Homeರಾಜಕೀಯನೂತನ ಸಂಸದರಲ್ಲಿ ಕ್ರಿಮಿನಲ್ ಹಿನ್ನೆಲೆ, ಮೇಲ್ಜಾತಿ ಮುನ್ನಲೆ

ನೂತನ ಸಂಸದರಲ್ಲಿ ಕ್ರಿಮಿನಲ್ ಹಿನ್ನೆಲೆ, ಮೇಲ್ಜಾತಿ ಮುನ್ನಲೆ

ಶೇ. 44ರಷ್ಟು ಸಂಸದರು ಕ್ರಿಮಿನಲ್ ಹಿನ್ನೆಲೆಯ ಆರೋಪಿಗಳು!

- Advertisement -
- Advertisement -

| ಮಲ್ಲಿ |
ಇತ್ತೀಚಿನ ಎರಡೂವರೆ ದಶಕದಿಂದ ಸಂಸತ್ತಿನಲ್ಲಿ ಕ್ರಿಮಿನಲ್ ಹಿನ್ನೆಲೆಯ, ಕೋಟ್ಯಾಂತರ ಆಸ್ತಿಯ ಸದಸ್ಯರ ಸಂಖ್ಯೆ ಏರುತ್ತಲೇ ಹೋಗುತ್ತಿದೆ. ಮೀಸಲು ಕ್ಷೇತ್ರ ಬಿಟ್ಟು ಬೇರೆಡೆ ಗೆಲ್ಲುವವರಲ್ಲಿ ಮೇಲ್ಜಾತಿಯ ಬಲಾಢ್ಯ ಅಭ್ಯರ್ಥಿಗಳೇ ಜಾಸ್ತಿ. 2018ರಲ್ಲಿ ಇವರೆಲ್ಲರೊಂದಿಗೆ ಪುಟ್ಟಾಪೂರಾ ಕೋಮುಕ್ರಿಮಿಗಳೆಂದು ಜಗಜ್ಜಾಹೀರಾದವರ ಸಂಖ್ಯೆಯೂ ಏರಿದೆ!
ಹೊಸದಾಗಿ ಆಯ್ಕೆಯಾಗಿರುವ ಸಂಸದರ ಪೈಕಿ ಹೆಚ್ಚೂ ಕಡಿಮೆ ಅರ್ಧದಷ್ಟು ಜನ ಕ್ರಿಮಿನಲ್ ಕೇಸುಗಳನ್ನು ಎದುರಿಸುತ್ತಿದ್ದಾರೆ. ಕೊಲೆ, ರೇಪು ಕೇಸುಗಳ ಜೊತೆಗೆ ಭಯೋತ್ಪಾದನೆಯ ಕೇಸುಗಳನ್ನೂ ಹೆಟ್ಟಿಸಿಕೊಂಡ ಮಹಾನುಭಾವರು ಸಂಸತ್ ಪ್ರವೇಶಿಸುತ್ತಿದ್ದಾರೆ.
ಇದೇನೂ ಹೊಸ ವಿದ್ಯಮಾನವಲ್ಲವಾದರೂ, ಬಾಂಬ್ ಸ್ಫೋಟದಂತಹ ಭಯೋತ್ಪಾದನಾ ಚಟುವಟಿಕೆಯ ಆರೋಪ ಹೊತ್ತು ಜೈಲೂಟ ಸವಿದು ಜಾಮೀನಿನ ಮೇಲೆ ಹೊರಗಿರುವ ‘ವೀರ’ ಮಹಿಳೆ ಸಂಸತ್ ಪ್ರವೇಶಿಸುತ್ತಿದ್ದಾಳೆ. ದೇಶಭಕ್ತರ ಪಾರ್ಟಿಯಿಂದ ಗೆದ್ದಿರುವ ಈಯಮ್ಮ ಸಂಸತ್ತಿನಲ್ಲಿ ಅದೇನ್ ಮಾಡ್ತದೋ?
ಇದೆಲ್ಲ ವಿವರವನ್ನು ಎಡಿಅರ್ ಸಂಸ್ಥೆ ಬಹಿರಂಗ ಪಡಿಸಿದೆ. 2014ಕ್ಕೆ ಹೋಲಿಸಿದರೆ ಈ ಸಲ ಕ್ರಿಮಿನಲ್ ಹಿನ್ನೆಲೆಯ ಸದಸ್ಯರ ಸಂಖ್ಯೆ ಶೇ. 26ರಷ್ಟು ಹೆಚ್ಚಳವಾಗಿದೆ. 539 ಸದಸ್ಯರ ಹಿನ್ನೆಲೆಯನ್ನು ಪರಿಶೀಲಿಸಲಾಗಿದ್ದು, 233 ಸಂಸದರು ಕ್ರಿಮಿನಲ್ ಕಢಸುಗಳನ್ನು ಹೊತ್ತುಕೊಂಡು ಬಂದಿದ್ದಾರೆ. ಅಂದರೆ ಶೇ. 44ರಷ್ಟು ಸಂಸದರು ಕ್ರಿಮಿನಲ್ ಹಿನ್ನೆಲೆಯ ಆರೋಪಿಗಳು!
ಇದರಲ್ಲಿ ಬಿಜೆಪಿಯಿಂದ 116, ಕಾಂಗ್ರೆಸ್‍ನಿಂದ 29, ಜೆಡಿಯುನಿಂದ 23, ಡಿಎಂಕೆಯಿಂದ 10 ಮತ್ತು ಟಿಎಂಸಿಯಿಂದ 9 ಸಂಸದರು ಇಂತಹ ಹಿನ್ನೆಲೆ ಹೊಂದಿದ್ದಾರೆ.
ಇದರಲ್ಲಿ ಶೇ 29ರಷ್ಟು ಜನ ಕೊಲೆ, ಕೊಲೆ ಯತ್ನ, ಅತ್ಯಾಚಾರ ಮತ್ತು ಭಯೋತ್ಪಾದನಾ ಚಟುವಟಿಕೆಯ ಆರೋಪ ಹೊತ್ತವರು.

ಮೇಲ್ಜಾತಿಯವರೇ ಮೇಲ್ ಮೇಲೆ!
ಇನ್ನೊಂದು ಸಂಸ್ಥೆ ಪ್ರಕಟಿಸಿರುವ ವಿವರಗಳ ಪ್ರಕಾರ, ಮೇಲ್ಜಾತಿಯ ಸಂಸದರು ಎಂದಿನಂತೆ ಪ್ರಾಬಲ್ಯ ಹೊಂದಿದ್ದಾರೆ. 232 ಸಂಸದರು ಮೇಲ್ಜಾತಿ, 120 ಸಂಸದರು ಒಬಿಸಿ, 86 ಸಂಸದರು ಎಸ್‍ಸಿ, 52 ಸಂಸದರು ಎಸ್‍ಟಿ ಮತ್ತು 52 ಸಂಸದರು ಧಾರ್ಮಿಕ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದವರು. ಮೀಸಲು ಕ್ಷೇತ್ರಗಳು ಇಲ್ಲದಿದ್ದರೆ ಒಬ್ಬ ಎಸ್‍ಸಿ/ಎಸ್‍ಟಿ ಸಂಸದರೂ ಇರುತ್ತಿರಲಿಲ್ಲವೇನೋ?

ಕರ್ನಾಟಕದ್ದೂ ಅದೇ ಕತೆ!
ರಾಜ್ಯದಿಂದ ಆಯ್ಕೆಯಾದ ಸಂಸದರಲ್ಲಿ ಅನಂತಕುಮಾರ ಹೆಗಡೆ, ನಳೀನಕುಮಾರ ಕಟೀಲರಂತಹ ‘ಉಗ್ರ’ ವ್ಯಕ್ತಿಗಳಿದ್ದಾರೆ. ಧಾರವಾಡದ ಪ್ರಹ್ಲಾದ ಜೋಶಿಯವರೇನೂ ಪ್ರಚೋದನಾಕಾರಿ ಭಾಷಣ ಮತ್ತು ತಂತ್ರದಲ್ಲಿ ಕಮ್ಮಿಯೇನಲ್ಲ. ಹಲವು ಯುವತಿಯರಿಗೆ ವಂಚಿಸಿದ ಆರೋಪ ಎದುರಿಸುತ್ತಿರುವ, ಮೊದಲ ಬಾರಿ ಸಂಸತ್ ಪ್ರವೇಶ ಮಾಡುತ್ತಿರುವ ಬೆಂಗಳೂರು ದಕ್ಷಿಣದ ಸಂಸದ ತೇಜಸ್ವಿ ಸೂರ್ಯ, ಗೆಲುವಿನ ನಂತರ ಮೊದಲ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದೇನು ಗೊತ್ತೇ? ‘ನನ್ನ ಈ ಗೆಲುವನ್ನು ಬೆವರು, ರಕ್ತ ಹರಿಸಿ ಬಿಜೆಪಿಗಾಗಿ ಹೋರಾಡುತ್ತಿರುವ ಕೇರಳ, ತ್ರಿಪುರ ಮತ್ತು ಪಶ್ಚಿಮ ಬಂಗಾಳದ ನಮ್ಮ ಕಾರ್ಯಕರ್ತರಿಗೆ ಅರ್ಪಿಸುತ್ತೇನೆ’ ಎಂದು! ಶೋಭಾ, ಕಟೀಲ್, ಹೆಗಡೆ ಗೋಡ್ಸೆಯನ್ನು ಬಹಿರಂಗವಾಗಿ ಬೆಂಬಲಿಸಿದವರು. ಈಗ ಶೋಭಾ ಸುಳ್ ಸುದ್ದಿಯೊಂದನ್ನು ಹರಡಿ ಸಮಾಜ ಒಡೆಯುವ ಕೆಲಸಕ್ಕೂ ಕೈ ಹಾಕಿದ ಆರೋಪ ಹೊತ್ತಿದ್ದಾರೆ.
ಜಾತಿ ವಿಷಯಕ್ಕೆ ಬಂದರೆ ಮೀಸಲು ಕ್ಷೇತ್ರಗಳನ್ನು ಬಿಟ್ಟರೆ, ಉಳಿದ ಸಾಮಾನ್ಯ ಕ್ಷೇತ್ರಗಳಲ್ಲಿ ಲಿಂಗಾಯತರು, ಒಕ್ಕಲಿಗರು ಮತ್ತು ಬ್ರಾಹ್ಮಣರದ್ದೇ ಪ್ರಾಬಲ್ಯ! ಈ ಸಲ 9 ಲಿಂಗಾಯತ ಸಂಸದರು, 3 ಬ್ರಾಹಣ ಸಂಸದರು (ಎಲ್ಲ ಬಿಜೆಪಿ) ಆಯ್ಕೆಯಾಗಿದ್ದಾರೆ. 6 ಒಕ್ಕಲಿಗರು (ಬಿಜೆಪಿ 4, ಕಾಂಗ್ರೆಸ್,ಜೆಡಿಎಸ್ ತಲಾ ಒಂದು) ಸಂಸತ್ ಪ್ರವೇಶಿಸಿದ್ದಾರೆ. ಅಂದರೆ 28ರಲ್ಲಿ 18 ಸಂಸದರು ಮೇಲ್ಜಾತಿಗೆ ಸೇರಿದವರೇ!
ಎಸ್‍ಸಿ ಮೀಸಲು ಕ್ಷೇತ್ರಗಳಿಂದ ಐವರು, ಎಸ್‍ಟಿ ಮೀಸಲು ಕ್ಷೇತ್ರಗಳಿಂದ ಇಬ್ಬರು ಸಂಸದರಾದರೆ, 3 ಒಬಿಸಿಗಳು ಸಂಸತ್ ಪ್ರವೇಶಿಸುತ್ತಿದ್ದಾರೆ.

ಇದನ್ನು ಓದಿ: ಗಾಂಧಿಯನ್ನು ಕೊಂದ ಗೂಡ್ಸೆ ದೇಶಭಕ್ತ – ಪ್ರಗ್ಯಾ ಸಿಂಗ್‍

ಎಂದಿನಂತೆ ಲಿಂಗಾಯತ ಪ್ರಾಬಲ್ಯದ ಕ್ಷೇತ್ರಗಳಲ್ಲಿ ದಿಗ್ವಿಜಯ ಸಾಧಿಸಿದ ಬಿಜೆಪಿ ಈ ಸಲ ಎಲ್ಲ ಮೀಸಲು ಕ್ಷೇತ್ರಗಳನ್ನೂ ಬುಟ್ಟಿಗೆ ಹಾಕಿಕೊಂಡಿದೆ. ಗೆದ್ದಿರುವ 3 ಒಬಿಸಿ ಕೂಡ ( ಸುಮಲತಾ ಪಕ್ಷೇತರ ಆದರೂ ಬಿಜೆಪಿನೇ!) ಬಿಜೆಪಿಯವರೇ.
ಸಂಪುಟ ವಿಸ್ತರಣೇ ಆದರೆ ಮೂವರು ಬ್ರಾಹ್ಮಣರಲ್ಲಿ ಇಬ್ಬರಿಗೆ ಸಚಿವ ಸ್ಥಾನ ಗ್ಯಾರಂಟಿ! ಎಸ್‍ಸಿ, ಎಸ್‍ಟಿ ಮತ್ತು ಒಬಿಸಿಗಳ ಸಂಘಟನೆ ಮರೆತ ಕಾಂಗ್ರೆಸ್, ಒಕ್ಕಲಿಗರನ್ನು ಹಗುರವಾಗಿ ಪರಿಗಣಿಸಿದ ಜೆಡಿಎಸ್ ಇನ್ನಾದರೂ ಪಾಠ ಕಲಿಯುವವೇ? ಸದ್ಯಕ್ಕೆ ಆ ಲಕ್ಷಣಗಳಂತೂ ಕಾಣುತ್ತಿಲ್ಲ. ಅಂದಂತೆ ಈ ಸಲ ಶೋಭಾ ಮತ್ತು ಸುಮಲತಾ ಇಬ್ಬರು ಮಹಿಳೆಯರು ಆಯ್ಕೆಯಾಗಿದ್ದಾರೆ.
ಇಲ್ಲಿ ಸಾಮಾಜಿಕ ನ್ಯಾಯವನ್ನು ಅಪೇಕ್ಷಿಸುವುದಾದರೂ ಹೇಗೆ? ಸಶಕ್ತ ಹೋರಾಟವೊಂದೇ ದಾರಿಯೇ?

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...