Homeಕರ್ನಾಟಕಅಣ್ಣಾ ಮಲೈ ಮಧುಕರ ಶೆಟ್ಟಿಯಲ್ಲಾ! - ಪ್ರಜ್ಞಾವಂತ ಪ್ರಜೆಯೊಬ್ಬರ ಅಭಿಪ್ರಾಯ

ಅಣ್ಣಾ ಮಲೈ ಮಧುಕರ ಶೆಟ್ಟಿಯಲ್ಲಾ! – ಪ್ರಜ್ಞಾವಂತ ಪ್ರಜೆಯೊಬ್ಬರ ಅಭಿಪ್ರಾಯ

ಎಸ್ಪಿ ಆದ ಬಳಿಕ ಕೊನೆ ಕೊನೆಗೆ ಸೆಲೆಬ್ರೆಟಿಯಂತೆ ಕಂಡುಬಂದಿದ್ದೂ ಸುಳ್ಳಲ್ಲಾ.

- Advertisement -
- Advertisement -

| ಡಿ.ಎಸ್.ಬಿ |

ಪೊಲೀಸ್ ಇಲಾಖೆಯಲ್ಲಿದ್ದೂ ಪ್ರಾಮಾಣಿಕ ಮತ್ತು ಕರ್ತವ್ಯದಲ್ಲಿ ದಕ್ಷನಾಗಿರುವುದರ ಜೊತೆಗೆ ಮಾನವೀಯ ಮನಸ್ಸುಳ್ಳ ಸಮಾಜವಾದಿಯಾಗಿದ್ದರು ಮಧುಕರ ಶೆಟ್ಟಿ. ಅವರ ಅಸೌಖ್ಯದ ಸಾವಿನ ಬಳಿಕ ಜ್ಞಾನೋದಯ ಉಂಟಾಗಿದ್ದರಿಂದ ಅಣ್ಣಾ ಮಲೈ ರಾಜಿನಾಮೆಗೆ ಮುಂದಾಗಿರುವಂತಿದೆ ಎಂಬ ಪ್ರಚಾರ ವ್ಯಾಪಕವಾಗುವ ಲಕ್ಷಣಗಳ ಹಿನ್ನೆಲೆಯಲ್ಲಿ ಈ ಶೀರ್ಷಿಕೆ ನೀಡಲಾಗಿದೆ. ಇಬ್ಬರೂ ಒಂದೇ ಇಲಾಖೆಯವರಾದರೂ ಇಬ್ಬರದ್ದೂ ಪ್ರತ್ಯೇಕ ವ್ಯಕ್ತಿತ್ವ!
ವೃತ್ತಿ ಜೀವನದಲ್ಲಿ ಸಾಧನೆ ಮಾಡಬೇಕು ಎಂಬ ಹಂಬಲದಲ್ಲೇ ಕೆಲಸ ನಿರ್ವಹಿಸಿದ್ದು ಅಣ್ಣಾ ಮಲೈ ಎಂದರೇ ಅತಿಶಯೋಕ್ತಿಯಾಗಲಾರದು
ಸಾಮಾಜಿಕ ತುಡಿತ ಇದ್ದರೂ ಉಡುಪಿಯ ಸೇವೆಯ ಅವಧಿಯಲ್ಲಿ ಕೋಮುವಾದಿಗಳಿಂದ ಕಂಗೆಟ್ಟಿದ್ದೂ ಇದೇ ಅಣ್ಣಾ ಮಲೈ.
ಮಟ್ಕಾ ನಿರ್ಮೂಲನೆ ಮಾಡಲು ಮಟ್ಕಾ ದೊರೆಯ ಮನೆಗೆ ನುಗ್ಗಿ ದೊರೆಸಾನಿಯನ್ನೇ ಎಸ್ಪಿ ಕಚೇರಿಗೆ ತಂದಿರಿಸಿಕೊಂಡು ಮಟ್ಕಾ ದೊರೆಗೆ ಬಂಧನದ ಭೀತಿ ಹುಟ್ಟಿಸಿದ್ದ ಅಣ್ಣಾ ಮಲೈ. ಪರಿಸರ ರಕ್ಷಣೆಯ ಹೆಸರಿನ ಸೈಕಲ್ ಸವಾರಿಯ ಕಾರ್ಯಕ್ರಮಕ್ಕೆ ಉಡುಪಿಯ ಪರಿಸರ ವಿರೋಧಿ ಯುಪಿಸಿಎಲ್ ನ ಮಾಲಿಕತ್ವದ ಅದಾನಿ ಫೌಂಡೇಶನ್‍ನ ನೆರವು ಪಡೆದು ವಿಸ್ಮಯ ಹುಟ್ಟಿಸಿದ್ದರು.
ಉಡುಪಿಯ ಎಸ್ಪಿಯಾಗಿ ಪ್ರಭಾರಕ್ಕೆ ಬಂದಾಗಲೇ ದಲಿತ ಸಂಘಟನೆಯವರನ್ನು ಏಕ ವಚನದಲ್ಲಿ ಗದರಿಸಿ, ಸಂಘಟನೆಯನ್ನು ಹೀಯಾಳಿಸಿ ಕೊನೆಗೆ ತನ್ನ ಕನ್ನಡ ಭಾಷೆಯ ತಿಳಿವಳಿಕೆಯ ಕೊರತೆಯ ನೆರವಿನಲ್ಲಿ ಅದನ್ನು ಮರೆಯಾಗಿಸುವಲ್ಲಿ ಯಶಸ್ವಿಯಾಗಿದ್ದರು.
80 ರ ದಶಕದ ಆರಂಭದಲ್ಲಿ ನಡುಮನಿ ನಾರಾಯಣ ಎಂಬ ಎಸ್ಪಿಯ ಬಳಿಕ ಅಕ್ರಮ ದಂಧೆಯವರಲ್ಲಿ ಭೀತಿ ಹುಟ್ಟುವಂತೆ ಮಾಡಿದ್ದೂ ಇದೇ ಅಣ್ಣಾ ಮಲೈ.
ಎಸ್ಪಿಯಾಗುವ ಮೊದಲು ಕಾರ್ಕಳದ ಎಸ್ಪಿಯಾಗಿ ಬಂದಾಗ ಮಾಡಿದ ಸದ್ದೇ ಅವರನ್ನು ಉಡುಪಿ ಎಸ್ಪಿ ಗಾದಿಯಲ್ಲಿ ಕುಳ್ಳಿರಿಸುವಂತೆ ಮಾಡಿತ್ತು!
ಎಸ್ಪಿ ಆದ ಬಳಿಕ ಕೊನೆ ಕೊನೆಗೆ ಸೆಲೆಬ್ರೆಟಿಯಂತೆ ಕಂಡುಬಂದಿದ್ದೂ ಸುಳ್ಳಲ್ಲಾ.
ಮಹತ್ವಾಕಾಂಕ್ಷೆಯಿಂದ ಇಲಾಖೆಗೆ ಬಂದಿದ್ದ ಅಣ್ಣಾ ಮಲೈ ಪ್ರಚಾರ ಬಯಸುವ ಅಧಿಕಾರಿಯಾಗಿ ಇಲ್ಲಿಂದ ವರ್ಗಾವಣೆಯಾಗಿದ್ದನ್ನು ಯಾರೂ ನಿರಾಕರಿಸಲಾರರು.
ಪೊಲೀಸ್ ಇಲಾಖೆಯಲ್ಲಿ ಇದೂ ಅಗತ್ಯ ಇದೆಯೇನೋ ಅನ್ನಿಸುವುದೂ ಸುಳ್ಳಲ್ಲ. ಜನರಲ್ಲಿ ಇಲಾಖೆಯ ಬಗ್ಗೆ ಬರೇ ಭಯ ತುಂಬಿಕೊಂಡಿದ್ದರೇ ಬದಲಾವಣೆ ಆಗದೇನೋ?!
ಕಾರ್ಕಳ ಎಎಸ್ಪಿಯಾಗಿದ್ದಾಗ ಎಸ್ಪಿ ಅವರ ರಿವ್ಯೂ ಮೀಟಿಂಗಿನಲ್ಲಿ ಮಟ್ಕಾ ಹಾವಳಿ ನಿಗ್ರಹಿಸಿದ್ದೇನೆಂದು ಬಡಾಯಿ ಕೊಚ್ಚಿದ್ದ ಅಂದಿನ ಉಡುಪಿ ಡಿವೈಎಸ್ಪಿ ಪ್ರಭುದೇವ ಮಾನೆಯ ಸುಳ್ಳನ್ನು ಬಯಲಾಗಿಸಲು ತಾನು ಆ ಹುದ್ದೆಯ ಪ್ರಭಾರಕ್ಕೆ ಬಂದಾಗ ಮುಂದಾಗಿದ್ದು ಪ್ರಚಾರ ಪ್ರಿಯತೆಯೋ? ಇಲಾಖೆಯನ್ನು ಸರಿಪಡಿಸುತ್ತೇನೆಂಬ ಆಕಾಂಕ್ಷೆಯೋ? ವೃತ್ತಿಯ ವೈ ಮನಸ್ಸೋ ಅರ್ಥವಾಗಿಲ್ಲಾ. ಆದರೂ ಎಸ್ಪಿಯಾಗಿದ್ದಾಗ ಮಟ್ಕಾ ನಿಯಂತ್ರಣದಲ್ಲಿ ಇರುವಂತೆ ನೋಡಿಕೊಂಡಿದ್ದನ್ನು ಅಲ್ಲಗಳೆಯಲಾಗದು.
ಗಂಗೊಳ್ಳಿಯಲ್ಲಿ ಹುಟ್ಟಿಕೊಂಡ ಮತೀಯವಾದದ ನಿಗ್ರಹಕ್ಕೆ ನಿಯೋಜಿತರಾದಾಗ ತನ್ನ ಸಿಂಗಂ ಗಿರಿ ಧರ್ಮಾಂಧರ ಗುಂಪಿನ ಎದುರು ನಡೆಯಲಾರದು ಎಂಬ ವಾಸ್ತವ ಅರಿತ ಅಣ್ಣಾ ಮಲೈ ಮತಾಂಧರ ಒತ್ತಾಯಕ್ಕೆ ಮಣಿದು ಆರೋಪಿಗಳ ಬಂಧ ಮುಕ್ತತೆ ಮಾಡುವಂತಾಗಿತ್ತು.
ಅದಕ್ಕಾಗಿಯೇ ಹೇಳಿದ್ದು ಅಣ್ಣಾ ಮಲೈನೇ ಬೇರೆ : ಮಧುಕರ ಶೆಟ್ಟರೇ ಬೇರೆ ಅಂತ.
ಸಿಂಗಂ ಹೆಸರು ಅಂಟಿಕೊಂಡಿದ್ದು ಉಡುಪಿಯಿಂದ!
ಅಣ್ಣಾ ಮಲೈ ಎಂಬ ತಮಿಳಿಗ ಕಾರ್ಕಳ ದ ಎಎಸ್ಪಿಯಾಗಿ ಬಂದಾಗ .ಮಾಡಿದ ಖದರು ಅವರೇ ಉಡುಪಿ ಎಸ್ಪಿಯಾಗಬೇಕು ಅಂತ ಮಾಡಿತ್ತು. ಮುಖ್ಯವಾಗಿ ಆಗ ಜನಪರ ರಾಜಕಾರಣಿ ಜಯಪ್ರಕಾಶ್ ಹೆಗ್ಡೆ ಮಧ್ಯಾವಧಿಯ ಸಂಸದಗಿರಿಯಲ್ಲಿದ್ದರು. ಸಮಾಜವಾದಿ ಸಿದ್ಧರಾಮಯ್ಯರ ಮುಖ್ಯಮಂತ್ರಿತ್ವದಲ್ಲಿ ಕೆಲಸÀಗಾರ ವಿನಯಕುಮಾರ ಸೊರಕೆಯ ಉಸ್ತುವಾರಿ ಗಿರಿಯಲ್ಲಿದ್ದ ಉಡುಪಿಗೆ ಒಬ್ಬ ಖಡಕ್ ಖಾಕಿಯನ್ನು ತರಬೇಕೆಂಬ ನಿರ್ಧಾರ ಮಾಡಲಾಯಿತು. ಅದರಿಂದಲೇ ಜಿಲ್ಲೆಯಲ್ಲೇ ಪ್ರೊಬೇಷನ್ ಗಿರಿಯ ಎಎಸ್ಪಿ ಹುದ್ದೆ ನಿರ್ವಹಿಸಿದ್ದ ಅಣ್ಣಾ ಮಲೈ ಅದೇ ಜಿಲ್ಲೆಯ ಎಸ್ಪಿಯಾಗುವಂತಾಗಿತ್ತು.
ಎಸ್ಪಿಯಾಗಿ ಅಧಿಕಾರ ಸ್ವೀಕರಿಸಿದಾಗ ಮೊದಲಿಗೆ ಇಲಾಖೆಯ ಒಳಗೇ ಸ್ವಚ್ಛತೆಗೆ ಮುಂದಾಗಿದ್ದರು. ಅದು ಆರಂಭದಲ್ಲೇ ಆಯಕಟ್ಟಿನಲ್ಲಿದ್ದವರಿಗೆ ಅಪಾಯ ತಂದಿರಿಸಿತ್ತು. ಎರಡನೆಯದಾಗಿ ಕ್ರೈಮ್ ಮಟ್ಟಹಾಕಲು ಫೀಲ್ಡಿಗಿಳಿವಾಗಲೂ ಅದು ಎಲ್ಲೂ ಸುದ್ದಿಯಾಗದಂತೆ ಮಾಡಿದರು. ಹಾಗಾಗಿ ಎಸ್ಪಿ ಚಡ್ಡಿ ಹಾಕಿಕೊಂಡು ಸೈಕಲಲ್ಲಿ ಬಂದರಂತೆ. ಜುಗಾರಿಯಲ್ಲಿಗೆ ಸಾಮಾನ್ಯರಂತೆ ಬಂದರಂತೆ. ಫ್ರೋಟೋಕಾಲ್ ನ ಹಂಗು ಹರಿದು ಏಕಾಂಗಿಯಾಗಿ ಓಡಾಡಿದ್ದ ಅಣ್ಣಾ ಮಲೈ ಅಪರಾಧ ಕೃತ್ಯದವರ ಎದೆಯಲ್ಲಿ ಒಂದಷ್ಟು ಭೀತಿಯನ್ನು ಆರಂಭದಲ್ಲಿ ಹುಟ್ಟು ಹಾಕಿದ್ದಂತೂ ನಿಜ. ಆಗಲೇ ಸಿಂಗಂ ಸಿನೆಮಾ ದ ಪ್ರಭಾವಕ್ಕೆ ಒಳಗಾಗುವ ಭಾವುಕ ಜೀವಿಗಳು ಅಣ್ಣಾ ಮಲೈರಲ್ಲೂ ಸಿಂಗಂ ಅನ್ನು ಕಂಡು ಉಡುಪಿಯ ಸಿಂಗಂ ಅನ್ನಲಾರಂಭಿಸಿದ್ದು.
ಮತಾಂಧತೆ ಅಳಿಸುವ ನಿಟ್ಟಿನಲ್ಲಿ ನಿಯೋಜಿತರಾದ ಇವರು ಮತ್ತೆ ಸುಧಾರಣೆಗಾಗಿ ಎಲ್ಲರನ್ನೂ ಒಲೈಸುವಂತಾಗಿದ್ದು ಕೂಡಾ ಇಲ್ಲದಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...