Homeಕರ್ನಾಟಕಇಂದು ವನದೇವತೆ ಹಾಲಕ್ಕಿ ಬುಡಕಟ್ಟಿನ ತುಳಸಜ್ಜಿಗೆ ಪದ್ಮಶ್ರೀ ಪುರಸ್ಕಾರ

ಇಂದು ವನದೇವತೆ ಹಾಲಕ್ಕಿ ಬುಡಕಟ್ಟಿನ ತುಳಸಜ್ಜಿಗೆ ಪದ್ಮಶ್ರೀ ಪುರಸ್ಕಾರ

- Advertisement -
- Advertisement -

ಇಂದು ನವದೆಹಲಿಯಲ್ಲಿ ಉತ್ತರ ಕನ್ನಡದ ಹಾಲಕ್ಕಿ ಬುಡಕಟ್ಟಿನ ತುಳಸಿ ಗೌಡರಿಗೆ ರಾಷ್ಟ್ರಪತಿಗಳು ಪದ್ಮ ಪುರಸ್ಕಾರ ನೀಡಿ ಗೌರವಿಸಲಿದ್ದಾರೆ. ಇದರೊಂದಿಗೆ ಉತ್ತರ ಕನ್ನಡ ಜಿಲ್ಲೆಗೆ ಮೂರು ಪದ್ಮಶ್ರೀ ಪ್ರಶಸ್ತಿ ದೊರಕಿದಂತಾಗುತ್ತದೆ. ಇದು ಜಿಲ್ಲೆಯಲ್ಲಿ ಹೆಮ್ಮೆ-ಸಂಭ್ರಮ ಉಂಟುಮಾಡಿದೆ. ವಿಶೇಷವೆಂದರೆ ಇದರಲ್ಲಿ ಯಕ್ಷಗಾನದ ಮೇರು ಕಲಾವಿದ ಚಿಟ್ಟಾಣಿ ರಾಮಚಂದ್ರ ಹೆಗಡೆ ಬಿಟ್ಟರೆ ಉಳಿದೆರಡು ಪದ್ಮಶ್ರೀ ಜಿಲ್ಲೆಯ ಹೆಮ್ಮೆಯ ಅಸ್ಮಿತೆಯಂತಿರುವ ಹಾಲಕ್ಕಿ ಒಕ್ಕಲಿಗ ಬುಡಕಟ್ಟು ಸಮುದಾಯದ ಶ್ರಮ ಸಂಸ್ಕೃತಿಯ ಮಹಿಳೆಯರಿಬ್ಬರ ಅರಸಿ ಬಂದಿದೆ!

ಅದೇ ರೀತಿಯಾಗಿ ಇಂದು ಅಕ್ಷರ ಸಂತ ಎಂದು ಕರೆಸಿಕೊಂಡ ದಕ್ಷಿಣ ಕನ್ನಡದ ಹರೇಕಳ ಹಾಜಬ್ಬನವರಿಗೆ ದೆಹಲಿಯಲ್ಲಿ ಪದ್ಮಶ್ರೀ ಪ್ರಶಸ್ತಿ ಪ್ರದಾನ ಮಾಡಲಾಗುವುದು.

ಚಿಟ್ಟಾಣಿಯವರಿಗೆ 2012ರಲ್ಲಿ ಪದ್ಮ ಪುರಸ್ಕಾರದಿಂದ ಗೌರವಿಸಲಾಗಿತ್ತು. ಹಾಲಕ್ಕಿ ಬುಡಕಟ್ಟು ಸಮುದಾಯದ ಸುಕ್ರಜ್ಜಿ (ಸುಕ್ರಿ ಬೊಮ್ಮ ಗೌಡ)ರವರಿಗೆ 2017ರಲ್ಲಿ ಪದ್ಮಶೀ ಪ್ರಶಸ್ತಿ ಬಂದಾಗ ಇಡೀ ಜಿಲ್ಲೆಯಲ್ಲಿ ಸಡಗರ ತುಂಬಿತ್ತು. ಇದೊಂದು ಯಾವ ಲಾಬಿ-ಶಿಫಾರಸ್ಸು ಇಲ್ಲದೆ ನೈಜ ಪ್ರತಿಭೆಗೆ ಸಂದ ಗೌರವ! ಸುಕ್ರಜ್ಜಿಯನ್ನು ಜಿಲ್ಲೆಯ ದಶದಿಕ್ಕಿಗೆ ಕರೆದು ಸನ್ಮಾನಿಸಲಾಗಿತ್ತು. ಜಾನಪದ ಹಾಡುಗಳ ಕಣಜವೆಂಬ ಖ್ಯಾತಿಯ ಸುಕ್ರಜ್ಜಿಯ ನಾಲಿಗೆಯಲ್ಲಿ 5000ಕ್ಕಿಂತ ಹೆಚ್ಚು ಹಾಡುಗಳಿವೆ. ಇದನ್ನು ಕಾರವಾರದ ಆಕಾಶವಾಣಿ ನಿಲಯ ಅಖಿಲ ಭಾರತ ರೇಡಿಯೋ ಧ್ವನಿ ಮುದ್ರಣ ಯೋಜನೆಯಲ್ಲಿ ದಾಖಲಿಸಿಟ್ಟಿದೆ. ಕರ್ನಾಟಕ ಜಾನಪದ ಅಕಾಡಮಿ ಸುಕ್ರಜ್ಜಿಯವರ ಹಾಡುಗಳ ಪುಸ್ತಕ ಹೊರತಂದಿದೆ. ಸುಕ್ರಿ ಗೌಡರಿಗೆ 1999ರಲ್ಲಿ ಜಾನಪದಶ್ರೀ ಪ್ರಶಸ್ತಿ ಬಂದಾಗ ಅವರು ನಾಡಿನ ಹೆಮ್ಮೆಯ ಅಜ್ಜಿಯೆಂದು ಲಂಕೇಶ್ ಪತ್ರಿಕೆ ಬರೆದಿತ್ತು. ಅಂದಿನಿಂದ ಸುಕ್ರಿ ಗೌಡರು ನಾಡಿನ ಜಾನಪದ, ಸಾಮಾಜಿಕ ಲೋಕದ ಅಜ್ಜಿಯೆಂದೇ ಗುರುತಿಸಲ್ಪಟ್ಟರು. ಸಾರಾಯಿ ವಿರೋಧಿ ಆಂದೋಲನವೇ ಮುಂತಾದ ಸಾಮಾಜಿಕ ಹೋರಾಟದಲ್ಲಿ ಸಕ್ರಿಯರಾಗಿದ್ದರು.

ಈಗ ಪದ್ಮಶ್ರೀ ಸ್ವಿಕರಿಸುತ್ತಿರುವ ಅಂಕೋಲೆಯ ತುಳಸಿ ಗೌಡರು ಆರೇಳು ದಶಕದಿಂದ ಪ್ರತಿ ವರ್ಷ 30 ಸಾವಿರ ಸಸಿಗಳನ್ನು ನೆಟ್ಟು ಪೋಷಿಸುತ್ತ ಬಂದಿದ್ದಾರೆ. 72 ವರ್ಷದ ತುಳಸಜ್ಜಿ ವನದೇವತೆಯೆಂದೇ ಜನಜನಿತರಾಗಿದ್ದಾರೆ! ಕೇಂದ್ರ ಸರ್ಕಾರದ ಪ್ರಿಯದರ್ಶಿನಿ ವೃಕ್ಷ ಮಿತ್ರ ಪ್ರಶಸ್ತಿ, ರಾಜೋತ್ಸವ ಪ್ರಶಸ್ತಿ ಸಹ ತುಳಸಜ್ಜಿಗೆ ಸಂದಿವೆ. ಪ್ರಶಸ್ತಿ ಸ್ವೀಕರಿಸಲು ದಿಲ್ಲಿಗೆ ತೆರಳಿರುವ ಅವರನ್ನು ಅಂಕೋಲೆ ಜನರು ಖರ್ಚಿಗೆಂದು ಹಣ ಸಂಗ್ರಹಿಸಿ ಕೊಟ್ಟು, ಸನ್ಮಾನಿಸಿ ಸಡಗರದಲ್ಲಿ ಬೀಳ್ಕೊಟ್ಟಿದ್ದಾರೆ.

ದಿಲ್ಲಿಗೆ ಹೋಗಲೆಂದು ಜನರು ಕೂಡಿಸಿ ಕೊಟ್ಟಿರುವ 1 ಲಕ್ಷ 16 ಸಾವಿರ ರೂಗಳಲ್ಲಿ ಒಂದಿಷ್ಟನ್ನು ಅನಾರೋಗ್ಯದಲ್ಲಿರುವ ಜಾನಪದ ಕೋಗಿಲೆ ಸುಕ್ರಜ್ಜಿಯ ಆಸ್ಪತ್ರೆ ಖರ್ಚಿಗೆಂದು ತುಳಸಜ್ಜಿ ಕೊಟ್ಟಿದ್ದಾರೆ. ಈ ಮಾನವೀಯ ಕಳಕಳಿ ಜಿಲ್ಲೆಯ ಹೃದಯವನ್ನು ಆರ್ದ್ರವಾಗಿಸಿದೆ! ಇದಕ್ಕಿಂತ ದೊಡ್ಡ ಮನುಷ್ಯತ್ವ ಇನ್ನೇನಿದೆ? ಹಾಲಕ್ಕಿ ಬುಡಕಟ್ಟು ಸಮುದಾಯಕ್ಕೆ ಪರಿಶಿಷ್ಟ ಪಂಗಡ ಮೀಸಲಾತಿ ಒದಗಿಸುವಂತೆ ಸುಕ್ರಜ್ಜಿ, ತುಳಸಜ್ಜಿ ಆದಿಯಾಗಿ ಆ ಜನಾಂಗದವರು ದಶಕಗಳಿಂದ ಹೋರಾಡಿತ್ತಿದ್ದಾರೆ. ಈಗಲಾದರೂ ಹಾಲಕ್ಕಿಗಳು ಹೆಚ್ಚಿರುವ ಕಾರವಾರ ಹಾಗೂ ಕುಮಟಾ ಕ್ಷೇತ್ರದ ಶಾಸಕರಾದ ರೂಪಾಲಿ ನಾಯ್ಕ್ ಮತ್ತು ದಿನಕರ ಶೆಟ್ಟಿ ಸಂಸದ ಅನಂತಕುಮಾರ್ ಹೆಗಡೆ ಮೇಲೆ ಒತ್ತಡ ಹಾಕಿ ಇಚ್ಚಾ ಶಕ್ತಿ ತೋರಿಸುವರಾ ಎಂದು ಕಾದು ನೋಡಬೇಕಾಗಿದೆ.


ಇದನ್ನೂ ಓದಿ: ಬುಡಕಟ್ಟು ಹಾಲಕ್ಕಿ ಒಕ್ಕಲಿಗರನ್ನು ಎಸ್‌‌ಟಿಗೆ ಸೇರಿಸಲು ಅಡ್ಡಗಾಲು ಹಾಕುತ್ತಿರುವುದು ಯಾರು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ನಿಂದ ಏಪ್ರಿಲ್ 12ರಂದು ‘ರನ್ ಫಾರ್ ಅಂಬೇಡ್ಕರ್, ರನ್ ಫಾರ್ ಕಾನ್ಸ್ಟಿಟ್ಯೂಷನ್’ ಮ್ಯಾರಥಾನ್ ಆಯೋಜನೆ

ನವದೆಹಲಿ: ಬಿ.ಆರ್. ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯ ಅಂಗವಾಗಿ ಕಾಂಗ್ರೆಸ್ ಭಾನುವಾರ 'ಅಂಬೇಡ್ಕರ್‌ಗಾಗಿ ಓಟ, ಸಂವಿಧಾನಕ್ಕಾಗಿ ಓಟ' ಮ್ಯಾರಥಾನ್ ಆಯೋಜಿಸಿದೆ. ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಇಲ್ಲಿನ ಮಂಡಿ ಹೌಸ್‌ನಿಂದ ಮ್ಯಾರಥಾನ್‌ಗೆ...

ಮುಖ್ಯವಾಹಿನಿಗೆ ಬಂದ 42 ಕೇಡರ್‌ಗಳು; ರಾಜ್ಯದಲ್ಲಿ’ಮಾವೋವಾದಿ ಕಾರ್ಯಾಚರಣೆ’ ಅಂತ್ಯವಾಗಿದೆ ಎಂದ ತೆಲಂಗಾಣ ಪೊಲೀಸರು

ರಾಜ್ಯದಲ್ಲಿ ಸಿಪಿಐ (ಮಾವೋವಾದಿ) ಸಂಘಟನೆಯ ಕಾರ್ಯಚರಣೆ ಅಂತಿಮವಾಗಿದೆ ಎಂದು ತೆಲಂಗಾಣ ಪೊಲೀಸರು ಘೋಷಣೆ ಮಾಡಿದ್ದಾರೆ. ಬೆಟಾಲಿಯನ್ ಕಮಾಂಡರ್ ಮತ್ತು ಎರಡು ಪ್ರಮುಖ ಗುಂಪುಗಳ ಹಿರಿಯ ನಾಯಕತ್ವ ಸೇರಿದಂತೆ ನಿಷೇಧಿತ ಸಂಘಟನೆಯ 42 ಕೇಡರ್‌ಗಳು...

‘ಹಿಂದಿ ನಿರ್ಮೂಲನೆ ಮಾಡುತ್ತೇವೆ’ ಎಂದು ಸಚಿವರು ಹೇಳಿಲ್ಲ; ಹಿಂದಿ ಪರ ಅರ್ಜಿ ವಜಾ; ₹1 ಲಕ್ಷ ದಂಡ ವಿಧಿಸಿದ ಹೈಕೋರ್ಟ್‌

ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷಾ ವಿಷಯಗಳ ಮೌಲ್ಯಮಾಪನ ಸಂಬಂಧ ರಾಜ್ಯ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ನೀಡಿದ ಹೇಳಿಕೆಯ ವಿರುದ್ಧ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು (ಪಿಐಎಲ್) ಕರ್ನಾಟಕ...

ದೆಹಲಿ| ಮುಸ್ಲಿಮರ ಮೇಲಿನ ದ್ವೇಷಕ್ಕೆ ಜೀವಂತ ಹಂದಿಗಳನ್ನು ಪೂಜಿಸುತ್ತಿರುವ ಹಿಂದೂಗಳು

ಹಳೆಯ ದೆಹಲಿಯ ಹಿಂದೂ-ಮುಸ್ಲಿಂ ಜನರು ವಾಸಿಸುವ ತ್ರನಗರದ ನೆರೆಹೊರೆಯಲ್ಲಿ ಹಿಂದೂ ಕುಟುಂಬಗಳು ಜೀವಂತ ಹಂದಿಗಳನ್ನು ಪೂಜಿಸುತ್ತಿದ್ದಾರೆ. ಮುಸ್ಲಿಮರ ಮೇಲಿನ ದ್ವೇಷಕ್ಕೆ ಮನೆಯ ಮುಂಭಾಗ ಅಲಂಕೃತ ಹಂದಿ (ವರಹಾಸ್ವಾಮಿ) ಚಿತ್ರಗಳನ್ನು ಅಳವಡಿಸಿದ್ದಾರೆ ಎಂದು 'ದಿ...

ಪ. ಬಂಗಾಳ: ಮಹಿಳೆಯರಿಗೆ ₹3,000 ರಿಂದ 6 ತಿಂಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಸೇರಿದಂತೆ ಹಲವು ಭರವಸೆ ನೀಡಿದ ಬಿಜೆಪಿ 

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಪ್ರಚಾರ ಆರಂಭವಾಗಿದ್ದು, ಮೊದಲ ಹಂತದ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಪಶ್ಚಿಮ ಬಂಗಾಳದ ಬಿಜೆಪಿ...

ಹಾಸನ| ರೈತ ಮುಖಂಡ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ; ದುಷ್ಕರ್ಮಿಗಳ ಬಂಧನಕ್ಕೆ ಕೆಪಿಆರ್‌ಎಸ್‌ ಆಗ್ರಹ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಕರ್ನಾಟಕ ಪ್ರಾಂತ ರೈತ ಸಂಘದ (ಕೆಪಿಆರ್‌ಎಸ್‌) ಕಾರ್ಯದರ್ಶಿ ಹಾಗೂ ಕಲ್ಕೆರೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ, ಡಿವೈಎಫ್‌ಐ ಜಿಲ್ಲಾಧ್ಯಕ್ಷ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ-ದೌರ್ಜನ್ಯ ನಡೆಸಿರುವ ಗೂಂಡಾಗಳನ್ನು...

ಉತ್ತರ ಪ್ರದೇಶ| ಡಿಜಿಟಲ್ ಬಂಧನದಿಂದ ಪೋಷಕರನ್ನು ರಕ್ಷಿಸಿದ 8ನೇ ತರಗತಿ ವಿದ್ಯಾರ್ಥಿ

ಸುಮಾರು 10 ಗಂಟೆಗಳ ಕಾಲ ವೀಡಿಯೊ ಕರೆ ಮೂಲಕ ಡಿಜಿಟಲ್ ಬಂಧನಕ್ಕೆ ಒಳಗಾಗಿದ್ದ ತನ್ನ ಹೆತ್ತವರು ಹಣ ಕಳೆದುಕೊಳ್ಳದಂತೆ 8ನೇ ತರಗತಿಯ ಬಾಲಕನೊಬ್ಬ ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಬರೇಲಿಯಲ್ಲಿ...

ಅಸ್ಸಾಂ: ಪವನ್ ಖೇರಾ ವಿರುದ್ಧದ ಪ್ರಕರಣದಲ್ಲಿ ಒಂದು ವಾರದ ನಿರೀಕ್ಷಣ ಜಾಮೀನು ನೀಡಿದ ತೆಲಂಗಾಣ ಹೈಕೋರ್ಟ್

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಸಲ್ಲಿಸಿದ ಎಫ್‌ಐಆರ್‌ಗೆ ಸಂಬಂಧಿಸಿದಂತೆ ತೆಲಂಗಾಣ ಹೈಕೋರ್ಟ್ ಶುಕ್ರವಾರ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ಒಂದು ವಾರದ...

ನಿವಾಸದಲ್ಲಿ ನಗದು ಪತ್ತೆ ಪ್ರಕರಣದಲ್ಲಿ ಸಿಲುಕಿದ್ದ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ

ತಮ್ಮ ನಿವಾಸದಲ್ಲಿ ನಗದು ಪತ್ತೆ ಆರೋಪದ ಕೇಂದ್ರಬಿಂದುವಾಗಿದ್ದ ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಕಳೆದ ವರ್ಷ ಏಪ್ರಿಲ್ 5...

ಆಂಧ್ರಪ್ರದೇಶ: ಬೇಸಿಗೆ ವಿಹಾರಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಮುಳುಗಿ ಸಾವು 

ಅನಂತಗಿರಿ: ಬೇಸಿಗೆ ವಿಹಾಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳಲು ಜಲಪಾತಕ್ಕೆ ಇಳಿದು ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಲ್ಲೂರಿ ಸೀತಾರಾಮರಾಜು ಮೂಲಗುಮ್ಮಿ ಗ್ರಾಮದಲ್ಲಿ ನಾಲ್ವರು...