Homeಮುಖಪುಟ‘ಜೈ ಭೀಮ್‌’ ಚಿತ್ರದಲ್ಲಿ ಹಿಂದಿ ಮಾತನಾಡುವ ವ್ಯಕ್ತಿಗೆ ಕಪಾಳ ಮೋಕ್ಷ: ಪ್ರಕಾಶ್ ರಾಜ್‌ ಹೇಳಿದ್ದೇನು?

‘ಜೈ ಭೀಮ್‌’ ಚಿತ್ರದಲ್ಲಿ ಹಿಂದಿ ಮಾತನಾಡುವ ವ್ಯಕ್ತಿಗೆ ಕಪಾಳ ಮೋಕ್ಷ: ಪ್ರಕಾಶ್ ರಾಜ್‌ ಹೇಳಿದ್ದೇನು?

- Advertisement -
- Advertisement -

ಇತ್ತೀಚೆಗೆ ಬಿಡುಗಡೆಯಾದ ಜೈ ಭೀಮ್‌ ಚಿತ್ರದಲ್ಲಿ ಹಿಂದಿಯಲ್ಲಿ ಮಾತನಾಡಿದ ವ್ಯಕ್ತಿಯೊಬ್ಬನಿಗೆ ಚಿತ್ರದ ನಟ ಪ್ರಕಾಶ್‌ ರಾಜ್‌ ಕಪಾಳಮೋಕ್ಷ ಮಾಡಿದ್ದರು. ಇದಕ್ಕೆ ಹಿಂದಿ ಹೇರಿಕೆ ಸಮರ್ಥನೆ ಮಾಡುವ ಬಲಪಂಥೀಯರು ಆಕ್ಷೇಪ ವ್ಯಕ್ತಪಡಿಸಿದ್ದರು. ಈ ಬಗ್ಗೆ ಪ್ರತಿಕ್ರಿಯೆ ವ್ಯಕ್ತಪಡಿಸಿರುವ ಪ್ರಕಾಶ್‌ ರಾಜ್, “ಚಿತ್ರದಲ್ಲಿ ಇರುಳರ್‌ ಸಮುದಾಯದ ಸಂಕಷ್ಟಗಳನ್ನು ತೋರಿಸಿದರೂ, ಅವರಿಗೆ ಕಪಾಳಮೋಕ್ಷ ದೃಶ್ಯದ ಬಗ್ಗೆ ಮಾತ್ರ ಆಕ್ಷೇಪ ಇದೆ ಎಂದರೆ, ಅವರ ಅಜೆಂಡಾ ಬಹಿರಂಗವಾಗುತ್ತದೆ” ಎಂದಿದ್ದಾರೆ.

ಪ್ರಕಾಶ್ ರಾಜ್ ಚಿತ್ರದಲ್ಲಿ, ಸುಳ್ಳು ಪ್ರಕರಣದಲ್ಲಿ ಸಿಲುಕಿ ಪೊಲೀಸರಿಂದ ಅನ್ಯಾಯಕ್ಕೆ ಒಳಗಾಗಿದ್ದ ಇರುಳ ಸಮುದಾಯದ ಪರವಾಗಿ ನ್ಯಾಯಾಲಯ ರಚಿಸಿದ ಆಯೋಗದ ತನಿಖಾಧಿಕಾರಿಯಾಗಿ ನಟಿಸಿದ್ದಾರೆ. ಪ್ರಕರಣದ ವಿಚಾರಣೆಯಲ್ಲಿ ಹಿಂದಿ ಮಾತನಾಡುವ ‘ಸೇಠ್‌‌’ ಎಂಬ ವ್ಯಕ್ತಿ ಹಿಂದಿಯಲ್ಲಿ ಮಾತನಾಡುತ್ತಾರೆ. ಈ ವೇಳೆ ಪ್ರಕಾಶ್ ರಾಜ್ ಕಪಾಳ ಮೋಕ್ಷ ಮಾಡಿ ತಮಿಳಿನಲ್ಲಿ ಮಾತನಾಡು ಎಂದು ಹೇಳುತ್ತಾರೆ. ಇದು ಬಲಪಂಥೀಯ ಹಿಂದಿ ಹೇರಿಕೆ ಸಮರ್ಥಿಸುವ ಜನರ ಆಕ್ರೋಶಕ್ಕೆ ಈಡು ಮಾಡಿತ್ತು. ಆದರೆ ದಕ್ಷಿಣ ಭಾರತದ ಜನರು ನಟ ಪ್ರಕಾಶ್‌ ರಾಜ್ ಅವರನ್ನು ಬೆಂಬಲಿಸಿದ್ದರು.

ಇದನ್ನೂ ಓದಿ: ‘ಜೈ ಭೀಮ್‌’ ಚಿತ್ರಕ್ಕೆ ಸ್ಪೂರ್ತಿಯಾದ ವಕೀಲ ‘ಚಂದ್ರು’ ಯಾರು?

ವಿವಾದಕ್ಕೆ ಸಂಬಂಧಿಸಿದಂತೆ ಮಾತನಾಡಿದ ಪ್ರಕಾಶ್ ರಾಜ್, “ಜೈ ಭೀಮ್ ನಂತಹ ಚಿತ್ರ ನೋಡಿದ ಅವರು ಬುಡಕಟ್ಟು ಜನರ ಯಾತನೆ ನೋಡಲಿಲ್ಲ. ಅನ್ಯಾಯವನ್ನು ನೋಡಿ ಭಯಪಡಲಿಲ್ಲ, ಆದರೆ ಕಪಾಳಮೋಕ್ಷವನ್ನು ಮಾತ್ರ ನೋಡಿದರು. ಅವರಿಗೆ ಅರ್ಥವಾದದ್ದು ಇಷ್ಟೇ; ಇದು ಅವರ ಅಜೆಂಡಾವನ್ನು ಬಹಿರಂಗಪಡಿಸುತ್ತದೆ.” ಎಂದು ಹೇಳಿದ್ದಾರೆ.

“ಇಲ್ಲಿ ಕೆಲವು ವಿಷಯಗಳನ್ನು ದಾಖಲಿಸಬೇಕು. ಉದಾಹರಣೆಗೆ, ಹಿಂದಿ ಮೇಲಿನ ದಕ್ಷಿಣ ಭಾರತೀಯರ ಆಕ್ರೋಶ. ಹಿಂದಿ ಅವರ ಮೇಲೆ ಬಲವಂತವಾಗಿ ಹೇರಲ್ಪಟ್ಟಿದೆ. ಸ್ಥಳೀಯ ಭಾಷೆ ತಿಳಿದಿರುವ ವ್ಯಕ್ತಿಯೊಬ್ಬರು ಪ್ರಶ್ನಿಸುವುದನ್ನು ತಪ್ಪಿಸಲು ಹಿಂದಿಯಲ್ಲಿ ಮಾತನಾಡುತ್ತಾರೆ ಎಂದು ತಿಳಿದಾಗ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸ್ ಅಧಿಕಾರಿಯು ಹೇಗೆ ಪ್ರತಿಕ್ರಿಯಿಸುತ್ತಾನೆ?” ಎಂದು ಅವರು ಪ್ರಶ್ನಿಸಿದ್ದಾರೆ.

“ಯಾವುದೇ ಔಪಚಾರಿಕ ಶಿಕ್ಷಣವನ್ನು ಪಡೆಯದ ಬುಡಕಟ್ಟು ಮಹಿಳೆಯರಿಗೆ ಇಂಗ್ಲಿಷ್‌ನಲ್ಲಿ ನೋಟಿಸ್ ಕಳುಹಿಸುವ ಸಾವಿರಕ್ಕೂ ಹೆಚ್ಚು ಪ್ರಕರಣಗಳಿವೆ. ಇವುಗಳನ್ನು ವಿಶಾಲ ದೃಷ್ಟಿಕೋನದಿಂದ ನೋಡುವ ಅವಶ್ಯಕತೆಯಿದೆ. ಕಪಾಳಮೋಕ್ಷದ ದೃಶ್ಯದಲ್ಲಿ ಪ್ರಕಾಶ್ ರಾಜ್ ತೆರೆಯ ಮೇಲೆ ಇದ್ದುದರಿಂದ ಕೆಲವರಿಗೆ ಅದು ಕೆರಳಿಸಿದೆ”

ಇದನ್ನೂ ಓದಿ: ಹಿಂದಿ ಹೇರಿಕೆಗೆ ಕಪಾಳ ಮೋಕ್ಷ: ‘ಜೈ ಭೀಮ್‌’ ದೃಶ್ಯಕ್ಕೆ ದ್ರಾವಿಡ ಭಾಷಿಗರ ಮೆಚ್ಚುಗೆ

“ಬುಡಕಟ್ಟು ಜನರ ನೋವು ಅವರನ್ನು ಕಲಕದಿದ್ದರೆ? ಅವರೀಗ ನನಗಿಂತ ಹೆಚ್ಚು ಬೆತ್ತಲೆಯಾಗಿ ಕಾಣಿಸಿಕೊಂಡಿದ್ದು, ಅವರ ದುರುದ್ದೇಶ ಬಹಿರಂಗವಾಗಿದೆ. ಅಂತಹ ಧರ್ಮಾಂಧರಿಗೆ ಪ್ರತಿಕ್ರಿಯಿಸುವುದರಲ್ಲಿ ಅರ್ಥವಿಲ್ಲ.” ಎಂದು ಪ್ರಕಾಶ್‌ ರಾಜ್‌ ಹೇಳಿದ್ದಾರೆ.

ಜೈ ಭೀಮ್‌ ಚಿತ್ರ

ನಿರ್ದೇಶಕ ತಾ. ಸೇ. ಜ್ಞಾನವೇಲ್ ಅವರು ರಚಿಸಿ ನಿರ್ದೇಶಿಸಿರುವ ಜೈ ಭೀಮ್‌ ಚಿತ್ರವು 90 ರ ದಶಕದಲ್ಲಿ ನಡೆದ ನೈಜ ಘಟನೆಯನ್ನು ಆಧರಿಸಿದೆ. ಚಿತ್ರವು ಇರುಳರ್ ಬುಡಕಟ್ಟಿನ ಸಮುದಾಯದ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು, ಕಮ್ಯುನಿಷ್ಟ್‌ ಚಳುವಳಿಯಲ್ಲಿ ತೊಡಗಿಸಿಕೊಂಡಿದ್ದ ವಕೀಲ ಚಂದ್ರು ಹೇಗೆ ಸಂವಿಧಾನವನ್ನು ಬಳಸಿಕೊಂಡು ಅವರಿಗೆ ನ್ಯಾಯ ಕೊಡಿಸುತ್ತಾನೆ ಎಂಬ ಬಗ್ಗೆ ಹೇಳುತ್ತದೆ. ಚಿತ್ರಕ್ಕೆ ಪ್ರೇಕ್ಷಕರಿಂದ ಅಗಾಧ ಪ್ರತಿಕ್ರಿಯೆಗಳು ಬಂದಿವೆ.

ಜೈ ಭೀಮ್‌ ನವೆಂಬರ್ 2 ರಂದು ಅಮೆಜಾನ್ ಪ್ರೈಮ್ ವಿಡಿಯೋದಲ್ಲಿ ನೇರವಾಗಿ ಬಿಡುಗಡೆಯಾಯಿತು. ಚಿತ್ರವನ್ನು ಸೂರ್ಯ ಮತ್ತು ಜ್ಯೋತಿಕಾ ಜಂಟಿಯಾಗಿ 2D ಎಂಟರ್ಟೈನ್ಮೆಂಟ್ ಬ್ಯಾನರ್ ಅಡಿಯಲ್ಲಿ ನಿರ್ಮಿಸಿದ್ದಾರೆ.

ಇದನ್ನೂ ಓದಿ: ಕೊಳೆತು ನಾರುತ್ತಿರುವ ವ್ಯವಸ್ಥೆಯ ಕಥೆ ಹೇಳುವ ‘ಜೈ ಭೀಮ್’…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...