Homeಕರ್ನಾಟಕತೀವ್ರ ಬೆಲೆ ಏರಿಕೆಯಾದರೂ ಅನುದಾನ ಹೆಚ್ಚಳವಿಲ್ಲ: ಅರೆಹೊಟ್ಟೆಯಲ್ಲಿ ಶಾಲಾ ಮಕ್ಕಳು

ತೀವ್ರ ಬೆಲೆ ಏರಿಕೆಯಾದರೂ ಅನುದಾನ ಹೆಚ್ಚಳವಿಲ್ಲ: ಅರೆಹೊಟ್ಟೆಯಲ್ಲಿ ಶಾಲಾ ಮಕ್ಕಳು

ಶಾಲಾ ಮಕ್ಕಳ ಮಧ್ಯಾಹ್ನದ ಬಿಸಿಯೂಟ ಯೋಜನೆಗೆ 2020ರ ಜೂನ್‌ನಲ್ಲಿ ನಿಗಧಿಪಡಿಸಿದ ಅನುದಾನವನ್ನೇ ಈಗಲೂ ನೀಡಲಾಗುತ್ತಿದೆ.

- Advertisement -
- Advertisement -

ಪ್ರಾಥಮಿಕ ಶಾಲೆ, ಪ್ರೌಢ ಶಾಲೆಗಳಲ್ಲಿ ಮಕ್ಕಳಿಗೆ ಕೊಡುತ್ತಿರುವ ಮಧ್ಯಾಹ್ನದ ಬಿಸಿಯೂಟ ಹೊಟ್ಟೆ ತುಂಬ ಸಿಗದಂತಾಗಿದೆ. ಒಂದೇ ಸಮನೆ ಗ್ಯಾಸ್ ಸಿಲೆಂಡರ್, ದವಸ ಧಾನ್ಯ ಮತ್ತು ತರಕಾರಿ ಬೆಲೆ ಏರಿಕೆಯಾಗುತ್ತಿದ್ದರೂ ಹಿಂದಿನ ಅನುದಾನ ಪರಿಷ್ಕರಿಸದೆ ಸರಕಾರ ಉದಾಸೀನ ತೋರಿರುವುದರಿಂದ ಬಿಸಿಯೂಟ ಯೋಜನೆಯ್ನು ಶಾಲೆಗಳಲ್ಲಿ ನಿಭಾಯಿಸಲಾಗುತ್ತಿಲ್ಲವೆಂದು ಶಿಕ್ಷಕರು ಅಲವತ್ತುಕೊಳ್ಳುತ್ತಿದ್ದಾರೆ. ಶಿಕ್ಷಣ ಮಂತ್ರಿಯಾದಿಯಾಗಿ ಜನಪ್ರತಿನಿಧಿಗಳೆಲ್ಲ ಇದು ತಮಗೆ ಸಂಬಂಧಿಸಿದ ಸಂಗತಿ ಅಲ್ಲವೆಂಬಂತೆ ಇರುವುದರಿಂದ ವಿಧ್ಯಾರ್ಥಿಗಳು ಅರೆ-ಬರೆ ಉಂಡೇಳುವಂತಾಗಿದೆ ಎಂಬ ಮಾತು ಕೇಳಿಬರುತ್ತಿದೆ.

ಪ್ರತಿ ಮಗುವಿನ ಲೆಕ್ಕಾಚಾರದಲ್ಲಿ ಪ್ರತಿ ವರ್ಷ ಬಿಸಿಊಟದ ದರ ಸರ್ಕಾರ ಪರಿಷ್ಕರಿಸುವುದು ಪದ್ದತಿ. ಜೂನ್ 2020ರಲ್ಲಿ ಶೇ.10.99ರಷ್ಟು ಅನುದಾನ ಜಾಸ್ತಿ ಮಾಡಲಾಗಿತ್ತು. ಈ ದರದಂತೆ 1ರಿಂದ 5ನೇ ತರಗತಿ ವರೆಗಿನ ಒಂದು ಮಗುವಿಗೆ 4.97ರೂ. ಖರ್ಚು ಮಾಡಬಹುದು. 6ರಿಂದ 10ನೇ ತರಗತಿ ಮಕ್ಕಳಿಗೆ ತಲಾ 7.45ರೂ ವ್ಯಯಿಸಬೇಕು. ಅಡುಗೆ ಅನಿಲದಿಂದ, ಎಣ್ಣೆ ಬೇಳೆಕಾಳಿನ ತನಕದ ಎಲ್ಲ ಖರ್ಚು-ವೆಚ್ಚ ಹೆಚ್ಚಾಗಿದ್ದರೂ ಈ ವರ್ಷ ಅನುದಾನ ಮಾತ್ರ ಸರ್ಕಾರ ಹೆಚ್ಚಿಸಿಲ್ಲ. ಒಂದರಿಂದ ಐದನೇ ತರಗತಿ ವರೆಗಿನ ಒಂದು ಮಗುವಿಗೆ 2 ರೂಗೆ ತೊಗರಿ ಬೇಳೆ (20 ಗ್ರಾಂ), 1.36ರೂಗೆ ತರಕಾರಿ (50 ಗ್ರಾಂ), 1.73ರೂಗೆ ಎಣ್ಣೆ (5 ಗ್ರಾಂ), 37 ಪೈಸೆಗೆ ಸಾಂಬಾರ್ ಪುಡಿ, 3 ಪೈಸೆಗೆ ಉಪ್ಪು (2ಗ್ರಾಂ), ಇಂಧನಕ್ಕೆ 79 ಪೈಸೆ ಖರ್ಚು ಮಾಡಲಾಗುತ್ತಿದೆ.

ಅದೇ ರೀತಿಯಾಗಿ 6ರಿಂದ 10ನೇ ತರಗತಿ ವರೆಗಿನ ಮಕ್ಕಳಿಗೆ 2.95ರೂಗೆ ತೊಗರಿಬೇಳೆ (30 ಗ್ರಾಂ), 2.04ರೂಗೆ ತರಕಾರಿ (75 ಗ್ರಾಂ), 54ಪೈಸೆಗೆ ಸಾಂಬಾರ್ ಪುಡಿ, 67 ಪೈಸೆಗೆ ಎಣ್ಣೆ (7.5 ಗ್ರಾಂ), 6 ಪೈಸೆಗೆ ಉಪ್ಪು(4ಗ್ರಾಂ), 1.19ರೂಗೆ ಇಂಧನದ ಲೆಕ್ಕದಲ್ಲಿ ಖರ್ಚು ಮಾಡಬೇಕೆಂದು ಸರ್ಕಾರಿ ಸುತ್ತೋಲೆ ಹೆಳುತ್ತದೆ. ವಾರಕ್ಕೊಮ್ಮೆ ಪಾಯಸ-ಹುಗ್ಗಿ ಮಕ್ಕಳಿಗೆ ಹಂಚಬೇಕು. ಇದಕ್ಕೆ ಪ್ರತ್ಯೇಕ ಅನುದಾನವಿಲ್ಲ. ಬಿಸಿಯೂಟ ಖಾತೆಯಿಂದ ನಿಗದಿತ ಪ್ರಮಾಣಕ್ಕಿಂತ ಒಂದು ಪೈಸೆ ಹೆಚ್ಚು ತೆಗೆಯುವಂತಿಲ್ಲ. ಆದರೆ ಈ ದರದಲ್ಲಿ ಬಿಸಿಯೂಟ ತಯಾರಿಸುವುದು ಹಾಲಿ ದುಬಾರಿ ದಿನ ಮಾನದಲ್ಲಿ ಅಸಾಧ್ಯದ ಮಾತೆಂಬ ಸಾಮಾನ್ಯ ಜ್ಞಾನ ಸರಕಾರ ನಡೆಸುವವರಿಗೆ ಇರಬೇಡವೆ ಎಂದು ಪಾಲಕರು ಪ್ರಶ್ನಿಸುತ್ತಾರೆ.

ಸರಕಾರ ನಿಗದಿಸಿರುವ ಈ ತಲಾ ಖರ್ಚಿನಲ್ಲಿ ಮಕ್ಕಳು ಕಡಿಮೆ ಸಂಖ್ಯೆಯಲ್ಲಿರುವ ಸರಕಾರಿ ಮತ್ತು ಅನುದಾನಿತ ಶಾಲೆಗಳಲಿ ಬಿಸಿಯೂಟ ನಿರ್ವಹಣೆ ಸಾಧ್ಯವಾಗುತ್ತಿಲ್ಲ. ಮೊದಲು ಶಾಲೆಗಳಿಗೆ ತಿಂಗಳಿಗೆ ಎರಡು ಅನಿಲ ಸಿಲೆಂಡರ್ ಕೊಡಲಾಗುತ್ತಿತ್ತು. ಈಗ ಅದರ ವೆಚ್ಚ ನೀಡಲಾಗುತ್ತಿದ್ದು ಶಿಕ್ಷಕರೆ ಗ್ಯಾಸ್‌ ತಂದುಕೊಳ್ಳಬೇಕಿದೆ. ಸರಕಾರ ಕೊಡುವ ಅನುದಾನದಲ್ಲಿ 910ರೂಗೆ ಗ್ಯಾಸ್ ಸಿಲೆಂಡರ್, ಕೆ.ಜಿ.ಗೆ 105 ರೂ.ಗಳ ತೊಗರಿ ಬೇಳೆ, ಕನಿಷ್ಟವೆಂದರೂ 40 ರಿಂದ 50 ರೂ.ಗಳಿರುವ ಕೆಜಿ ಈರುಳ್ಳಿ, ಟೊಮೆಟೊ, ಇನ್ನಿತರ ತರಕಾರಿ ಮತ್ತು ಲೀಟರಿಗೆ 160 ರೂ.ಗಳ ಖಾದ್ಯ ತೈಲಕ್ಕೆ ವಿಂಗಡಿಸಿ ಈ ಬೆಲೆ ಏರಿಕೆಯ ದಿನಗಳಲ್ಲಿ ಬಿಸಿಯೂಟ ತಯಾರಿಕೆ ಸಾಧ್ಯವಿಲ್ಲವೆಂದು ನಿರ್ವಾಹಕರು ಹೇಳುತ್ತಾರೆ.

“ಅಡುಗೆ ಅನಿಲ ಸಮಸ್ಯೆಯಿಂದ ಬಿಸಿಯೂಟ ತಯಾರಿಸುವುದು ದೊಡ್ಡ ಸವಾಲಿನ ಸಂಗತಿಯೆಂಬಂತಾಗಿದೆ. 50 ಮಕ್ಕಳಿರುವ ಶಾಲೆಗೆ ತಿಂಗಳಿಗೆ ಒಂದು ಸಿಲೆಂಡರ್ ಮತ್ತು 100 ಮಕ್ಕಳಿರುವ ಶಾಲೆಗಳಿಗೆ ತಿಂಗಳಿಗೆ ಎರಡು ಸಿಲಿಂಡರ್ ನಿಗದಿಪಡಿಸಲಾಗಿದೆ. 20ರಿಂದ 30 ಮಕ್ಕಳಿರುವ ಶಾಲೆಗಳೆ ಹೆಚ್ಚಿವೆ. ನಮ್ಮದು ಸಹ ಅಂತಹ ಶಾಲೆಯಾಗಿದ್ದು ಇಲ್ಲಿ 16-17 ದಿನಕ್ಕೆ ಸಿಲಿಂಡರ್ ಖಾಲಿಯಾಗುತ್ತಿದೆ. ಉಳಿದ ದಿನಗಳ ಸಮಸ್ಯೆಗೆ ನಾವೆ ತಲೆಕೊಡಬೇಕಾಗಿದೆ” ಎಂದು ಹೆಸರು ಹೇಳಲು ಇಚ್ಛಿಸಿದ ಶಾಲಾ ಮುಖ್ಯೋಪಾಧ್ಯಾಯರೊಬ್ಬರು ಪ್ರತಿಕ್ರಿಯಿಸಿದ್ದಾರೆ.

ಇನ್ನು ಬಿಸಿ ಊಟ ತಯಾರಿಸುವ ಮಹಿಳಾ ನೌಕರರಿಗೆ 2021ರ ಜೂನ್ ತಿಂಗಳಿನಿಂದಲೂ ಸಂಬಳ ನೀಡಿಲ್ಲ. ಈ ಬಗ್ಗೆ ಹಲವು ಹೋರಾಟಗಳು ನಡೆದರೂ ಸರ್ಕಾರ ಮಾತ್ರ ಕಡೆಗಣಿಸುತ್ತಲೇ ಇದೆ.

ಬಿಸಿಯೂಟ ತಯಾರಿಕೆಯಲ್ಲಾಗುತ್ತಿರುವ ತೊಂದರೆ-ತೊಡಕು ನಿವಾರಣೆಗೆ ಜನ ಪ್ರತಿನಿಧಿಗಳು ಅದರಲ್ಲೂ ಶಾಸಕರು ಇಚ್ಚಾ ಶಕ್ತಿ ತೋರಿಸಬೇಕೆಂಬ ಆಗ್ರಹ ಕೇಳಿಬರುತ್ತಿದೆ.


ಇದನ್ನೂ ಓದಿ: ಮೋದಿ ಅಭಿವೃದ್ಧಿ ವಾಹನವು ರಿವರ್ಸ್ ಗೇರ್‌ನಲ್ಲಿದೆ ಹಾಗೂ ಅದರ ಬ್ರೇಕ್‌ ವಿಫಲವಾಗಿದೆ: ರಾಹುಲ್‌ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...