Homeಕರ್ನಾಟಕತೀವ್ರ ಬೆಲೆ ಏರಿಕೆಯಾದರೂ ಅನುದಾನ ಹೆಚ್ಚಳವಿಲ್ಲ: ಅರೆಹೊಟ್ಟೆಯಲ್ಲಿ ಶಾಲಾ ಮಕ್ಕಳು

ತೀವ್ರ ಬೆಲೆ ಏರಿಕೆಯಾದರೂ ಅನುದಾನ ಹೆಚ್ಚಳವಿಲ್ಲ: ಅರೆಹೊಟ್ಟೆಯಲ್ಲಿ ಶಾಲಾ ಮಕ್ಕಳು

ಶಾಲಾ ಮಕ್ಕಳ ಮಧ್ಯಾಹ್ನದ ಬಿಸಿಯೂಟ ಯೋಜನೆಗೆ 2020ರ ಜೂನ್‌ನಲ್ಲಿ ನಿಗಧಿಪಡಿಸಿದ ಅನುದಾನವನ್ನೇ ಈಗಲೂ ನೀಡಲಾಗುತ್ತಿದೆ.

- Advertisement -
- Advertisement -

ಪ್ರಾಥಮಿಕ ಶಾಲೆ, ಪ್ರೌಢ ಶಾಲೆಗಳಲ್ಲಿ ಮಕ್ಕಳಿಗೆ ಕೊಡುತ್ತಿರುವ ಮಧ್ಯಾಹ್ನದ ಬಿಸಿಯೂಟ ಹೊಟ್ಟೆ ತುಂಬ ಸಿಗದಂತಾಗಿದೆ. ಒಂದೇ ಸಮನೆ ಗ್ಯಾಸ್ ಸಿಲೆಂಡರ್, ದವಸ ಧಾನ್ಯ ಮತ್ತು ತರಕಾರಿ ಬೆಲೆ ಏರಿಕೆಯಾಗುತ್ತಿದ್ದರೂ ಹಿಂದಿನ ಅನುದಾನ ಪರಿಷ್ಕರಿಸದೆ ಸರಕಾರ ಉದಾಸೀನ ತೋರಿರುವುದರಿಂದ ಬಿಸಿಯೂಟ ಯೋಜನೆಯ್ನು ಶಾಲೆಗಳಲ್ಲಿ ನಿಭಾಯಿಸಲಾಗುತ್ತಿಲ್ಲವೆಂದು ಶಿಕ್ಷಕರು ಅಲವತ್ತುಕೊಳ್ಳುತ್ತಿದ್ದಾರೆ. ಶಿಕ್ಷಣ ಮಂತ್ರಿಯಾದಿಯಾಗಿ ಜನಪ್ರತಿನಿಧಿಗಳೆಲ್ಲ ಇದು ತಮಗೆ ಸಂಬಂಧಿಸಿದ ಸಂಗತಿ ಅಲ್ಲವೆಂಬಂತೆ ಇರುವುದರಿಂದ ವಿಧ್ಯಾರ್ಥಿಗಳು ಅರೆ-ಬರೆ ಉಂಡೇಳುವಂತಾಗಿದೆ ಎಂಬ ಮಾತು ಕೇಳಿಬರುತ್ತಿದೆ.

ಪ್ರತಿ ಮಗುವಿನ ಲೆಕ್ಕಾಚಾರದಲ್ಲಿ ಪ್ರತಿ ವರ್ಷ ಬಿಸಿಊಟದ ದರ ಸರ್ಕಾರ ಪರಿಷ್ಕರಿಸುವುದು ಪದ್ದತಿ. ಜೂನ್ 2020ರಲ್ಲಿ ಶೇ.10.99ರಷ್ಟು ಅನುದಾನ ಜಾಸ್ತಿ ಮಾಡಲಾಗಿತ್ತು. ಈ ದರದಂತೆ 1ರಿಂದ 5ನೇ ತರಗತಿ ವರೆಗಿನ ಒಂದು ಮಗುವಿಗೆ 4.97ರೂ. ಖರ್ಚು ಮಾಡಬಹುದು. 6ರಿಂದ 10ನೇ ತರಗತಿ ಮಕ್ಕಳಿಗೆ ತಲಾ 7.45ರೂ ವ್ಯಯಿಸಬೇಕು. ಅಡುಗೆ ಅನಿಲದಿಂದ, ಎಣ್ಣೆ ಬೇಳೆಕಾಳಿನ ತನಕದ ಎಲ್ಲ ಖರ್ಚು-ವೆಚ್ಚ ಹೆಚ್ಚಾಗಿದ್ದರೂ ಈ ವರ್ಷ ಅನುದಾನ ಮಾತ್ರ ಸರ್ಕಾರ ಹೆಚ್ಚಿಸಿಲ್ಲ. ಒಂದರಿಂದ ಐದನೇ ತರಗತಿ ವರೆಗಿನ ಒಂದು ಮಗುವಿಗೆ 2 ರೂಗೆ ತೊಗರಿ ಬೇಳೆ (20 ಗ್ರಾಂ), 1.36ರೂಗೆ ತರಕಾರಿ (50 ಗ್ರಾಂ), 1.73ರೂಗೆ ಎಣ್ಣೆ (5 ಗ್ರಾಂ), 37 ಪೈಸೆಗೆ ಸಾಂಬಾರ್ ಪುಡಿ, 3 ಪೈಸೆಗೆ ಉಪ್ಪು (2ಗ್ರಾಂ), ಇಂಧನಕ್ಕೆ 79 ಪೈಸೆ ಖರ್ಚು ಮಾಡಲಾಗುತ್ತಿದೆ.

ಅದೇ ರೀತಿಯಾಗಿ 6ರಿಂದ 10ನೇ ತರಗತಿ ವರೆಗಿನ ಮಕ್ಕಳಿಗೆ 2.95ರೂಗೆ ತೊಗರಿಬೇಳೆ (30 ಗ್ರಾಂ), 2.04ರೂಗೆ ತರಕಾರಿ (75 ಗ್ರಾಂ), 54ಪೈಸೆಗೆ ಸಾಂಬಾರ್ ಪುಡಿ, 67 ಪೈಸೆಗೆ ಎಣ್ಣೆ (7.5 ಗ್ರಾಂ), 6 ಪೈಸೆಗೆ ಉಪ್ಪು(4ಗ್ರಾಂ), 1.19ರೂಗೆ ಇಂಧನದ ಲೆಕ್ಕದಲ್ಲಿ ಖರ್ಚು ಮಾಡಬೇಕೆಂದು ಸರ್ಕಾರಿ ಸುತ್ತೋಲೆ ಹೆಳುತ್ತದೆ. ವಾರಕ್ಕೊಮ್ಮೆ ಪಾಯಸ-ಹುಗ್ಗಿ ಮಕ್ಕಳಿಗೆ ಹಂಚಬೇಕು. ಇದಕ್ಕೆ ಪ್ರತ್ಯೇಕ ಅನುದಾನವಿಲ್ಲ. ಬಿಸಿಯೂಟ ಖಾತೆಯಿಂದ ನಿಗದಿತ ಪ್ರಮಾಣಕ್ಕಿಂತ ಒಂದು ಪೈಸೆ ಹೆಚ್ಚು ತೆಗೆಯುವಂತಿಲ್ಲ. ಆದರೆ ಈ ದರದಲ್ಲಿ ಬಿಸಿಯೂಟ ತಯಾರಿಸುವುದು ಹಾಲಿ ದುಬಾರಿ ದಿನ ಮಾನದಲ್ಲಿ ಅಸಾಧ್ಯದ ಮಾತೆಂಬ ಸಾಮಾನ್ಯ ಜ್ಞಾನ ಸರಕಾರ ನಡೆಸುವವರಿಗೆ ಇರಬೇಡವೆ ಎಂದು ಪಾಲಕರು ಪ್ರಶ್ನಿಸುತ್ತಾರೆ.

ಸರಕಾರ ನಿಗದಿಸಿರುವ ಈ ತಲಾ ಖರ್ಚಿನಲ್ಲಿ ಮಕ್ಕಳು ಕಡಿಮೆ ಸಂಖ್ಯೆಯಲ್ಲಿರುವ ಸರಕಾರಿ ಮತ್ತು ಅನುದಾನಿತ ಶಾಲೆಗಳಲಿ ಬಿಸಿಯೂಟ ನಿರ್ವಹಣೆ ಸಾಧ್ಯವಾಗುತ್ತಿಲ್ಲ. ಮೊದಲು ಶಾಲೆಗಳಿಗೆ ತಿಂಗಳಿಗೆ ಎರಡು ಅನಿಲ ಸಿಲೆಂಡರ್ ಕೊಡಲಾಗುತ್ತಿತ್ತು. ಈಗ ಅದರ ವೆಚ್ಚ ನೀಡಲಾಗುತ್ತಿದ್ದು ಶಿಕ್ಷಕರೆ ಗ್ಯಾಸ್‌ ತಂದುಕೊಳ್ಳಬೇಕಿದೆ. ಸರಕಾರ ಕೊಡುವ ಅನುದಾನದಲ್ಲಿ 910ರೂಗೆ ಗ್ಯಾಸ್ ಸಿಲೆಂಡರ್, ಕೆ.ಜಿ.ಗೆ 105 ರೂ.ಗಳ ತೊಗರಿ ಬೇಳೆ, ಕನಿಷ್ಟವೆಂದರೂ 40 ರಿಂದ 50 ರೂ.ಗಳಿರುವ ಕೆಜಿ ಈರುಳ್ಳಿ, ಟೊಮೆಟೊ, ಇನ್ನಿತರ ತರಕಾರಿ ಮತ್ತು ಲೀಟರಿಗೆ 160 ರೂ.ಗಳ ಖಾದ್ಯ ತೈಲಕ್ಕೆ ವಿಂಗಡಿಸಿ ಈ ಬೆಲೆ ಏರಿಕೆಯ ದಿನಗಳಲ್ಲಿ ಬಿಸಿಯೂಟ ತಯಾರಿಕೆ ಸಾಧ್ಯವಿಲ್ಲವೆಂದು ನಿರ್ವಾಹಕರು ಹೇಳುತ್ತಾರೆ.

“ಅಡುಗೆ ಅನಿಲ ಸಮಸ್ಯೆಯಿಂದ ಬಿಸಿಯೂಟ ತಯಾರಿಸುವುದು ದೊಡ್ಡ ಸವಾಲಿನ ಸಂಗತಿಯೆಂಬಂತಾಗಿದೆ. 50 ಮಕ್ಕಳಿರುವ ಶಾಲೆಗೆ ತಿಂಗಳಿಗೆ ಒಂದು ಸಿಲೆಂಡರ್ ಮತ್ತು 100 ಮಕ್ಕಳಿರುವ ಶಾಲೆಗಳಿಗೆ ತಿಂಗಳಿಗೆ ಎರಡು ಸಿಲಿಂಡರ್ ನಿಗದಿಪಡಿಸಲಾಗಿದೆ. 20ರಿಂದ 30 ಮಕ್ಕಳಿರುವ ಶಾಲೆಗಳೆ ಹೆಚ್ಚಿವೆ. ನಮ್ಮದು ಸಹ ಅಂತಹ ಶಾಲೆಯಾಗಿದ್ದು ಇಲ್ಲಿ 16-17 ದಿನಕ್ಕೆ ಸಿಲಿಂಡರ್ ಖಾಲಿಯಾಗುತ್ತಿದೆ. ಉಳಿದ ದಿನಗಳ ಸಮಸ್ಯೆಗೆ ನಾವೆ ತಲೆಕೊಡಬೇಕಾಗಿದೆ” ಎಂದು ಹೆಸರು ಹೇಳಲು ಇಚ್ಛಿಸಿದ ಶಾಲಾ ಮುಖ್ಯೋಪಾಧ್ಯಾಯರೊಬ್ಬರು ಪ್ರತಿಕ್ರಿಯಿಸಿದ್ದಾರೆ.

ಇನ್ನು ಬಿಸಿ ಊಟ ತಯಾರಿಸುವ ಮಹಿಳಾ ನೌಕರರಿಗೆ 2021ರ ಜೂನ್ ತಿಂಗಳಿನಿಂದಲೂ ಸಂಬಳ ನೀಡಿಲ್ಲ. ಈ ಬಗ್ಗೆ ಹಲವು ಹೋರಾಟಗಳು ನಡೆದರೂ ಸರ್ಕಾರ ಮಾತ್ರ ಕಡೆಗಣಿಸುತ್ತಲೇ ಇದೆ.

ಬಿಸಿಯೂಟ ತಯಾರಿಕೆಯಲ್ಲಾಗುತ್ತಿರುವ ತೊಂದರೆ-ತೊಡಕು ನಿವಾರಣೆಗೆ ಜನ ಪ್ರತಿನಿಧಿಗಳು ಅದರಲ್ಲೂ ಶಾಸಕರು ಇಚ್ಚಾ ಶಕ್ತಿ ತೋರಿಸಬೇಕೆಂಬ ಆಗ್ರಹ ಕೇಳಿಬರುತ್ತಿದೆ.


ಇದನ್ನೂ ಓದಿ: ಮೋದಿ ಅಭಿವೃದ್ಧಿ ವಾಹನವು ರಿವರ್ಸ್ ಗೇರ್‌ನಲ್ಲಿದೆ ಹಾಗೂ ಅದರ ಬ್ರೇಕ್‌ ವಿಫಲವಾಗಿದೆ: ರಾಹುಲ್‌ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...

ಕಾವೇರಿ ಪ್ರತಿಭಟನೆ ವೇಳೆ ಆಕ್ಷೇಪಾರ್ಹ ಹೇಳಿಕೆ : ತಮಿಳುನಾಡಿನ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಬಂಧನ

ಸೋಮವಾರ (ಆ.3) ತಂಜಾವೂರಿನಲ್ಲಿ ನಡೆದ ಕಾವೇರಿ ಪ್ರತಿಭಟನೆ ಸಂದರ್ಭದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇಲೆ ತಮಿಳುನಾಡಿನ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಉದಯನಿಧಿ ಬಂಧನಕ್ಕೂ...

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...