Homeಮುಖಪುಟಐಸಿಯುವಿನಲ್ಲಿ ಬೆಂಕಿ: 11 ಕೊರೊನಾ ರೋಗಿಗಳು ಮೃತ

ಐಸಿಯುವಿನಲ್ಲಿ ಬೆಂಕಿ: 11 ಕೊರೊನಾ ರೋಗಿಗಳು ಮೃತ

- Advertisement -
- Advertisement -

ಮಹಾರಾಷ್ಟ್ರದ ಅಹ್ಮದ್‌ನಗರ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಭಾರಿ ದುರಂತ ಸಂಭವಿಸಿದ್ದು, ಐಸಿಯು ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಕೊರೊನಾ ಪೀಡಿತ 11 ರೋಗಿಗಳು ಸಾವನ್ನಪ್ಪಿದ್ದಾರೆ. ಆಸ್ಪತ್ರೆಯ ಸಿಬ್ಬಂದಿಗಳು ಮತ್ತು ಬೇರೆ ವಾರ್ಡ್‌ನಲ್ಲಿ ಇದ್ದ ರೋಗಿಗಳು ಆಸ್ಪತ್ರೆಯಿಂದ ಸ್ಥಳಾಂತರಗೊಂಡಿದ್ದಾರೆ. ಐಸಿಯುನಲ್ಲಿದ್ದ 17 ರೋಗಿಗಳಲ್ಲಿ ಆರು ಮಂದಿ ಬದುಕುಳಿದಿದ್ದು, ಮೃತರಲ್ಲಿ ಹೆಚ್ಚಿನವರು 60-83 ವರ್ಷಕ್ಕಿಂತ ಮೇಲ್ಪಟ್ಟವರು ಎಂದು ತಿಳಿದು ಬಂದಿದೆ.

“ಕೆಲವು ರೋಗಿಗಳು ಸುಟ್ಟಗಾಯಗಳಿಂದ ಮೃತಪಟ್ಟಿದ್ದು, ಇನ್ನು ಕೆಲವರು ಹೊಗೆಯಿಂದಾಗಿ ಮೃತಪಟ್ಟಿದ್ದಾರೆ. ನಾವು ವಿವರವಾದ ಮರಣೋತ್ತರ ಪರೀಕ್ಷೆಯ ವರದಿಗಾಗಿ ಕಾಯುತ್ತಿದ್ದೇವೆ. ಪ್ರಕರಣದ ಹೆಚ್ಚಿನ ತನಿಖೆ ನಡೆಯುತ್ತಿದೆ” ಎಂದು ತೋಪ್ಖಾನಾ ಪೊಲೀಸ್ ಠಾಣೆಯ ಸಹಾಯಕ ಪೊಲೀಸ್ ಇನ್ಸ್‌ಪೆಕ್ಟರ್ ಜುಬೇರ್ ಮುಜಾವರ್ ಭಾನುವಾರ ತಿಳಿಸಿದ್ದಾರೆ.

ಇದನ್ನೂ ಓದಿ: ಬಿರಿಯಾನಿ ರೆಸ್ಟೋರೆಂಟ್‌ ಮುಚ್ಚದಿದ್ದರೆ ಬೆಂಕಿ ಹಚ್ಚುತ್ತೇನೆ: ದೆಹಲಿಯಲ್ಲಿ ಮತೀಯ ಗೂಂಡಾಗಿರಿ

“ಮಹಾರಾಷ್ಟ್ರದ ಅಹ್ಮದ್‌ನಗರದ ಆಸ್ಪತ್ರೆಯೊಂದರಲ್ಲಿ ಬೆಂಕಿ ಅವಘಡ ಸಂಭವಿಸಿ ಪ್ರಾಣಹಾನಿಯಾಗಿರುವುದು ದುಃಖ ತಂದಿದೆ. ದುಃಖತಪ್ತ ಕುಟುಂಬಗಳಿಗೆ ಸಂತಾಪ. ಗಾಯಾಳುಗಳು ಆದಷ್ಟು ಬೇಗ ಚೇತರಿಸಿಕೊಳ್ಳಲಿ” ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.

ಸುಟ್ಟ ಐಸಿಯು ವಾರ್ಡ್ ಅನ್ನು ಪರಿಶೀಲಿಸಿದ ರಾಜ್ಯ ಅಧಿಕಾರಿಗಳಿಗೆ ಶಾರ್ಟ್ ಸರ್ಕ್ಯೂಟ್ ಸ್ಪಾರ್ಕ್‌ನಿಂದಾಗಿ ಬೆಂಕಿ ಭುಗಿಲೆದ್ದಿದೆ ಎಂದು ಆಸ್ಪತ್ರೆಯ ಆಡಳಿತವು ತಿಳಿಸಿದೆ. ಆದರೆ ಸ್ಥಳೀಯ ಅಗ್ನಿಶಾಮಕ ಮತ್ತು ರಕ್ಷಣಾ ಇಲಾಖೆಯು ಆಸ್ಪತ್ರೆ ಹಿಂದಿನ ಎರಡು ಲೆಕ್ಕಪರಿಶೋಧನೆಗಳಲ್ಲಿ ಕಟ್ಟಡದಲ್ಲಿ ಅಗ್ನಿ ಸುರಕ್ಷತೆಯನ್ನು ಸುಧಾರಿಸುವ ಶಿಫಾರಸುಗಳನ್ನು ನಿರ್ಲಕ್ಷಿಸಿದೆ ಎಂದು ಆರೋಪಿಸಿದೆ.

“ಸಾಕಷ್ಟು ಹಣದ ಕೊರತೆಯಿಂದಾಗಿ ಆಸ್ಪತ್ರೆಯಲ್ಲಿ ಅಗ್ನಿ ಸುರಕ್ಷತಾ ಸಾಧನಗಳನ್ನು ಅಳವಡಿಸಿಲ್ಲ” ಎಂದು ನಗರ ನಾಗರಿಕ ಸಂಸ್ಥೆಯ ಮುಖ್ಯ ಅಗ್ನಿಶಾಮಕ ಅಧಿಕಾರಿ ಶಂಕರ್ ಮಿಸಾಲ್ ಅವರು ಪಿಟಿಐಗೆ ತಿಳಿಸಿದ್ದಾರೆ.

ಬೆಂಕಿಯ ಕಾರಣವನ್ನು ನಿರ್ಣಯಿಸಲು ಸಮಿತಿಯನ್ನು ನೇಮಿಸಲಾಗಿದೆ, ನಂತರ ಆಸ್ಪತ್ರೆಯ ನಿರ್ಲಕ್ಷ್ಯ ದುರಂತಕ್ಕೆ ಕಾರಣವಾಗಿದೆಯೇ ಎಂದು ನಿರ್ಧರಿಸಲಾಗುವುದು ಎಂದು ಮಹಾರಾಷ್ಟ್ರ ರಾಜ್ಯ ಸಚಿವ ಜಯಂತ್ ಪಾಟೀಲ್ ಹೇಳಿದ್ದಾರೆ.

ಇದನ್ನೂ ಓದಿ: ತ್ರಿಪುರಾ: VHP ರ್‍ಯಾಲಿ ವೇಳೆ ಮಸೀದಿ ಧ್ವಂಸ, ಎರಡು ಅಂಗಡಿಗಳಿಗೆ ಬೆಂಕಿ

“ಬೆಂಕಿ ಹೊತ್ತಿಕೊಂಡ ಕೆಲವೇ ನಿಮಿಷಗಳಲ್ಲಿ ವಾರ್ಡ್‌ನಲ್ಲಿ ಹೊಗೆ ಆವರಿಸಿದೆ. ನಮ್ಮಲ್ಲಿ ಕೆಲವರು ಅಗ್ನಿಶಾಮಕ ಸಾಧನಗಳನ್ನು ಬಳಸಲು ಪ್ರಯತ್ನಿಸಿದ್ದರಾದರೂ, ಅಷ್ಟರಲ್ಲಿ ಹೊಗೆ ವಾರ್ಡ್ ಪೂರ್ತಿ ಆವರಿಸಿದ್ದರಿಂದ ರೋಗಿಗಳನ್ನು ವಾರ್ಡ್‌ನಿಂದ ಹೊರತರುವುದು ಬಿಟ್ಟ ನಮಗೆ ಬೇರೆ ದಾರಿ ಇರಲಿಲ್ಲ. ನಾವು ಅವರನ್ನು ವಾರ್ಡ್‌ನಿಂದ ಹೊರಗೆ ಸ್ಥಳಾಂತರಿಸುವಲ್ಲಿ ಯಶಸ್ವಿಯಾಗಿದ್ದೆವು,

ಆದರೆ ಅಷ್ಟರಲ್ಲಾಗಲೇ ಕೆಲವರು ಸಾವನ್ನಪ್ಪಿದ್ದರು. ಸಿಸ್ಟಮ್ ಸ್ಥಗಿತಗೊಂಡಿದ್ದರಿಂದ ವೆಂಟಿಲೇಟರ್‌ಗಳಿಗೆ ಆಮ್ಲಜನಕ ಪೂರೈಕೆ ಸ್ಥಗಿತಗೊಂಡಿರಬಹುದು, ಹೀಗಾಗಿ ಅವರು ಮೃತಪಟ್ಟಿರಬಹುದು” ಎಂದು ಆಸ್ಪತ್ರೆಯ ನರ್ಸ್ ಸುರೇಖಾ ಆಂಧಳೆ ತಿಳಿಸಿದ್ದಾರೆ ಎಂದು ಸಂಡೇ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ತಪ್ಪಿತಸ್ಥರ ವಿರುದ್ಧ ಸರ್ಕಾರ ಕೆಲವು ಕ್ರಮ ಕೈಗೊಳ್ಳಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಹಸನ್ ಮುಶ್ರೀಫ್ ಹೇಳಿದ್ದಾರೆ. ಆಸ್ಪತ್ರೆ ಆಡಳಿತದಿಂದ ಯಾವುದೇ ನಿರ್ಲಕ್ಷ್ಯ ಕಂಡುಬಂದಲ್ಲಿ ಸರಕಾರ ಖಂಡಿತಾ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಿದೆ ಎಂದರು.

ಈ ವರ್ಷದ ಏಪ್ರಿಲ್‌ನಲ್ಲಿ, ರಾಜ್ಯದ ಪಾಲ್ಘರ್ ಜಿಲ್ಲೆಯ ಖಾಸಗಿ ಆಸ್ಪತ್ರೆಯ ಐಸಿಯುನಲ್ಲಿ ಬೆಂಕಿ ಕಾಣಿಸಿಕೊಂಡು 15 ಕೊರೊನಾ ರೋಗಿಗಳು ಸಾವನ್ನಪ್ಪಿದ್ದರು.

ಇದನ್ನೂ ಓದಿ: ಬೆಂಕಿಪೊಟ್ಟಣಕ್ಕೂ ತಟ್ಟಿದ ಬೆಲೆ ಏರಿಕೆ ಬಿಸಿ:14 ವರ್ಷಗಳ ಬಳಿಕ ಶೇ.100 ರಷ್ಟು ಬೆಲೆ ಏರಿಕೆ

ವಿಡಿಯೊ ನೋಡಿ, ನಮ್ಮ ಯೂಟ್ಯೂಬ್‌‌ ಚಾನೆಲ್ ಸಬ್‌ಸ್ಕ್ರೈಬ್‌ ಮಾಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...