Homeಕರ್ನಾಟಕಬೆಂಗಳೂರಿನಲ್ಲಿ ಆಟೋರಿಕ್ಷಾ ದರ ಏರಿಕೆ: ಕನಿಷ್ಠ ಬೆಲೆ 25 ರೂ.ನಿಂದ 30 ರೂಪಾಯಿಗೆ ಹೆಚ್ಚಳ

ಬೆಂಗಳೂರಿನಲ್ಲಿ ಆಟೋರಿಕ್ಷಾ ದರ ಏರಿಕೆ: ಕನಿಷ್ಠ ಬೆಲೆ 25 ರೂ.ನಿಂದ 30 ರೂಪಾಯಿಗೆ ಹೆಚ್ಚಳ

- Advertisement -
- Advertisement -

ಸತತ 8 ವರ್ಷಗಳ ಬಳಿಕ ರಾಜಧಾನಿಯಲ್ಲಿ ಆಟೋರಿಕ್ಷಾ ದರಗಳನ್ನು ಪರಿಷ್ಕರಣೆ ಮಾಡಲಾಗಿದ್ದು, ಡಿಸೆಂಬರ್‌ 1 ರಿಂದ ಹೊಸ ದರಗಳು ಜಾರಿಗೆ ಬರಲಿವೆ. ಆಟೋ ಚಾಲಕರ ಮನವಿಗೆ ಸ್ಪಂದಿಸಿರುವ ಸರ್ಕಾರ ಬೆಲೆ ಏರಿಕೆಗೆ ಅನುಮತಿ ನೀಡಿದೆ.

ಈಗ ಇರುವ ಕನಿಷ್ಠ ದರ 25 ರೂಪಾಯಿ ಡಿಸೆಂಬರ್‌ ಒಂದರಿಂದ 30 ರೂಪಾಯಿಯಾಗಲಿದೆ. 8 ವರ್ಷಗಳ ಹಿಂದೆ 2013 ರಲ್ಲಿ ಆಟೋರಿಕ್ಷಾ ದರವನ್ನು ಏರಿಕೆ ಮಾಡಲಾಗಿತ್ತು.

ಪೆಟ್ರೋಲ್, ಡೀಸೆಲ್, ಗ್ಯಾಸ್‌ ಸಿಲಿಂಡರ್‌ ಬೆಲೆ ಏರಿಕೆ ಆಟೋ ಚಾಲಕರಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಇದರ ಜೊತೆ ಜೊತೆಗೆ ದಿನ ಬಳಕೆಯ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದಾಗಿ ಚಾಲಕರು ಸರ್ಕಾರಕ್ಕೆ ಬೆಲೆ ಏರಿಕೆ ಮಾಡಲು ಮನವಿ ಸಲ್ಲಿಸಿದ್ದರು.

ಬಿಬಿಎಂಪಿ ವ್ಯಾಪ್ತಿಯ ಆಟೋರಿಕ್ಷಾ ಚಾಲಕರು ಇನ್ನು ಮೂರು ತಿಂಗಳ (90 ದಿನಗಳು) ಒಳಗೆ ಹೊಸ ಮೀಟರ್ ಅಳವಡಿಸಿಕೊಳ್ಳಲು ಸೂಚನೆ ನೀಡಲಾಗಿದೆ.

ಇದನ್ನೂ ಓದಿ: ದ.ಕ. | ಅಡಿಕೆ ಕಳ್ಳತನದ ಆರೋಪ, ಬಾಲಕನಿಗೆ ಮಾರಣಾಂತಿಕ ಹಲ್ಲೆ- ಆರೋಪಿಗಳಿಗೆ ಜಾಮೀನು

 

ಕನಿಷ್ಠ ದರ ಈ ಮೊದಲು 2 ಕಿಮೀಗೆ ಇದ್ದ 25 ರೂಪಾಯಿಯನ್ನು 30 ರೂಪಾಯಿಗೆ ಏರಿಸಲಾಗಿದೆ. ನಂತರದ ಪ್ರತಿ ಕಿಮೀ ಪ್ರಯಾಣಕ್ಕೆ 15 ರೂಪಾಯಿ ದರ ನಿಗದಿಯಾಗಿದೆ. ಈ ಮೊದಲು 13 ರೂಪಾಯಿಗಳಿದ್ದವು. ಆಟೋಗಳಲ್ಲಿ ಮೂರು ಮಂದಿ ಪ್ರಯಾಣಿಸಬೇಕು ಎಂದು ತಿಳಿಸಲಾಗಿದೆ.

ಕಾಯುವಿಕೆ ದರ ಮೊದಲ 5 ನಿಮಿಷ ಉಚಿತವಾಗಿದ್ದು, ನಂತರ ಪ್ರತಿ  15 ನಿಮಿಷಕ್ಕೆ 5 ರೂಪಾಯಿ ದರ ನೀಡಬೇಕು. ಪ್ರಯಾಣಿಕರ ಲಗೇಜು 20 ಕೆಜಿ ಒಳಗಿದ್ದರೇ ಉಚಿತವಾಗಿದೆ. 20 ಕೆಜಿ ಬಿಟ್ಟು ಅಧಿಕವಾಗಿದ್ದರೇ, ಪ್ರತಿ 20 ಕೆಜಿ ಲಗೇಜಿಗೆ 5 ರೂಪಾಯಿ ದರ ನಿಗದಿ ಮಾಡಲಾಗಿದೆ.

ರಾತ್ರಿಯ ವೇಳೆ 10 ಗಂಟೆಯ ನಂತರ ಮತ್ತು ಬೆಳಗಿನ 5 ಗಂಟೆಯ ಒಳಗೆ ಸಾಮಾನ್ಯ ದರದ ಜೊತೆಗೆ ಅದರ ಅರ್ಧ ಪಟ್ಟು ದರವನ್ನು ನೀಡಬೇಕಾಗಿದೆ. ಈ ಕುರಿತು ಬೆಂಗಳೂರು ನಗರ ಜಿಲ್ಲೆಯ ಪ್ರಾದೇಶಿಕ ಸಾರಿಗೆ ಪ್ರಾಧಿಕಾರ ಅಧಿಸೂಚನೆ ಹೊರಡಿಸಿದೆ.

ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿರುವ ಆದರ್ಶ ಆಟೋ ಮತ್ತು ಟ್ಯಾಕ್ಸಿ ಚಾಲಕರ ಸಂಘದ ಅಧ್ಯಕ್ಷ ಎಂ ಮಂಜುನಾಥ್,  “ಸತತ 3 ತಿಂಗಳಿಂದ ಹೋರಾಟ ನಡೆಸಿದ ಆಟೋ ಮತ್ತು ಟ್ಯಾಕ್ಸಿ ಸಂಘಗಳ ಹೋರಾಟದ ಫಲವಾಗಿ ಇಂದು ಮೀಟರ್ ದರ ಏರಿಸಲಾಗಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆ ಅದರಲ್ಲೂ ಎಲ್‌ಪಿಜಿ ಗ್ಯಾಸ್ ದರ ದಿನೇ ದಿನೇ ಏರಿಕೆಯಾಗುತ್ತಿದ್ದು ಸಾಕಷ್ಟು ಸಂಕಷ್ಟ ಉಂಟಾಗಿತ್ತು. ಸದ್ಯ ಸರ್ಕಾರ ನಮ್ಮ ಮನವಿಗೆ ಸ್ಪಂದಿಸಿದೆ. ಪ್ರಾದೇಶಿಕ ಸಾರಿಗೆ ಪ್ರಾಧಿಕಾರ, ಸರ್ಕಾರ ಮತ್ತು ಜಿಲ್ಲಾಧಿಕಾರಿಗಳಿಗೆ ಅಭಿನಂದನೆ ಸಲ್ಲಿಸುತ್ತೇನೆ” ಎಂದಿದ್ದಾರೆ.


ಇದನ್ನೂ ಓದಿ: ನೈಟ್‌ ಕರ್ಫ್ಯೂ ವಾಪಸ್‌; ಕುದುರೆ ರೇಸ್‌ಗೆ ಸರ್ಕಾರ ಅನುಮತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...