Homeಅಂಕಣಗಳುಅವರವುರ ತಲೆ ಮ್ಯಾಲೆ ಅವರವುರೇ ಕಲ್ಲಾಕಂಡ್ರು ಸಾ!

ಅವರವುರ ತಲೆ ಮ್ಯಾಲೆ ಅವರವುರೇ ಕಲ್ಲಾಕಂಡ್ರು ಸಾ!

ಕಾಂಗ್ರೆಸ್ ತಲೆಮ್ಯಾಲೆ ಜೆಡಿಎಸ್ ಕಲ್ಲು ಬಿತ್ತು, ಜೆಡಿಎಸ್ ತಲೆಮ್ಯಾಲೆ ಕಾಂಗ್ರೆಸ್ ಕಲ್ಲು ಬಿತ್ತು. ಬಿಜೆಪಿ ನನ ಮಕ್ಕಳು ಸೇಪಾಗಿ ಡೆಲ್ಲಿಗೋದ್ರು

- Advertisement -
- Advertisement -

| ಯಾಹೂ |

ಬಿಜೆಪಿ ಗಳಿಸಿದ ಬಹುಮತಕ್ಕೆ ದೇಶದ ಬುದ್ದಿಜೀವಿಗಳು ಬೆಚ್ಚಿ ಬಿದ್ದಿದ್ದಾರೆ. ಸಾಮಾನ್ಯ ಪ್ರಜೆ ತನ್ನ ಕೆಲಸ ಮುಗಿಸಿದಂತೆ ಸಮಾಧಾನದಿಂದಿದ್ದಾನೆ. ಆದರೆ ಚೆಡ್ಡಿಗಳ ತುರಿಕೆ ಚೇಷ್ಟೆಯನ್ನು ಗ್ರಹಿಸಿದವರು ಈ ದೇಶಕ್ಕೆ ಏನು ಕಾದಿದೆಯೋ ಎಂದು ಹೆದರಿ ಹೋಗಿದ್ದಾರಲ್ಲಾ. ಈ ಸಮಯದಲ್ಲಿ ಬಹು ಗಂಭೀರವಾಗಿ ಚಿಂತಿಸುವುದರ ಬದಲು ನಮ್ಮ ವಾಟಿಸ್ಸೆಗೆ ಫೋನ್ ಮಾಡಿ ಮನಸ್ಸನ್ನು ಹಗುರ ಮಾಡಿಕೊಳ್ಳಬೇಕೆನಿಸಿತು. ಕೂಡಲೇ ಫೋನ್ ಮಾಡಲಾಗಿ ರಿಂಗಾಯ್ತು.
ರಿಂಗ್ ಟೋನ್: ಏನು ಮಾಡಿ ಏನು ಬಂತಣ್ಣ, ನಾವೆಲ್ಲ ಕೂಡಿ ಏನು ಮಾಡಿ ಏನು ಬಂತಣ್ಣಾ…..
“ಗುಡ್‍ಮಾರ್ನಿಂಗು ಸಾ.”
“ವಾಟಿಸ್ಸೆ ಎಲ್ಲಿದ್ದೀ.”
“ಇನ್ನೆಲ್ಲಿರನ ಸಾರ್, ಕತ್ತಿಗೆ ಬೇಜಾರಾದ್ರೆ ಹಾಳು ಗ್ವಾಡೆ ಅಂತ ಊರಲ್ಲಿದೀನಿ.”
“ಯಂಗಿದೆ ಊರು.”
“144 ಸೆಕ್ಷೆನ್ ಹಾಕಿದಂಗದೆ.”
“ಯಾಕೆ?”
“ಅಂಥಾ ಬಿಸ್ಲು ಸಾರ್, ಈ ಬಿಸ್ಲು ನೋಡಿ ಮುಂದ್ಲೊರಸಕೂ ಇರಬೇಕಾ ಅನ್ನಿಸಿದೆ.”
“ನಿನ್ನಂಥವನಿಗೆ ಅಂಗನ್ನಸಬಾರ್ದು.”
“ನನ್ನಂಥವುನು ಅಂದ್ರೇನು ಸಾ.”
“ಭಾರತವನ್ನೇ ಬದಲಾಯ್ಸೊ ಶ್ರೀಸಾಮಾನ್ಯ ಅಂತ.”
“ಶ್ರೀಸಾಮಾನ್ಯ ಇನ್ನ ಯಾರ ಮಾತ್ನೂ ಕೇಳದಿಲ್ಲ, ಯಾರಿಗೂ ಸಿಗದಿಲ್ಲ ಸಾ.”
“ಅದನ್ನ ರಾಜಕಾರಣಿಗಳು ಅರ್ಥ ಮಾಡಿಕಳ್ಳಿಲ್ಲವಲ್ಲ ಹೇಳು.”
“ಈಗದೆ ಆಯ್ತಾ ಅದೆ ಸಾ. ಈ ಸಿದ್ರಾಮಯ್ಯ ದ್ಯಾವೇಗೌಡ ಇವುರಿಗ್ಯಲ್ಲ ಈಗರ್ಥ ಆಯ್ತ ಅದೆ.”
“ಚುನಾವಣೆ ರಿಜಲ್ಟ್ ಬಗ್ಗೆ ಏನೇಳ್ತಿ.”
“ದೇಸದ ಕತೆ ಏನಾರ ಆಗ್ಲಿ. ನಮ್ಮ ಸುಮಲತ ಗೆದ್ಲಲ್ಲ ಸಾ.”
“ಸುಮಲತನ ಗೆಲುವ ಅಷ್ಟು ಸೀರಿಯಸ್ಸಾಗಿ ತಗಂಡಿದ್ಯಾ?”
“ಊ ಸಾ. ನಮ್ಮ ಅಳಿವು ಉಳಿವಿನ ಪ್ರಶ್ನೆ ಆಗಿತ್ತು.”
“ಅಷ್ಟ್ ಗಂಭೀರವಾಗಿತ್ತ.”
“ಅಲ್ವೆ ಮತ್ತೆ, ಅದೆಲ್ಲೊ ಬಾರಲ್ಲಿ ಕುತಗಂಡು ಚಿಲ್ಡ್ ಬೀರು ಕುಡೀತಿದ್ದ ಹುಡುಗನ್ನ ತಂದು ಮಂಡ್ಯಕ್ಕೆ ನಿಲ್ಸಿದ್ರಲ್ಲ. ಇವರಿಗೆ ಎಷ್ಟು ಧೈರ್ಯ ಇರಬೇಕು. ಮಂಡ್ಯ ಜಿಲ್ಲೇನ ಏನನ್ನಕಂಡಿದ್ರು ಸಾ.”
“ಸರಿಯಾದ ಉತ್ರ ಕೊಟ್ರಲ್ಲ ಬುಡಿ.”
“ಬುಡದಲ್ಲ ಸಾ. ದ್ಯಾವೇಗೌಡ್ರು ಅಷ್ಟು ಸುಲಭಕ್ಕೆ ಏನ್ನೂ ಬುಡದಿಲ್ಲ. ಆ ಹುಡುಗನ್ನ ಅಲ್ಲೇ ಇರು ಅಂದುಬುಡ್ತರೆ.”
“ಹಾಗಂತೀಯಾ.”
“ಇತಿಹಾಸ ನೋಡಿಲ್ವಾ ಸಾ. ದ್ಯಾವೇಗೌಡ್ರು ಚುನಾವಣೆಯ ಸೋಲು ಗೆಲುವಿಗೆ ಹೆದರಿದೋರಲ್ಲ. ನಿನ್ನ ಭಾಗಕ್ಕೆ ಮಂಡ್ಯ ಕೊಟ್ಟಿದೀವಿ, ನೀನಲ್ಲೇ ಇರು ಅಂದು ಬುಡ್ತರೆ. ಇದು ನೋಡಿದ್ರೆ ಹೈಲು ಪೈಲುಡುಗ ಮಂಡ್ಯ ಜಿಲ್ಲೆಯನ್ನೆ ಹುಚ್ಚಾಸ್ಪತ್ರೆ ಮಾಡಿಬುಡ್ತನೆ.”
“ಏನೇ ಆದ್ರು ಮಂಡ್ಯದ ಜನಗಳು ಸ್ವಾಭಿಮಾನಿಗಳು ಬುಡು.”
“ಅದು ಜಗತ್ತಿಗೇ ಗೊತ್ತಾಯ್ತು ಸಾ.”
“ಜಗತ್ತಿಗೇ ಗೊತ್ತಾಯ್ತಾ.”
“ಊ ಸಾ. ಅಂಬರೀಶ್‍ಗೆ ಪ್ರಪಂಚದಲ್ಯಲ್ಲ ಸ್ನೇಹಿತರಿದ್ರು, ಪರಿಚಯ ಮಾಡಿಕ್ಯಳದು, ಪಾರ್ಟಿ ಕೊಡದು, ಮುಂದ್ಲು ದೇಸುಕೆ ಹೋಯ್ತಾಯಿರದ. ಅಂಗೆ ದುಬಾಯಿ, ಕುವೈತ್, ಮಸ್ಕಟ್, ಅಮೇರಿಕದಲ್ಯಲ್ಲ ಪ್ರೆಂಡ್ಸಿದ್ರು. ಅವುರ್ಯಲ್ಲ ಮಂಡ್ಯದ ಜನ ಏನು ಮಾಡ್ತರೆ ಅಂತ ನೋಡ್ತಿದ್ರು.”
“ರಾಜ್ಯದ ಚುನಾವಣೆ ರಿಜಲ್ಟ್ ಬಗ್ಗೆ ಏನೇಳ್ತಿ.”
“ಹೇಳದೇನು ಸಾ. ಯಲ್ಲ ಮುಗಿತಲ್ಲ ಬುಡಿ.”
“ಮುಗೀತು ಅಂತೀಯಾ.”
“ಇನ್ನೇನು ಸಾ. ಬಿಜೆಪಿ ತಲೆಮ್ಯಾಲೆ ಕಲ್ಲಾಕಕ್ಕೆ ಇವುರಿಬ್ರೂ ಒಂದಾಗಿ ಸೈಜಗಲ್ಲ ಹೊತ್ತಗಂಡು ನಿಂತಿದ್ರು. ಅವುರಿಗೆ ಗೊತ್ತಿಲ್ಲದಂಗೆ ಅವುರವುರ ಮ್ಯಾಲೆ ಹಾಯ್ಕಂಡ್ರು ಸಾ.”
“ಏನಂದೆ.”
“ಕಾಂಗ್ರೆಸ್ ತಲೆಮ್ಯಾಲೆ ಜೆಡಿಎಸ್ ಕಲ್ಲು ಬಿತ್ತು, ಜೆಡಿಎಸ್ ತಲೆಮ್ಯಾಲೆ ಕಾಂಗ್ರೆಸ್ ಕಲ್ಲು ಬಿತ್ತು. ಬಿಜೆಪಿ ನನ ಮಕ್ಕಳು ಸೇಪಾಗಿ ಡೆಲ್ಲಿಗೋದ್ರು.”
“ಅವುರ ನಡುವೆ ಅಷ್ಟು ದ್ವೇಶ ಇತ್ತ.”
“ಇತ್ತು ಸಾ, ಸತತವಾಗಿ ಒಂದೊರ್ಸ ಜಗಳಾಡ್ಯವುರೆ, ಹರಿಯ ಮುರಿಯ ಜಗಳಾಡಿಕಂಡು ಚುನಾವಣೆ ಬಂದೇಟಿಗೆ ತ್ಯಕ್ಕೆ ಬಡಕಂಡು, ನಾವಿಬ್ರು ಒಂದು ಅಂತ ಜನಗಳೆದ್ರಿಗೆ ಹೋಗಿ ನಿಂತ್ರೆ ಜನ ನಗದಿಲವಾ.”
“ಇದೊಂತರ ವಳೇಟು ಅಂಗರೆ.”
“ಓಟು ಮಾಡದೇ ವಳೇಟು ಕೊಡಕ್ಕಲವೆ, ಆಗೊಂದು ಸತಿ ಮಂಡ್ಯದಲ್ಲಿ ಉಪ ಚುನಾವಣೆ ಬತ್ತು. ದಿಢೀರಂತ ಕುಮಾರಸ್ವಾಮಿನೂ ಎಡೂರಪ್ಪನೂ ಗಬುಕ್ಕಂತ ತಬ್ಬಿಕಂಡು ಮುತ್ತು ಕೊಟ್ರು. ಜನ ಪುಟ್ಟರಾಜನ್ನ ಸೋಲಿಸಿ ರಮ್ಯನ್ನ ಗೆಲ್ಲಿಸಿದ್ರು, ಗೊತ್ತ ಸಾ.”
“ಗೊತ್ತು. ಜನ ಅಕ್ರಮ ಸಮಂದ ಸಹಿಸಲ್ಲ ಅಲವೆ.”
“ಸಮಂದ ಮಾಡೋರೂ ದೊಡ್ಡ ಮನುಸರಾಗಿರಬೇಕು, ಉದ್ದೇಶ ವಳ್ಳೆದಿರಬೇಕು, ಅಂಗಿದ್ರೆ ಸಯಿಸಿಗತ್ತರೆ ಸಾ.”
“ಮೋದಿ ಈ ತರ ಗೆಲ್ಲದ ನಿರೀಕ್ಷೆ ಮಾಡಿದ್ಯಾ?.”
“ತಿರಗ ಬರಬವುದು ಅನ್ನಕಂಡಿದ್ದೆ.”
“ಹ್ಯಂಗೇ.”
” ಮನೇಲಿ ಕುತಗಂಡು ಟಿವಿ ನೋಡಿ ನೋಡಿ ಅಂಗಂದಿದ್ದ. ಟಿವಿಲಿರೋ ಹಾದರಕ್ಕುಟ್ಟಿದ ನನ್ನ ಮಕ್ಕಳು ದ್ಯಾವೇಗೌಡನ ಅಭಿಮಾನಿ ಸಿದ್ದೇಗೌಡನ್ನೇ ಬದ್ಲಾಸಿದ್ರು ಅಂದ್ರೆ ಇನ್ನೇನೇಳನಾ.”
“ಥೂತ್ತೇರಿ.”

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...