Homeರಾಜಕೀಯನೂತನ ಸಂಸದರಲ್ಲಿ ಕ್ರಿಮಿನಲ್ ಹಿನ್ನೆಲೆ, ಮೇಲ್ಜಾತಿ ಮುನ್ನಲೆ

ನೂತನ ಸಂಸದರಲ್ಲಿ ಕ್ರಿಮಿನಲ್ ಹಿನ್ನೆಲೆ, ಮೇಲ್ಜಾತಿ ಮುನ್ನಲೆ

ಶೇ. 44ರಷ್ಟು ಸಂಸದರು ಕ್ರಿಮಿನಲ್ ಹಿನ್ನೆಲೆಯ ಆರೋಪಿಗಳು!

- Advertisement -
- Advertisement -

| ಮಲ್ಲಿ |
ಇತ್ತೀಚಿನ ಎರಡೂವರೆ ದಶಕದಿಂದ ಸಂಸತ್ತಿನಲ್ಲಿ ಕ್ರಿಮಿನಲ್ ಹಿನ್ನೆಲೆಯ, ಕೋಟ್ಯಾಂತರ ಆಸ್ತಿಯ ಸದಸ್ಯರ ಸಂಖ್ಯೆ ಏರುತ್ತಲೇ ಹೋಗುತ್ತಿದೆ. ಮೀಸಲು ಕ್ಷೇತ್ರ ಬಿಟ್ಟು ಬೇರೆಡೆ ಗೆಲ್ಲುವವರಲ್ಲಿ ಮೇಲ್ಜಾತಿಯ ಬಲಾಢ್ಯ ಅಭ್ಯರ್ಥಿಗಳೇ ಜಾಸ್ತಿ. 2018ರಲ್ಲಿ ಇವರೆಲ್ಲರೊಂದಿಗೆ ಪುಟ್ಟಾಪೂರಾ ಕೋಮುಕ್ರಿಮಿಗಳೆಂದು ಜಗಜ್ಜಾಹೀರಾದವರ ಸಂಖ್ಯೆಯೂ ಏರಿದೆ!
ಹೊಸದಾಗಿ ಆಯ್ಕೆಯಾಗಿರುವ ಸಂಸದರ ಪೈಕಿ ಹೆಚ್ಚೂ ಕಡಿಮೆ ಅರ್ಧದಷ್ಟು ಜನ ಕ್ರಿಮಿನಲ್ ಕೇಸುಗಳನ್ನು ಎದುರಿಸುತ್ತಿದ್ದಾರೆ. ಕೊಲೆ, ರೇಪು ಕೇಸುಗಳ ಜೊತೆಗೆ ಭಯೋತ್ಪಾದನೆಯ ಕೇಸುಗಳನ್ನೂ ಹೆಟ್ಟಿಸಿಕೊಂಡ ಮಹಾನುಭಾವರು ಸಂಸತ್ ಪ್ರವೇಶಿಸುತ್ತಿದ್ದಾರೆ.
ಇದೇನೂ ಹೊಸ ವಿದ್ಯಮಾನವಲ್ಲವಾದರೂ, ಬಾಂಬ್ ಸ್ಫೋಟದಂತಹ ಭಯೋತ್ಪಾದನಾ ಚಟುವಟಿಕೆಯ ಆರೋಪ ಹೊತ್ತು ಜೈಲೂಟ ಸವಿದು ಜಾಮೀನಿನ ಮೇಲೆ ಹೊರಗಿರುವ ‘ವೀರ’ ಮಹಿಳೆ ಸಂಸತ್ ಪ್ರವೇಶಿಸುತ್ತಿದ್ದಾಳೆ. ದೇಶಭಕ್ತರ ಪಾರ್ಟಿಯಿಂದ ಗೆದ್ದಿರುವ ಈಯಮ್ಮ ಸಂಸತ್ತಿನಲ್ಲಿ ಅದೇನ್ ಮಾಡ್ತದೋ?
ಇದೆಲ್ಲ ವಿವರವನ್ನು ಎಡಿಅರ್ ಸಂಸ್ಥೆ ಬಹಿರಂಗ ಪಡಿಸಿದೆ. 2014ಕ್ಕೆ ಹೋಲಿಸಿದರೆ ಈ ಸಲ ಕ್ರಿಮಿನಲ್ ಹಿನ್ನೆಲೆಯ ಸದಸ್ಯರ ಸಂಖ್ಯೆ ಶೇ. 26ರಷ್ಟು ಹೆಚ್ಚಳವಾಗಿದೆ. 539 ಸದಸ್ಯರ ಹಿನ್ನೆಲೆಯನ್ನು ಪರಿಶೀಲಿಸಲಾಗಿದ್ದು, 233 ಸಂಸದರು ಕ್ರಿಮಿನಲ್ ಕಢಸುಗಳನ್ನು ಹೊತ್ತುಕೊಂಡು ಬಂದಿದ್ದಾರೆ. ಅಂದರೆ ಶೇ. 44ರಷ್ಟು ಸಂಸದರು ಕ್ರಿಮಿನಲ್ ಹಿನ್ನೆಲೆಯ ಆರೋಪಿಗಳು!
ಇದರಲ್ಲಿ ಬಿಜೆಪಿಯಿಂದ 116, ಕಾಂಗ್ರೆಸ್‍ನಿಂದ 29, ಜೆಡಿಯುನಿಂದ 23, ಡಿಎಂಕೆಯಿಂದ 10 ಮತ್ತು ಟಿಎಂಸಿಯಿಂದ 9 ಸಂಸದರು ಇಂತಹ ಹಿನ್ನೆಲೆ ಹೊಂದಿದ್ದಾರೆ.
ಇದರಲ್ಲಿ ಶೇ 29ರಷ್ಟು ಜನ ಕೊಲೆ, ಕೊಲೆ ಯತ್ನ, ಅತ್ಯಾಚಾರ ಮತ್ತು ಭಯೋತ್ಪಾದನಾ ಚಟುವಟಿಕೆಯ ಆರೋಪ ಹೊತ್ತವರು.

ಮೇಲ್ಜಾತಿಯವರೇ ಮೇಲ್ ಮೇಲೆ!
ಇನ್ನೊಂದು ಸಂಸ್ಥೆ ಪ್ರಕಟಿಸಿರುವ ವಿವರಗಳ ಪ್ರಕಾರ, ಮೇಲ್ಜಾತಿಯ ಸಂಸದರು ಎಂದಿನಂತೆ ಪ್ರಾಬಲ್ಯ ಹೊಂದಿದ್ದಾರೆ. 232 ಸಂಸದರು ಮೇಲ್ಜಾತಿ, 120 ಸಂಸದರು ಒಬಿಸಿ, 86 ಸಂಸದರು ಎಸ್‍ಸಿ, 52 ಸಂಸದರು ಎಸ್‍ಟಿ ಮತ್ತು 52 ಸಂಸದರು ಧಾರ್ಮಿಕ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದವರು. ಮೀಸಲು ಕ್ಷೇತ್ರಗಳು ಇಲ್ಲದಿದ್ದರೆ ಒಬ್ಬ ಎಸ್‍ಸಿ/ಎಸ್‍ಟಿ ಸಂಸದರೂ ಇರುತ್ತಿರಲಿಲ್ಲವೇನೋ?

ಕರ್ನಾಟಕದ್ದೂ ಅದೇ ಕತೆ!
ರಾಜ್ಯದಿಂದ ಆಯ್ಕೆಯಾದ ಸಂಸದರಲ್ಲಿ ಅನಂತಕುಮಾರ ಹೆಗಡೆ, ನಳೀನಕುಮಾರ ಕಟೀಲರಂತಹ ‘ಉಗ್ರ’ ವ್ಯಕ್ತಿಗಳಿದ್ದಾರೆ. ಧಾರವಾಡದ ಪ್ರಹ್ಲಾದ ಜೋಶಿಯವರೇನೂ ಪ್ರಚೋದನಾಕಾರಿ ಭಾಷಣ ಮತ್ತು ತಂತ್ರದಲ್ಲಿ ಕಮ್ಮಿಯೇನಲ್ಲ. ಹಲವು ಯುವತಿಯರಿಗೆ ವಂಚಿಸಿದ ಆರೋಪ ಎದುರಿಸುತ್ತಿರುವ, ಮೊದಲ ಬಾರಿ ಸಂಸತ್ ಪ್ರವೇಶ ಮಾಡುತ್ತಿರುವ ಬೆಂಗಳೂರು ದಕ್ಷಿಣದ ಸಂಸದ ತೇಜಸ್ವಿ ಸೂರ್ಯ, ಗೆಲುವಿನ ನಂತರ ಮೊದಲ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದೇನು ಗೊತ್ತೇ? ‘ನನ್ನ ಈ ಗೆಲುವನ್ನು ಬೆವರು, ರಕ್ತ ಹರಿಸಿ ಬಿಜೆಪಿಗಾಗಿ ಹೋರಾಡುತ್ತಿರುವ ಕೇರಳ, ತ್ರಿಪುರ ಮತ್ತು ಪಶ್ಚಿಮ ಬಂಗಾಳದ ನಮ್ಮ ಕಾರ್ಯಕರ್ತರಿಗೆ ಅರ್ಪಿಸುತ್ತೇನೆ’ ಎಂದು! ಶೋಭಾ, ಕಟೀಲ್, ಹೆಗಡೆ ಗೋಡ್ಸೆಯನ್ನು ಬಹಿರಂಗವಾಗಿ ಬೆಂಬಲಿಸಿದವರು. ಈಗ ಶೋಭಾ ಸುಳ್ ಸುದ್ದಿಯೊಂದನ್ನು ಹರಡಿ ಸಮಾಜ ಒಡೆಯುವ ಕೆಲಸಕ್ಕೂ ಕೈ ಹಾಕಿದ ಆರೋಪ ಹೊತ್ತಿದ್ದಾರೆ.
ಜಾತಿ ವಿಷಯಕ್ಕೆ ಬಂದರೆ ಮೀಸಲು ಕ್ಷೇತ್ರಗಳನ್ನು ಬಿಟ್ಟರೆ, ಉಳಿದ ಸಾಮಾನ್ಯ ಕ್ಷೇತ್ರಗಳಲ್ಲಿ ಲಿಂಗಾಯತರು, ಒಕ್ಕಲಿಗರು ಮತ್ತು ಬ್ರಾಹ್ಮಣರದ್ದೇ ಪ್ರಾಬಲ್ಯ! ಈ ಸಲ 9 ಲಿಂಗಾಯತ ಸಂಸದರು, 3 ಬ್ರಾಹಣ ಸಂಸದರು (ಎಲ್ಲ ಬಿಜೆಪಿ) ಆಯ್ಕೆಯಾಗಿದ್ದಾರೆ. 6 ಒಕ್ಕಲಿಗರು (ಬಿಜೆಪಿ 4, ಕಾಂಗ್ರೆಸ್,ಜೆಡಿಎಸ್ ತಲಾ ಒಂದು) ಸಂಸತ್ ಪ್ರವೇಶಿಸಿದ್ದಾರೆ. ಅಂದರೆ 28ರಲ್ಲಿ 18 ಸಂಸದರು ಮೇಲ್ಜಾತಿಗೆ ಸೇರಿದವರೇ!
ಎಸ್‍ಸಿ ಮೀಸಲು ಕ್ಷೇತ್ರಗಳಿಂದ ಐವರು, ಎಸ್‍ಟಿ ಮೀಸಲು ಕ್ಷೇತ್ರಗಳಿಂದ ಇಬ್ಬರು ಸಂಸದರಾದರೆ, 3 ಒಬಿಸಿಗಳು ಸಂಸತ್ ಪ್ರವೇಶಿಸುತ್ತಿದ್ದಾರೆ.

ಇದನ್ನು ಓದಿ: ಗಾಂಧಿಯನ್ನು ಕೊಂದ ಗೂಡ್ಸೆ ದೇಶಭಕ್ತ – ಪ್ರಗ್ಯಾ ಸಿಂಗ್‍

ಎಂದಿನಂತೆ ಲಿಂಗಾಯತ ಪ್ರಾಬಲ್ಯದ ಕ್ಷೇತ್ರಗಳಲ್ಲಿ ದಿಗ್ವಿಜಯ ಸಾಧಿಸಿದ ಬಿಜೆಪಿ ಈ ಸಲ ಎಲ್ಲ ಮೀಸಲು ಕ್ಷೇತ್ರಗಳನ್ನೂ ಬುಟ್ಟಿಗೆ ಹಾಕಿಕೊಂಡಿದೆ. ಗೆದ್ದಿರುವ 3 ಒಬಿಸಿ ಕೂಡ ( ಸುಮಲತಾ ಪಕ್ಷೇತರ ಆದರೂ ಬಿಜೆಪಿನೇ!) ಬಿಜೆಪಿಯವರೇ.
ಸಂಪುಟ ವಿಸ್ತರಣೇ ಆದರೆ ಮೂವರು ಬ್ರಾಹ್ಮಣರಲ್ಲಿ ಇಬ್ಬರಿಗೆ ಸಚಿವ ಸ್ಥಾನ ಗ್ಯಾರಂಟಿ! ಎಸ್‍ಸಿ, ಎಸ್‍ಟಿ ಮತ್ತು ಒಬಿಸಿಗಳ ಸಂಘಟನೆ ಮರೆತ ಕಾಂಗ್ರೆಸ್, ಒಕ್ಕಲಿಗರನ್ನು ಹಗುರವಾಗಿ ಪರಿಗಣಿಸಿದ ಜೆಡಿಎಸ್ ಇನ್ನಾದರೂ ಪಾಠ ಕಲಿಯುವವೇ? ಸದ್ಯಕ್ಕೆ ಆ ಲಕ್ಷಣಗಳಂತೂ ಕಾಣುತ್ತಿಲ್ಲ. ಅಂದಂತೆ ಈ ಸಲ ಶೋಭಾ ಮತ್ತು ಸುಮಲತಾ ಇಬ್ಬರು ಮಹಿಳೆಯರು ಆಯ್ಕೆಯಾಗಿದ್ದಾರೆ.
ಇಲ್ಲಿ ಸಾಮಾಜಿಕ ನ್ಯಾಯವನ್ನು ಅಪೇಕ್ಷಿಸುವುದಾದರೂ ಹೇಗೆ? ಸಶಕ್ತ ಹೋರಾಟವೊಂದೇ ದಾರಿಯೇ?

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...