಮಲ್ಲಿಕಾ ಎಸ್‌. ಘಂಟೆ, ನಿವೃತ್ತ ಪ್ರಾಧ್ಯಾಪಕರಾದ ಡಾ. ಎಂ. ಚಂದ್ರ ಪೂಜಾರಿ, ಡಾ. ಕೆ.ಜಿ. ಭಟ್‌ಸೂರಿ, ಡಾ. ಎಸ್‌.ಸಿ. ಪಾಟಿಲ್, ಡಾ. ಕೇಶವನ್‌ ಪ್ರಸಾದ್‌, ಡಾ. ಉಷಾ, ಡಾ. ನಾಗೇಶ್‌, ಡಾ. ಅಮರೇಶ್‌ ನುಗಡೋಣಿ ಮತ್ತು ಡಾ. ರಹಮತ್‌ ತರಿಕೆರೆ ಸಹಿ ಹಾಕಿದ್ದಾರೆ.

ಇದನ್ನೂ ಓದಿ: ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯ ಬಲಿಷ್ಠ, ವೈವಿಧ್ಯ ಭಾರತವನ್ನು ಪ್ರತಿನಿಧಿಸುತ್ತದೆ: ಪ್ರಧಾನಿ ಮೋದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...