Homeಸಿನಿಮಾಕ್ರೀಡೆನ್ಯೂಜಿಲೆಂಡ್ ಎದುರು ಆಫ್ಘಾನಿಸ್ತಾನ ಗೆಲ್ಲಲು ಪ್ರಾರ್ಥಿಸುತ್ತಿರುವ ಭಾರತೀಯ ಅಭಿಮಾನಿಗಳು- ನಗು ತರಿಸುವ ಮೀಮ್ಸ್‌ಗಳು ಇಲ್ಲಿವೆ

ನ್ಯೂಜಿಲೆಂಡ್ ಎದುರು ಆಫ್ಘಾನಿಸ್ತಾನ ಗೆಲ್ಲಲು ಪ್ರಾರ್ಥಿಸುತ್ತಿರುವ ಭಾರತೀಯ ಅಭಿಮಾನಿಗಳು- ನಗು ತರಿಸುವ ಮೀಮ್ಸ್‌ಗಳು ಇಲ್ಲಿವೆ

- Advertisement -
- Advertisement -

ಇಂದು ಐಸಿಸಿ ಟಿ20 ವಿಶ್ವಕಪ್‌ನ ಗ್ರೂಪ್ 2ರ ನ್ಯೂಜಿಲೆಂಡ್ ಮತ್ತು ಆಫ್ಘಾನಿಸ್ತಾನ ನಡುವಿನ ಕೊನೆಯ ಪಂದ್ಯ ನಡೆಯುತ್ತಿದೆ. ಈ ಪಂದ್ಯದಲ್ಲಿ ಆಫ್ಘಾನಿಸ್ತಾನ ಗೆಲ್ಲಲೆಂದು ಭಾರತೀಯ ಅಭಿಮಾನಿಗಳು ಪ್ರಾರ್ಥಿಸುತ್ತಿದ್ದು, ಆಫ್ಘಾನಿಸ್ತಾನ ತಂಡವನ್ನು ಬೆಂಬಲಿಸುತ್ತಿವೆ. ಏಕೆಂದರೆ ನ್ಯೂಜಿಲೆಂಡ್ ಗೆದ್ದಲ್ಲಿ ಅದು ಸೆಮಿಫೈನಲ್ ತಲುಪಲಿದ್ದು ಭಾರತದ ಸೆಮಿಫೈನಲ್ ಕನಸು ನುಚ್ಚು ನೂರಾಗಲಿದೆ. ಒಂದು ವೇಳೆ ಆಫ್ಘಾನಿಸ್ತಾನ ಗೆದ್ದಲ್ಲಿ ಭಾರತಕ್ಕೆ ಸೆಮಿ ಫೈನಲ್ ತಲುಪುವ ಅವಕಾಶವಿರುತ್ತದೆ.

ಗ್ರೂಪ್ ಎರಡರಲ್ಲಿ ಪಾಕಿಸ್ತಾನವು 4ಕ್ಕೆ 4 ಪಂದ್ಯಗಳನ್ನು ಗೆದ್ದು ಸೆಮಿಫೈನಲ್ ತಲುಪಿದೆ. ಈ ಗ್ರೂಪ್‌ನಲ್ಲಿ ಇನ್ನೊಂದು ತಂಡಕ್ಕೆ ಮಾತ್ರ ಸೆಮಿಫೈನಲ್ ತಲುಪುವ ಅವಕಾಶವಿದ್ದು ಅದಕ್ಕಾಗಿ ಆಫ್ಘಾನಿಸ್ತಾನ, ನ್ಯೂಜಿಲೆಂಡ್, ಭಾರತ ತಂಡಗಳು ತೀವ್ರ ಪೈಪೋಟಿ ನಡೆಸುತ್ತಿವೆ. ನ್ಯೂಜಿಲೆಂಡ್ ತಂಡವು 4 ಪಂದ್ಯಗಳಲ್ಲಿ 3 ನ್ನು ಜಯಿಸಿ 6 ಪಾಯಿಂಟ್ ಮತ್ತು +1.277 ನೆಟ್‌ ರನ್‌ ರೇಟ್ ಪಡೆದು ಎರಡನೇ ಸ್ಥಾನದಲ್ಲಿದೆ. ಭಾರತ ಎರಡು ಪಂದ್ಯ ಗೆದ್ದು 4 ಪಾಯಿಂಟ್ ಮತ್ತು ಉತ್ತಮ ನೆಟ್ ರನ್‌ ರೇಟ್ (+1.619) ಹೊಂದಿದೆ. ಆಫ್ಘಾನಿಸ್ತಾನವು 4 ಪಂದ್ಯಗಳಲ್ಲಿ 2 ಅನ್ನು ಗೆದ್ದು 4 ಪಾಯಿಂಟ್ ಮತ್ತು ಉತ್ತಮ ನೆಟ್‌ ರನ್‌ರೇಟ್‌ನೊಂದಿಗೆ (+1.481) ನಾಲ್ಕನೇ ಸ್ಥಾನದಲ್ಲಿದೆ.

ಇಂದು ನ್ಯೂಜಿಲೆಂಡ್ ಮತ್ತು ಆಫ್ಘಾನಿಸ್ತಾನದ ಪಂದ್ಯ ನಡೆಯುತ್ತಿದೆ. ನ್ಯೂಜಿಲೆಂಡ್ ಗೆದ್ದರೆ ಭಾರತದ ಕನಸು ನುಚ್ಚು ನೂರಾಗುತ್ತದೆ. ಏಕೆಂದರೆ 8 ಪಾಯಿಂಟ್ ಪಡೆದು ಅದು ಸೆಮಿಫೈನಲ್ ಪ್ರವೇಶಿಸುತ್ತದೆ. ಒಂದು ವೇಳೆ ನ್ಯೂಜಿಲೆಂಡ್ ಕಡಿಮೆ ಅಂತರದಲ್ಲಿ ಸೋತರೆ, ಭಾರತಕ್ಕೆ ಅವಕಾಶ ತೆರೆದುಕೊಳ್ಳುತ್ತದೆ. ಏಕೆಂದರೆ ಆಗ ನ್ಯೂಜಿಲೆಂಡ್ 6 ಪಾಯಿಂಟ್, ಆಫ್ಘಾನಿಸ್ತಾನ 6 ಪಾಯಿಂಟ್ ಪಡೆದಿರುತ್ತವೆ (ನೆಟ್ ರನ್ ರೇಟ್ +1.481). ಅದೇ ರೀತಿಯಾಗಿ ಭಾರತವು ನಮೀಬಿಯಾ ಎದುರಿನ ಕೊನೆಯ ಪಂದ್ಯದಲ್ಲಿ ಭಾರೀ ಅಂತರದಿಂದ ಗೆದ್ದರೆ ಅದು ಸಹ 6 ಪಾಯಿಂಟ್ ಗಳಿಸುತ್ತದೆ. ಭಾರತದ ನೆಟ್‌ ರನ್ ರೇಟ್ ಮತ್ತಷ್ಟು ಹೆಚ್ಚಾಗುವುದರಿಂದ ಸೆಮಿಫೈನಲ್ ತಲುಪುವ ಅವಕಾಶವಿದೆ. ಹಾಗಾಗಿ ಹಲವಾರು ಜನ ಆಫ್ಘಾನಿಸ್ತಾನ ಗೆಲುವಿಗಾಗಿ ಪ್ರಾರ್ಥಿಸುತ್ತಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಹಲವಾರು ಮೀಮ್ಸ್‌ಗಳು ಹರಿದಾಡುತ್ತಿವೆ. ಕೆಲವೊಂದು ಇಲ್ಲಿವೆ.

ಇಂದು ಟಾಸ್ ಗೆದ್ದ ಆಫ್ಘಾನಿಸ್ತಾನವು ಬ್ಯಾಟಿಂಗ್ ಆಯ್ದುಕೊಂಡಿದೆ. ಆದರೆ 6 ಓವರ್‌ಗಳಲ್ಲಿ 23 ರನ್ ಗಳಿಸಿದ್ದು 3 ವಿಕೆಟ್‌ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ.


ಇದನ್ನೂ ಓದಿ: ಐಸಿಸಿ ಟಿ20 ವಿಶ್ವಕಪ್: ಭಾರತ ಸೆಮಿಫೈನಲ್ ತಲುಪಲು ಈ ಎರಡು ಪಂದ್ಯ ಬಹಳ ಮುಖ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...