Homeಕರ್ನಾಟಕದಿಂಡಗನೂರು: ದೇವಾಲಯ ಪ್ರವೇಶದ ಬಳಿಕ ದಲಿತರಿಗೆ ಅಘೋಷಿತ ಸಾಮಾಜಿಕ ಬಹಿಷ್ಕಾರ

ದಿಂಡಗನೂರು: ದೇವಾಲಯ ಪ್ರವೇಶದ ಬಳಿಕ ದಲಿತರಿಗೆ ಅಘೋಷಿತ ಸಾಮಾಜಿಕ ಬಹಿಷ್ಕಾರ

- Advertisement -
- Advertisement -

ನಮ್ಮ ಸಂವಿಧಾನ ಎಲ್ಲ ರೀತಿಯ ಅಸ್ಪೃಶ್ಯತೆ ಆಚರಣೆಯನ್ನು ನಿಷೇಧಿಸಿದೆ. ಅದರ ಭಾಗವಾಗಿ ದಲಿತರು ದೇವಾಲಯಗಳಿಗೆ ಪ್ರವೇಶಿಸುತ್ತಿದ್ದಾರೆ. ಆದರೆ ಸ್ವಾಭಿಮಾನ ಮೆರೆದ ದಲಿತರ ಆರ್ಥಿಕ ಮೂಲಗಳಿಗೆ ಸವರ್ಣಿಯರು ಅಡ್ಡಿಯುಂಟು ಮಾಡುವ ವಿದ್ಯಮಾನಗಳು ವರದಿಯಾಗುತ್ತಿವೆ. ಅದಕ್ಕೆ ಇತ್ತೀಚಿನ ಉದಾಹರಣೆ ಹಾಸನ ಜಿಲ್ಲೆಯ ಚೆನ್ನರಾಯಪಟ್ಟಣ ತಾಲ್ಲೂಕಿನ ದಿಂಡಗನೂರು ಪ್ರಕರಣ.

8 ತಿಂಗಳ ಹಿಂದೆ ಜಾತಿ ಕಾರಣಕ್ಕೆ ದಲಿತರಿಗೆ ಹೊಟೇಲ್‌ ಒಳಗೆ ಪ್ರವೇಶ ನೀಡದೇ ಹೊರ ಕಳುಹಿಸಲಾಗಿತ್ತು. ಅದೇ ಗ್ರಾಮದಲ್ಲಿ ದೇವಾಲಯ ಪ್ರವೇಶಿಸುವ ಮೂಲಕ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ದಿಂಡಗೂರಿನ ದಲಿತರು ಹೊಸ ಇತಿಹಾಸ ಬರೆದಿದ್ದರು.

ಮೇಲ್ಜಾತಿ ಮತ್ತು ದಲಿತರ ಜೊತೆಗೆ ತಹಶೀಲ್ದಾರ್‌ ಮಾರುತಿ ಸಭೆ ನಡೆಸಿದ್ದರು. ಬಳಿಕ ತಾಲೂಕು ಆಡಳಿತ, ಪೊಲೀಸ್ ಇಲಾಖೆ, ಜಿಲ್ಲಾ ಭೀಮ್ ಆರ್ಮಿ ಸಂಘಟನೆ, ಮುಜರಾಯಿ ಇಲಾಖೆ ಸಮ್ಮುಖದಲ್ಲಿ ದಿಂಡಗೂರು ಗ್ರಾಮದ ದಲಿತರು ದೇವಾಲಯಗಳಿಗೆ ಮೊದಲ ಬಾರಿಗೆ ಪ್ರವೇಶ ಪಡೆದಿದ್ದರು.

ದೇವಾಲಯಗಳಿಗೆ ದಲಿತರು ಪ್ರವೇಶಿಸಿದ ಬಳಿಕ ಹಲವು ಸಮಸ್ಯೆಗಳನ್ನು ಎದುರಿಸುವಂತಾಗಿದೆ. ಸವರ್ಣೀಯರನ್ನು ದಲಿತರು ಅವಲಂಬಿಸಿರುವುದೇ ಈ ಸಮಸ್ಯೆಗೆ ಕಾರಣವಾಗಿದೆ. ದೇವಾಲಯ ಪ್ರವೇಶವನ್ನೇ ನೆಪವಾಗಿಟ್ಟುಕೊಂಡು ದಲಿತರನ್ನು ಮೂಲೆಗುಂಪು ಮಾಡುವ ಪ್ರವೃತ್ತಿಯನ್ನು ಎಲ್ಲೆಡೆ ಕಾಣಬಹುದು. ಇದಕ್ಕೆ ದಿಂಡಿಗನೂರು ಗ್ರಾಮ ಒಂದು ಉದಾಹರಣೆಯಷ್ಟೇ.

ಇದನ್ನೂ ಓದಿರಿ: ಚಿಲ್ಲರೆ ನೆಪದಲ್ಲಿ ದಲಿತರಿಗೆ ಹಾಲು ನೀಡದ ‘ಬ್ಯಾಲಹಳ್ಳಿ ಹಾಲು ಉತ್ಪಾದಕರ ಸಂಘ’

ದಿಂಡಗನೂರು ದಲಿತ ಮುಖಂಡ, ಭೀಮ್‌ ಆರ್ಮಿಯ ಸಂಘಟಕ ನಟರಾಜ್‌‌ ‘ನಾನುಗೌರಿ.ಕಾಂ’ ಜೊತೆ ಮಾತನಾಡಿ ದೇವಾಲಯ ಪ್ರವೇಶೋತ್ತರ ಪರಿಸ್ಥಿತಿಗಳನ್ನು ಬಿಚ್ಚಿಟ್ಟರು.

“ನಾವು ದೇವಾಲಯ ಪ್ರವೇಶ ಮಾಡಿದ್ದು ಸಾಮಾಜಿಕ ನ್ಯಾಯಕ್ಕಾಗಿ. ನಾವು ಕೂಡ ಮನುಷ್ಯರು ಎಂಬುದನ್ನು ಸಾರುವುದಕ್ಕಾಗಿ. ನಮ್ಮ ಧಾರ್ಮಿಕ ಹಕ್ಕಿಗಾಗಿ ದೇವಾಲಯ ಪ್ರವೇಶಿಸಿದೆವು. ಆದರೆ ಆನಂತರದಲ್ಲಿ ನಮ್ಮ ಮೇಲೆ ಅಘೋಷಿತ ಸಾಮಾಜಿಕ ಬಹಿಷ್ಕಾರ ಹಾಕುವುದು ನಡೆಯುತ್ತಿದೆ” ಎಂದರು.

“ನಮ್ಮ ಊರಿನಲ್ಲಿ ದಲಿತರು ಸೇರಿ ಸುಮಾರು ಏಟೆಂಟು ಜಾತಿಗಳಿವೆ. ದಲಿತರಿಗೆ ಮಾತ್ರ ಬಹಿಷ್ಕಾರ ಹಾಕುವ ಪದ್ಧತಿ ರೂಢಿಗೆ ಬಂದಿದೆ. ನಾವು ದೇವಾಲಯ ಪ್ರವೇಶಿಸಿದ ಬಳಿಕ ಸವರ್ಣೀಯ ಮುಖಂಡರು ಸಭೆ ಸೇರಿ ಅಘೋಷಿತ ಬಹಿಷ್ಕಾರಕ್ಕೆ ನಿರ್ಧರಿಸಿದ್ದಾರೆ. ದಲಿತರ ಬಳಿ ಯಾವುದೇ  ಮಾತುಕತೆ, ವ್ಯವಹಾರ ಮಾಡಬೇಡಿ ಎಂದು ತಮ್ಮ ಜಾತಿಯ ಜನರಿಗೆ ತಿಳಿಸಿದ್ದಾರೆ. ನಮ್ಮ ಜೊತೆ ಮಾತನಾಡಿದವರಿಗೆ ದಂಡ ಹಾಕುವ ಪದ್ಧತಿಯನ್ನು ಆಂತರಿಕವಾಗಿ ಮಾಡಿಕೊಂಡಿದ್ದಾರೆ. ಈಗಲೂ ಅದು ಚಾಲ್ತಿಯಲ್ಲಿದೆ” ಎಂದು ಮಾಹಿತಿ ನೀಡಿದರು.

“ಕೂಲಿಯನ್ನೇ ನಂಬಿಕೊಂಡಿದ್ದ ದಲಿತರನ್ನು ಕೂಲಿಗೆ ಕರೆಯುತ್ತಿಲ್ಲ. ಕೇಳಿದರೆ ಅದಕ್ಕೆ ಸಬೂಬುಗಳನ್ನು ಹೇಳುತ್ತಿದ್ದಾರೆ. ಇಷ್ಟು ದಿನ ಕೆಲಸ ಇತ್ತು, ಕರೆಯುತ್ತಿದ್ದೆವು; ಈಗ ಕೆಲಸ ಇಲ್ಲ ಎನ್ನುತ್ತಾರೆ. ಮಿಲ್‌ ಅಂಗಡಿಗೆ ದಲಿತರು ಹೋದರೆ ನಮಗೆ ಹುಷಾರಿಲ್ಲ, ನಾವು ಮಿಲ್‌ ನಿಲ್ಲಿಸಬೇಕೆಂದಿದ್ದೇವೆ ಎನ್ನುತ್ತಾರೆ. ಅವರಿಗೆ ಸರಿಸಮಾನವಾಗಿ ದೇವಾಲಯ ಪ್ರವೇಶಿಸಿದ್ದೇ ಅವರಿಗೆ ಸಹಿಸಲು ಆಗಿಲ್ಲ. ನಾವು ಯಾವಾಗಲೂ ಅವರ ಕಾಲಡಿ ಇರಬೇಕೆಂಬುದು ಅವರ ಮನಸ್ಥಿತಿ. ಹೊರಗಿನ ಪ್ರಪಂಚಕ್ಕೆ ಇದು ಗೊತ್ತಾಗುತ್ತಿಲ್ಲ” ಎಂದು ವಿಷಾದಿಸಿದರು.

“ನಾವು ಕೂಲಿನಾಲಿ ಮಾಡಿಕೊಂಡು ಹೇಗೋ ಇದ್ದೆವು. ಸಂಘಟಕರೆಲ್ಲ ಸೇರಿ ದೇವಾಲಯಕ್ಕೆ ಕರೆದುಕೊಂಡು ಹೋಗಿದ್ದೇ ಇದಕ್ಕೆಲ್ಲ ಕಾರಣ ಎಂದು ಕೆಲವು ದಲಿತರೇ ನಮ್ಮ ವಿರುದ್ಧ ಮಾತನಾಡುತ್ತಿದ್ದಾರೆ. ದೇವಾಲಯಕ್ಕೆ ಹೋಗಿ ನಮಗೆ ಆರ್ಥಿಕವಾಗಿ ಹಿನ್ನೆಡೆಯಾಯಿತು. ಆದರೆ ಧಾರ್ಮಿಕ ಸ್ವತಂತ್ರವನ್ನು ಪಡೆದುಕೊಂಡಿದ್ದೇವೆ” ಎನ್ನುತ್ತಾರೆ ನಟರಾಜ್‌.

“ನಮಗೆ ಸರ್ಕಾರಿ ಸವಲತ್ತುಗಳನ್ನು ದೊರಕಿಸಿ, ಸ್ವಾವಲಂಬಿಗಳಾಗಲು ಅವಕಾಶವನ್ನು ಸರ್ಕಾರ ನೀಡಬೇಕು. ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದರೂ ಯಾವುದೇ ಕ್ರಮ ಜರುಗಿಸುತ್ತಿಲ್ಲ. ಶಾಸಕರ ಗಮನಕ್ಕೆ ತರುವ ಕೆಲಸ ಮಾಡುತ್ತಿದ್ದೇವೆ. ದಲಿತರ ಸ್ವಯಂ ಉದ್ಯೋಗಕ್ಕೆ ಜನಪ್ರತಿನಿಧಿಗಳು ಪ್ರೋತ್ಸಾಹಿಸಬೇಕು. ಈ ನಿಟ್ಟಿನಲ್ಲಿ ಶ್ರೀಶಕ್ತಿ ಸಂಘವನ್ನು ಆರಂಭಿಸಿದ್ದೇವೆ. ಎಷ್ಟು ದಿನ ಸವರ್ಣೀಯರನ್ನೇ ಅವಲಂಬಿಸಲು ಸಾಧ್ಯ?” ಎಂದು ಕೇಳುವ ನಟರಾಜ್‌ ಅವರ ಪ್ರಶ್ನೆಯಲ್ಲಿ ಬಿಡುಗಡೆಯ ಮಾರ್ಗವಿದೆ. ಆದರೆ ಇದಕ್ಕೆ ಸರ್ಕಾರ, ಜನಪ್ರತಿನಿಧಿಗಳು ಬೆನ್ನೆಲುಬಾಗಿ ನಿಲ್ಲಬೇಕಿದೆ.


ಇದನ್ನೂ ಓದಿರಿ: ವಿಡಿಯೊ ವರದಿ: ಬ್ಯಾಲಹಳ್ಳಿ ದಲಿತರಿಂದ ದೇವಾಲಯ ಪ್ರವೇಶ; ಸವರ್ಣೀಯರ ಅಸಹನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಇವೆಲ್ಲಾ ಹುನ್ನಾರಗಳಿಗೆ ದಲಿತರು ಎದರಬಾರದು ಸರ್ಕಾರ ಮಧ್ಯಪ್ರವೇಶಿಸಿ ಅವರಿಗೆ ಭೂಮಿ ಸ್ವಯಂ ಉದ್ಯೋಗ ಸಾಲಸೌಲಭ್ಯ ನೀಡಿ ಅವರ ಗೌಲವಯುತ ಬದುಕಿಗೆ ನೆರವಾಗಬೇಕು ವಿದ್ಯಾವಂತ ದಲಿತರ ಜವಾಬ್ದಾರಿಯು ಹೆಚ್ಚಿದೆ

LEAVE A REPLY

Please enter your comment!
Please enter your name here

- Advertisment -

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...