Homeಮುಖಪುಟಸಿಎಂ ಕೇಜ್ರಿವಾಲ್‌ಗೆ ಶೂಟ್‌ ಮಾಡುತ್ತೇನೆ ಎಂದು ಬೆದರಿಕೆ ಒಡ್ಡಿದ ನರಸಿಂಗಾನಂದ ಹಿಂಬಾಲಕ

ಸಿಎಂ ಕೇಜ್ರಿವಾಲ್‌ಗೆ ಶೂಟ್‌ ಮಾಡುತ್ತೇನೆ ಎಂದು ಬೆದರಿಕೆ ಒಡ್ಡಿದ ನರಸಿಂಗಾನಂದ ಹಿಂಬಾಲಕ

ಈತ ಮುಸ್ಲಿಂ ಮಹಿಳೆಯರ ಮೇಲೆ ಕೂಡಾ ಲೈಂಗಿಕ ಹಿಂಸಾಚಾರದ ಬೆದರಿಕೆಯನ್ನು ಒಡ್ಡಿದ್ದಾನೆ

- Advertisement -
- Advertisement -

ದೀಪಾವಳಿಯಂದು ಪಟಾಕಿ ನಿಷೇಧ ಮಾಡಿದ್ದಕ್ಕಾಗಿ ನವೆಂಬರ್ 4 ರಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಜೀವ ಬೆದರಿಕೆ ಹಾಕಲಾಗಿದೆ. ಹಿಂದೂ ಶೇರ್ ಬಾಯ್‌ ಎಂದು ಜನಪ್ರಿಯವಾಗಿರುವ ಬಲಪಂಥೀಯ ಯೂಟ್ಯೂಬರ್ ಸುರೇಶ್ ರಜಪೂತ್ ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಅರವಿಂದ್ ಕೇಜ್ರಿವಾಲ್ ಅವರನ್ನು ನಿಂದಿಸಿ ಶೂಟ್ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ಈತ ವಿವಾದಾತ್ಮಕ ಧಾರ್ಮಿಕ ಗುರು ಯತಿ ನರಸಿಂಗಾನಂದ ಅವರ ಹಿಂಬಾಲಕ ಎಂದು ದಿ ವೈರ್‌ ತನ್ನ ವರದಿಯಲ್ಲಿ ಹೇಳಿದೆ.

“ಪಾಕಿಸ್ತಾನದ ಎದುರು ಭಾರತ ಸೋತಾಗ ದೆಹಲಿಯಲ್ಲಿ ಪಟಾಕಿಗಳನ್ನು ಸುಡಲಾಯಿತು. ಆಗ ನಿಮ್ಮಗೆ ಯಾವುದೆ ಸಮಸ್ಯೆ ಇರಲಿಲ್ಲ. ನಿಮ್ಮ ಗಮನ ದೀಪಾವಳಿ ಮತ್ತು ಹೋಳಿಯ ಸಮಯದಲ್ಲಷ್ಟೇ ಬರುತ್ತದೆ. ಕೇಜ್ರಿವಾಲ್‌ ನಿಮ್ಮನ್ನು ಶೂಟ್ ಮಾಡಲಾಗುವುದು”  ಎಂದು ಬೆದರಿಕೆ ಹಾಕಿದ್ದಾನೆ.

ಜಬ್‌ ಪಾಕಿಸ್ತಾನ್‌ ಸೆ ಹಿಂದೂಸ್ತಾನ್‌ ಹರಾ ಥಾ, ತಬ್ ದಿಲ್ಲಿ ಮೆ ಪಟಾಕೆ ಚಲೇ ತೆ, ತಬ್ ತೇರಾ ಏಕ್‌ ಬಾಲ್‌ ಬಿ ನಾ ಉಕ್ಡಾ…ತೇರಾ ಗ್ಯಾನ್‌ ದಿವಾಲಿ ಔರ್‌ ಹೋಲಿ ಪರ್‌ ಹಿ ಬಾಹರ್‌ ಆತಾ ಹೆ. ಕೇಜ್ರಿವಾಲ್‌ ಪೀತಲ್‌ ಭರ್‌ ದೂಂಗಾ, ಪೀತಲ್‌

46 ನಿಮಿಷಗಳ ಈ ವಿಡಿಯೊವನ್ನು ಆತ ಶೀಘ್ರದಲ್ಲೇ ಡಿಲೀಟ್ ಮಾಡಿದ್ದಾನೆ. ವಿಡಿಯೊದಲ್ಲಿ ಹಿಂಸಾತ್ಮಕ ಲೈಂಗಿಕ ನಿಂದನೆಗಳು ಮತ್ತು ಮುಸ್ಲಿಮರಿಗೆ ಬೆದರಿಕೆಗಳನ್ನೂ ಹಾಕಲಾಗಿತ್ತು.

“ಯೇ ಕಟೀ ಲುಲ್ಲಿ ವಾಲಿ ಜಿತ್ನೆ ಭಿ ಆ ರಹೇ ಹೈ ನಾ, ಬೇಟಾ ಏಕ್ ಏಕ್ ಕರ್ಕೆ ಪೇಲ್ ದಿಯೆ ಜಾವೋಗೆ. ಜಾವೋ ತುಮ್ಹಾರಿ ಅಮ್ಮ ಬುಲಾ ರಹೀ ಹೈ ಅಪ್ನಿ ಅಮ್ಮಾ ಕೆ **** ****. ಅಪ್ನಿ ಬೆಹನ್ ಕಾ ರಿಷ್ಟ ಲೇಕರ್ ಆ ಜಾತೇ ಹೈಂ. ಶಾಹೀನ್ ಬಾಗ್ ಮೇ ಜಿತ್ನಾ ಭಿ ತುಮ್ಹಾರಿ ಮಾ ಬೆಹ್ನೋ ಕಾ ಧಂಧಾ ಕರ್ನಾ ಥಾ ಕರ್ ಚುಕೇ ಹೈ… ಸಾಲಿ ಜೈಲ್ ಜಾನೇ ಕೆ ಬಾದ್ ಭಿ ಪ್ರಗ್ನೆಂಟ್‌ ಹೋ ಗಯಿ. ತೊ ಕಾಟ್*** ತುಂ ನಿಕ್ಲೊ. ಮತ್ಲಾಬ್ ವೋ ಪ್ರಗ್ನೆಂಟ್‌ ಹೋ ಗಯಿ ಜಿಂಕಿ ಶಾದಿ ಭೀ ನಹೀ ಹುಯಿ” ಎಂದು ನಿಂದನೀಯವಾಗಿ ಮಾತನಾಡಿದ್ದಾನೆ ಎಂದು ದಿ ವೈರ್‌ ವರದಿ ಮಾಡಿದೆ. 

ಇದರ ನಂತರ ವಿಡಿಯೊದಲ್ಲಿ, ಸುರೇಶ್ ರಜಪೂತ್ ಮತ್ತು ರಾಹುಲ್ ಶರ್ಮಾ ಎಂಬವನ ಜೊತೆ ಸೇರಿ “ಯುಪಿ ಪೊಲೀಸರು ಹೇಗೆ ಮುಸ್ಲಿಂ ಮಹಿಳೆಯರಿಗೆ ಪಾಠ ಕಲಿಸಿದರು” ಎಂದು ವಿವರಿಸುತ್ತಾರೆ.

ಇದನ್ನೂ ಓದಿ: BJP ನಾಯಕ ಕಪಿಲ್ ಮಿಶ್ರಾ ಭಾಗವಹಿಸಿದ್ದ ಸಭೆಯಲ್ಲಿ ಮತ್ತೆ ‘ಗೋಲಿ ಮಾರೋ’ ಘೋಷಣೆ

ಇಡೀ ವೀಡಿಯೊದಲ್ಲಿ, ಮುಸ್ಲಿಂ ಪುರುಷರನ್ನು “ಪಿಂಪಕ್‌ಗಳು”, “ಪಂಕ್ಚರ್ ,ಮಕ್ಕಳು” ಮತ್ತು “ಜಿಹಾದಿಗಳು” ಎಂದು ಉಲ್ಲೇಖಿಸಲಾಗಿದೆ ಮತ್ತು ಲೈಂಗಿಕ ಹಿಂಸೆಯ ಮೂಲಕ ಬೆದರಿಕೆ ಹಾಕಲಾಗಿದೆ. ಇಷ್ಟೇ ಅಲ್ಲದೆ ಸುರೇಶ್‌ ರಾಜಪೂತ್‌ ತ್ರಿಪುರಾದಲ್ಲಿ ನಡೆದ ಮುಸ್ಲಿಂ ವಿರೋಧಿ ಹಿಂಸಾಚಾರವನ್ನು ಕೂಡಾ ಸಂಭ್ರಮಿಸಿದ್ದಾನೆ. “ನಿಜವಾದ ದೀಪಾವಳಿಯನ್ನು ತ್ರಿಪುರಾದಲ್ಲಿ ಆಚರಿಸಲಾಗಿದೆ. ದೀಪಾವಳಿ ಎಂದರೆ ಇದೇ. ತ್ರಿಪುರಾದಂತೆ ಎಲ್ಲಾ ಹಿಂದೂಗಳು ಎಚ್ಚೆತ್ತುಕೊಂಡರೆ, ನಿಮ್ಮ ಭವಿಷ್ಯ ಏನಾಗಬಹುದು ಎಂದು ಊಹಿಸಿ” ಎಂದು ಎಚ್ಚರಿಸಿದ್ದಾನೆ.

ಈ ವೀಡಿಯೊಗೆ ಪ್ರತಿಕ್ರಿಯಿಸಿದ ಜಾಮಿಯಾ ಮಿಲಿಯಾ ಇಸ್ಲಾಮಿಯಾದ ವಿದ್ಯಾರ್ಥಿನಿ, ಸಿಎಎ ವಿರೋಧಿ ಹೋರಾಟಗಾರ್ತಿ ಸಫೂರಾ ಜರ್ಗರ್, “ನಾನು ಆನ್‌ಲೈನ್‌ಗೆ ಬೆದರಿಕೆಗಳಿಗೆ ನಾನು ಬೆದರುವುದಿಲ್ಲ. ಆದರೆ ನನಗೆ ಕೋಪ ಉಂಟುಮಾಡುವುದು ಇಂತವರಿಗೆ ಶಿಕ್ಷೆ ಆಗುವುದಿಲ್ಲ ಎಂಬುವುದಾಗಿದೆ. ಭಾರತದಲ್ಲಿ ಮುಸ್ಲಿಂ ಪುರುಷರ ಹತ್ಯೆಗಳನ್ನು ಸಾಮಾನ್ಯಗೊಳಿಸಿದ ರೀತಿಯಲ್ಲಿಯೇ ಅವರು ಮುಸ್ಲಿಂ ಮಹಿಳೆಯರ ವಿರುದ್ಧದ ಹಿಂಸಾಚಾರವನ್ನು ಸಾಮಾನ್ಯಗೊಳಿಸಲು ಒಂದು ನೆಲೆಗಟ್ಟನ್ನು ರಚಿಸುತ್ತಿದ್ದಾರೆ ಎಂಬುದನ್ನು ನಾವು ಮುಖ್ಯವಾಗಿ ಗಮನಿಸಬೇಕು” ಎಂದು ಹೇಳಿದ್ದಾರೆ. 

ಸುದ್ದಿ ಮಾಧ್ಯಮ ಸುರೇಶ್‌ ರಜಪೂತ್‌ ವಿವಾದಾತ್ಮಕ ಧಾರ್ಮಿಕ ಗುರು ಯತಿ ನರಸಿಂಗಾನಂದ ಅವರ ಹಿಂಬಾಲಕ ಎಂದು ತನ್ನ ವರದಿಯಲ್ಲಿ ಹೇಳಿದೆ. ಯತಿ ನರಸಿಂಗಾನಂದ ಅವರ ಹಿಂಬಾಲಕರು ಹಲವಾರು ಜನರು ಇದೇ ರೀತಿಯ ಬೆದರಿಕೆಗಳನ್ನು ಹಾಕಿರುವುದನ್ನು ದಿ ವೈರ್‌ ಪಟ್ಟಿ ಮಾಡಿದೆ. ಅದನ್ನು ಇಲ್ಲಿ ಕ್ಲಿಕ್ ಮಾಡಿ ನೋಡಬಹುದು.

ಇದನ್ನೂ ಓದಿ: BJP ನಾಯಕನನ್ನು ವಿರೋಧಿಸುವವರ ಕಣ್ಣು ಕಿತ್ತು, ಕೈಗಳನ್ನು ಕತ್ತರಿಸಲಾಗುವುದು: ಹರಿಯಾಣ ಸಂಸದ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...