Homeಮುಖಪುಟ‘ಜೈ ಭೀಮ್‌’ ಚಿತ್ರದಲ್ಲಿ ಹಿಂದಿ ಮಾತನಾಡುವ ವ್ಯಕ್ತಿಗೆ ಕಪಾಳ ಮೋಕ್ಷ: ಪ್ರಕಾಶ್ ರಾಜ್‌ ಹೇಳಿದ್ದೇನು?

‘ಜೈ ಭೀಮ್‌’ ಚಿತ್ರದಲ್ಲಿ ಹಿಂದಿ ಮಾತನಾಡುವ ವ್ಯಕ್ತಿಗೆ ಕಪಾಳ ಮೋಕ್ಷ: ಪ್ರಕಾಶ್ ರಾಜ್‌ ಹೇಳಿದ್ದೇನು?

- Advertisement -
- Advertisement -

ಇತ್ತೀಚೆಗೆ ಬಿಡುಗಡೆಯಾದ ಜೈ ಭೀಮ್‌ ಚಿತ್ರದಲ್ಲಿ ಹಿಂದಿಯಲ್ಲಿ ಮಾತನಾಡಿದ ವ್ಯಕ್ತಿಯೊಬ್ಬನಿಗೆ ಚಿತ್ರದ ನಟ ಪ್ರಕಾಶ್‌ ರಾಜ್‌ ಕಪಾಳಮೋಕ್ಷ ಮಾಡಿದ್ದರು. ಇದಕ್ಕೆ ಹಿಂದಿ ಹೇರಿಕೆ ಸಮರ್ಥನೆ ಮಾಡುವ ಬಲಪಂಥೀಯರು ಆಕ್ಷೇಪ ವ್ಯಕ್ತಪಡಿಸಿದ್ದರು. ಈ ಬಗ್ಗೆ ಪ್ರತಿಕ್ರಿಯೆ ವ್ಯಕ್ತಪಡಿಸಿರುವ ಪ್ರಕಾಶ್‌ ರಾಜ್, “ಚಿತ್ರದಲ್ಲಿ ಇರುಳರ್‌ ಸಮುದಾಯದ ಸಂಕಷ್ಟಗಳನ್ನು ತೋರಿಸಿದರೂ, ಅವರಿಗೆ ಕಪಾಳಮೋಕ್ಷ ದೃಶ್ಯದ ಬಗ್ಗೆ ಮಾತ್ರ ಆಕ್ಷೇಪ ಇದೆ ಎಂದರೆ, ಅವರ ಅಜೆಂಡಾ ಬಹಿರಂಗವಾಗುತ್ತದೆ” ಎಂದಿದ್ದಾರೆ.

ಪ್ರಕಾಶ್ ರಾಜ್ ಚಿತ್ರದಲ್ಲಿ, ಸುಳ್ಳು ಪ್ರಕರಣದಲ್ಲಿ ಸಿಲುಕಿ ಪೊಲೀಸರಿಂದ ಅನ್ಯಾಯಕ್ಕೆ ಒಳಗಾಗಿದ್ದ ಇರುಳ ಸಮುದಾಯದ ಪರವಾಗಿ ನ್ಯಾಯಾಲಯ ರಚಿಸಿದ ಆಯೋಗದ ತನಿಖಾಧಿಕಾರಿಯಾಗಿ ನಟಿಸಿದ್ದಾರೆ. ಪ್ರಕರಣದ ವಿಚಾರಣೆಯಲ್ಲಿ ಹಿಂದಿ ಮಾತನಾಡುವ ‘ಸೇಠ್‌‌’ ಎಂಬ ವ್ಯಕ್ತಿ ಹಿಂದಿಯಲ್ಲಿ ಮಾತನಾಡುತ್ತಾರೆ. ಈ ವೇಳೆ ಪ್ರಕಾಶ್ ರಾಜ್ ಕಪಾಳ ಮೋಕ್ಷ ಮಾಡಿ ತಮಿಳಿನಲ್ಲಿ ಮಾತನಾಡು ಎಂದು ಹೇಳುತ್ತಾರೆ. ಇದು ಬಲಪಂಥೀಯ ಹಿಂದಿ ಹೇರಿಕೆ ಸಮರ್ಥಿಸುವ ಜನರ ಆಕ್ರೋಶಕ್ಕೆ ಈಡು ಮಾಡಿತ್ತು. ಆದರೆ ದಕ್ಷಿಣ ಭಾರತದ ಜನರು ನಟ ಪ್ರಕಾಶ್‌ ರಾಜ್ ಅವರನ್ನು ಬೆಂಬಲಿಸಿದ್ದರು.

ಇದನ್ನೂ ಓದಿ: ‘ಜೈ ಭೀಮ್‌’ ಚಿತ್ರಕ್ಕೆ ಸ್ಪೂರ್ತಿಯಾದ ವಕೀಲ ‘ಚಂದ್ರು’ ಯಾರು?

ವಿವಾದಕ್ಕೆ ಸಂಬಂಧಿಸಿದಂತೆ ಮಾತನಾಡಿದ ಪ್ರಕಾಶ್ ರಾಜ್, “ಜೈ ಭೀಮ್ ನಂತಹ ಚಿತ್ರ ನೋಡಿದ ಅವರು ಬುಡಕಟ್ಟು ಜನರ ಯಾತನೆ ನೋಡಲಿಲ್ಲ. ಅನ್ಯಾಯವನ್ನು ನೋಡಿ ಭಯಪಡಲಿಲ್ಲ, ಆದರೆ ಕಪಾಳಮೋಕ್ಷವನ್ನು ಮಾತ್ರ ನೋಡಿದರು. ಅವರಿಗೆ ಅರ್ಥವಾದದ್ದು ಇಷ್ಟೇ; ಇದು ಅವರ ಅಜೆಂಡಾವನ್ನು ಬಹಿರಂಗಪಡಿಸುತ್ತದೆ.” ಎಂದು ಹೇಳಿದ್ದಾರೆ.

“ಇಲ್ಲಿ ಕೆಲವು ವಿಷಯಗಳನ್ನು ದಾಖಲಿಸಬೇಕು. ಉದಾಹರಣೆಗೆ, ಹಿಂದಿ ಮೇಲಿನ ದಕ್ಷಿಣ ಭಾರತೀಯರ ಆಕ್ರೋಶ. ಹಿಂದಿ ಅವರ ಮೇಲೆ ಬಲವಂತವಾಗಿ ಹೇರಲ್ಪಟ್ಟಿದೆ. ಸ್ಥಳೀಯ ಭಾಷೆ ತಿಳಿದಿರುವ ವ್ಯಕ್ತಿಯೊಬ್ಬರು ಪ್ರಶ್ನಿಸುವುದನ್ನು ತಪ್ಪಿಸಲು ಹಿಂದಿಯಲ್ಲಿ ಮಾತನಾಡುತ್ತಾರೆ ಎಂದು ತಿಳಿದಾಗ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸ್ ಅಧಿಕಾರಿಯು ಹೇಗೆ ಪ್ರತಿಕ್ರಿಯಿಸುತ್ತಾನೆ?” ಎಂದು ಅವರು ಪ್ರಶ್ನಿಸಿದ್ದಾರೆ.

“ಯಾವುದೇ ಔಪಚಾರಿಕ ಶಿಕ್ಷಣವನ್ನು ಪಡೆಯದ ಬುಡಕಟ್ಟು ಮಹಿಳೆಯರಿಗೆ ಇಂಗ್ಲಿಷ್‌ನಲ್ಲಿ ನೋಟಿಸ್ ಕಳುಹಿಸುವ ಸಾವಿರಕ್ಕೂ ಹೆಚ್ಚು ಪ್ರಕರಣಗಳಿವೆ. ಇವುಗಳನ್ನು ವಿಶಾಲ ದೃಷ್ಟಿಕೋನದಿಂದ ನೋಡುವ ಅವಶ್ಯಕತೆಯಿದೆ. ಕಪಾಳಮೋಕ್ಷದ ದೃಶ್ಯದಲ್ಲಿ ಪ್ರಕಾಶ್ ರಾಜ್ ತೆರೆಯ ಮೇಲೆ ಇದ್ದುದರಿಂದ ಕೆಲವರಿಗೆ ಅದು ಕೆರಳಿಸಿದೆ”

ಇದನ್ನೂ ಓದಿ: ಹಿಂದಿ ಹೇರಿಕೆಗೆ ಕಪಾಳ ಮೋಕ್ಷ: ‘ಜೈ ಭೀಮ್‌’ ದೃಶ್ಯಕ್ಕೆ ದ್ರಾವಿಡ ಭಾಷಿಗರ ಮೆಚ್ಚುಗೆ

“ಬುಡಕಟ್ಟು ಜನರ ನೋವು ಅವರನ್ನು ಕಲಕದಿದ್ದರೆ? ಅವರೀಗ ನನಗಿಂತ ಹೆಚ್ಚು ಬೆತ್ತಲೆಯಾಗಿ ಕಾಣಿಸಿಕೊಂಡಿದ್ದು, ಅವರ ದುರುದ್ದೇಶ ಬಹಿರಂಗವಾಗಿದೆ. ಅಂತಹ ಧರ್ಮಾಂಧರಿಗೆ ಪ್ರತಿಕ್ರಿಯಿಸುವುದರಲ್ಲಿ ಅರ್ಥವಿಲ್ಲ.” ಎಂದು ಪ್ರಕಾಶ್‌ ರಾಜ್‌ ಹೇಳಿದ್ದಾರೆ.

ಜೈ ಭೀಮ್‌ ಚಿತ್ರ

ನಿರ್ದೇಶಕ ತಾ. ಸೇ. ಜ್ಞಾನವೇಲ್ ಅವರು ರಚಿಸಿ ನಿರ್ದೇಶಿಸಿರುವ ಜೈ ಭೀಮ್‌ ಚಿತ್ರವು 90 ರ ದಶಕದಲ್ಲಿ ನಡೆದ ನೈಜ ಘಟನೆಯನ್ನು ಆಧರಿಸಿದೆ. ಚಿತ್ರವು ಇರುಳರ್ ಬುಡಕಟ್ಟಿನ ಸಮುದಾಯದ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು, ಕಮ್ಯುನಿಷ್ಟ್‌ ಚಳುವಳಿಯಲ್ಲಿ ತೊಡಗಿಸಿಕೊಂಡಿದ್ದ ವಕೀಲ ಚಂದ್ರು ಹೇಗೆ ಸಂವಿಧಾನವನ್ನು ಬಳಸಿಕೊಂಡು ಅವರಿಗೆ ನ್ಯಾಯ ಕೊಡಿಸುತ್ತಾನೆ ಎಂಬ ಬಗ್ಗೆ ಹೇಳುತ್ತದೆ. ಚಿತ್ರಕ್ಕೆ ಪ್ರೇಕ್ಷಕರಿಂದ ಅಗಾಧ ಪ್ರತಿಕ್ರಿಯೆಗಳು ಬಂದಿವೆ.

ಜೈ ಭೀಮ್‌ ನವೆಂಬರ್ 2 ರಂದು ಅಮೆಜಾನ್ ಪ್ರೈಮ್ ವಿಡಿಯೋದಲ್ಲಿ ನೇರವಾಗಿ ಬಿಡುಗಡೆಯಾಯಿತು. ಚಿತ್ರವನ್ನು ಸೂರ್ಯ ಮತ್ತು ಜ್ಯೋತಿಕಾ ಜಂಟಿಯಾಗಿ 2D ಎಂಟರ್ಟೈನ್ಮೆಂಟ್ ಬ್ಯಾನರ್ ಅಡಿಯಲ್ಲಿ ನಿರ್ಮಿಸಿದ್ದಾರೆ.

ಇದನ್ನೂ ಓದಿ: ಕೊಳೆತು ನಾರುತ್ತಿರುವ ವ್ಯವಸ್ಥೆಯ ಕಥೆ ಹೇಳುವ ‘ಜೈ ಭೀಮ್’…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...