Homeಮುಖಪುಟ‘ಜೈ ಭೀಮ್‌’ ಚಿತ್ರದಲ್ಲಿ ಹಿಂದಿ ಮಾತನಾಡುವ ವ್ಯಕ್ತಿಗೆ ಕಪಾಳ ಮೋಕ್ಷ: ಪ್ರಕಾಶ್ ರಾಜ್‌ ಹೇಳಿದ್ದೇನು?

‘ಜೈ ಭೀಮ್‌’ ಚಿತ್ರದಲ್ಲಿ ಹಿಂದಿ ಮಾತನಾಡುವ ವ್ಯಕ್ತಿಗೆ ಕಪಾಳ ಮೋಕ್ಷ: ಪ್ರಕಾಶ್ ರಾಜ್‌ ಹೇಳಿದ್ದೇನು?

- Advertisement -
- Advertisement -

ಇತ್ತೀಚೆಗೆ ಬಿಡುಗಡೆಯಾದ ಜೈ ಭೀಮ್‌ ಚಿತ್ರದಲ್ಲಿ ಹಿಂದಿಯಲ್ಲಿ ಮಾತನಾಡಿದ ವ್ಯಕ್ತಿಯೊಬ್ಬನಿಗೆ ಚಿತ್ರದ ನಟ ಪ್ರಕಾಶ್‌ ರಾಜ್‌ ಕಪಾಳಮೋಕ್ಷ ಮಾಡಿದ್ದರು. ಇದಕ್ಕೆ ಹಿಂದಿ ಹೇರಿಕೆ ಸಮರ್ಥನೆ ಮಾಡುವ ಬಲಪಂಥೀಯರು ಆಕ್ಷೇಪ ವ್ಯಕ್ತಪಡಿಸಿದ್ದರು. ಈ ಬಗ್ಗೆ ಪ್ರತಿಕ್ರಿಯೆ ವ್ಯಕ್ತಪಡಿಸಿರುವ ಪ್ರಕಾಶ್‌ ರಾಜ್, “ಚಿತ್ರದಲ್ಲಿ ಇರುಳರ್‌ ಸಮುದಾಯದ ಸಂಕಷ್ಟಗಳನ್ನು ತೋರಿಸಿದರೂ, ಅವರಿಗೆ ಕಪಾಳಮೋಕ್ಷ ದೃಶ್ಯದ ಬಗ್ಗೆ ಮಾತ್ರ ಆಕ್ಷೇಪ ಇದೆ ಎಂದರೆ, ಅವರ ಅಜೆಂಡಾ ಬಹಿರಂಗವಾಗುತ್ತದೆ” ಎಂದಿದ್ದಾರೆ.

ಪ್ರಕಾಶ್ ರಾಜ್ ಚಿತ್ರದಲ್ಲಿ, ಸುಳ್ಳು ಪ್ರಕರಣದಲ್ಲಿ ಸಿಲುಕಿ ಪೊಲೀಸರಿಂದ ಅನ್ಯಾಯಕ್ಕೆ ಒಳಗಾಗಿದ್ದ ಇರುಳ ಸಮುದಾಯದ ಪರವಾಗಿ ನ್ಯಾಯಾಲಯ ರಚಿಸಿದ ಆಯೋಗದ ತನಿಖಾಧಿಕಾರಿಯಾಗಿ ನಟಿಸಿದ್ದಾರೆ. ಪ್ರಕರಣದ ವಿಚಾರಣೆಯಲ್ಲಿ ಹಿಂದಿ ಮಾತನಾಡುವ ‘ಸೇಠ್‌‌’ ಎಂಬ ವ್ಯಕ್ತಿ ಹಿಂದಿಯಲ್ಲಿ ಮಾತನಾಡುತ್ತಾರೆ. ಈ ವೇಳೆ ಪ್ರಕಾಶ್ ರಾಜ್ ಕಪಾಳ ಮೋಕ್ಷ ಮಾಡಿ ತಮಿಳಿನಲ್ಲಿ ಮಾತನಾಡು ಎಂದು ಹೇಳುತ್ತಾರೆ. ಇದು ಬಲಪಂಥೀಯ ಹಿಂದಿ ಹೇರಿಕೆ ಸಮರ್ಥಿಸುವ ಜನರ ಆಕ್ರೋಶಕ್ಕೆ ಈಡು ಮಾಡಿತ್ತು. ಆದರೆ ದಕ್ಷಿಣ ಭಾರತದ ಜನರು ನಟ ಪ್ರಕಾಶ್‌ ರಾಜ್ ಅವರನ್ನು ಬೆಂಬಲಿಸಿದ್ದರು.

ಇದನ್ನೂ ಓದಿ: ‘ಜೈ ಭೀಮ್‌’ ಚಿತ್ರಕ್ಕೆ ಸ್ಪೂರ್ತಿಯಾದ ವಕೀಲ ‘ಚಂದ್ರು’ ಯಾರು?

ವಿವಾದಕ್ಕೆ ಸಂಬಂಧಿಸಿದಂತೆ ಮಾತನಾಡಿದ ಪ್ರಕಾಶ್ ರಾಜ್, “ಜೈ ಭೀಮ್ ನಂತಹ ಚಿತ್ರ ನೋಡಿದ ಅವರು ಬುಡಕಟ್ಟು ಜನರ ಯಾತನೆ ನೋಡಲಿಲ್ಲ. ಅನ್ಯಾಯವನ್ನು ನೋಡಿ ಭಯಪಡಲಿಲ್ಲ, ಆದರೆ ಕಪಾಳಮೋಕ್ಷವನ್ನು ಮಾತ್ರ ನೋಡಿದರು. ಅವರಿಗೆ ಅರ್ಥವಾದದ್ದು ಇಷ್ಟೇ; ಇದು ಅವರ ಅಜೆಂಡಾವನ್ನು ಬಹಿರಂಗಪಡಿಸುತ್ತದೆ.” ಎಂದು ಹೇಳಿದ್ದಾರೆ.

“ಇಲ್ಲಿ ಕೆಲವು ವಿಷಯಗಳನ್ನು ದಾಖಲಿಸಬೇಕು. ಉದಾಹರಣೆಗೆ, ಹಿಂದಿ ಮೇಲಿನ ದಕ್ಷಿಣ ಭಾರತೀಯರ ಆಕ್ರೋಶ. ಹಿಂದಿ ಅವರ ಮೇಲೆ ಬಲವಂತವಾಗಿ ಹೇರಲ್ಪಟ್ಟಿದೆ. ಸ್ಥಳೀಯ ಭಾಷೆ ತಿಳಿದಿರುವ ವ್ಯಕ್ತಿಯೊಬ್ಬರು ಪ್ರಶ್ನಿಸುವುದನ್ನು ತಪ್ಪಿಸಲು ಹಿಂದಿಯಲ್ಲಿ ಮಾತನಾಡುತ್ತಾರೆ ಎಂದು ತಿಳಿದಾಗ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸ್ ಅಧಿಕಾರಿಯು ಹೇಗೆ ಪ್ರತಿಕ್ರಿಯಿಸುತ್ತಾನೆ?” ಎಂದು ಅವರು ಪ್ರಶ್ನಿಸಿದ್ದಾರೆ.

“ಯಾವುದೇ ಔಪಚಾರಿಕ ಶಿಕ್ಷಣವನ್ನು ಪಡೆಯದ ಬುಡಕಟ್ಟು ಮಹಿಳೆಯರಿಗೆ ಇಂಗ್ಲಿಷ್‌ನಲ್ಲಿ ನೋಟಿಸ್ ಕಳುಹಿಸುವ ಸಾವಿರಕ್ಕೂ ಹೆಚ್ಚು ಪ್ರಕರಣಗಳಿವೆ. ಇವುಗಳನ್ನು ವಿಶಾಲ ದೃಷ್ಟಿಕೋನದಿಂದ ನೋಡುವ ಅವಶ್ಯಕತೆಯಿದೆ. ಕಪಾಳಮೋಕ್ಷದ ದೃಶ್ಯದಲ್ಲಿ ಪ್ರಕಾಶ್ ರಾಜ್ ತೆರೆಯ ಮೇಲೆ ಇದ್ದುದರಿಂದ ಕೆಲವರಿಗೆ ಅದು ಕೆರಳಿಸಿದೆ”

ಇದನ್ನೂ ಓದಿ: ಹಿಂದಿ ಹೇರಿಕೆಗೆ ಕಪಾಳ ಮೋಕ್ಷ: ‘ಜೈ ಭೀಮ್‌’ ದೃಶ್ಯಕ್ಕೆ ದ್ರಾವಿಡ ಭಾಷಿಗರ ಮೆಚ್ಚುಗೆ

“ಬುಡಕಟ್ಟು ಜನರ ನೋವು ಅವರನ್ನು ಕಲಕದಿದ್ದರೆ? ಅವರೀಗ ನನಗಿಂತ ಹೆಚ್ಚು ಬೆತ್ತಲೆಯಾಗಿ ಕಾಣಿಸಿಕೊಂಡಿದ್ದು, ಅವರ ದುರುದ್ದೇಶ ಬಹಿರಂಗವಾಗಿದೆ. ಅಂತಹ ಧರ್ಮಾಂಧರಿಗೆ ಪ್ರತಿಕ್ರಿಯಿಸುವುದರಲ್ಲಿ ಅರ್ಥವಿಲ್ಲ.” ಎಂದು ಪ್ರಕಾಶ್‌ ರಾಜ್‌ ಹೇಳಿದ್ದಾರೆ.

ಜೈ ಭೀಮ್‌ ಚಿತ್ರ

ನಿರ್ದೇಶಕ ತಾ. ಸೇ. ಜ್ಞಾನವೇಲ್ ಅವರು ರಚಿಸಿ ನಿರ್ದೇಶಿಸಿರುವ ಜೈ ಭೀಮ್‌ ಚಿತ್ರವು 90 ರ ದಶಕದಲ್ಲಿ ನಡೆದ ನೈಜ ಘಟನೆಯನ್ನು ಆಧರಿಸಿದೆ. ಚಿತ್ರವು ಇರುಳರ್ ಬುಡಕಟ್ಟಿನ ಸಮುದಾಯದ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು, ಕಮ್ಯುನಿಷ್ಟ್‌ ಚಳುವಳಿಯಲ್ಲಿ ತೊಡಗಿಸಿಕೊಂಡಿದ್ದ ವಕೀಲ ಚಂದ್ರು ಹೇಗೆ ಸಂವಿಧಾನವನ್ನು ಬಳಸಿಕೊಂಡು ಅವರಿಗೆ ನ್ಯಾಯ ಕೊಡಿಸುತ್ತಾನೆ ಎಂಬ ಬಗ್ಗೆ ಹೇಳುತ್ತದೆ. ಚಿತ್ರಕ್ಕೆ ಪ್ರೇಕ್ಷಕರಿಂದ ಅಗಾಧ ಪ್ರತಿಕ್ರಿಯೆಗಳು ಬಂದಿವೆ.

ಜೈ ಭೀಮ್‌ ನವೆಂಬರ್ 2 ರಂದು ಅಮೆಜಾನ್ ಪ್ರೈಮ್ ವಿಡಿಯೋದಲ್ಲಿ ನೇರವಾಗಿ ಬಿಡುಗಡೆಯಾಯಿತು. ಚಿತ್ರವನ್ನು ಸೂರ್ಯ ಮತ್ತು ಜ್ಯೋತಿಕಾ ಜಂಟಿಯಾಗಿ 2D ಎಂಟರ್ಟೈನ್ಮೆಂಟ್ ಬ್ಯಾನರ್ ಅಡಿಯಲ್ಲಿ ನಿರ್ಮಿಸಿದ್ದಾರೆ.

ಇದನ್ನೂ ಓದಿ: ಕೊಳೆತು ನಾರುತ್ತಿರುವ ವ್ಯವಸ್ಥೆಯ ಕಥೆ ಹೇಳುವ ‘ಜೈ ಭೀಮ್’…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...