Homeಕರ್ನಾಟಕವಕೀಲರ ವಿರುದ್ಧ UAPA ದುರ್ಬಳಕೆ: ನ್ಯಾಯಕ್ಕಾಗಿ ವಕೀಲರ ಸಂಘ ಪ್ರತಿಭಟನೆ

ವಕೀಲರ ವಿರುದ್ಧ UAPA ದುರ್ಬಳಕೆ: ನ್ಯಾಯಕ್ಕಾಗಿ ವಕೀಲರ ಸಂಘ ಪ್ರತಿಭಟನೆ

- Advertisement -
- Advertisement -

ತ್ರಿಪುರಾದಲ್ಲಿ ನಡೆದ ಕೋಮುಗಲಭೆ ಕುರಿತು ಸತ್ಯಶೋಧನೆ ನಡೆಸಿದ ತಂಡದ ಭಾಗವಾಗಿದ್ದ ಇಬ್ಬರು ವಕೀಲರಿಗೆ ಕಾನೂನು ಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (UAPA) ಹಾಗೂ ಐಪಿಸಿ ಅಡಿಯಲ್ಲಿ ನೋಟಿಸ್‌ ನೀಡಿರುವುದನ್ನು ಖಂಡಿಸಿ ‘ನ್ಯಾಯಕ್ಕಾಗಿ ಅಖಿಲ ಭಾರತ ವಕೀಲರ ಸಂಘ’ದ(AILAJ) ಕರ್ನಾಟಕ ರಾಜ್ಯ ಘಟಕವು ಪ್ರತಿಭಟನೆ ನಡೆಸಿದೆ.

ರಾಷ್ಟ್ರೀಯ ಮಾನವ ಹಕ್ಕುಗಳ ಸಂಘಟನೆಗಳ ಒಕ್ಕೂಟದ ಕಾರ್ಯದರ್ಶಿ ಅಡ್ವೊಕೇಟ್‌ ಅನ್ಸರ್‌ ಇಂದೋರಿ ಮತ್ತು ನಾಗರೀಕ ಹಕ್ಕುಗಳ ಸಂಘಟನೆಯಾದ ಪೀಪಲ್ಸ್‌ ಯೂನಿಯನ್‌ ಫಾರ್‌ ಸಿವಿಲ್‌ ಲಿಬರ್ಟಿಸ್‌ (ಪಿಯುಸಿಎಲ್‌, ದೆಹಲಿ)ನ ವಕೀಲರಾದ ಮುಖೇಶ್‌ ಅವರಿಗೆ ತ್ರಿಪುರಾ ಪೊಲೀಸರು ನೋಟಿಸ್‌ ಕಳುಹಿಸಿದ್ದಾರೆ. ಆ ನೋಟಿಸ್‌ನಲ್ಲಿ ‘ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟಿಸಿರುವ ಕಲ್ಪಿತ ಮತ್ತು ಸುಳ್ಳು ಹೇಳಿಕೆಗಳು/ ಕಾಮೆಂಟ್‌ಗಳನ್ನು ತಕ್ಷಣವೇ ಅಳಿಸಬೇಕು’ ಎಂದು ಹೇಳಿದ್ದು, ನವೆಂಬರ್‌ 10ರೊಳಗೆ ಪಶ್ಚಿಮ ಅಗರ್ತಲಾ ಪೊಲೀಸ್‌ ಠಾಣೆಯ ಮುಂದೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ಗಳು ತಿಳಿಸಿವೆ.

ಯುಎಪಿಎ ಹೊರತಾಗಿ, ಸೆಕ್ಷನ್‌ 153 ಎ ಮತ್ತು ಬಿ (ಧರ್ಮ, ಜನಾಂಗ, ಜನ್ಮಸ್ಥಳ, ವಾಸಸ್ಥಳ, ಭಾಷೆ ಇತ್ಯಾದಿಗಳ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು), 469 (ಮಾಹಿತಿಗೆ ಹಾನಿ ಮಾಡುವ ಉದ್ದೇಶಕ್ಕಾಗಿ ನಕಲು ಮಾಡುವುದು), 120 (ಶಾಂತಿ ಭಂಗವನ್ನು ಪ್ರಚೋದಿಸುವ ಉದ್ದೇಶದಿಂದ ಉದ್ದೇಶಪೂರ್ವಕ ಅವಮಾನ) ಹಾಗೂ ಐಪಿಸಿಯ 120 ಬಿ (ಕ್ರಿಮಿನಲ್‌ ಪಿತೂರಿಗಾಗಿ ಶಿಕ್ಷೆ) ಇವೆಲ್ಲದರಡಿಯಲ್ಲಿ ನೋಟಿಸ್‌ ನೀಡಲಾಗಿದೆ.

ಇದನ್ನೂ ಓದಿರಿ: ಒರಿಸ್ಸಾ: ದಲಿತರ ಗುಡಿಸಲುಗಳಿಗೆ ಬೆಂಕಿ; ಹತ್ತು ಮಂದಿಗೆ ಗಾಯ

ಈ ಕುರಿತು ಮಾತನಾಡಿದ ವಕೀಲರಾದ ಮುಖೇಶ್‌, ‘ವಾಸ್ತವತೆಯನ್ನು ತಿಳಿಯಲು ತ್ರಿಪುರಾಕ್ಕೆ ಹೋದ ಸತ್ಯಶೋಧನಾ ತಂಡದ  ಭಾಗವಾಗಿದ್ದೇನೆ. ಸಾಮಾಜಿಕವಾಗಿ ನಾನು ನೋಡಿದ್ದನ್ನು ಹಂಚಿಕೊಂಡಿದ್ದೇನೆ’ ಎಂದು ಹೇಳಿದ್ದಾರೆ.

ಸುಪ್ರೀಂ ಕೋರ್ಟ್ ವಕೀಲ ಎಹ್ತೇಶಾಮ್ ಹಶ್ಮಿ, ವಕೀಲ ಅಮಿತ್ ಶ್ರೀವಾಸ್ತವ್ (ಸಮನ್ವಯ ಸಮಿತಿ, ಪ್ರಜಾಪ್ರಭುತ್ವಕ್ಕಾಗಿ ವಕೀಲರು), ವಕೀಲ ಅನ್ಸಾರ್ ಇಂದೋರಿ ಮತ್ತು ವಕೀಲ ಮುಖೇಶ್ ಅವರನ್ನು ಒಳಗೊಂಡ ಸತ್ಯಶೋಧನಾ ತಂಡವು ಮಂಗಳವಾರ ದೆಹಲಿಯ ಪ್ರೆಸ್ ಕ್ಲಬ್ ನಲ್ಲಿ ವರದಿಯನ್ನು ಬಿಡುಗಡೆ ಮಾಡಿದೆ.

ಸತ್ಯಶೋಧನಾ ವರದಿ ಏನು ಹೇಳುತ್ತದೆ?

‘ಹ್ಯುಮ್ಯಾನಿಟಿ ಅಂಡರ್‌ ಅಟ್ಯಾಕ್‌ ಇನ್ ತ್ರಿಪುರ; #ಮುಸ್ಲಿಂ ಲೀವ್ಸ್‌ ಮ್ಯಾಟರ್‌’ ಶೀರ್ಷಿಕೆಯಡಿ ಬಿಡುಗಡೆಯಾದ ಸತ್ಯಶೋಧನಾ ವರದಿಯು ತ್ರಿಪುರಾದಲ್ಲಿನ ಬಿಜೆಪಿ ಸರ್ಕಾರವು ಹಿಂಸಾಚಾರವನ್ನು ನಿಲ್ಲಿಸಬಹುದಿತ್ತು ಆದರೆ ಅವರು ರಾಜ್ಯದಲ್ಲಿ ಗಲಭೆ ನಡೆಸಲು ಹಿಂದುತ್ವದ ಗುಂಪುಗಳಿಗೆ ಮುಕ್ತ ಅವಕಾಶ ನೀಡುವ ದಾರಿಯನ್ನು ಆರಿಸಿಕೊಂಡರು ಎಂಬುದನ್ನು ತಿಳಿಸಿದೆ.

ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ), ಬಜರಂಗದಳ ಮತ್ತು ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ನಂತಹ ಹಿಂದೂ ರಾಷ್ಟ್ರೀಯತಾವಾದಿ ಸಂಘಟನೆಗಳು ಜೆಸಿಬಿಗಳೊಂದಿಗೆ ರ್‍ಯಾಲಿಗಳನ್ನು ನಡೆಸಿವೆ ಮತ್ತು ಹಿಂಸೆಗೆ ಪ್ರಚೋದನೆ ನೀಡಿವೆ ಎಂದು ವರದಿಯಲ್ಲಿದೆ.

ವಕೀಲರ ಮೇಲಿನ ಈ ಆರೋಪವನ್ನು ನ್ಯಾಯಕ್ಕಾಗಿ ವಕೀಲರ ಸಂಘ ಖಂಡಿಸಿದ್ದು, ಈ ನೋಟಿಸ್‌ಗಳನ್ನು ವಾಪಸ್‌ ಪಡೆಯಬೇಕು. ಪ್ರಜಾಪ್ರಭುತ್ವದ ಕತ್ತು ಹಿಸುಕುವನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದ್ದಾರೆ.

ರಾಹುಲ್‌ ಗಾಂಧಿ ಟೀಕೆ

ತ್ರಿಪುರಾ ರಾಜ್ಯದಲ್ಲಿ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ (UAPA) ಅಡಿಯಲ್ಲಿ ಜನರನ್ನು ಬಂಧಿಸುವ ಮೂಲಕ ಸತ್ಯವನ್ನು ಮೌನಗೊಳಿಸಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೋಮವಾರ ಹೇಳಿದ್ದಾರೆ.

ತ್ರಿಪುರಾದಲ್ಲಿ ಕೋಮು ಘರ್ಷಣೆಗಳು ಮತ್ತು ಮಸೀದಿಗಳ ಮೇಲಿನ ದಾಳಿಗಳ ಕುರಿತು ಪತ್ರಕರ್ತರು, ವಕೀಲರು ಮತ್ತು ಸಾಮಾಜಿಕ ಕಾರ್ಯಕರ್ತರ ವಿರುದ್ಧ ಪೊಲೀಸರು ಯುಎಪಿಎಯನ್ನು ಜಾರಿಗೊಳಿಸಿದ ನಂತರ ರಾಹುಲ್ ಗಾಂಧಿ ಈ ಪ್ರತಿಕ್ರಿಯೆ ನೀಡಿದ್ದಾರೆ.

“ತ್ರಿಪುರಾ ಹೊತ್ತಿ ಉರಿಯುತ್ತಿದೆ” ಎಂಬ ಹ್ಯಾಶ್‌ಟ್ಯಾಗ್ ಬಳಸಿ ಟ್ವೀಟ್ ಮಾಡಿರುವ ಅವರು, ತ್ರಿಪುರಾ ಹೊತ್ತಿ ಉರಿಯುತ್ತಿದೆ ಎಂದರೆ, ಅದನ್ನು ಸರಿಪಡಿಸುವ ಕ್ರಮ ಕೈಗೊಳ್ಳಬೇಕು ಎಂಬುದರ ಕರೆ ಅದು. ಆದರೆ, ಬಿಜೆಪಿಯು ತನ್ನ ನೆಚ್ಚಿನ ಕೆಲಸ ಮಾಹಿತಿದಾರರನ್ನು ಹೊಡೆದುರುಳಿಸುವ ಕೆಲಸಕ್ಕೆ ಮುಂದಾಗಿದೆ ಎಂದು ಟೀಕಿಸಿದ್ದಾರೆ.


ಇದನ್ನೂ ಓದಿರಿ: ತ್ರಿಪುರ ಕೋಮು ಗಲಭೆ: 68 ಜನರ ಟ್ವಿಟರ್‌ ಖಾತೆ ಅಮಾನತುಗೊಳಿಸುವಂತೆ ಟ್ವಿಟರ್‌ಗೆ ಪತ್ರ ಬರೆದ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...