Homeಕರ್ನಾಟಕಇಂದು ವನದೇವತೆ ಹಾಲಕ್ಕಿ ಬುಡಕಟ್ಟಿನ ತುಳಸಜ್ಜಿಗೆ ಪದ್ಮಶ್ರೀ ಪುರಸ್ಕಾರ

ಇಂದು ವನದೇವತೆ ಹಾಲಕ್ಕಿ ಬುಡಕಟ್ಟಿನ ತುಳಸಜ್ಜಿಗೆ ಪದ್ಮಶ್ರೀ ಪುರಸ್ಕಾರ

- Advertisement -
- Advertisement -

ಇಂದು ನವದೆಹಲಿಯಲ್ಲಿ ಉತ್ತರ ಕನ್ನಡದ ಹಾಲಕ್ಕಿ ಬುಡಕಟ್ಟಿನ ತುಳಸಿ ಗೌಡರಿಗೆ ರಾಷ್ಟ್ರಪತಿಗಳು ಪದ್ಮ ಪುರಸ್ಕಾರ ನೀಡಿ ಗೌರವಿಸಲಿದ್ದಾರೆ. ಇದರೊಂದಿಗೆ ಉತ್ತರ ಕನ್ನಡ ಜಿಲ್ಲೆಗೆ ಮೂರು ಪದ್ಮಶ್ರೀ ಪ್ರಶಸ್ತಿ ದೊರಕಿದಂತಾಗುತ್ತದೆ. ಇದು ಜಿಲ್ಲೆಯಲ್ಲಿ ಹೆಮ್ಮೆ-ಸಂಭ್ರಮ ಉಂಟುಮಾಡಿದೆ. ವಿಶೇಷವೆಂದರೆ ಇದರಲ್ಲಿ ಯಕ್ಷಗಾನದ ಮೇರು ಕಲಾವಿದ ಚಿಟ್ಟಾಣಿ ರಾಮಚಂದ್ರ ಹೆಗಡೆ ಬಿಟ್ಟರೆ ಉಳಿದೆರಡು ಪದ್ಮಶ್ರೀ ಜಿಲ್ಲೆಯ ಹೆಮ್ಮೆಯ ಅಸ್ಮಿತೆಯಂತಿರುವ ಹಾಲಕ್ಕಿ ಒಕ್ಕಲಿಗ ಬುಡಕಟ್ಟು ಸಮುದಾಯದ ಶ್ರಮ ಸಂಸ್ಕೃತಿಯ ಮಹಿಳೆಯರಿಬ್ಬರ ಅರಸಿ ಬಂದಿದೆ!

ಅದೇ ರೀತಿಯಾಗಿ ಇಂದು ಅಕ್ಷರ ಸಂತ ಎಂದು ಕರೆಸಿಕೊಂಡ ದಕ್ಷಿಣ ಕನ್ನಡದ ಹರೇಕಳ ಹಾಜಬ್ಬನವರಿಗೆ ದೆಹಲಿಯಲ್ಲಿ ಪದ್ಮಶ್ರೀ ಪ್ರಶಸ್ತಿ ಪ್ರದಾನ ಮಾಡಲಾಗುವುದು.

ಚಿಟ್ಟಾಣಿಯವರಿಗೆ 2012ರಲ್ಲಿ ಪದ್ಮ ಪುರಸ್ಕಾರದಿಂದ ಗೌರವಿಸಲಾಗಿತ್ತು. ಹಾಲಕ್ಕಿ ಬುಡಕಟ್ಟು ಸಮುದಾಯದ ಸುಕ್ರಜ್ಜಿ (ಸುಕ್ರಿ ಬೊಮ್ಮ ಗೌಡ)ರವರಿಗೆ 2017ರಲ್ಲಿ ಪದ್ಮಶೀ ಪ್ರಶಸ್ತಿ ಬಂದಾಗ ಇಡೀ ಜಿಲ್ಲೆಯಲ್ಲಿ ಸಡಗರ ತುಂಬಿತ್ತು. ಇದೊಂದು ಯಾವ ಲಾಬಿ-ಶಿಫಾರಸ್ಸು ಇಲ್ಲದೆ ನೈಜ ಪ್ರತಿಭೆಗೆ ಸಂದ ಗೌರವ! ಸುಕ್ರಜ್ಜಿಯನ್ನು ಜಿಲ್ಲೆಯ ದಶದಿಕ್ಕಿಗೆ ಕರೆದು ಸನ್ಮಾನಿಸಲಾಗಿತ್ತು. ಜಾನಪದ ಹಾಡುಗಳ ಕಣಜವೆಂಬ ಖ್ಯಾತಿಯ ಸುಕ್ರಜ್ಜಿಯ ನಾಲಿಗೆಯಲ್ಲಿ 5000ಕ್ಕಿಂತ ಹೆಚ್ಚು ಹಾಡುಗಳಿವೆ. ಇದನ್ನು ಕಾರವಾರದ ಆಕಾಶವಾಣಿ ನಿಲಯ ಅಖಿಲ ಭಾರತ ರೇಡಿಯೋ ಧ್ವನಿ ಮುದ್ರಣ ಯೋಜನೆಯಲ್ಲಿ ದಾಖಲಿಸಿಟ್ಟಿದೆ. ಕರ್ನಾಟಕ ಜಾನಪದ ಅಕಾಡಮಿ ಸುಕ್ರಜ್ಜಿಯವರ ಹಾಡುಗಳ ಪುಸ್ತಕ ಹೊರತಂದಿದೆ. ಸುಕ್ರಿ ಗೌಡರಿಗೆ 1999ರಲ್ಲಿ ಜಾನಪದಶ್ರೀ ಪ್ರಶಸ್ತಿ ಬಂದಾಗ ಅವರು ನಾಡಿನ ಹೆಮ್ಮೆಯ ಅಜ್ಜಿಯೆಂದು ಲಂಕೇಶ್ ಪತ್ರಿಕೆ ಬರೆದಿತ್ತು. ಅಂದಿನಿಂದ ಸುಕ್ರಿ ಗೌಡರು ನಾಡಿನ ಜಾನಪದ, ಸಾಮಾಜಿಕ ಲೋಕದ ಅಜ್ಜಿಯೆಂದೇ ಗುರುತಿಸಲ್ಪಟ್ಟರು. ಸಾರಾಯಿ ವಿರೋಧಿ ಆಂದೋಲನವೇ ಮುಂತಾದ ಸಾಮಾಜಿಕ ಹೋರಾಟದಲ್ಲಿ ಸಕ್ರಿಯರಾಗಿದ್ದರು.

ಈಗ ಪದ್ಮಶ್ರೀ ಸ್ವಿಕರಿಸುತ್ತಿರುವ ಅಂಕೋಲೆಯ ತುಳಸಿ ಗೌಡರು ಆರೇಳು ದಶಕದಿಂದ ಪ್ರತಿ ವರ್ಷ 30 ಸಾವಿರ ಸಸಿಗಳನ್ನು ನೆಟ್ಟು ಪೋಷಿಸುತ್ತ ಬಂದಿದ್ದಾರೆ. 72 ವರ್ಷದ ತುಳಸಜ್ಜಿ ವನದೇವತೆಯೆಂದೇ ಜನಜನಿತರಾಗಿದ್ದಾರೆ! ಕೇಂದ್ರ ಸರ್ಕಾರದ ಪ್ರಿಯದರ್ಶಿನಿ ವೃಕ್ಷ ಮಿತ್ರ ಪ್ರಶಸ್ತಿ, ರಾಜೋತ್ಸವ ಪ್ರಶಸ್ತಿ ಸಹ ತುಳಸಜ್ಜಿಗೆ ಸಂದಿವೆ. ಪ್ರಶಸ್ತಿ ಸ್ವೀಕರಿಸಲು ದಿಲ್ಲಿಗೆ ತೆರಳಿರುವ ಅವರನ್ನು ಅಂಕೋಲೆ ಜನರು ಖರ್ಚಿಗೆಂದು ಹಣ ಸಂಗ್ರಹಿಸಿ ಕೊಟ್ಟು, ಸನ್ಮಾನಿಸಿ ಸಡಗರದಲ್ಲಿ ಬೀಳ್ಕೊಟ್ಟಿದ್ದಾರೆ.

ದಿಲ್ಲಿಗೆ ಹೋಗಲೆಂದು ಜನರು ಕೂಡಿಸಿ ಕೊಟ್ಟಿರುವ 1 ಲಕ್ಷ 16 ಸಾವಿರ ರೂಗಳಲ್ಲಿ ಒಂದಿಷ್ಟನ್ನು ಅನಾರೋಗ್ಯದಲ್ಲಿರುವ ಜಾನಪದ ಕೋಗಿಲೆ ಸುಕ್ರಜ್ಜಿಯ ಆಸ್ಪತ್ರೆ ಖರ್ಚಿಗೆಂದು ತುಳಸಜ್ಜಿ ಕೊಟ್ಟಿದ್ದಾರೆ. ಈ ಮಾನವೀಯ ಕಳಕಳಿ ಜಿಲ್ಲೆಯ ಹೃದಯವನ್ನು ಆರ್ದ್ರವಾಗಿಸಿದೆ! ಇದಕ್ಕಿಂತ ದೊಡ್ಡ ಮನುಷ್ಯತ್ವ ಇನ್ನೇನಿದೆ? ಹಾಲಕ್ಕಿ ಬುಡಕಟ್ಟು ಸಮುದಾಯಕ್ಕೆ ಪರಿಶಿಷ್ಟ ಪಂಗಡ ಮೀಸಲಾತಿ ಒದಗಿಸುವಂತೆ ಸುಕ್ರಜ್ಜಿ, ತುಳಸಜ್ಜಿ ಆದಿಯಾಗಿ ಆ ಜನಾಂಗದವರು ದಶಕಗಳಿಂದ ಹೋರಾಡಿತ್ತಿದ್ದಾರೆ. ಈಗಲಾದರೂ ಹಾಲಕ್ಕಿಗಳು ಹೆಚ್ಚಿರುವ ಕಾರವಾರ ಹಾಗೂ ಕುಮಟಾ ಕ್ಷೇತ್ರದ ಶಾಸಕರಾದ ರೂಪಾಲಿ ನಾಯ್ಕ್ ಮತ್ತು ದಿನಕರ ಶೆಟ್ಟಿ ಸಂಸದ ಅನಂತಕುಮಾರ್ ಹೆಗಡೆ ಮೇಲೆ ಒತ್ತಡ ಹಾಕಿ ಇಚ್ಚಾ ಶಕ್ತಿ ತೋರಿಸುವರಾ ಎಂದು ಕಾದು ನೋಡಬೇಕಾಗಿದೆ.


ಇದನ್ನೂ ಓದಿ: ಬುಡಕಟ್ಟು ಹಾಲಕ್ಕಿ ಒಕ್ಕಲಿಗರನ್ನು ಎಸ್‌‌ಟಿಗೆ ಸೇರಿಸಲು ಅಡ್ಡಗಾಲು ಹಾಕುತ್ತಿರುವುದು ಯಾರು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...