Homeಕರ್ನಾಟಕಸರ್ಕಾರದ ಆದೇಶದ ಹೊರತಾಗಿಯೂ ಸ್ಥಳಾಂತರವಾಗದ ಸಕ್ಕರೆ ನಿರ್ದೇಶನಾಲಯ; ಆಯುಕ್ತರು ಹೇಳಿದ್ದೇನು?

ಸರ್ಕಾರದ ಆದೇಶದ ಹೊರತಾಗಿಯೂ ಸ್ಥಳಾಂತರವಾಗದ ಸಕ್ಕರೆ ನಿರ್ದೇಶನಾಲಯ; ಆಯುಕ್ತರು ಹೇಳಿದ್ದೇನು?

- Advertisement -
- Advertisement -

ಉತ್ತರ ಕರ್ನಾಟಕದ ಕಬ್ಬು ಬೆಳೆಗಾರರು ಮತ್ತು ಸಕ್ಕೆರೆ ಕಾರ್ಖಾನೆಗಳ ಬಹುಕಾಲದ ಬೇಡಿಕೆಯನ್ನು ಮನ್ನಿಸಿರುವ ಸರ್ಕಾರ, ‘ಕಬ್ಬು ಅಭಿವೃದ್ಧಿ ಹಾಗೂ ಸಕ್ಕರೆ ನಿರ್ದೇಶನಾಲಯ’ವನ್ನು ಬೆ೦ಗಳೂರಿನಿ೦ದ ಬೆಳಗಾವಿಯ ಸುವರ್ಣ ವಿಧಾನಸೌಧಕ್ಕೆ ಅಕ್ಟೋಬರ್‌ 1 ರಿ೦ದ ಜಾರಿಗೆ ಬರುವ೦ತೆ ಪೂರ್ಣ ಪ್ರಮಾಣದಲ್ಲಿ ಸ್ಥಳಾ೦ತರಿಸುವಂತೆ ಆದೇಶಿಸಿತ್ತು. ಆದರೆ ಸರ್ಕಾರ ಆದೇಶ ಹೊರಡಿಸಿ ತಿಂಗಳಾದರೂ ಸ್ಥಳಾಂತರದ ಸಲುವಾಗಿ ಯಾವುದೆ ಪ್ರಾಥಮಿಕ ಪ್ರಕ್ರಿಯೆಯು ನಡೆದಿಲ್ಲ ಎಂದು ಮೂಲಗಳನ್ನು ಉಲ್ಲೇಖಿಸಿ ‘ದಿಫೈಲ್‌’ ವರದಿ ಮಾಡಿದೆ.

ಸರ್ಕಾರವು ‘ಕಬ್ಬು ಅಭಿವೃದ್ಧಿ ಹಾಗೂ ಸಕ್ಕರೆ ನಿರ್ದೇಶನಾಲಯ’ಯವನ್ನು ಪೂರ್ಣ ಪ್ರಮಾಣದಲ್ಲಿ ಬೆಳಗಾವಿಗೆ ಸ್ಥಳಾಂತರಿಸುವ ಬಗ್ಗೆ ಸೆಪ್ಟೆಂಬರ್‌ 30 ರಂದು ಆದೇಶ ಹೊರಡಿಸಿತ್ತು. ಜೊತೆಗೆ ಅಕ್ಟೋಬರ್‌ 8 ರಿಂದ ಬೆಳಗಾವಿಯಲ್ಲಿ ಕಚೇರಿ ಕಾರ್ಯಾರಂಭಿಸಲಿ ಎಂದು ಕೂಡಾ ಮುಖ್ಯಮಂತ್ರಿ ಬೊಮ್ಮಾಯಿ ಭರವಸೆಯು ನೀಡಿದ್ದರು. ಆದರೆ ಆದೇಶ ನೀಡಿ ಒಂದು ತಿಂಗಳಾದರೂ ಸ್ಥಳಾಂತರದ ಯಾವುದೆ ಪ್ರಕ್ರಿಯೆಗಳೂ ನಡೆದಿಲ್ಲ ಎಂದು ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಮೂಲಗಳನ್ನು ಉಲ್ಲೇಖಿಸಿ ‘ದಿಫೈಲ್‌’ ವರದಿ ಮಾಡಿದೆ.

ಇದನ್ನೂ ಓದಿ: ಮೋದಿ ಚೀನಾ ಭಯಕ್ಕೆ ಚಹಾಗೆ ಚೀನಿ(ಸಕ್ಕರೆ) ಕೂಡಾ ಹಾಕುವುದಿಲ್ಲ: ಓವೈಸಿ ವ್ಯಂಗ್ಯ

ಉತ್ತರ ಕರ್ನಾಟಕ ಅಭಿವೃದ್ದಿಯ ಉದ್ದೇಶದಿಂದ ಕೆಲವು ಸರ್ಕಾರಿ ಕಚೇರಿಯನ್ನು ಬೆಳಗಾವಿಗೆ ಸ್ಥಳಾಂತರಿಸುವ ಪಟ್ಟಿಯಲ್ಲಿ ರಾಜ್ಯ ಸರ್ಕಾರವು 2019 ಜನವರಿ 10 ರಂದು ‘ಕಬ್ಬು ಅಭಿವೃದ್ಧಿ ಹಾಗೂ ಸಕ್ಕರೆ ನಿರ್ದೇಶನಾಲಯ’ವನ್ನು ಸೇರಿಸಿತ್ತು. ಆದರೆ 2019 ರ ಸೆಪ್ಟೆಂಬರ್‌ 7 ರಂದು ಕಬ್ಬು ಅಭಿವೃದ್ಧಿ ಆಯುಕ್ತರು ಹಾಗೂ ಸಕ್ಕರೆ ನಿರ್ದೇಶಕರು, ನಿರ್ದೇಶನಾಯಲವನ್ನು ಬೆಳಗಾವಿಗೆ ಸ್ಥಳಾಂತರಿಸದೆ ಬೆಂಗಳೂರಿನಲ್ಲೇ ಉಳಿಸಿಕೊಳ್ಳುವಂತೆ ಪ್ರಸ್ತಾವನೆ ಸಲ್ಲಿಸಿದ್ದರು.

ಇದರ ನಂತರ, ಸ್ಥಳಾಂತರವಾಗಬೇಕಾದ ಎಲ್ಲಾ ಕಚೇರಿಗಳು 2019 ಅಕ್ಟೋಬರ್‌ ಅಂತ್ಯದೊಳಗೆ ಸ್ಥಳಾಂತರಗೊಳ್ಳಬೇಕು ಎಂದು 2019 ರ ಸೆಪ್ಟೆಂಬರ್‌ 23 ರಂದು ‘ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆ’ಯಿಂದ ಅಧಿಸೂಚನೆ ಹೊರಡಿಸಲಾಗಿತ್ತು.

ಈ ನಡುವೆ ಕಬ್ಬು ನಿಯಂತ್ರಣ ಮಂಡಳಿಯ ತೀರ್ಮಾನದಂತೆ ಕಬ್ಬು ಅಭಿವೃದ್ಧಿ, ಸಕ್ಕರೆ ನಿರ್ದೇಶನಾಲಯವನ್ನು ಬೆಂಗಳೂರಿನಲ್ಲಿಯೇ ಉಳಿಸಿಕೊ೦ಡು ಬೆಳಗಾವಿಯಲ್ಲಿ ಒಂದು ಪ್ರಾಂತೀಯ ಕಚೇರಿ ತೆರೆಯಲು ಸರ್ಕಾರವು ಪರಿಶೀಲನೆ ನಡೆಸಿತ್ತು.

ಇದನ್ನೂ ಓದಿ: ಸಕ್ಕರೆ ಕಾರ್ಖಾನೆ ಮಾಲೀಕರಿಗೆ ‘ನಾಡೋಜ’: ಹಂಪಿ ವಿವಿ ಮೌಲ್ಯ ಕುಸಿತ ಎಂದ ಹಿರಿಯರು

ಇದರ ನಡುವೆ ಕಚೇರಿ ಸ್ಥಳಾಂತರಗೊಳ್ಳದ ಕುರಿತು ಎರೆಡೆರೆಡು ರಿಟ್ ಅರ್ಜಿ ಕೂಡಾ ಸಲ್ಲಿಕೆಯಾಗಿತ್ತು. ಹಲವಾರು ಬೆಳವಣಿಗೆ ನಡೆದು ಕೊನೆಗೆ ಕೃಷಿಕರು, ಜನರ ಮನವಿಯನ್ನು ಪರಿಗಣಿಸಿ ಅನಿವಾರ್ಯವಾಗಿ ರಾಜ್ಯ ಸರ್ಕಾರ 2021 ರ ಸೆಪ್ಟೆಂಬರ್‌ 30 ರಂದು ಅಕ್ಟೋಬರ್‌ 30 ರ ಒಳಗೆ ‘ಕಬ್ಬು ಅಭಿವೃದ್ಧಿ ಹಾಗೂ ಸಕ್ಕರೆ ನಿರ್ದೇಶನಾಲಯ’ ಕಚೇರಿಯನ್ನು ಪೂರ್ಣ ಪ್ರಮಾಣದಲ್ಲಿ ಸ್ಥಳಾ೦ತರಿಸುವಂತೆ ಆದೇಶ ಹೊರಡಿಸಿತ್ತು. ಆದರೆ ಸರ್ಕಾರದ ಆದೇಶದ ಹೊರತಾಗಿಯು ಯಾವುದೇ ಬೆಳವಣಿಗೆ ಆಗಿಲ್ಲ ಎಂದು ವರದಿಯಾಗಿಲ್ಲ.

ಈ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಕಬ್ಬು ಅಭಿವೃದ್ಧಿ ಆಯುಕ್ತರು ಹಾಗೂ ಸಕ್ಕರೆ ನಿರ್ದೇಶಕರು ಶಿವಾನಂದ ಎಚ್. ಕಲಕೇರಿ, “ಕಚೇರಿಯನ್ನು ಸಂಪೂರ್ಣವಾಗಿ ಸ್ಥಳಾಂತರಿಸಲು ಕ್ರಮ ಕೈಗೊಳ್ಳಲಾಗಿದೆ” ಎಂದು ಹೇಳಿದ್ದಾರೆ.

ಈ ಬಗ್ಗೆ ಅವರು ಹೇಳಿಕೆಯನ್ನು ಬಿಡುಗಡೆಗೊಳಿಸಿದ್ದಾರೆ. ಅದರಲ್ಲಿ ಅವರು, “ಈ ಕಾರ್ಯಾಲಯವು 1973ರಿಂದ ಬೆಂಗಳೂರಿನಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಈ ರೀತಿಯ ರಾಜ್ಯ ಮಟ್ಟದ ದೊಡ್ಡ ಕಚೇರಿಯನ್ನು ತಕ್ಷಣ ಸ್ಥಳಾಂತರಿಸಲು ಹಲವು ಅಡೆತಡೆಗಳಿರುತ್ತವೆ. ನಿತ್ಯವೂ ನಡೆಯುವ ಕಚೇರಿಯ ಕಾರ್ಯಚಟುವಟಿಕೆಗಳನ್ನು ಮುಂದುವರಿಸಿಕೊಂಡೇ ಹಂತ ಹಂತವಾಗಿ ಸ್ಥಳಾಂತರಿಸಲು ಕ್ರಮ ಕೈಗೊಳ್ಳಲಾಗಿದೆ. ಅಲ್ಲದೆ ತಾತ್ಕಾಲಿಕವಾಗಿ ಎಸ್.ನಿಜಲಿಂಗಪ್ಪ ಸಕ್ಕರೆ ಸಂಸ್ಥೆಯಲ್ಲಿ ಕಚೇರಿ ಆರಂಭಿಸಲಾಗಿದೆ” ಎಂದು ತಿಳಿಸಿದ್ದಾರೆ.

“ಕಚೇರಿಯನ್ನು ಪೂರ್ಣ ಪ್ರಮಾಣದಲ್ಲಿ ಸುವರ್ಣ ವಿಧಾನಸೌಧಕ್ಕೆ ಸ್ಥಳಾಂತರಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಹಾಗೂ ಸುವರ್ಣ ವಿಧಾನಸೌಧದ ಎಇ ಜೊತೆ ಚರ್ಚಿಸಲಾಗಿದೆ. ಸ್ಥಳವನ್ನೂ ಗುರುತಿಸಲಾಗಿದೆ. ಅಲ್ಲದೆ ತಾತ್ಕಾಲಿಕ ಕಚೇರಿಯಲ್ಲಿ ಶಾಶ್ವತವಾಗಿ ಸಿಬ್ಬಂದಿಯನ್ನು ನಿಯೋಜಿಸಿಲ್ಲ. ವಾರದಲ್ಲಿ ಒಂದೆರಡು ದಿನ ಒಂದಿಬ್ಬರನ್ನು ನಿಯೋಜಿಸಲಾಗುತ್ತಿದೆ. ನಾನೂ ಕೆಲವು ದಿನಗಳು ಪ್ರವಾಸ ಕೈಗೊಂಡಿದ್ದೇನೆ. ಬೆಂಗಳೂರಿನ ಕಚೇರಿಯಲ್ಲಿ 1.36 ಲಕ್ಷ ಫೈಲ್‌ಗಳ ದಾಸ್ತಾನು ಕಾರ್ಯ ಪ್ರಗತಿಯಲ್ಲಿದೆ. ಅದು ಮುಗಿದ ತಕ್ಷಣ ಕಚೇರಿಯನ್ನು ಪೂರ್ಣ ಪ್ರಮಾಣದಲ್ಲಿ ಬೆಳಗಾವಿಗೆ ಸ್ಥಳಾಂತರಿಸಲಾಗುವುದು. ಅಷ್ಟೊಂದು ಫೈಲ್‌ಗಳ ಪೂರ್ಣ ದಾಸ್ತಾನಿಗೆ ಸುಮಾರು ಮೂರು ತಿಂಗಳು ಕಾಲಾವಕಾಶ ಬೇಕಾಗಬಹುದು” ಎಂದು ಅವರು ಅಂದಾಜಿಸಿದ್ದಾರೆ.

ಇದನ್ನೂ ಓದಿ: ಹಳಿಯಾಳ: ಕಬ್ಬು ಬೆಳೆಗಾರರನ್ನು ಜಲ್ಲೆ ಮಾಡುತ್ತಿರುವ ’ಪ್ಯಾರಿ ಸಕ್ಕರೆ’ ದೊರೆಗಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...