Homeಕರ್ನಾಟಕದಿಂಡಗನೂರು: ದೇವಾಲಯ ಪ್ರವೇಶದ ಬಳಿಕ ದಲಿತರಿಗೆ ಅಘೋಷಿತ ಸಾಮಾಜಿಕ ಬಹಿಷ್ಕಾರ

ದಿಂಡಗನೂರು: ದೇವಾಲಯ ಪ್ರವೇಶದ ಬಳಿಕ ದಲಿತರಿಗೆ ಅಘೋಷಿತ ಸಾಮಾಜಿಕ ಬಹಿಷ್ಕಾರ

- Advertisement -
- Advertisement -

ನಮ್ಮ ಸಂವಿಧಾನ ಎಲ್ಲ ರೀತಿಯ ಅಸ್ಪೃಶ್ಯತೆ ಆಚರಣೆಯನ್ನು ನಿಷೇಧಿಸಿದೆ. ಅದರ ಭಾಗವಾಗಿ ದಲಿತರು ದೇವಾಲಯಗಳಿಗೆ ಪ್ರವೇಶಿಸುತ್ತಿದ್ದಾರೆ. ಆದರೆ ಸ್ವಾಭಿಮಾನ ಮೆರೆದ ದಲಿತರ ಆರ್ಥಿಕ ಮೂಲಗಳಿಗೆ ಸವರ್ಣಿಯರು ಅಡ್ಡಿಯುಂಟು ಮಾಡುವ ವಿದ್ಯಮಾನಗಳು ವರದಿಯಾಗುತ್ತಿವೆ. ಅದಕ್ಕೆ ಇತ್ತೀಚಿನ ಉದಾಹರಣೆ ಹಾಸನ ಜಿಲ್ಲೆಯ ಚೆನ್ನರಾಯಪಟ್ಟಣ ತಾಲ್ಲೂಕಿನ ದಿಂಡಗನೂರು ಪ್ರಕರಣ.

8 ತಿಂಗಳ ಹಿಂದೆ ಜಾತಿ ಕಾರಣಕ್ಕೆ ದಲಿತರಿಗೆ ಹೊಟೇಲ್‌ ಒಳಗೆ ಪ್ರವೇಶ ನೀಡದೇ ಹೊರ ಕಳುಹಿಸಲಾಗಿತ್ತು. ಅದೇ ಗ್ರಾಮದಲ್ಲಿ ದೇವಾಲಯ ಪ್ರವೇಶಿಸುವ ಮೂಲಕ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ದಿಂಡಗೂರಿನ ದಲಿತರು ಹೊಸ ಇತಿಹಾಸ ಬರೆದಿದ್ದರು.

ಮೇಲ್ಜಾತಿ ಮತ್ತು ದಲಿತರ ಜೊತೆಗೆ ತಹಶೀಲ್ದಾರ್‌ ಮಾರುತಿ ಸಭೆ ನಡೆಸಿದ್ದರು. ಬಳಿಕ ತಾಲೂಕು ಆಡಳಿತ, ಪೊಲೀಸ್ ಇಲಾಖೆ, ಜಿಲ್ಲಾ ಭೀಮ್ ಆರ್ಮಿ ಸಂಘಟನೆ, ಮುಜರಾಯಿ ಇಲಾಖೆ ಸಮ್ಮುಖದಲ್ಲಿ ದಿಂಡಗೂರು ಗ್ರಾಮದ ದಲಿತರು ದೇವಾಲಯಗಳಿಗೆ ಮೊದಲ ಬಾರಿಗೆ ಪ್ರವೇಶ ಪಡೆದಿದ್ದರು.

ದೇವಾಲಯಗಳಿಗೆ ದಲಿತರು ಪ್ರವೇಶಿಸಿದ ಬಳಿಕ ಹಲವು ಸಮಸ್ಯೆಗಳನ್ನು ಎದುರಿಸುವಂತಾಗಿದೆ. ಸವರ್ಣೀಯರನ್ನು ದಲಿತರು ಅವಲಂಬಿಸಿರುವುದೇ ಈ ಸಮಸ್ಯೆಗೆ ಕಾರಣವಾಗಿದೆ. ದೇವಾಲಯ ಪ್ರವೇಶವನ್ನೇ ನೆಪವಾಗಿಟ್ಟುಕೊಂಡು ದಲಿತರನ್ನು ಮೂಲೆಗುಂಪು ಮಾಡುವ ಪ್ರವೃತ್ತಿಯನ್ನು ಎಲ್ಲೆಡೆ ಕಾಣಬಹುದು. ಇದಕ್ಕೆ ದಿಂಡಿಗನೂರು ಗ್ರಾಮ ಒಂದು ಉದಾಹರಣೆಯಷ್ಟೇ.

ಇದನ್ನೂ ಓದಿರಿ: ಚಿಲ್ಲರೆ ನೆಪದಲ್ಲಿ ದಲಿತರಿಗೆ ಹಾಲು ನೀಡದ ‘ಬ್ಯಾಲಹಳ್ಳಿ ಹಾಲು ಉತ್ಪಾದಕರ ಸಂಘ’

ದಿಂಡಗನೂರು ದಲಿತ ಮುಖಂಡ, ಭೀಮ್‌ ಆರ್ಮಿಯ ಸಂಘಟಕ ನಟರಾಜ್‌‌ ‘ನಾನುಗೌರಿ.ಕಾಂ’ ಜೊತೆ ಮಾತನಾಡಿ ದೇವಾಲಯ ಪ್ರವೇಶೋತ್ತರ ಪರಿಸ್ಥಿತಿಗಳನ್ನು ಬಿಚ್ಚಿಟ್ಟರು.

“ನಾವು ದೇವಾಲಯ ಪ್ರವೇಶ ಮಾಡಿದ್ದು ಸಾಮಾಜಿಕ ನ್ಯಾಯಕ್ಕಾಗಿ. ನಾವು ಕೂಡ ಮನುಷ್ಯರು ಎಂಬುದನ್ನು ಸಾರುವುದಕ್ಕಾಗಿ. ನಮ್ಮ ಧಾರ್ಮಿಕ ಹಕ್ಕಿಗಾಗಿ ದೇವಾಲಯ ಪ್ರವೇಶಿಸಿದೆವು. ಆದರೆ ಆನಂತರದಲ್ಲಿ ನಮ್ಮ ಮೇಲೆ ಅಘೋಷಿತ ಸಾಮಾಜಿಕ ಬಹಿಷ್ಕಾರ ಹಾಕುವುದು ನಡೆಯುತ್ತಿದೆ” ಎಂದರು.

“ನಮ್ಮ ಊರಿನಲ್ಲಿ ದಲಿತರು ಸೇರಿ ಸುಮಾರು ಏಟೆಂಟು ಜಾತಿಗಳಿವೆ. ದಲಿತರಿಗೆ ಮಾತ್ರ ಬಹಿಷ್ಕಾರ ಹಾಕುವ ಪದ್ಧತಿ ರೂಢಿಗೆ ಬಂದಿದೆ. ನಾವು ದೇವಾಲಯ ಪ್ರವೇಶಿಸಿದ ಬಳಿಕ ಸವರ್ಣೀಯ ಮುಖಂಡರು ಸಭೆ ಸೇರಿ ಅಘೋಷಿತ ಬಹಿಷ್ಕಾರಕ್ಕೆ ನಿರ್ಧರಿಸಿದ್ದಾರೆ. ದಲಿತರ ಬಳಿ ಯಾವುದೇ  ಮಾತುಕತೆ, ವ್ಯವಹಾರ ಮಾಡಬೇಡಿ ಎಂದು ತಮ್ಮ ಜಾತಿಯ ಜನರಿಗೆ ತಿಳಿಸಿದ್ದಾರೆ. ನಮ್ಮ ಜೊತೆ ಮಾತನಾಡಿದವರಿಗೆ ದಂಡ ಹಾಕುವ ಪದ್ಧತಿಯನ್ನು ಆಂತರಿಕವಾಗಿ ಮಾಡಿಕೊಂಡಿದ್ದಾರೆ. ಈಗಲೂ ಅದು ಚಾಲ್ತಿಯಲ್ಲಿದೆ” ಎಂದು ಮಾಹಿತಿ ನೀಡಿದರು.

“ಕೂಲಿಯನ್ನೇ ನಂಬಿಕೊಂಡಿದ್ದ ದಲಿತರನ್ನು ಕೂಲಿಗೆ ಕರೆಯುತ್ತಿಲ್ಲ. ಕೇಳಿದರೆ ಅದಕ್ಕೆ ಸಬೂಬುಗಳನ್ನು ಹೇಳುತ್ತಿದ್ದಾರೆ. ಇಷ್ಟು ದಿನ ಕೆಲಸ ಇತ್ತು, ಕರೆಯುತ್ತಿದ್ದೆವು; ಈಗ ಕೆಲಸ ಇಲ್ಲ ಎನ್ನುತ್ತಾರೆ. ಮಿಲ್‌ ಅಂಗಡಿಗೆ ದಲಿತರು ಹೋದರೆ ನಮಗೆ ಹುಷಾರಿಲ್ಲ, ನಾವು ಮಿಲ್‌ ನಿಲ್ಲಿಸಬೇಕೆಂದಿದ್ದೇವೆ ಎನ್ನುತ್ತಾರೆ. ಅವರಿಗೆ ಸರಿಸಮಾನವಾಗಿ ದೇವಾಲಯ ಪ್ರವೇಶಿಸಿದ್ದೇ ಅವರಿಗೆ ಸಹಿಸಲು ಆಗಿಲ್ಲ. ನಾವು ಯಾವಾಗಲೂ ಅವರ ಕಾಲಡಿ ಇರಬೇಕೆಂಬುದು ಅವರ ಮನಸ್ಥಿತಿ. ಹೊರಗಿನ ಪ್ರಪಂಚಕ್ಕೆ ಇದು ಗೊತ್ತಾಗುತ್ತಿಲ್ಲ” ಎಂದು ವಿಷಾದಿಸಿದರು.

“ನಾವು ಕೂಲಿನಾಲಿ ಮಾಡಿಕೊಂಡು ಹೇಗೋ ಇದ್ದೆವು. ಸಂಘಟಕರೆಲ್ಲ ಸೇರಿ ದೇವಾಲಯಕ್ಕೆ ಕರೆದುಕೊಂಡು ಹೋಗಿದ್ದೇ ಇದಕ್ಕೆಲ್ಲ ಕಾರಣ ಎಂದು ಕೆಲವು ದಲಿತರೇ ನಮ್ಮ ವಿರುದ್ಧ ಮಾತನಾಡುತ್ತಿದ್ದಾರೆ. ದೇವಾಲಯಕ್ಕೆ ಹೋಗಿ ನಮಗೆ ಆರ್ಥಿಕವಾಗಿ ಹಿನ್ನೆಡೆಯಾಯಿತು. ಆದರೆ ಧಾರ್ಮಿಕ ಸ್ವತಂತ್ರವನ್ನು ಪಡೆದುಕೊಂಡಿದ್ದೇವೆ” ಎನ್ನುತ್ತಾರೆ ನಟರಾಜ್‌.

“ನಮಗೆ ಸರ್ಕಾರಿ ಸವಲತ್ತುಗಳನ್ನು ದೊರಕಿಸಿ, ಸ್ವಾವಲಂಬಿಗಳಾಗಲು ಅವಕಾಶವನ್ನು ಸರ್ಕಾರ ನೀಡಬೇಕು. ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದರೂ ಯಾವುದೇ ಕ್ರಮ ಜರುಗಿಸುತ್ತಿಲ್ಲ. ಶಾಸಕರ ಗಮನಕ್ಕೆ ತರುವ ಕೆಲಸ ಮಾಡುತ್ತಿದ್ದೇವೆ. ದಲಿತರ ಸ್ವಯಂ ಉದ್ಯೋಗಕ್ಕೆ ಜನಪ್ರತಿನಿಧಿಗಳು ಪ್ರೋತ್ಸಾಹಿಸಬೇಕು. ಈ ನಿಟ್ಟಿನಲ್ಲಿ ಶ್ರೀಶಕ್ತಿ ಸಂಘವನ್ನು ಆರಂಭಿಸಿದ್ದೇವೆ. ಎಷ್ಟು ದಿನ ಸವರ್ಣೀಯರನ್ನೇ ಅವಲಂಬಿಸಲು ಸಾಧ್ಯ?” ಎಂದು ಕೇಳುವ ನಟರಾಜ್‌ ಅವರ ಪ್ರಶ್ನೆಯಲ್ಲಿ ಬಿಡುಗಡೆಯ ಮಾರ್ಗವಿದೆ. ಆದರೆ ಇದಕ್ಕೆ ಸರ್ಕಾರ, ಜನಪ್ರತಿನಿಧಿಗಳು ಬೆನ್ನೆಲುಬಾಗಿ ನಿಲ್ಲಬೇಕಿದೆ.


ಇದನ್ನೂ ಓದಿರಿ: ವಿಡಿಯೊ ವರದಿ: ಬ್ಯಾಲಹಳ್ಳಿ ದಲಿತರಿಂದ ದೇವಾಲಯ ಪ್ರವೇಶ; ಸವರ್ಣೀಯರ ಅಸಹನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಇವೆಲ್ಲಾ ಹುನ್ನಾರಗಳಿಗೆ ದಲಿತರು ಎದರಬಾರದು ಸರ್ಕಾರ ಮಧ್ಯಪ್ರವೇಶಿಸಿ ಅವರಿಗೆ ಭೂಮಿ ಸ್ವಯಂ ಉದ್ಯೋಗ ಸಾಲಸೌಲಭ್ಯ ನೀಡಿ ಅವರ ಗೌಲವಯುತ ಬದುಕಿಗೆ ನೆರವಾಗಬೇಕು ವಿದ್ಯಾವಂತ ದಲಿತರ ಜವಾಬ್ದಾರಿಯು ಹೆಚ್ಚಿದೆ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...