Homeಚಳವಳಿರೈತರನ್ನು ಕಾರ್ಪೊರೇಟ್ ಕಾಲಡಿಗೆ ದೂಕುತ್ತಿರುವ ಕೇಂದ್ರ ಸರ್ಕಾರ: ಬಿ.ಸಿ ಬಸವರಾಜ್

ರೈತರನ್ನು ಕಾರ್ಪೊರೇಟ್ ಕಾಲಡಿಗೆ ದೂಕುತ್ತಿರುವ ಕೇಂದ್ರ ಸರ್ಕಾರ: ಬಿ.ಸಿ ಬಸವರಾಜ್

- Advertisement -
- Advertisement -

ಭಾರತದಲ್ಲಿ 70 ಕೋಟಿಗಿಂತ ಹೆಚ್ಚಿನ ಜನ ನೇರವಾಗಿ ಕೃಷಿಯನ್ನು ಅವಲಂಬಿಸಿದ್ದಾರೆ. ಇಲ್ಲಿ ಫುಡ್ ಪ್ರೊಸೆಸಿಂಗ್ ಪ್ರಾಡಕ್ಟ್‌ಗಳದು ಹಲವಾರು ಬಿಲಿಯನ್ ಡಾಲರ್ ವಹಿವಾಟು ನಡೆಸುತ್ತಿದೆ. ಇಂತಹ ಸಂದರ್ಭದಲ್ಲಿ ಕೃಷಿ ಕಾಯ್ದೆಗಳ ಮೂಲಕ ಅತಿದೊಡ್ಡ ರೈತ ವಲಯವನ್ನು ಕಾರ್ಪೊರೇಟ್ ಕಾಲಡಿಯಲ್ಲಿ ಇಡಲು ಸರ್ಕಾರ ನಿರ್ಧರಿಸಿದೆ ಎಂದು ಪ್ರಾಧ್ಯಾಪಕರಾದ ಬಿ.ಸಿ ಬಸವರಾಜು ಅಸಮಾಧಾನ ವ್ಯಕ್ತಪಡಿಸಿದರು.

ಕರ್ನಾಟಕ ಜನಶಕ್ತಿ ಸಂಘಟನೆಯು ಬೆಂಗಳೂರಿನ ಗಾಂಧಿ ಭವನದಲ್ಲಿ ಏರ್ಪಡಿಸಿದ್ದ ಐತಿಹಾಸಿಕ ರೈತಾಂದೋಲನ ಕಲಿಸುವ ಪಾಠ- ತೋರುವ ಹಾದಿ: ಮಂಥನ ಸಮಾವೇಶದಲ್ಲಿ ಮಾತನಾಡಿದ ಅವರು, ಈ ಕಾಯ್ದೆಗಳು ಜಾರಿಯಾದರೆ ಕೃಷಿ ವಹಿವಾಟಿನಲ್ಲಿ ಶೇ.90 ಪಾಲನ್ನು ಕಾರ್ಪೋರೇಟ್ ಕಂಪನಿಗಳು ಪಡೆಯುತ್ತಿವೆ. ಹಾಗಾಗಿ ಕೃಷಿ ಕಾಯ್ದೆಗಳ ಹಿಂದೆ ಕಾರ್ಪೋರೇಟ್ ಹಿತಾಸಕ್ತಿ ಸ್ಪಷ್ಟವಾಗಿದೆ ಎಂದರು.

ಜಾಗತೀಕರಣಕ್ಕೆ ತೆರೆದುಕೊಂಡ ದಿನಗಳಿಂದಲೂ ಕಾರ್ಪೋರೇಟ್ ಕಂಪನಿಗಳು ದೇಶವನ್ನು ಆಳುತ್ತಿವೆ. ಕಾರ್ಪೊರೇಟ್ ಕಂಪನಿಗಳು ದಿನದಿಂದ ದಿನಕ್ಕೆ ಪ್ರಬಲವಾಗುತ್ತ ಬಂದಿದೆ. ಯುಪಿಎ ಅವಧಿಯಲ್ಲಿ ಕಾರ್ಪೋರೇಟ್ ಪರವಾಗಿ ನಿಲುವುಗಳನ್ನು ತಾಳುತ್ತಿದ್ದರೂ ಜನಸಮಾನ್ಯರಿಗೂ ಉಸಿರಾಡಲು ಸ್ಪಲ್ಪ ಅವಕಾಶವಿತ್ತು. ಆದರೆ ಎನ್‌ಡಿಎ ಸಂಪೂರ್ಣವಾಗಿ ಕಾರ್ಪೊರೇಟ್‌ಗಳ ಕೈಗೊಪ್ಪಿಸಿವೆ.ಅವರು ಭಾವನಾತ್ಮಕ ವಿಷಯದ ಮೇಲೆಯೇ ಚುನಾವಣೆಯ ಗೆಲ್ಲುವ ಭರವಸೆ ಇರುವುದರಿಂದ ಭ್ರಷ್ಟಾಚಾರವನ್ನು ಕಾನೂನಾತ್ಮಕವಾಗಿಸಲಾಗುತ್ತಿದೆ. ಎಲೆಕ್ಟರೊಲ್ ಬಾಂಡ್‌ಗಳು ಬಂದ ಮೇಲಂತೂ ಭ್ರಷ್ಟಾಚಾರ ವ್ಯಾಪಕವಾಗಿದೆ” ಎಂದರು.

2019 ನೇ ಸಾಲಿನಲ್ಲಿ ದೇಶದಲ್ಲಿ ಉತ್ಪನವಾದ ಒಟ್ಟು ಸಂಪತ್ತಿನ ಶೇ.80 ರಷ್ಟು ಪಾಲು ಶೇ.01 ರಷ್ಟು ಜನರ ಪಾಲಾಗಿದೆ. ಕೊರೊನಾ ನಂತರ ಎಲ್ಲಾ ಉದ್ದಿಮೆಗಳು ನಷ್ಟದಲ್ಲಿದ್ದರೆ 11 ಜನ ಕಾರ್ಪೋರೇಟ್‌ಗಳ ಆಸ್ತಿಯಲ್ಲಿ ಶೇ.35 ರಷ್ಟು ಹೆಚ್ಚಾಯಿತು. ಇದೆಲ್ಲವೂ ಈ ಕಾಯ್ದೆಗಳು ಕಾರ್ಪೋರೇಟ್ ಪರವಾಗಿವೆ ಎನ್ನಲು ಸಾಕ್ಷಿ. ಮೋದಿಯವರು ಹಿಂದೆ ಎಂಎಸ್‌ಪಿ ಕಾನೂನುಬದ್ಧಗೊಳಿಸಬೇಕು ಎಂದಿದ್ದರು. ಅಧಿಕಾರಕ್ಕೆ ಬಂದಾಗ ಅದನ್ನು ಮರೆತರು. ಅಧಿಕಾರದಲ್ಲಿದ್ದಾಗ ಒಂದು ರೀತಿ, ಅಧಿಕಾರ ಕಳೆದುಕೊಂಡಾಗ ಒಂದು ರೀತಿ ವರ್ತಿಸುವುದನ್ನು ಕಾಣಬಹುದು ಎಂದು ಎಂದು ಬಸವರಾಜ್‌ರವರು ತಿಳಿಸಿದರು.

ರೈತ ನಾಯಕ ಕೋಡಿಹಳ್ಳಿ ಚಂದ್ರಶೇಖರ್ ಮಾತನಾಡಿ, “ಕೇಂದ್ರ ಸರ್ಕಾರ ಜಾರಿಗೊಳಿಸಿದ ಕಾನೂನುಗಳು ಸಂಪೂರ್ಣವಾಗಿ ಜಾರಿಯಾಗಬೇಕಾದರೆ ರಾಜ್ಯಗಳು ಸಹ ಅವುಗಳಿಗೆ ಪೂರಕವಾಗಿ ಕಾನೂನುಗಳನ್ನು ತರಬೇಕು. ಇಂದು ದೇಶದಲ್ಲಿ 16 ರಾಜ್ಯಗಳಲ್ಲಿ ಬಿಜೆಪಿ ಆಡಳಿತದಲ್ಲಿದೆ. ಆ ಯಾವ ರಾಜ್ಯಗಳು ಈ ಕೃಷಿ ಕಾನೂನನ್ನು ಜಾರಿಗೆ ತರುವ ಪ್ರಯತ್ನ ಮಾಡಲಿಲ್ಲ. ಆದರೆ ಕರ್ನಾಟಕ ಜಾರಿಗೆ ತಂದಿರುವುದು ನಮ್ಮ ದುರಂತ” ಎಂದರು.

ಇದರ ಪರಿಣಾಮವಾಗಿ ರೈತರು ಹಳ್ಳಿಗಳಿಂದ ಕಳೆದುಹೋಗುತ್ತಿದ್ದಾರೆ. ಕೃಷಿ ಮಾರುಕಟ್ಟೆ ಮತ್ತು ಕೃಷಿ ಭೂಮಿ ರೈತರ ಕೈತಪ್ಪುತ್ತಿದೆ. ಎಪಿಎಂಸಿ ಕಾಯ್ದೆ ಜಾರಿಗೆ ಬಂದರೆ ಕೆಲವೇ ತಿಂಗಳಿನಲ್ಲಿ ನಮ್ಮ ಮಾರುಕಟ್ಟೆ ಶಕ್ತಿ ಕಳೆದುಕೊಳ್ಳುತ್ತದೆ ಎಂದು ನಾವು ಎಚ್ಚರಿಸಿದ್ದೆವು. ಅದರಂತೆ ಈಗ
ಕೃಷಿ ಉತ್ಪನನ್ನ ಮಾರುಕಟ್ಟೆ ವರದಿ ತೆಗೆಸಿಕೊಂಡಿದ್ದೇನೆ. ಶೇ. 80ರಷ್ಟು ಭಾಗ ಕೃಷಿ ಉತ್ಪನ್ನಗಳು ಮಾರುಕಟ್ಟೆಗೆ ಬರುತ್ತಿಲ್ಲ. ತೆರಿಗೆ ಕಟ್ಟುವುದನ್ನು ತಪ್ಪಿಸಿಕೊಳ್ಳಲು ಮತ್ತು ತಮಗಿಷ್ಟ ಬಂದಂತೆ ಮಾಡಲು ವ್ಯಾಪಾರಿಗಳು ಮುಂದಾಗುತ್ತಿದ್ದಾರೆ ಎಂದರು.

ಕರ್ನಾಟಕ ಪ್ರಾಂತ ರೈತ ಸಂಘದ ಟಿ.ಯಶವಂತ್‌ರವರು ಮಾತನಾಡಿ “2018ರ ಅಂಕಿಅಂಶದ ಪ್ರಕಾರ ಕನಿಷ್ಠ ಭೂಮಿ ಇಲ್ಲದ ಶೇ. 35ರಷ್ಟು ಜನರು ದೇಶದಲ್ಲಿದ್ದಾರೆ. ಒಂದು ಎಕರೆ, ಅರ್ಧ ಎಕರೆ ಹೊಂದಿರುವ ಸಣ್ಣ ರೈತರನ್ನೆಲ್ಲ ಭೂಮಿ ಹೀನರು ಎಂದು ತಿಳಿದರೆ ಈ ಪ್ರಮಾಣ ಶೇ. 90ರಷ್ಟಾಗುತ್ತದೆ. ಭೂ ಕಾಯ್ದೆ ತಿದ್ದುಪಡಿಯ ಅಪಾಯ ಇರುವುದು ಇಲ್ಲಿ. ನಾನು ರೈತ ಸಂಘಕ್ಕೆ ಬಂದಾಗ ಇದ್ದ ಒಂದು ಕ್ವಿಂಟಾಲ್ ಭತ್ತದ ಬೆಲೆ ಎಷ್ಟಿತ್ತೋ ಅಷ್ಟೇ ಈಗಲೂ ಇದೆ. ಹದಿನೈದು ವರ್ಷಗಳ ಹಿಂದೆ ಇದ್ದ ಚಪ್ಪಲಿ ಬೆಲೆ ಈಗಲೂ ಅಷ್ಟೇ ಇದೆಯೇ? ಎಂದು ಪ್ರಶ್ನಿಸಿದರು.

ರೈತ ನಾಯಕಿ ಕವಿತಾ ಕುರುಗಂಟಿ ಮಾತನಾಡಿ, “ರೈತರ ಹೋರಾಟ ಈಗ ಶುರುವಾಗಿದ್ದಲ್ಲ. ಬಿಜೆಪಿ ಅಧಿಕಾರಕ್ಕೆ ಬಂದಾಗಿನಿಂದ ಹೋರಾಟ ನಡೆಸಲಾಗುತ್ತಿದೆ. ಸಂಪೂರ್ಣ ಸಾಲ ಮನ್ನಾ, ಎಂಎಸ್‌ಪಿ ಶಾಸನಬದ್ಧತೆಗಾಗಿ 2017 ರಿಂದ ಹೋರಾಟ ನಡೆಯುತ್ತಿದೆ” ಎಂದರು.

“ರೈತರು ಹೇಳಿದ ಎಲ್ಲ ಮಾತುಗಳು ನಿಜವಾಗಿದೆ. ಎಪಿಎಂಸಿ- ಕುರಿತು ವ್ಯಕ್ತಪಡಿಸಿದ ಆತಂಕ ನಿಜವಾಗಿದೆ. ಇಂದಿನ ಪ್ರಜಾವಾಣಿಯ ಮುಖಪುಟದ ವರದಿಯು ಇದನ್ನೇ ಹೇಳುತ್ತಿದೆ. ಎಪಿಎಂಸಿ ಬಿಟ್ಟು ಹೊರಗಡೆ ವ್ಯಾಪಾರ ಮಾಡಿದರೆ ರೈತರಿಗೆ ಮೋಸವಾಗುತ್ತದೆ. ಈ ತಿದ್ದುಪಡಿ ಕಾಯ್ದೆಗಳಿಂದ ರೈತರಿಗೆ ಯಾವ ರೀತಿ ಉಪಯೋಗವಾಗುತ್ತದೆ ಎಂದು ಕೇಳಿದರೆ ಪ್ರಧಾನಿ ಮೋದಿಯವರ ಬಳಿ ಉತ್ತರವಿಲ್ಲ” ಎಂದು ತಿಳಿಸಿದರು.

ಪಂಜಾಬ್‌ನಲ್ಲಿ ಬಿಜೆಪಿ ಶಾಸಕರು, ಸಂಸದರು ಎಲ್ಲೇ ಹೋದರು ರೈತರು ಮುತ್ತಿಗೆ ಹಾಕುತ್ತಾರೆ. ಕಪ್ಪು ಬಾವುಟ ತೋರಿಸಿ ಪ್ರತಿಭಟನೆ ನಡೆಸುತ್ತಾರೆ. ರಾತ್ರಿ ಹೊತ್ತು ಅವರು ಕಾರ್ಯಕ್ರಮಗಳನ್ನು ನಡೆಸಬೇಕಾದ ಪರಿಸ್ಥಿತಿ ಬಂದಿದೆ. ಇದನ್ನು ದೇಶದ್ಯಂತ ವಿಸ್ತರಿಸಬೇಕು ಎಂದರು.

ಕರ್ನಾಟಕ ಜನಶಕ್ತಿಯ ರಾಜ್ಯಾಧ್ಯಕ್ಷರಾದ ನೂರ್ ಶ್ರೀಧರ್‌ರವರು ಸಮಾರೋಪ ನುಡಿಗಳನ್ನಾಡುತ್ತಾ “ಇದೊಂದು ಐತಿಹಾಸಿಕ ಸಂದರ್ಭ, ಇದರಲ್ಲಿ ರೈತ ಸಮುದಾಯ ಮಾಡು ಇಲ್ಲವೆ ಮಡಿ ಎಂಬ ಹೋರಾಟಕ್ಕಿಳಿದಿದೆ. ಈ ಸಂದರ್ಭದಲ್ಲಿ ಅನ್ನದ ರುಣ ಹೊಂದಿರುವ ನಾವೆಲ್ಲರೂ ಅವರೊಂದಿಗೆ ಕೈಜೋಡಿಸುವುದು ನಮ್ಮ ಕರ್ತವ್ಯ, ನಮ್ಮ ದೇಶ ಮತ್ತು ಅನ್ನದಾತರ ಉಳಿವಿಗಾಗಿ ಒಗ್ಗೂಡೋಣ” ಎಂದು ಕರೆ ನೀಡಿದರು. ಈ ನಿಟ್ಟಿನಲ್ಲಿ ಜನರಲ್ಲಿ ಅರಿವು ಮೂಡಿಸಲು, ನವೆಂಬರ್ 10ರಿಂದ 20ರವೆಗೆ ಕರ್ನಾಟಕ ಜನಶಕ್ತಿ ‘ಹಳ್ಳಿ ಉಳಿಸಿ’ ಅಭಿಯಾನ ಹಮ್ಮಿಕೊಂಡಿರುವುದಾಗಿ ತಿಳಿಸಿದರು.


ಇದನ್ನೂ ಓದಿ: ದೆಹಲಿ ಹೋರಾಟದಲ್ಲಿ ಮೃತಪಟ್ಟ ಹೆಚ್ಚಿನ ರೈತರು 3 ಎಕರೆಗಿಂಲೂ ಕಡಿಮೆ ಜಮೀನು ಹೊಂದಿರುವವರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾವಿನ ವಿಷ ಪ್ರಕರಣ : ಎಲ್ವಿಶ್ ಯಾದವ್ ವಿರುದ್ಧದ ಎಫ್‌ಐಆರ್ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಯೂಟ್ಯೂಬರ್ ಎಲ್ವಿಶ್ ಯಾದವ್ ವಿರುದ್ಧದ ಹಾವಿನ ವಿಷ ಪ್ರಕರಣಕ್ಕೆ ಸಂಬಂಧಿಸಿದ ಎಫ್‌ಐಆರ್ ಮತ್ತು ಕ್ರಿಮಿನಲ್ ಪ್ರಕ್ರಿಯೆಗಳನ್ನು ಸುಪ್ರೀಂ ಕೋರ್ಟ್ ಗುರುವಾರ (ಮಾ.19) ರದ್ದುಗೊಳಿಸಿದೆ.  ವನ್ಯಜೀವಿ (ರಕ್ಷಣೆ) ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಲು ಅಧಿಕೃತ ವ್ಯಕ್ತಿಯಿಂದ ದೂರು...

ದೆಹಲಿಯ ಉತ್ತಮ್ ನಗರದಲ್ಲಿ ಮುಸ್ಲಿಮರಿಗೆ ಬೆದರಿಕೆ; ಅಮಿತ್ ಶಾಗೆ ಪತ್ರ ಬರೆದ ವಿಪಕ್ಷ ಸಂಸದರು

ರಾಷ್ಟ್ರ ರಾಜಧಾನಿಯ ಉತ್ತಮ್ ನಗರದಲ್ಲಿ ಮುಸ್ಲಿಮರನ್ನು ಗುರಿಯಾಗಿಸಿಕೊಂಡು ಹಿಂದುತ್ವ ಗುಂಪುಗಳು ಮಾಡುತ್ತಿರುವ ಬೆದರಿಕೆಗಳ ಬಗ್ಗೆ ತುರ್ತು ಹಸ್ತಕ್ಷೇಪವನ್ನು ಕೋರಿ ಹಲವಾರು ವಿರೋಧ ಪಕ್ಷದ ಸದಸ್ಯರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ...

‘ಇರಾನ್ ಕತಾರ್ ಮೇಲೆ ಮತ್ತೊಮ್ಮೆ ದಾಳಿ ಮಾಡಿದರೆ, ಸೌತ್ ಪಾರ್ಸ್ ಅನಿಲ ಕ್ಷೇತ್ರವನ್ನು ಸ್ಪೋಟಿಸುತ್ತೇವೆ’; ಟ್ರಂಪ್ ಬೆದರಿಕೆ

ಇರಾನ್ ಕತಾರ್‌ನ ಇಂಧನ ಸೌಲಭ್ಯಗಳನ್ನು ಗುರಿಯಾಗಿಸಿಕೊಂಡರೆ, ಅಮೆರಿಕ ”ಸೌತ್ ಪಾರ್ಸ್ ಅನಿಲ ಕ್ಷೇತ್ರವನ್ನು ಬೃಹತ್ ಪ್ರಮಾಣದಲ್ಲಿ ಸ್ಫೋಟಿಸುತ್ತದೆ” ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ರಾಜ್ಯಸಭೆಯಲ್ಲಿ ಎಚ್ಚರಿಸಿದ್ದಾರೆ. ಇರಾನ್‌ನ ಸೌತ್ ಪಾರ್ಸ್ ಗ್ಯಾಸ್...

ಮುಸ್ಲಿಂ ಪ್ರಯಾಣಿಕರ ಮೇಲೆ ಹಲ್ಲೆ ನಡೆಸಿದ್ದಾಗಿ ಹೇಳಿಕೊಂಡ ಓಲಾ ಚಾಲಕ; ‘ಇಸ್ಲಾಮೋಫೋಬಿಕ್’ ಕುರಿತು ಆತಂಕ ವ್ಯಕ್ತಪಡಿಸಿದ ವಕೀಲ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿನ ಓಲಾ ಕ್ಯಾಬ್ ಪ್ರಯಾಣದ ಸಂದರ್ಭದಲ್ಲಿ ಚಾಲಕನಿಂದ ನನಗೆ ಬೆದರಿಕೆ ಮತ್ತು ಇಸ್ಲಾಮೋಫೋಬಿಕ್ ಹೇಳಿಕೆಗಳು ಬಂದಿವೆ ಎಂದು ಸುಪ್ರೀಂ ಕೋರ್ಟ್ ವಕೀಲರೊಬ್ಬರು ಆರೋಪಿಸಿದ್ದಾರೆ. ಈ ಘಟನೆಯು, ಪ್ರಯಾಣಿಕರ ಸುರಕ್ಷತೆ ಮತ್ತು...

ಬೆಳ್ತಂಗಡಿ | ಮುಸ್ಲಿಂ ಬಾಲಕನ ಮೇಲೆ ಗುಂಪು ಹಲ್ಲೆ ಆರೋಪ; ಬಜರಂಗದಳದ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲು

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆಯ ಜನಾರ್ಧನ ಸ್ವಾಮಿ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಸ್ನೇಹಿತರೊಂದಿಗೆ ತೆರಳಿದ್ದ ಮುಸ್ಲಿಂ ಬಾಲಕನ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿ, ಅಪಹರಿಸಿ, ಬೆದರಿಕೆ ಹಾಕಿ ಆತ್ಮಹತ್ಯೆಗೆ ಪ್ರೇರೇಪಿಸಿದ ಆರೋಪದಡಿ...

ಉಮರ್ ಖಾಲಿದ್ ಬಂಧನ ನಿರಂಕುಶ; ಕಾನೂನು ಆಧಾರವಿಲ್ಲ: ವಿಶ್ವಸಂಸ್ಥೆ ಕಾರ್ಯಪಡೆ

"ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ವಿದ್ಯಾರ್ಥಿ ಕಾರ್ಯಕರ್ತ ಮತ್ತು ಸಂಶೊಧನಾ ವಿದ್ಯಾರ್ಥಿ ಉಮರ್ ಖಾಲಿದ್ ಅವರ ಬಂಧನವು ನಿರಂಕುಶವಾಗಿದೆ, ಅದಕ್ಕೆ ಯಾವುದೇ ಕಾನೂನು ಆಧಾರವಿಲ್ಲ" ಎಂದು ವಿಶ್ವಸಂಸ್ಥೆಯ ಸಮಿತಿ ಹೇಳಿದೆ. ಸಾಮಾಜಿಕ ಕಾರ್ಯಕರ್ತರ...

ಮಹಾರಾಷ್ಟ್ರ | ಲೈಂಗಿಕ ದೌರ್ಜನ್ಯ ಆರೋಪ : ಸ್ವಯಂ ಘೋಷಿತ ದೇವಮಾನವನ ಬಂಧನ

ಮಹಿಳೆಯರನ್ನು ಅಸಭ್ಯವಾಗಿ ಚಿತ್ರೀಕರಿಸಿ, ಆ ವಿಡಿಯೋಗಳನ್ನು ಇಟ್ಟುಕೊಂಡು ಲೈಂಗಿಕವಾಗಿ ಶೋಷಣೆ ಮಾಡುತ್ತಿದ್ದ ಆರೋಪದ ಮೇಲೆ ಸ್ವಯಂಘೋಷಿತ ದೇವಮಾನವ ಮತ್ತು ಜ್ಯೋತಿಷಿ ಕ್ಯಾಪ್ಟನ್ ಅಶೋಕ್ ಖಾರಟ್‌ನನ್ನು ಮಹಾರಾಷ್ಟ್ರದ ನಾಸಿಕ್ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ....

‘ಕಾಂಗ್ರೆಸ್ ಜೊತೆ ಬಲವಂತದ ಮದುವೆ ಆಗಿತ್ತು’: ಖರ್ಗೆ ಅವರ ‘ಮೋದಿ ಜೊತೆ ಮದುವೆ’ ಟೀಕೆಗೆ ದೇವೇಗೌಡ ತಿರುಗೇಟು

ಸಂಸತ್ತಿನಲ್ಲಿ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರ 'ಮದುವೆ' ಮತ್ತು 'ಪ್ರೀತಿ' ಹೇಳಿಕೆಗೆ ಮಾಜಿ ಪ್ರಧಾನಿ ಮತ್ತು ರಾಜ್ಯಸಭಾ ಸಂಸದ ಎಚ್‌ಡಿ ದೇವೇಗೌಡ ಪ್ರತಿಕ್ರಿಯಿಸಿದ್ದಾರೆ. ದೇವೇಗೌಡರು ಕಾಂಗ್ರೆಸ್ ಅನ್ನು "ಪ್ರೀತಿಸಿದರು" ಆದರೆ ಮೋದಿ (ಬಿಜೆಪಿ)...

ರಾಹುಲ್ ಗಾಂಧಿಯನ್ನು ‘ಟಪೋರಿ’ ಎಂದು ಕರೆದ ಬಿಜೆಪಿ ಸಂಸದೆ ಕಂಗನಾ ರಣಾವತ್

ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ ಸಂಸದೆ - ನಟಿ ಕಂಗನಾ ರನೌತ್, ಅವರನ್ನು ಟಪೋರಿ ಎಂದು ಕರೆದಿದ್ದಾರೆ. ಅವರ ನಡವಳಿಕೆಯು ಮಹಿಳೆಯರಿಗೆ ಅನಾನುಕೂಲವನ್ನುಂಟು ಮಾಡುತ್ತದೆ ಎಂದು...

ಎಸ್‌ಬಿಐಗೆ ವಂಚನೆ ಪ್ರಕರಣ : ಅನಿಲ್ ಅಂಬಾನಿ ವಿಚಾರಣೆ ನಡೆಸಿದ ಸಿಬಿಐ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ದೂರಿನ ಮೇರೆಗೆ ರಿಲಯನ್ಸ್ ಕಮ್ಯುನಿಕೇಷನ್ಸ್ ಲಿಮಿಟೆಡ್ ವಿರುದ್ಧ ದಾಖಲಾಗಿರುವ 2,929 ಕೋಟಿ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ (ಮಾ.19) ಕೈಗಾರಿಕೋದ್ಯಮಿ ಅನಿಲ್ ಅಂಬಾನಿ ಅವರನ್ನು ಕೇಂದ್ರ...