Homeಮುಖಪುಟಸಿಎಂ ಕೇಜ್ರಿವಾಲ್‌ಗೆ ಶೂಟ್‌ ಮಾಡುತ್ತೇನೆ ಎಂದು ಬೆದರಿಕೆ ಒಡ್ಡಿದ ನರಸಿಂಗಾನಂದ ಹಿಂಬಾಲಕ

ಸಿಎಂ ಕೇಜ್ರಿವಾಲ್‌ಗೆ ಶೂಟ್‌ ಮಾಡುತ್ತೇನೆ ಎಂದು ಬೆದರಿಕೆ ಒಡ್ಡಿದ ನರಸಿಂಗಾನಂದ ಹಿಂಬಾಲಕ

ಈತ ಮುಸ್ಲಿಂ ಮಹಿಳೆಯರ ಮೇಲೆ ಕೂಡಾ ಲೈಂಗಿಕ ಹಿಂಸಾಚಾರದ ಬೆದರಿಕೆಯನ್ನು ಒಡ್ಡಿದ್ದಾನೆ

- Advertisement -
- Advertisement -

ದೀಪಾವಳಿಯಂದು ಪಟಾಕಿ ನಿಷೇಧ ಮಾಡಿದ್ದಕ್ಕಾಗಿ ನವೆಂಬರ್ 4 ರಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಜೀವ ಬೆದರಿಕೆ ಹಾಕಲಾಗಿದೆ. ಹಿಂದೂ ಶೇರ್ ಬಾಯ್‌ ಎಂದು ಜನಪ್ರಿಯವಾಗಿರುವ ಬಲಪಂಥೀಯ ಯೂಟ್ಯೂಬರ್ ಸುರೇಶ್ ರಜಪೂತ್ ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಅರವಿಂದ್ ಕೇಜ್ರಿವಾಲ್ ಅವರನ್ನು ನಿಂದಿಸಿ ಶೂಟ್ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ಈತ ವಿವಾದಾತ್ಮಕ ಧಾರ್ಮಿಕ ಗುರು ಯತಿ ನರಸಿಂಗಾನಂದ ಅವರ ಹಿಂಬಾಲಕ ಎಂದು ದಿ ವೈರ್‌ ತನ್ನ ವರದಿಯಲ್ಲಿ ಹೇಳಿದೆ.

“ಪಾಕಿಸ್ತಾನದ ಎದುರು ಭಾರತ ಸೋತಾಗ ದೆಹಲಿಯಲ್ಲಿ ಪಟಾಕಿಗಳನ್ನು ಸುಡಲಾಯಿತು. ಆಗ ನಿಮ್ಮಗೆ ಯಾವುದೆ ಸಮಸ್ಯೆ ಇರಲಿಲ್ಲ. ನಿಮ್ಮ ಗಮನ ದೀಪಾವಳಿ ಮತ್ತು ಹೋಳಿಯ ಸಮಯದಲ್ಲಷ್ಟೇ ಬರುತ್ತದೆ. ಕೇಜ್ರಿವಾಲ್‌ ನಿಮ್ಮನ್ನು ಶೂಟ್ ಮಾಡಲಾಗುವುದು”  ಎಂದು ಬೆದರಿಕೆ ಹಾಕಿದ್ದಾನೆ.

ಜಬ್‌ ಪಾಕಿಸ್ತಾನ್‌ ಸೆ ಹಿಂದೂಸ್ತಾನ್‌ ಹರಾ ಥಾ, ತಬ್ ದಿಲ್ಲಿ ಮೆ ಪಟಾಕೆ ಚಲೇ ತೆ, ತಬ್ ತೇರಾ ಏಕ್‌ ಬಾಲ್‌ ಬಿ ನಾ ಉಕ್ಡಾ…ತೇರಾ ಗ್ಯಾನ್‌ ದಿವಾಲಿ ಔರ್‌ ಹೋಲಿ ಪರ್‌ ಹಿ ಬಾಹರ್‌ ಆತಾ ಹೆ. ಕೇಜ್ರಿವಾಲ್‌ ಪೀತಲ್‌ ಭರ್‌ ದೂಂಗಾ, ಪೀತಲ್‌

46 ನಿಮಿಷಗಳ ಈ ವಿಡಿಯೊವನ್ನು ಆತ ಶೀಘ್ರದಲ್ಲೇ ಡಿಲೀಟ್ ಮಾಡಿದ್ದಾನೆ. ವಿಡಿಯೊದಲ್ಲಿ ಹಿಂಸಾತ್ಮಕ ಲೈಂಗಿಕ ನಿಂದನೆಗಳು ಮತ್ತು ಮುಸ್ಲಿಮರಿಗೆ ಬೆದರಿಕೆಗಳನ್ನೂ ಹಾಕಲಾಗಿತ್ತು.

“ಯೇ ಕಟೀ ಲುಲ್ಲಿ ವಾಲಿ ಜಿತ್ನೆ ಭಿ ಆ ರಹೇ ಹೈ ನಾ, ಬೇಟಾ ಏಕ್ ಏಕ್ ಕರ್ಕೆ ಪೇಲ್ ದಿಯೆ ಜಾವೋಗೆ. ಜಾವೋ ತುಮ್ಹಾರಿ ಅಮ್ಮ ಬುಲಾ ರಹೀ ಹೈ ಅಪ್ನಿ ಅಮ್ಮಾ ಕೆ **** ****. ಅಪ್ನಿ ಬೆಹನ್ ಕಾ ರಿಷ್ಟ ಲೇಕರ್ ಆ ಜಾತೇ ಹೈಂ. ಶಾಹೀನ್ ಬಾಗ್ ಮೇ ಜಿತ್ನಾ ಭಿ ತುಮ್ಹಾರಿ ಮಾ ಬೆಹ್ನೋ ಕಾ ಧಂಧಾ ಕರ್ನಾ ಥಾ ಕರ್ ಚುಕೇ ಹೈ… ಸಾಲಿ ಜೈಲ್ ಜಾನೇ ಕೆ ಬಾದ್ ಭಿ ಪ್ರಗ್ನೆಂಟ್‌ ಹೋ ಗಯಿ. ತೊ ಕಾಟ್*** ತುಂ ನಿಕ್ಲೊ. ಮತ್ಲಾಬ್ ವೋ ಪ್ರಗ್ನೆಂಟ್‌ ಹೋ ಗಯಿ ಜಿಂಕಿ ಶಾದಿ ಭೀ ನಹೀ ಹುಯಿ” ಎಂದು ನಿಂದನೀಯವಾಗಿ ಮಾತನಾಡಿದ್ದಾನೆ ಎಂದು ದಿ ವೈರ್‌ ವರದಿ ಮಾಡಿದೆ. 

ಇದರ ನಂತರ ವಿಡಿಯೊದಲ್ಲಿ, ಸುರೇಶ್ ರಜಪೂತ್ ಮತ್ತು ರಾಹುಲ್ ಶರ್ಮಾ ಎಂಬವನ ಜೊತೆ ಸೇರಿ “ಯುಪಿ ಪೊಲೀಸರು ಹೇಗೆ ಮುಸ್ಲಿಂ ಮಹಿಳೆಯರಿಗೆ ಪಾಠ ಕಲಿಸಿದರು” ಎಂದು ವಿವರಿಸುತ್ತಾರೆ.

ಇದನ್ನೂ ಓದಿ: BJP ನಾಯಕ ಕಪಿಲ್ ಮಿಶ್ರಾ ಭಾಗವಹಿಸಿದ್ದ ಸಭೆಯಲ್ಲಿ ಮತ್ತೆ ‘ಗೋಲಿ ಮಾರೋ’ ಘೋಷಣೆ

ಇಡೀ ವೀಡಿಯೊದಲ್ಲಿ, ಮುಸ್ಲಿಂ ಪುರುಷರನ್ನು “ಪಿಂಪಕ್‌ಗಳು”, “ಪಂಕ್ಚರ್ ,ಮಕ್ಕಳು” ಮತ್ತು “ಜಿಹಾದಿಗಳು” ಎಂದು ಉಲ್ಲೇಖಿಸಲಾಗಿದೆ ಮತ್ತು ಲೈಂಗಿಕ ಹಿಂಸೆಯ ಮೂಲಕ ಬೆದರಿಕೆ ಹಾಕಲಾಗಿದೆ. ಇಷ್ಟೇ ಅಲ್ಲದೆ ಸುರೇಶ್‌ ರಾಜಪೂತ್‌ ತ್ರಿಪುರಾದಲ್ಲಿ ನಡೆದ ಮುಸ್ಲಿಂ ವಿರೋಧಿ ಹಿಂಸಾಚಾರವನ್ನು ಕೂಡಾ ಸಂಭ್ರಮಿಸಿದ್ದಾನೆ. “ನಿಜವಾದ ದೀಪಾವಳಿಯನ್ನು ತ್ರಿಪುರಾದಲ್ಲಿ ಆಚರಿಸಲಾಗಿದೆ. ದೀಪಾವಳಿ ಎಂದರೆ ಇದೇ. ತ್ರಿಪುರಾದಂತೆ ಎಲ್ಲಾ ಹಿಂದೂಗಳು ಎಚ್ಚೆತ್ತುಕೊಂಡರೆ, ನಿಮ್ಮ ಭವಿಷ್ಯ ಏನಾಗಬಹುದು ಎಂದು ಊಹಿಸಿ” ಎಂದು ಎಚ್ಚರಿಸಿದ್ದಾನೆ.

ಈ ವೀಡಿಯೊಗೆ ಪ್ರತಿಕ್ರಿಯಿಸಿದ ಜಾಮಿಯಾ ಮಿಲಿಯಾ ಇಸ್ಲಾಮಿಯಾದ ವಿದ್ಯಾರ್ಥಿನಿ, ಸಿಎಎ ವಿರೋಧಿ ಹೋರಾಟಗಾರ್ತಿ ಸಫೂರಾ ಜರ್ಗರ್, “ನಾನು ಆನ್‌ಲೈನ್‌ಗೆ ಬೆದರಿಕೆಗಳಿಗೆ ನಾನು ಬೆದರುವುದಿಲ್ಲ. ಆದರೆ ನನಗೆ ಕೋಪ ಉಂಟುಮಾಡುವುದು ಇಂತವರಿಗೆ ಶಿಕ್ಷೆ ಆಗುವುದಿಲ್ಲ ಎಂಬುವುದಾಗಿದೆ. ಭಾರತದಲ್ಲಿ ಮುಸ್ಲಿಂ ಪುರುಷರ ಹತ್ಯೆಗಳನ್ನು ಸಾಮಾನ್ಯಗೊಳಿಸಿದ ರೀತಿಯಲ್ಲಿಯೇ ಅವರು ಮುಸ್ಲಿಂ ಮಹಿಳೆಯರ ವಿರುದ್ಧದ ಹಿಂಸಾಚಾರವನ್ನು ಸಾಮಾನ್ಯಗೊಳಿಸಲು ಒಂದು ನೆಲೆಗಟ್ಟನ್ನು ರಚಿಸುತ್ತಿದ್ದಾರೆ ಎಂಬುದನ್ನು ನಾವು ಮುಖ್ಯವಾಗಿ ಗಮನಿಸಬೇಕು” ಎಂದು ಹೇಳಿದ್ದಾರೆ. 

ಸುದ್ದಿ ಮಾಧ್ಯಮ ಸುರೇಶ್‌ ರಜಪೂತ್‌ ವಿವಾದಾತ್ಮಕ ಧಾರ್ಮಿಕ ಗುರು ಯತಿ ನರಸಿಂಗಾನಂದ ಅವರ ಹಿಂಬಾಲಕ ಎಂದು ತನ್ನ ವರದಿಯಲ್ಲಿ ಹೇಳಿದೆ. ಯತಿ ನರಸಿಂಗಾನಂದ ಅವರ ಹಿಂಬಾಲಕರು ಹಲವಾರು ಜನರು ಇದೇ ರೀತಿಯ ಬೆದರಿಕೆಗಳನ್ನು ಹಾಕಿರುವುದನ್ನು ದಿ ವೈರ್‌ ಪಟ್ಟಿ ಮಾಡಿದೆ. ಅದನ್ನು ಇಲ್ಲಿ ಕ್ಲಿಕ್ ಮಾಡಿ ನೋಡಬಹುದು.

ಇದನ್ನೂ ಓದಿ: BJP ನಾಯಕನನ್ನು ವಿರೋಧಿಸುವವರ ಕಣ್ಣು ಕಿತ್ತು, ಕೈಗಳನ್ನು ಕತ್ತರಿಸಲಾಗುವುದು: ಹರಿಯಾಣ ಸಂಸದ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...