Homeಮುಖಪುಟಸಿಎಂ ಕೇಜ್ರಿವಾಲ್‌ಗೆ ಶೂಟ್‌ ಮಾಡುತ್ತೇನೆ ಎಂದು ಬೆದರಿಕೆ ಒಡ್ಡಿದ ನರಸಿಂಗಾನಂದ ಹಿಂಬಾಲಕ

ಸಿಎಂ ಕೇಜ್ರಿವಾಲ್‌ಗೆ ಶೂಟ್‌ ಮಾಡುತ್ತೇನೆ ಎಂದು ಬೆದರಿಕೆ ಒಡ್ಡಿದ ನರಸಿಂಗಾನಂದ ಹಿಂಬಾಲಕ

ಈತ ಮುಸ್ಲಿಂ ಮಹಿಳೆಯರ ಮೇಲೆ ಕೂಡಾ ಲೈಂಗಿಕ ಹಿಂಸಾಚಾರದ ಬೆದರಿಕೆಯನ್ನು ಒಡ್ಡಿದ್ದಾನೆ

- Advertisement -
- Advertisement -

ದೀಪಾವಳಿಯಂದು ಪಟಾಕಿ ನಿಷೇಧ ಮಾಡಿದ್ದಕ್ಕಾಗಿ ನವೆಂಬರ್ 4 ರಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಜೀವ ಬೆದರಿಕೆ ಹಾಕಲಾಗಿದೆ. ಹಿಂದೂ ಶೇರ್ ಬಾಯ್‌ ಎಂದು ಜನಪ್ರಿಯವಾಗಿರುವ ಬಲಪಂಥೀಯ ಯೂಟ್ಯೂಬರ್ ಸುರೇಶ್ ರಜಪೂತ್ ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಅರವಿಂದ್ ಕೇಜ್ರಿವಾಲ್ ಅವರನ್ನು ನಿಂದಿಸಿ ಶೂಟ್ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ಈತ ವಿವಾದಾತ್ಮಕ ಧಾರ್ಮಿಕ ಗುರು ಯತಿ ನರಸಿಂಗಾನಂದ ಅವರ ಹಿಂಬಾಲಕ ಎಂದು ದಿ ವೈರ್‌ ತನ್ನ ವರದಿಯಲ್ಲಿ ಹೇಳಿದೆ.

“ಪಾಕಿಸ್ತಾನದ ಎದುರು ಭಾರತ ಸೋತಾಗ ದೆಹಲಿಯಲ್ಲಿ ಪಟಾಕಿಗಳನ್ನು ಸುಡಲಾಯಿತು. ಆಗ ನಿಮ್ಮಗೆ ಯಾವುದೆ ಸಮಸ್ಯೆ ಇರಲಿಲ್ಲ. ನಿಮ್ಮ ಗಮನ ದೀಪಾವಳಿ ಮತ್ತು ಹೋಳಿಯ ಸಮಯದಲ್ಲಷ್ಟೇ ಬರುತ್ತದೆ. ಕೇಜ್ರಿವಾಲ್‌ ನಿಮ್ಮನ್ನು ಶೂಟ್ ಮಾಡಲಾಗುವುದು”  ಎಂದು ಬೆದರಿಕೆ ಹಾಕಿದ್ದಾನೆ.

ಜಬ್‌ ಪಾಕಿಸ್ತಾನ್‌ ಸೆ ಹಿಂದೂಸ್ತಾನ್‌ ಹರಾ ಥಾ, ತಬ್ ದಿಲ್ಲಿ ಮೆ ಪಟಾಕೆ ಚಲೇ ತೆ, ತಬ್ ತೇರಾ ಏಕ್‌ ಬಾಲ್‌ ಬಿ ನಾ ಉಕ್ಡಾ…ತೇರಾ ಗ್ಯಾನ್‌ ದಿವಾಲಿ ಔರ್‌ ಹೋಲಿ ಪರ್‌ ಹಿ ಬಾಹರ್‌ ಆತಾ ಹೆ. ಕೇಜ್ರಿವಾಲ್‌ ಪೀತಲ್‌ ಭರ್‌ ದೂಂಗಾ, ಪೀತಲ್‌

46 ನಿಮಿಷಗಳ ಈ ವಿಡಿಯೊವನ್ನು ಆತ ಶೀಘ್ರದಲ್ಲೇ ಡಿಲೀಟ್ ಮಾಡಿದ್ದಾನೆ. ವಿಡಿಯೊದಲ್ಲಿ ಹಿಂಸಾತ್ಮಕ ಲೈಂಗಿಕ ನಿಂದನೆಗಳು ಮತ್ತು ಮುಸ್ಲಿಮರಿಗೆ ಬೆದರಿಕೆಗಳನ್ನೂ ಹಾಕಲಾಗಿತ್ತು.

“ಯೇ ಕಟೀ ಲುಲ್ಲಿ ವಾಲಿ ಜಿತ್ನೆ ಭಿ ಆ ರಹೇ ಹೈ ನಾ, ಬೇಟಾ ಏಕ್ ಏಕ್ ಕರ್ಕೆ ಪೇಲ್ ದಿಯೆ ಜಾವೋಗೆ. ಜಾವೋ ತುಮ್ಹಾರಿ ಅಮ್ಮ ಬುಲಾ ರಹೀ ಹೈ ಅಪ್ನಿ ಅಮ್ಮಾ ಕೆ **** ****. ಅಪ್ನಿ ಬೆಹನ್ ಕಾ ರಿಷ್ಟ ಲೇಕರ್ ಆ ಜಾತೇ ಹೈಂ. ಶಾಹೀನ್ ಬಾಗ್ ಮೇ ಜಿತ್ನಾ ಭಿ ತುಮ್ಹಾರಿ ಮಾ ಬೆಹ್ನೋ ಕಾ ಧಂಧಾ ಕರ್ನಾ ಥಾ ಕರ್ ಚುಕೇ ಹೈ… ಸಾಲಿ ಜೈಲ್ ಜಾನೇ ಕೆ ಬಾದ್ ಭಿ ಪ್ರಗ್ನೆಂಟ್‌ ಹೋ ಗಯಿ. ತೊ ಕಾಟ್*** ತುಂ ನಿಕ್ಲೊ. ಮತ್ಲಾಬ್ ವೋ ಪ್ರಗ್ನೆಂಟ್‌ ಹೋ ಗಯಿ ಜಿಂಕಿ ಶಾದಿ ಭೀ ನಹೀ ಹುಯಿ” ಎಂದು ನಿಂದನೀಯವಾಗಿ ಮಾತನಾಡಿದ್ದಾನೆ ಎಂದು ದಿ ವೈರ್‌ ವರದಿ ಮಾಡಿದೆ. 

ಇದರ ನಂತರ ವಿಡಿಯೊದಲ್ಲಿ, ಸುರೇಶ್ ರಜಪೂತ್ ಮತ್ತು ರಾಹುಲ್ ಶರ್ಮಾ ಎಂಬವನ ಜೊತೆ ಸೇರಿ “ಯುಪಿ ಪೊಲೀಸರು ಹೇಗೆ ಮುಸ್ಲಿಂ ಮಹಿಳೆಯರಿಗೆ ಪಾಠ ಕಲಿಸಿದರು” ಎಂದು ವಿವರಿಸುತ್ತಾರೆ.

ಇದನ್ನೂ ಓದಿ: BJP ನಾಯಕ ಕಪಿಲ್ ಮಿಶ್ರಾ ಭಾಗವಹಿಸಿದ್ದ ಸಭೆಯಲ್ಲಿ ಮತ್ತೆ ‘ಗೋಲಿ ಮಾರೋ’ ಘೋಷಣೆ

ಇಡೀ ವೀಡಿಯೊದಲ್ಲಿ, ಮುಸ್ಲಿಂ ಪುರುಷರನ್ನು “ಪಿಂಪಕ್‌ಗಳು”, “ಪಂಕ್ಚರ್ ,ಮಕ್ಕಳು” ಮತ್ತು “ಜಿಹಾದಿಗಳು” ಎಂದು ಉಲ್ಲೇಖಿಸಲಾಗಿದೆ ಮತ್ತು ಲೈಂಗಿಕ ಹಿಂಸೆಯ ಮೂಲಕ ಬೆದರಿಕೆ ಹಾಕಲಾಗಿದೆ. ಇಷ್ಟೇ ಅಲ್ಲದೆ ಸುರೇಶ್‌ ರಾಜಪೂತ್‌ ತ್ರಿಪುರಾದಲ್ಲಿ ನಡೆದ ಮುಸ್ಲಿಂ ವಿರೋಧಿ ಹಿಂಸಾಚಾರವನ್ನು ಕೂಡಾ ಸಂಭ್ರಮಿಸಿದ್ದಾನೆ. “ನಿಜವಾದ ದೀಪಾವಳಿಯನ್ನು ತ್ರಿಪುರಾದಲ್ಲಿ ಆಚರಿಸಲಾಗಿದೆ. ದೀಪಾವಳಿ ಎಂದರೆ ಇದೇ. ತ್ರಿಪುರಾದಂತೆ ಎಲ್ಲಾ ಹಿಂದೂಗಳು ಎಚ್ಚೆತ್ತುಕೊಂಡರೆ, ನಿಮ್ಮ ಭವಿಷ್ಯ ಏನಾಗಬಹುದು ಎಂದು ಊಹಿಸಿ” ಎಂದು ಎಚ್ಚರಿಸಿದ್ದಾನೆ.

ಈ ವೀಡಿಯೊಗೆ ಪ್ರತಿಕ್ರಿಯಿಸಿದ ಜಾಮಿಯಾ ಮಿಲಿಯಾ ಇಸ್ಲಾಮಿಯಾದ ವಿದ್ಯಾರ್ಥಿನಿ, ಸಿಎಎ ವಿರೋಧಿ ಹೋರಾಟಗಾರ್ತಿ ಸಫೂರಾ ಜರ್ಗರ್, “ನಾನು ಆನ್‌ಲೈನ್‌ಗೆ ಬೆದರಿಕೆಗಳಿಗೆ ನಾನು ಬೆದರುವುದಿಲ್ಲ. ಆದರೆ ನನಗೆ ಕೋಪ ಉಂಟುಮಾಡುವುದು ಇಂತವರಿಗೆ ಶಿಕ್ಷೆ ಆಗುವುದಿಲ್ಲ ಎಂಬುವುದಾಗಿದೆ. ಭಾರತದಲ್ಲಿ ಮುಸ್ಲಿಂ ಪುರುಷರ ಹತ್ಯೆಗಳನ್ನು ಸಾಮಾನ್ಯಗೊಳಿಸಿದ ರೀತಿಯಲ್ಲಿಯೇ ಅವರು ಮುಸ್ಲಿಂ ಮಹಿಳೆಯರ ವಿರುದ್ಧದ ಹಿಂಸಾಚಾರವನ್ನು ಸಾಮಾನ್ಯಗೊಳಿಸಲು ಒಂದು ನೆಲೆಗಟ್ಟನ್ನು ರಚಿಸುತ್ತಿದ್ದಾರೆ ಎಂಬುದನ್ನು ನಾವು ಮುಖ್ಯವಾಗಿ ಗಮನಿಸಬೇಕು” ಎಂದು ಹೇಳಿದ್ದಾರೆ. 

ಸುದ್ದಿ ಮಾಧ್ಯಮ ಸುರೇಶ್‌ ರಜಪೂತ್‌ ವಿವಾದಾತ್ಮಕ ಧಾರ್ಮಿಕ ಗುರು ಯತಿ ನರಸಿಂಗಾನಂದ ಅವರ ಹಿಂಬಾಲಕ ಎಂದು ತನ್ನ ವರದಿಯಲ್ಲಿ ಹೇಳಿದೆ. ಯತಿ ನರಸಿಂಗಾನಂದ ಅವರ ಹಿಂಬಾಲಕರು ಹಲವಾರು ಜನರು ಇದೇ ರೀತಿಯ ಬೆದರಿಕೆಗಳನ್ನು ಹಾಕಿರುವುದನ್ನು ದಿ ವೈರ್‌ ಪಟ್ಟಿ ಮಾಡಿದೆ. ಅದನ್ನು ಇಲ್ಲಿ ಕ್ಲಿಕ್ ಮಾಡಿ ನೋಡಬಹುದು.

ಇದನ್ನೂ ಓದಿ: BJP ನಾಯಕನನ್ನು ವಿರೋಧಿಸುವವರ ಕಣ್ಣು ಕಿತ್ತು, ಕೈಗಳನ್ನು ಕತ್ತರಿಸಲಾಗುವುದು: ಹರಿಯಾಣ ಸಂಸದ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...