Homeಚಳವಳಿರೈತರನ್ನು ಕಾರ್ಪೊರೇಟ್ ಕಾಲಡಿಗೆ ದೂಕುತ್ತಿರುವ ಕೇಂದ್ರ ಸರ್ಕಾರ: ಬಿ.ಸಿ ಬಸವರಾಜ್

ರೈತರನ್ನು ಕಾರ್ಪೊರೇಟ್ ಕಾಲಡಿಗೆ ದೂಕುತ್ತಿರುವ ಕೇಂದ್ರ ಸರ್ಕಾರ: ಬಿ.ಸಿ ಬಸವರಾಜ್

- Advertisement -
- Advertisement -

ಭಾರತದಲ್ಲಿ 70 ಕೋಟಿಗಿಂತ ಹೆಚ್ಚಿನ ಜನ ನೇರವಾಗಿ ಕೃಷಿಯನ್ನು ಅವಲಂಬಿಸಿದ್ದಾರೆ. ಇಲ್ಲಿ ಫುಡ್ ಪ್ರೊಸೆಸಿಂಗ್ ಪ್ರಾಡಕ್ಟ್‌ಗಳದು ಹಲವಾರು ಬಿಲಿಯನ್ ಡಾಲರ್ ವಹಿವಾಟು ನಡೆಸುತ್ತಿದೆ. ಇಂತಹ ಸಂದರ್ಭದಲ್ಲಿ ಕೃಷಿ ಕಾಯ್ದೆಗಳ ಮೂಲಕ ಅತಿದೊಡ್ಡ ರೈತ ವಲಯವನ್ನು ಕಾರ್ಪೊರೇಟ್ ಕಾಲಡಿಯಲ್ಲಿ ಇಡಲು ಸರ್ಕಾರ ನಿರ್ಧರಿಸಿದೆ ಎಂದು ಪ್ರಾಧ್ಯಾಪಕರಾದ ಬಿ.ಸಿ ಬಸವರಾಜು ಅಸಮಾಧಾನ ವ್ಯಕ್ತಪಡಿಸಿದರು.

ಕರ್ನಾಟಕ ಜನಶಕ್ತಿ ಸಂಘಟನೆಯು ಬೆಂಗಳೂರಿನ ಗಾಂಧಿ ಭವನದಲ್ಲಿ ಏರ್ಪಡಿಸಿದ್ದ ಐತಿಹಾಸಿಕ ರೈತಾಂದೋಲನ ಕಲಿಸುವ ಪಾಠ- ತೋರುವ ಹಾದಿ: ಮಂಥನ ಸಮಾವೇಶದಲ್ಲಿ ಮಾತನಾಡಿದ ಅವರು, ಈ ಕಾಯ್ದೆಗಳು ಜಾರಿಯಾದರೆ ಕೃಷಿ ವಹಿವಾಟಿನಲ್ಲಿ ಶೇ.90 ಪಾಲನ್ನು ಕಾರ್ಪೋರೇಟ್ ಕಂಪನಿಗಳು ಪಡೆಯುತ್ತಿವೆ. ಹಾಗಾಗಿ ಕೃಷಿ ಕಾಯ್ದೆಗಳ ಹಿಂದೆ ಕಾರ್ಪೋರೇಟ್ ಹಿತಾಸಕ್ತಿ ಸ್ಪಷ್ಟವಾಗಿದೆ ಎಂದರು.

ಜಾಗತೀಕರಣಕ್ಕೆ ತೆರೆದುಕೊಂಡ ದಿನಗಳಿಂದಲೂ ಕಾರ್ಪೋರೇಟ್ ಕಂಪನಿಗಳು ದೇಶವನ್ನು ಆಳುತ್ತಿವೆ. ಕಾರ್ಪೊರೇಟ್ ಕಂಪನಿಗಳು ದಿನದಿಂದ ದಿನಕ್ಕೆ ಪ್ರಬಲವಾಗುತ್ತ ಬಂದಿದೆ. ಯುಪಿಎ ಅವಧಿಯಲ್ಲಿ ಕಾರ್ಪೋರೇಟ್ ಪರವಾಗಿ ನಿಲುವುಗಳನ್ನು ತಾಳುತ್ತಿದ್ದರೂ ಜನಸಮಾನ್ಯರಿಗೂ ಉಸಿರಾಡಲು ಸ್ಪಲ್ಪ ಅವಕಾಶವಿತ್ತು. ಆದರೆ ಎನ್‌ಡಿಎ ಸಂಪೂರ್ಣವಾಗಿ ಕಾರ್ಪೊರೇಟ್‌ಗಳ ಕೈಗೊಪ್ಪಿಸಿವೆ.ಅವರು ಭಾವನಾತ್ಮಕ ವಿಷಯದ ಮೇಲೆಯೇ ಚುನಾವಣೆಯ ಗೆಲ್ಲುವ ಭರವಸೆ ಇರುವುದರಿಂದ ಭ್ರಷ್ಟಾಚಾರವನ್ನು ಕಾನೂನಾತ್ಮಕವಾಗಿಸಲಾಗುತ್ತಿದೆ. ಎಲೆಕ್ಟರೊಲ್ ಬಾಂಡ್‌ಗಳು ಬಂದ ಮೇಲಂತೂ ಭ್ರಷ್ಟಾಚಾರ ವ್ಯಾಪಕವಾಗಿದೆ” ಎಂದರು.

2019 ನೇ ಸಾಲಿನಲ್ಲಿ ದೇಶದಲ್ಲಿ ಉತ್ಪನವಾದ ಒಟ್ಟು ಸಂಪತ್ತಿನ ಶೇ.80 ರಷ್ಟು ಪಾಲು ಶೇ.01 ರಷ್ಟು ಜನರ ಪಾಲಾಗಿದೆ. ಕೊರೊನಾ ನಂತರ ಎಲ್ಲಾ ಉದ್ದಿಮೆಗಳು ನಷ್ಟದಲ್ಲಿದ್ದರೆ 11 ಜನ ಕಾರ್ಪೋರೇಟ್‌ಗಳ ಆಸ್ತಿಯಲ್ಲಿ ಶೇ.35 ರಷ್ಟು ಹೆಚ್ಚಾಯಿತು. ಇದೆಲ್ಲವೂ ಈ ಕಾಯ್ದೆಗಳು ಕಾರ್ಪೋರೇಟ್ ಪರವಾಗಿವೆ ಎನ್ನಲು ಸಾಕ್ಷಿ. ಮೋದಿಯವರು ಹಿಂದೆ ಎಂಎಸ್‌ಪಿ ಕಾನೂನುಬದ್ಧಗೊಳಿಸಬೇಕು ಎಂದಿದ್ದರು. ಅಧಿಕಾರಕ್ಕೆ ಬಂದಾಗ ಅದನ್ನು ಮರೆತರು. ಅಧಿಕಾರದಲ್ಲಿದ್ದಾಗ ಒಂದು ರೀತಿ, ಅಧಿಕಾರ ಕಳೆದುಕೊಂಡಾಗ ಒಂದು ರೀತಿ ವರ್ತಿಸುವುದನ್ನು ಕಾಣಬಹುದು ಎಂದು ಎಂದು ಬಸವರಾಜ್‌ರವರು ತಿಳಿಸಿದರು.

ರೈತ ನಾಯಕ ಕೋಡಿಹಳ್ಳಿ ಚಂದ್ರಶೇಖರ್ ಮಾತನಾಡಿ, “ಕೇಂದ್ರ ಸರ್ಕಾರ ಜಾರಿಗೊಳಿಸಿದ ಕಾನೂನುಗಳು ಸಂಪೂರ್ಣವಾಗಿ ಜಾರಿಯಾಗಬೇಕಾದರೆ ರಾಜ್ಯಗಳು ಸಹ ಅವುಗಳಿಗೆ ಪೂರಕವಾಗಿ ಕಾನೂನುಗಳನ್ನು ತರಬೇಕು. ಇಂದು ದೇಶದಲ್ಲಿ 16 ರಾಜ್ಯಗಳಲ್ಲಿ ಬಿಜೆಪಿ ಆಡಳಿತದಲ್ಲಿದೆ. ಆ ಯಾವ ರಾಜ್ಯಗಳು ಈ ಕೃಷಿ ಕಾನೂನನ್ನು ಜಾರಿಗೆ ತರುವ ಪ್ರಯತ್ನ ಮಾಡಲಿಲ್ಲ. ಆದರೆ ಕರ್ನಾಟಕ ಜಾರಿಗೆ ತಂದಿರುವುದು ನಮ್ಮ ದುರಂತ” ಎಂದರು.

ಇದರ ಪರಿಣಾಮವಾಗಿ ರೈತರು ಹಳ್ಳಿಗಳಿಂದ ಕಳೆದುಹೋಗುತ್ತಿದ್ದಾರೆ. ಕೃಷಿ ಮಾರುಕಟ್ಟೆ ಮತ್ತು ಕೃಷಿ ಭೂಮಿ ರೈತರ ಕೈತಪ್ಪುತ್ತಿದೆ. ಎಪಿಎಂಸಿ ಕಾಯ್ದೆ ಜಾರಿಗೆ ಬಂದರೆ ಕೆಲವೇ ತಿಂಗಳಿನಲ್ಲಿ ನಮ್ಮ ಮಾರುಕಟ್ಟೆ ಶಕ್ತಿ ಕಳೆದುಕೊಳ್ಳುತ್ತದೆ ಎಂದು ನಾವು ಎಚ್ಚರಿಸಿದ್ದೆವು. ಅದರಂತೆ ಈಗ
ಕೃಷಿ ಉತ್ಪನನ್ನ ಮಾರುಕಟ್ಟೆ ವರದಿ ತೆಗೆಸಿಕೊಂಡಿದ್ದೇನೆ. ಶೇ. 80ರಷ್ಟು ಭಾಗ ಕೃಷಿ ಉತ್ಪನ್ನಗಳು ಮಾರುಕಟ್ಟೆಗೆ ಬರುತ್ತಿಲ್ಲ. ತೆರಿಗೆ ಕಟ್ಟುವುದನ್ನು ತಪ್ಪಿಸಿಕೊಳ್ಳಲು ಮತ್ತು ತಮಗಿಷ್ಟ ಬಂದಂತೆ ಮಾಡಲು ವ್ಯಾಪಾರಿಗಳು ಮುಂದಾಗುತ್ತಿದ್ದಾರೆ ಎಂದರು.

ಕರ್ನಾಟಕ ಪ್ರಾಂತ ರೈತ ಸಂಘದ ಟಿ.ಯಶವಂತ್‌ರವರು ಮಾತನಾಡಿ “2018ರ ಅಂಕಿಅಂಶದ ಪ್ರಕಾರ ಕನಿಷ್ಠ ಭೂಮಿ ಇಲ್ಲದ ಶೇ. 35ರಷ್ಟು ಜನರು ದೇಶದಲ್ಲಿದ್ದಾರೆ. ಒಂದು ಎಕರೆ, ಅರ್ಧ ಎಕರೆ ಹೊಂದಿರುವ ಸಣ್ಣ ರೈತರನ್ನೆಲ್ಲ ಭೂಮಿ ಹೀನರು ಎಂದು ತಿಳಿದರೆ ಈ ಪ್ರಮಾಣ ಶೇ. 90ರಷ್ಟಾಗುತ್ತದೆ. ಭೂ ಕಾಯ್ದೆ ತಿದ್ದುಪಡಿಯ ಅಪಾಯ ಇರುವುದು ಇಲ್ಲಿ. ನಾನು ರೈತ ಸಂಘಕ್ಕೆ ಬಂದಾಗ ಇದ್ದ ಒಂದು ಕ್ವಿಂಟಾಲ್ ಭತ್ತದ ಬೆಲೆ ಎಷ್ಟಿತ್ತೋ ಅಷ್ಟೇ ಈಗಲೂ ಇದೆ. ಹದಿನೈದು ವರ್ಷಗಳ ಹಿಂದೆ ಇದ್ದ ಚಪ್ಪಲಿ ಬೆಲೆ ಈಗಲೂ ಅಷ್ಟೇ ಇದೆಯೇ? ಎಂದು ಪ್ರಶ್ನಿಸಿದರು.

ರೈತ ನಾಯಕಿ ಕವಿತಾ ಕುರುಗಂಟಿ ಮಾತನಾಡಿ, “ರೈತರ ಹೋರಾಟ ಈಗ ಶುರುವಾಗಿದ್ದಲ್ಲ. ಬಿಜೆಪಿ ಅಧಿಕಾರಕ್ಕೆ ಬಂದಾಗಿನಿಂದ ಹೋರಾಟ ನಡೆಸಲಾಗುತ್ತಿದೆ. ಸಂಪೂರ್ಣ ಸಾಲ ಮನ್ನಾ, ಎಂಎಸ್‌ಪಿ ಶಾಸನಬದ್ಧತೆಗಾಗಿ 2017 ರಿಂದ ಹೋರಾಟ ನಡೆಯುತ್ತಿದೆ” ಎಂದರು.

“ರೈತರು ಹೇಳಿದ ಎಲ್ಲ ಮಾತುಗಳು ನಿಜವಾಗಿದೆ. ಎಪಿಎಂಸಿ- ಕುರಿತು ವ್ಯಕ್ತಪಡಿಸಿದ ಆತಂಕ ನಿಜವಾಗಿದೆ. ಇಂದಿನ ಪ್ರಜಾವಾಣಿಯ ಮುಖಪುಟದ ವರದಿಯು ಇದನ್ನೇ ಹೇಳುತ್ತಿದೆ. ಎಪಿಎಂಸಿ ಬಿಟ್ಟು ಹೊರಗಡೆ ವ್ಯಾಪಾರ ಮಾಡಿದರೆ ರೈತರಿಗೆ ಮೋಸವಾಗುತ್ತದೆ. ಈ ತಿದ್ದುಪಡಿ ಕಾಯ್ದೆಗಳಿಂದ ರೈತರಿಗೆ ಯಾವ ರೀತಿ ಉಪಯೋಗವಾಗುತ್ತದೆ ಎಂದು ಕೇಳಿದರೆ ಪ್ರಧಾನಿ ಮೋದಿಯವರ ಬಳಿ ಉತ್ತರವಿಲ್ಲ” ಎಂದು ತಿಳಿಸಿದರು.

ಪಂಜಾಬ್‌ನಲ್ಲಿ ಬಿಜೆಪಿ ಶಾಸಕರು, ಸಂಸದರು ಎಲ್ಲೇ ಹೋದರು ರೈತರು ಮುತ್ತಿಗೆ ಹಾಕುತ್ತಾರೆ. ಕಪ್ಪು ಬಾವುಟ ತೋರಿಸಿ ಪ್ರತಿಭಟನೆ ನಡೆಸುತ್ತಾರೆ. ರಾತ್ರಿ ಹೊತ್ತು ಅವರು ಕಾರ್ಯಕ್ರಮಗಳನ್ನು ನಡೆಸಬೇಕಾದ ಪರಿಸ್ಥಿತಿ ಬಂದಿದೆ. ಇದನ್ನು ದೇಶದ್ಯಂತ ವಿಸ್ತರಿಸಬೇಕು ಎಂದರು.

ಕರ್ನಾಟಕ ಜನಶಕ್ತಿಯ ರಾಜ್ಯಾಧ್ಯಕ್ಷರಾದ ನೂರ್ ಶ್ರೀಧರ್‌ರವರು ಸಮಾರೋಪ ನುಡಿಗಳನ್ನಾಡುತ್ತಾ “ಇದೊಂದು ಐತಿಹಾಸಿಕ ಸಂದರ್ಭ, ಇದರಲ್ಲಿ ರೈತ ಸಮುದಾಯ ಮಾಡು ಇಲ್ಲವೆ ಮಡಿ ಎಂಬ ಹೋರಾಟಕ್ಕಿಳಿದಿದೆ. ಈ ಸಂದರ್ಭದಲ್ಲಿ ಅನ್ನದ ರುಣ ಹೊಂದಿರುವ ನಾವೆಲ್ಲರೂ ಅವರೊಂದಿಗೆ ಕೈಜೋಡಿಸುವುದು ನಮ್ಮ ಕರ್ತವ್ಯ, ನಮ್ಮ ದೇಶ ಮತ್ತು ಅನ್ನದಾತರ ಉಳಿವಿಗಾಗಿ ಒಗ್ಗೂಡೋಣ” ಎಂದು ಕರೆ ನೀಡಿದರು. ಈ ನಿಟ್ಟಿನಲ್ಲಿ ಜನರಲ್ಲಿ ಅರಿವು ಮೂಡಿಸಲು, ನವೆಂಬರ್ 10ರಿಂದ 20ರವೆಗೆ ಕರ್ನಾಟಕ ಜನಶಕ್ತಿ ‘ಹಳ್ಳಿ ಉಳಿಸಿ’ ಅಭಿಯಾನ ಹಮ್ಮಿಕೊಂಡಿರುವುದಾಗಿ ತಿಳಿಸಿದರು.


ಇದನ್ನೂ ಓದಿ: ದೆಹಲಿ ಹೋರಾಟದಲ್ಲಿ ಮೃತಪಟ್ಟ ಹೆಚ್ಚಿನ ರೈತರು 3 ಎಕರೆಗಿಂಲೂ ಕಡಿಮೆ ಜಮೀನು ಹೊಂದಿರುವವರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...