Homeಮುಖಪುಟಒಂದಿಬ್ಬರ ಅಹಂನಿಂದ ಕೃಷಿ ಕಾಯ್ದೆಗಳನ್ನು ಹಿಂಪಡೆಯುತ್ತಿಲ್ಲ: ಕೇಂದ್ರದ ವಿರುದ್ಧ ಕಿಡಿಕಾರಿದ ಮೇಘಾಲಯ ರಾಜ್ಯಪಾಲ

ಒಂದಿಬ್ಬರ ಅಹಂನಿಂದ ಕೃಷಿ ಕಾಯ್ದೆಗಳನ್ನು ಹಿಂಪಡೆಯುತ್ತಿಲ್ಲ: ಕೇಂದ್ರದ ವಿರುದ್ಧ ಕಿಡಿಕಾರಿದ ಮೇಘಾಲಯ ರಾಜ್ಯಪಾಲ

ದೆಹಲಿಯಲ್ಲಿ ಹೋರಾಡುತ್ತಿರುವ ರೈತರು ಖಾಲಿ ಕೈಯಲ್ಲಿ ಹಿಂದಿರುಗುವುದಿಲ್ಲ. ಅವರು ಹೋರಾಟದಲ್ಲಿ ಯಶಸ್ವಿಯಾಗಿಯೇ ಹಿಂದಿರುಗುತ್ತಾರೆ.

- Advertisement -
- Advertisement -

ಮತ್ತೆ ರೈತ ಹೋರಾಟವನ್ನು ಬೆಂಬಲಿಸಿ ಹೇಳಿಕೆ ನೀಡಿರುವ ಮೇಘಾಲಯ ರಾಜ್ಯಪಾಲರಾದ ಸತ್ಯಪಾಲ್ ಮಲ್ಲಿಕ್ “ನಾಯಿ ಕಚ್ಚಿ ಸತ್ತವರಿಗೂ ಸಂತಾಪ ಸೂಚಿಸುವವರಿಗೆ ಕೃಷಿ ಕಾಯ್ದೆಗಳ ವಿರುದ್ಧ ಹೋರಾಡಿ ಮಡಿದ 600ಕ್ಕೂ ಹೆಚ್ಚು ರೈತರು ಕಾಣದಿರುವುದು ದುರಂತ” ಎಂದು ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಜೈಪುರದಲ್ಲಿ ಜಾಟ್ ಸಮುದಾಯದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾತನಾಡಿದ ಅವರು, “ಕೇಂದ್ರ ಸರ್ಕಾರದಲ್ಲಿ ಬಹಳಷ್ಟು ಮಂದಿ ರೈತರ ಪರವಾಗಿದ್ದಾರೆ. ಆದರೆ ಒಂದಿಬ್ಬರ ಅಹಂನಿಂದಾಗಿ ಕೃಷಿ ಕಾಯ್ದೆಗಳನ್ನು ಹಿಂಪಡೆಯುತ್ತಿಲ್ಲ” ಎಂದಿದ್ದಾರೆ.

ನನ್ನನ್ನು ರಾಜ್ಯಪಾಲ ಹುದ್ದೆಯಿಂದ ಕೆಳಗಿಳಿದರೂ ಯೋಚಿಸುವುದಿಲ್ಲ. ನಾನು ಸತ್ಯದ ಪರ ಮಾತನಾಡುತ್ತೇನೆ. ಕೃಷಿ ಕಾಯ್ದೆಗಳನ್ನು ಹಿಂಪಡೆಯದೇ ಸಿಖ್ ಸಮುದಾಯವನ್ನು ಎದುರು ಹಾಕಿಕೊಂಡಿರುವವರು ಇಂದಿರಾ ಗಾಂಧಿಯವರ ಹತ್ಯೆಯನ್ನು ಮರೆಯಬಾರದು ಎಂದು ಎಚ್ಚರಿಕೆ ನೀಡಿದ್ದಾರೆ.

ದೆಹಲಿಯಲ್ಲಿ ಹೋರಾಡುತ್ತಿರುವ ರೈತರು ಖಾಲಿ ಕೈಯಲ್ಲಿ ಹಿಂದಿರುಗುವುದಿಲ್ಲ. ಅವರು ಹೋರಾಟದಲ್ಲಿ ಯಶಸ್ವಿಯಾಗಿಯೇ ಹಿಂದಿರುಗುತ್ತಾರೆ. ನಾನು ರೈತ ಹೋರಾಟವನ್ನು ಸಂಪೂರ್ಣವಾಗಿ ಬೆಂಬಲಿಸುತ್ತೇನೆ. ಅದಕ್ಕಾಗಿ ದೆಹಲಿ ನಾಯಕರು ನನ್ನನ್ನು ರಾಜ್ಯಪಾಲ ಹುದ್ದೆಯಿಂದ ಕೆಳಗಿಳಿಸಿದರೂ ಚಿಂತೆಯಿಲ್ಲ ಎಂದು ಸತ್ಯಪಾಲ್ ಮಲ್ಲಿಕ್ ಹೇಳಿದ್ದಾರೆ.

ರೈತ ಹೋರಾಟವು ಸೈನ್ಯದ ಮೇಲೂ ಭಾರೀ ಪ್ರಭಾವ ಬೀರಿದೆ. ರೈತರ ಮಕ್ಕಳು ಸೈನ್ಯದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಅನ್ಯಾಯ ನಡೆದಾಗ ಒಂದು ದಿನ ಜನರು ಅದಕ್ಕೆ ಪ್ರತಿಕ್ರಿಯೆ ನೀಡುತ್ತಾರೆ ಎಂದು ಸರ್ಕಾರಕ್ಕೆ ಗಂಭೀರ ಎಚ್ಚರಿಕೆ ನೀಡಿದ್ದಾರೆ.

ಹರಿಯಾಣದ ಮುಖ್ಯಮಂತ್ರಿ ಮನೋಹರ್ ಲಾಲ್ ಕಟ್ಟರ್‌ರವರ ಹೆಲಿಕ್ಯಾಪ್ಟರ್‌ ಎಲ್ಲಿಯೂ ಇಳಿಯಲು ಬಿಡುತ್ತಿಲ್ಲ ಎಂದರೆ ರೈತರ ಪ್ರತಿರೋಧವನ್ನು ಸರ್ಕಾರ ಅರ್ಥಮಾಡಿಕೊಳ್ಳಬೇಕು ಎಂದು ಅವರು ಹೇಳಿದ್ದಾರೆ.

ಕನಿಷ್ಟ ಬೆಂಬಲ ಬೆಲೆ ಖಾತ್ರಿ ನೀಡುವ ಮೂಲಕ ರೈತರ ಸಮಸ್ಯೆಯನ್ನು ಬಗೆಹರಿಸಬಹುದು. ಕೃಷಿ ಕಾಯ್ದೆಗಳು ಸಂಸತ್ತಿನಲ್ಲಿ ಜಾರಿಯಾಗುವ ಮೊದಲೇ ಹರಿಯಾಣದಲ್ಲಿ ಅದಾನಿ ಗೌಡೋನ್‌ಗಳು ಸ್ಥಾಪನೆಯಾಗಿವೆ ಎಂದು ಅವರು ಈ ಕಾಯ್ದೆಗಳ ಅಪಾಯದ ಕುರಿತು ಮಾತನಾಡಿದ್ದಾರೆ.

ಸೆಂಟ್ರಲ್ ವಿಸ್ತಾ ಯೋಜನೆಯನ್ನು ವಿರೋಧಿಸಿದ ಅವರು, ದೇಶದಲ್ಲಿ ಶಿಕ್ಷಣದ ಕೊರತೆಯಿದೆ. ಹಾಗಾಗಿ ಹೊಸ ಸಂಸತ್ ಭವನ ನಿರ್ಮಿಸುವ ಬದಲು ವಿಶ್ವದರ್ಜೆಯ ಕಾಲೇಜುಗಳನ್ನು ಸ್ಥಾಪಿಸಿದರೆ ಉಪಯೋಗ ಎಂದು ಸಲಹೆ ನೀಡಿದ್ದಾರೆ.


ಇದನ್ನೂ ಓದಿ: ಆರ್‌ಎಸ್‌ಎಸ್‌, ಬಿಜೆಪಿಯಲ್ಲಿ ಭಾರೀ ಭ್ರಷ್ಟಾಚಾರ: ಮೇಘಾಲಯ ರಾಜ್ಯಪಾಲರ ಗಂಭೀರ ಆರೋಪ


ಜಮ್ಮು ಕಾಶ್ಮೀರ ಮತ್ತು ಗೋವಾದ ಮಾಜಿ ರಾಜ್ಯಪಾಲರೂ ಆಗಿರುವ ಸತ್ಯಪಾಲ್ ಮಲ್ಲಿಕ್ ಕಳೆದ ಒಂದು ವರ್ಷದಿಂದ ನಿರಂತರವಾಗಿ ಕೇಂದ್ರ ಸರ್ಕಾರ ಮತ್ತು ಬಿಜೆಪಿ ವಿರುದ್ಧ ಟೀಕೆ ಮಾಡುತ್ತಿದ್ದಾರೆ.

ಗೋವಾದ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಹೆಜ್ಜೆ ಹೆಜ್ಜೆಗೂ ಭ್ರಷ್ಟಾಚಾರದಲ್ಲಿ ಮುಳುಗಿದ್ದಾರೆ. ಮೊದಲ ಲಾಕ್‌ಡೌನ್ ಸಂದರ್ಭದಲ್ಲಿ ಆಹಾರ ವಿತರಿಸುವ ವೇಳೆ ಕೋಟ್ಯಾಂತರ ರೂ ಗುಳುಂ ಮಾಡಿದ್ದಾರೆ ಎಂದು ಖಾಸಗಿ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಸತ್ಯ ಪಾಲ್ ಮಲ್ಲಿಕ್ ಆರೋಪಿಸಿದ್ದರು.

ನಾನು ಜಮ್ಮು ಮತ್ತು ಕಾಶ್ಮೀರದ ರಾಜ್ಯಪಾಲನಾಗಿದ್ದ ವೇಳೆ ಎರಡು ಕಡತಗಳು ನನ್ನ ಮುಂದೆ ಬಂದಿದ್ದವು. ಒಂದು ಮುಖೇಶ್ ಅಂಬಾನಿಗೆ ಸೇರಿದ್ದರೆ ಮತ್ತೊಂದು ಆರ್‌ಎಸ್‌ಎಸ್‌ ನಾಯಕನಿಗೆ ಸೇರಿತ್ತು. ಅದಕ್ಕೆ ಸಹಿ ಹಾಕಿದರೆ 300 ಕೋಟಿ ಲಂಚ ಕೊಡುವುದಾಗಿ ಆಮಿಷವೊಡ್ಡಿದ್ದರು. ಆದರೆ ನಾನು ಆ ಕೆಲಸ ಮಾಡಲಿಲ್ಲ ಬದಲಿಗೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಈ ವಿಷಯ ತಿಳಿಸಿದ್ದೆ ಎಂದು ಮಲ್ಲಿಕ್ ಹೇಳಿದ್ದರು.


ಇದನ್ನೂ ಓದಿ: ‘ನನ್ನನ್ನು ಕಿತ್ತು ಹಾಕಿದರೂ ನಾನು ಮಾತನಾಡುತ್ತೇನೆ’-ರೈತರನ್ನು ಮತ್ತೆ ಬೆಂಬಲಿಸಿದ ಮೇಘಾಲಯ ರಾಜ್ಯಪಾಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...