Homeಮುಖಪುಟಸಿಎಂ ಕೇಜ್ರಿವಾಲ್‌ಗೆ ಶೂಟ್‌ ಮಾಡುತ್ತೇನೆ ಎಂದು ಬೆದರಿಕೆ ಒಡ್ಡಿದ ನರಸಿಂಗಾನಂದ ಹಿಂಬಾಲಕ

ಸಿಎಂ ಕೇಜ್ರಿವಾಲ್‌ಗೆ ಶೂಟ್‌ ಮಾಡುತ್ತೇನೆ ಎಂದು ಬೆದರಿಕೆ ಒಡ್ಡಿದ ನರಸಿಂಗಾನಂದ ಹಿಂಬಾಲಕ

ಈತ ಮುಸ್ಲಿಂ ಮಹಿಳೆಯರ ಮೇಲೆ ಕೂಡಾ ಲೈಂಗಿಕ ಹಿಂಸಾಚಾರದ ಬೆದರಿಕೆಯನ್ನು ಒಡ್ಡಿದ್ದಾನೆ

- Advertisement -
- Advertisement -

ದೀಪಾವಳಿಯಂದು ಪಟಾಕಿ ನಿಷೇಧ ಮಾಡಿದ್ದಕ್ಕಾಗಿ ನವೆಂಬರ್ 4 ರಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಜೀವ ಬೆದರಿಕೆ ಹಾಕಲಾಗಿದೆ. ಹಿಂದೂ ಶೇರ್ ಬಾಯ್‌ ಎಂದು ಜನಪ್ರಿಯವಾಗಿರುವ ಬಲಪಂಥೀಯ ಯೂಟ್ಯೂಬರ್ ಸುರೇಶ್ ರಜಪೂತ್ ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಅರವಿಂದ್ ಕೇಜ್ರಿವಾಲ್ ಅವರನ್ನು ನಿಂದಿಸಿ ಶೂಟ್ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ಈತ ವಿವಾದಾತ್ಮಕ ಧಾರ್ಮಿಕ ಗುರು ಯತಿ ನರಸಿಂಗಾನಂದ ಅವರ ಹಿಂಬಾಲಕ ಎಂದು ದಿ ವೈರ್‌ ತನ್ನ ವರದಿಯಲ್ಲಿ ಹೇಳಿದೆ.

“ಪಾಕಿಸ್ತಾನದ ಎದುರು ಭಾರತ ಸೋತಾಗ ದೆಹಲಿಯಲ್ಲಿ ಪಟಾಕಿಗಳನ್ನು ಸುಡಲಾಯಿತು. ಆಗ ನಿಮ್ಮಗೆ ಯಾವುದೆ ಸಮಸ್ಯೆ ಇರಲಿಲ್ಲ. ನಿಮ್ಮ ಗಮನ ದೀಪಾವಳಿ ಮತ್ತು ಹೋಳಿಯ ಸಮಯದಲ್ಲಷ್ಟೇ ಬರುತ್ತದೆ. ಕೇಜ್ರಿವಾಲ್‌ ನಿಮ್ಮನ್ನು ಶೂಟ್ ಮಾಡಲಾಗುವುದು”  ಎಂದು ಬೆದರಿಕೆ ಹಾಕಿದ್ದಾನೆ.

ಜಬ್‌ ಪಾಕಿಸ್ತಾನ್‌ ಸೆ ಹಿಂದೂಸ್ತಾನ್‌ ಹರಾ ಥಾ, ತಬ್ ದಿಲ್ಲಿ ಮೆ ಪಟಾಕೆ ಚಲೇ ತೆ, ತಬ್ ತೇರಾ ಏಕ್‌ ಬಾಲ್‌ ಬಿ ನಾ ಉಕ್ಡಾ…ತೇರಾ ಗ್ಯಾನ್‌ ದಿವಾಲಿ ಔರ್‌ ಹೋಲಿ ಪರ್‌ ಹಿ ಬಾಹರ್‌ ಆತಾ ಹೆ. ಕೇಜ್ರಿವಾಲ್‌ ಪೀತಲ್‌ ಭರ್‌ ದೂಂಗಾ, ಪೀತಲ್‌

46 ನಿಮಿಷಗಳ ಈ ವಿಡಿಯೊವನ್ನು ಆತ ಶೀಘ್ರದಲ್ಲೇ ಡಿಲೀಟ್ ಮಾಡಿದ್ದಾನೆ. ವಿಡಿಯೊದಲ್ಲಿ ಹಿಂಸಾತ್ಮಕ ಲೈಂಗಿಕ ನಿಂದನೆಗಳು ಮತ್ತು ಮುಸ್ಲಿಮರಿಗೆ ಬೆದರಿಕೆಗಳನ್ನೂ ಹಾಕಲಾಗಿತ್ತು.

“ಯೇ ಕಟೀ ಲುಲ್ಲಿ ವಾಲಿ ಜಿತ್ನೆ ಭಿ ಆ ರಹೇ ಹೈ ನಾ, ಬೇಟಾ ಏಕ್ ಏಕ್ ಕರ್ಕೆ ಪೇಲ್ ದಿಯೆ ಜಾವೋಗೆ. ಜಾವೋ ತುಮ್ಹಾರಿ ಅಮ್ಮ ಬುಲಾ ರಹೀ ಹೈ ಅಪ್ನಿ ಅಮ್ಮಾ ಕೆ **** ****. ಅಪ್ನಿ ಬೆಹನ್ ಕಾ ರಿಷ್ಟ ಲೇಕರ್ ಆ ಜಾತೇ ಹೈಂ. ಶಾಹೀನ್ ಬಾಗ್ ಮೇ ಜಿತ್ನಾ ಭಿ ತುಮ್ಹಾರಿ ಮಾ ಬೆಹ್ನೋ ಕಾ ಧಂಧಾ ಕರ್ನಾ ಥಾ ಕರ್ ಚುಕೇ ಹೈ… ಸಾಲಿ ಜೈಲ್ ಜಾನೇ ಕೆ ಬಾದ್ ಭಿ ಪ್ರಗ್ನೆಂಟ್‌ ಹೋ ಗಯಿ. ತೊ ಕಾಟ್*** ತುಂ ನಿಕ್ಲೊ. ಮತ್ಲಾಬ್ ವೋ ಪ್ರಗ್ನೆಂಟ್‌ ಹೋ ಗಯಿ ಜಿಂಕಿ ಶಾದಿ ಭೀ ನಹೀ ಹುಯಿ” ಎಂದು ನಿಂದನೀಯವಾಗಿ ಮಾತನಾಡಿದ್ದಾನೆ ಎಂದು ದಿ ವೈರ್‌ ವರದಿ ಮಾಡಿದೆ. 

ಇದರ ನಂತರ ವಿಡಿಯೊದಲ್ಲಿ, ಸುರೇಶ್ ರಜಪೂತ್ ಮತ್ತು ರಾಹುಲ್ ಶರ್ಮಾ ಎಂಬವನ ಜೊತೆ ಸೇರಿ “ಯುಪಿ ಪೊಲೀಸರು ಹೇಗೆ ಮುಸ್ಲಿಂ ಮಹಿಳೆಯರಿಗೆ ಪಾಠ ಕಲಿಸಿದರು” ಎಂದು ವಿವರಿಸುತ್ತಾರೆ.

ಇದನ್ನೂ ಓದಿ: BJP ನಾಯಕ ಕಪಿಲ್ ಮಿಶ್ರಾ ಭಾಗವಹಿಸಿದ್ದ ಸಭೆಯಲ್ಲಿ ಮತ್ತೆ ‘ಗೋಲಿ ಮಾರೋ’ ಘೋಷಣೆ

ಇಡೀ ವೀಡಿಯೊದಲ್ಲಿ, ಮುಸ್ಲಿಂ ಪುರುಷರನ್ನು “ಪಿಂಪಕ್‌ಗಳು”, “ಪಂಕ್ಚರ್ ,ಮಕ್ಕಳು” ಮತ್ತು “ಜಿಹಾದಿಗಳು” ಎಂದು ಉಲ್ಲೇಖಿಸಲಾಗಿದೆ ಮತ್ತು ಲೈಂಗಿಕ ಹಿಂಸೆಯ ಮೂಲಕ ಬೆದರಿಕೆ ಹಾಕಲಾಗಿದೆ. ಇಷ್ಟೇ ಅಲ್ಲದೆ ಸುರೇಶ್‌ ರಾಜಪೂತ್‌ ತ್ರಿಪುರಾದಲ್ಲಿ ನಡೆದ ಮುಸ್ಲಿಂ ವಿರೋಧಿ ಹಿಂಸಾಚಾರವನ್ನು ಕೂಡಾ ಸಂಭ್ರಮಿಸಿದ್ದಾನೆ. “ನಿಜವಾದ ದೀಪಾವಳಿಯನ್ನು ತ್ರಿಪುರಾದಲ್ಲಿ ಆಚರಿಸಲಾಗಿದೆ. ದೀಪಾವಳಿ ಎಂದರೆ ಇದೇ. ತ್ರಿಪುರಾದಂತೆ ಎಲ್ಲಾ ಹಿಂದೂಗಳು ಎಚ್ಚೆತ್ತುಕೊಂಡರೆ, ನಿಮ್ಮ ಭವಿಷ್ಯ ಏನಾಗಬಹುದು ಎಂದು ಊಹಿಸಿ” ಎಂದು ಎಚ್ಚರಿಸಿದ್ದಾನೆ.

ಈ ವೀಡಿಯೊಗೆ ಪ್ರತಿಕ್ರಿಯಿಸಿದ ಜಾಮಿಯಾ ಮಿಲಿಯಾ ಇಸ್ಲಾಮಿಯಾದ ವಿದ್ಯಾರ್ಥಿನಿ, ಸಿಎಎ ವಿರೋಧಿ ಹೋರಾಟಗಾರ್ತಿ ಸಫೂರಾ ಜರ್ಗರ್, “ನಾನು ಆನ್‌ಲೈನ್‌ಗೆ ಬೆದರಿಕೆಗಳಿಗೆ ನಾನು ಬೆದರುವುದಿಲ್ಲ. ಆದರೆ ನನಗೆ ಕೋಪ ಉಂಟುಮಾಡುವುದು ಇಂತವರಿಗೆ ಶಿಕ್ಷೆ ಆಗುವುದಿಲ್ಲ ಎಂಬುವುದಾಗಿದೆ. ಭಾರತದಲ್ಲಿ ಮುಸ್ಲಿಂ ಪುರುಷರ ಹತ್ಯೆಗಳನ್ನು ಸಾಮಾನ್ಯಗೊಳಿಸಿದ ರೀತಿಯಲ್ಲಿಯೇ ಅವರು ಮುಸ್ಲಿಂ ಮಹಿಳೆಯರ ವಿರುದ್ಧದ ಹಿಂಸಾಚಾರವನ್ನು ಸಾಮಾನ್ಯಗೊಳಿಸಲು ಒಂದು ನೆಲೆಗಟ್ಟನ್ನು ರಚಿಸುತ್ತಿದ್ದಾರೆ ಎಂಬುದನ್ನು ನಾವು ಮುಖ್ಯವಾಗಿ ಗಮನಿಸಬೇಕು” ಎಂದು ಹೇಳಿದ್ದಾರೆ. 

ಸುದ್ದಿ ಮಾಧ್ಯಮ ಸುರೇಶ್‌ ರಜಪೂತ್‌ ವಿವಾದಾತ್ಮಕ ಧಾರ್ಮಿಕ ಗುರು ಯತಿ ನರಸಿಂಗಾನಂದ ಅವರ ಹಿಂಬಾಲಕ ಎಂದು ತನ್ನ ವರದಿಯಲ್ಲಿ ಹೇಳಿದೆ. ಯತಿ ನರಸಿಂಗಾನಂದ ಅವರ ಹಿಂಬಾಲಕರು ಹಲವಾರು ಜನರು ಇದೇ ರೀತಿಯ ಬೆದರಿಕೆಗಳನ್ನು ಹಾಕಿರುವುದನ್ನು ದಿ ವೈರ್‌ ಪಟ್ಟಿ ಮಾಡಿದೆ. ಅದನ್ನು ಇಲ್ಲಿ ಕ್ಲಿಕ್ ಮಾಡಿ ನೋಡಬಹುದು.

ಇದನ್ನೂ ಓದಿ: BJP ನಾಯಕನನ್ನು ವಿರೋಧಿಸುವವರ ಕಣ್ಣು ಕಿತ್ತು, ಕೈಗಳನ್ನು ಕತ್ತರಿಸಲಾಗುವುದು: ಹರಿಯಾಣ ಸಂಸದ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...