Homeರಾಜಕೀಯನೂತನ ಸಂಸದರಲ್ಲಿ ಕ್ರಿಮಿನಲ್ ಹಿನ್ನೆಲೆ, ಮೇಲ್ಜಾತಿ ಮುನ್ನಲೆ

ನೂತನ ಸಂಸದರಲ್ಲಿ ಕ್ರಿಮಿನಲ್ ಹಿನ್ನೆಲೆ, ಮೇಲ್ಜಾತಿ ಮುನ್ನಲೆ

ಶೇ. 44ರಷ್ಟು ಸಂಸದರು ಕ್ರಿಮಿನಲ್ ಹಿನ್ನೆಲೆಯ ಆರೋಪಿಗಳು!

- Advertisement -
- Advertisement -

| ಮಲ್ಲಿ |
ಇತ್ತೀಚಿನ ಎರಡೂವರೆ ದಶಕದಿಂದ ಸಂಸತ್ತಿನಲ್ಲಿ ಕ್ರಿಮಿನಲ್ ಹಿನ್ನೆಲೆಯ, ಕೋಟ್ಯಾಂತರ ಆಸ್ತಿಯ ಸದಸ್ಯರ ಸಂಖ್ಯೆ ಏರುತ್ತಲೇ ಹೋಗುತ್ತಿದೆ. ಮೀಸಲು ಕ್ಷೇತ್ರ ಬಿಟ್ಟು ಬೇರೆಡೆ ಗೆಲ್ಲುವವರಲ್ಲಿ ಮೇಲ್ಜಾತಿಯ ಬಲಾಢ್ಯ ಅಭ್ಯರ್ಥಿಗಳೇ ಜಾಸ್ತಿ. 2018ರಲ್ಲಿ ಇವರೆಲ್ಲರೊಂದಿಗೆ ಪುಟ್ಟಾಪೂರಾ ಕೋಮುಕ್ರಿಮಿಗಳೆಂದು ಜಗಜ್ಜಾಹೀರಾದವರ ಸಂಖ್ಯೆಯೂ ಏರಿದೆ!
ಹೊಸದಾಗಿ ಆಯ್ಕೆಯಾಗಿರುವ ಸಂಸದರ ಪೈಕಿ ಹೆಚ್ಚೂ ಕಡಿಮೆ ಅರ್ಧದಷ್ಟು ಜನ ಕ್ರಿಮಿನಲ್ ಕೇಸುಗಳನ್ನು ಎದುರಿಸುತ್ತಿದ್ದಾರೆ. ಕೊಲೆ, ರೇಪು ಕೇಸುಗಳ ಜೊತೆಗೆ ಭಯೋತ್ಪಾದನೆಯ ಕೇಸುಗಳನ್ನೂ ಹೆಟ್ಟಿಸಿಕೊಂಡ ಮಹಾನುಭಾವರು ಸಂಸತ್ ಪ್ರವೇಶಿಸುತ್ತಿದ್ದಾರೆ.
ಇದೇನೂ ಹೊಸ ವಿದ್ಯಮಾನವಲ್ಲವಾದರೂ, ಬಾಂಬ್ ಸ್ಫೋಟದಂತಹ ಭಯೋತ್ಪಾದನಾ ಚಟುವಟಿಕೆಯ ಆರೋಪ ಹೊತ್ತು ಜೈಲೂಟ ಸವಿದು ಜಾಮೀನಿನ ಮೇಲೆ ಹೊರಗಿರುವ ‘ವೀರ’ ಮಹಿಳೆ ಸಂಸತ್ ಪ್ರವೇಶಿಸುತ್ತಿದ್ದಾಳೆ. ದೇಶಭಕ್ತರ ಪಾರ್ಟಿಯಿಂದ ಗೆದ್ದಿರುವ ಈಯಮ್ಮ ಸಂಸತ್ತಿನಲ್ಲಿ ಅದೇನ್ ಮಾಡ್ತದೋ?
ಇದೆಲ್ಲ ವಿವರವನ್ನು ಎಡಿಅರ್ ಸಂಸ್ಥೆ ಬಹಿರಂಗ ಪಡಿಸಿದೆ. 2014ಕ್ಕೆ ಹೋಲಿಸಿದರೆ ಈ ಸಲ ಕ್ರಿಮಿನಲ್ ಹಿನ್ನೆಲೆಯ ಸದಸ್ಯರ ಸಂಖ್ಯೆ ಶೇ. 26ರಷ್ಟು ಹೆಚ್ಚಳವಾಗಿದೆ. 539 ಸದಸ್ಯರ ಹಿನ್ನೆಲೆಯನ್ನು ಪರಿಶೀಲಿಸಲಾಗಿದ್ದು, 233 ಸಂಸದರು ಕ್ರಿಮಿನಲ್ ಕಢಸುಗಳನ್ನು ಹೊತ್ತುಕೊಂಡು ಬಂದಿದ್ದಾರೆ. ಅಂದರೆ ಶೇ. 44ರಷ್ಟು ಸಂಸದರು ಕ್ರಿಮಿನಲ್ ಹಿನ್ನೆಲೆಯ ಆರೋಪಿಗಳು!
ಇದರಲ್ಲಿ ಬಿಜೆಪಿಯಿಂದ 116, ಕಾಂಗ್ರೆಸ್‍ನಿಂದ 29, ಜೆಡಿಯುನಿಂದ 23, ಡಿಎಂಕೆಯಿಂದ 10 ಮತ್ತು ಟಿಎಂಸಿಯಿಂದ 9 ಸಂಸದರು ಇಂತಹ ಹಿನ್ನೆಲೆ ಹೊಂದಿದ್ದಾರೆ.
ಇದರಲ್ಲಿ ಶೇ 29ರಷ್ಟು ಜನ ಕೊಲೆ, ಕೊಲೆ ಯತ್ನ, ಅತ್ಯಾಚಾರ ಮತ್ತು ಭಯೋತ್ಪಾದನಾ ಚಟುವಟಿಕೆಯ ಆರೋಪ ಹೊತ್ತವರು.

ಮೇಲ್ಜಾತಿಯವರೇ ಮೇಲ್ ಮೇಲೆ!
ಇನ್ನೊಂದು ಸಂಸ್ಥೆ ಪ್ರಕಟಿಸಿರುವ ವಿವರಗಳ ಪ್ರಕಾರ, ಮೇಲ್ಜಾತಿಯ ಸಂಸದರು ಎಂದಿನಂತೆ ಪ್ರಾಬಲ್ಯ ಹೊಂದಿದ್ದಾರೆ. 232 ಸಂಸದರು ಮೇಲ್ಜಾತಿ, 120 ಸಂಸದರು ಒಬಿಸಿ, 86 ಸಂಸದರು ಎಸ್‍ಸಿ, 52 ಸಂಸದರು ಎಸ್‍ಟಿ ಮತ್ತು 52 ಸಂಸದರು ಧಾರ್ಮಿಕ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದವರು. ಮೀಸಲು ಕ್ಷೇತ್ರಗಳು ಇಲ್ಲದಿದ್ದರೆ ಒಬ್ಬ ಎಸ್‍ಸಿ/ಎಸ್‍ಟಿ ಸಂಸದರೂ ಇರುತ್ತಿರಲಿಲ್ಲವೇನೋ?

ಕರ್ನಾಟಕದ್ದೂ ಅದೇ ಕತೆ!
ರಾಜ್ಯದಿಂದ ಆಯ್ಕೆಯಾದ ಸಂಸದರಲ್ಲಿ ಅನಂತಕುಮಾರ ಹೆಗಡೆ, ನಳೀನಕುಮಾರ ಕಟೀಲರಂತಹ ‘ಉಗ್ರ’ ವ್ಯಕ್ತಿಗಳಿದ್ದಾರೆ. ಧಾರವಾಡದ ಪ್ರಹ್ಲಾದ ಜೋಶಿಯವರೇನೂ ಪ್ರಚೋದನಾಕಾರಿ ಭಾಷಣ ಮತ್ತು ತಂತ್ರದಲ್ಲಿ ಕಮ್ಮಿಯೇನಲ್ಲ. ಹಲವು ಯುವತಿಯರಿಗೆ ವಂಚಿಸಿದ ಆರೋಪ ಎದುರಿಸುತ್ತಿರುವ, ಮೊದಲ ಬಾರಿ ಸಂಸತ್ ಪ್ರವೇಶ ಮಾಡುತ್ತಿರುವ ಬೆಂಗಳೂರು ದಕ್ಷಿಣದ ಸಂಸದ ತೇಜಸ್ವಿ ಸೂರ್ಯ, ಗೆಲುವಿನ ನಂತರ ಮೊದಲ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದೇನು ಗೊತ್ತೇ? ‘ನನ್ನ ಈ ಗೆಲುವನ್ನು ಬೆವರು, ರಕ್ತ ಹರಿಸಿ ಬಿಜೆಪಿಗಾಗಿ ಹೋರಾಡುತ್ತಿರುವ ಕೇರಳ, ತ್ರಿಪುರ ಮತ್ತು ಪಶ್ಚಿಮ ಬಂಗಾಳದ ನಮ್ಮ ಕಾರ್ಯಕರ್ತರಿಗೆ ಅರ್ಪಿಸುತ್ತೇನೆ’ ಎಂದು! ಶೋಭಾ, ಕಟೀಲ್, ಹೆಗಡೆ ಗೋಡ್ಸೆಯನ್ನು ಬಹಿರಂಗವಾಗಿ ಬೆಂಬಲಿಸಿದವರು. ಈಗ ಶೋಭಾ ಸುಳ್ ಸುದ್ದಿಯೊಂದನ್ನು ಹರಡಿ ಸಮಾಜ ಒಡೆಯುವ ಕೆಲಸಕ್ಕೂ ಕೈ ಹಾಕಿದ ಆರೋಪ ಹೊತ್ತಿದ್ದಾರೆ.
ಜಾತಿ ವಿಷಯಕ್ಕೆ ಬಂದರೆ ಮೀಸಲು ಕ್ಷೇತ್ರಗಳನ್ನು ಬಿಟ್ಟರೆ, ಉಳಿದ ಸಾಮಾನ್ಯ ಕ್ಷೇತ್ರಗಳಲ್ಲಿ ಲಿಂಗಾಯತರು, ಒಕ್ಕಲಿಗರು ಮತ್ತು ಬ್ರಾಹ್ಮಣರದ್ದೇ ಪ್ರಾಬಲ್ಯ! ಈ ಸಲ 9 ಲಿಂಗಾಯತ ಸಂಸದರು, 3 ಬ್ರಾಹಣ ಸಂಸದರು (ಎಲ್ಲ ಬಿಜೆಪಿ) ಆಯ್ಕೆಯಾಗಿದ್ದಾರೆ. 6 ಒಕ್ಕಲಿಗರು (ಬಿಜೆಪಿ 4, ಕಾಂಗ್ರೆಸ್,ಜೆಡಿಎಸ್ ತಲಾ ಒಂದು) ಸಂಸತ್ ಪ್ರವೇಶಿಸಿದ್ದಾರೆ. ಅಂದರೆ 28ರಲ್ಲಿ 18 ಸಂಸದರು ಮೇಲ್ಜಾತಿಗೆ ಸೇರಿದವರೇ!
ಎಸ್‍ಸಿ ಮೀಸಲು ಕ್ಷೇತ್ರಗಳಿಂದ ಐವರು, ಎಸ್‍ಟಿ ಮೀಸಲು ಕ್ಷೇತ್ರಗಳಿಂದ ಇಬ್ಬರು ಸಂಸದರಾದರೆ, 3 ಒಬಿಸಿಗಳು ಸಂಸತ್ ಪ್ರವೇಶಿಸುತ್ತಿದ್ದಾರೆ.

ಇದನ್ನು ಓದಿ: ಗಾಂಧಿಯನ್ನು ಕೊಂದ ಗೂಡ್ಸೆ ದೇಶಭಕ್ತ – ಪ್ರಗ್ಯಾ ಸಿಂಗ್‍

ಎಂದಿನಂತೆ ಲಿಂಗಾಯತ ಪ್ರಾಬಲ್ಯದ ಕ್ಷೇತ್ರಗಳಲ್ಲಿ ದಿಗ್ವಿಜಯ ಸಾಧಿಸಿದ ಬಿಜೆಪಿ ಈ ಸಲ ಎಲ್ಲ ಮೀಸಲು ಕ್ಷೇತ್ರಗಳನ್ನೂ ಬುಟ್ಟಿಗೆ ಹಾಕಿಕೊಂಡಿದೆ. ಗೆದ್ದಿರುವ 3 ಒಬಿಸಿ ಕೂಡ ( ಸುಮಲತಾ ಪಕ್ಷೇತರ ಆದರೂ ಬಿಜೆಪಿನೇ!) ಬಿಜೆಪಿಯವರೇ.
ಸಂಪುಟ ವಿಸ್ತರಣೇ ಆದರೆ ಮೂವರು ಬ್ರಾಹ್ಮಣರಲ್ಲಿ ಇಬ್ಬರಿಗೆ ಸಚಿವ ಸ್ಥಾನ ಗ್ಯಾರಂಟಿ! ಎಸ್‍ಸಿ, ಎಸ್‍ಟಿ ಮತ್ತು ಒಬಿಸಿಗಳ ಸಂಘಟನೆ ಮರೆತ ಕಾಂಗ್ರೆಸ್, ಒಕ್ಕಲಿಗರನ್ನು ಹಗುರವಾಗಿ ಪರಿಗಣಿಸಿದ ಜೆಡಿಎಸ್ ಇನ್ನಾದರೂ ಪಾಠ ಕಲಿಯುವವೇ? ಸದ್ಯಕ್ಕೆ ಆ ಲಕ್ಷಣಗಳಂತೂ ಕಾಣುತ್ತಿಲ್ಲ. ಅಂದಂತೆ ಈ ಸಲ ಶೋಭಾ ಮತ್ತು ಸುಮಲತಾ ಇಬ್ಬರು ಮಹಿಳೆಯರು ಆಯ್ಕೆಯಾಗಿದ್ದಾರೆ.
ಇಲ್ಲಿ ಸಾಮಾಜಿಕ ನ್ಯಾಯವನ್ನು ಅಪೇಕ್ಷಿಸುವುದಾದರೂ ಹೇಗೆ? ಸಶಕ್ತ ಹೋರಾಟವೊಂದೇ ದಾರಿಯೇ?

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...