Homeಕರ್ನಾಟಕವಕೀಲರ ವಿರುದ್ಧ UAPA ದುರ್ಬಳಕೆ: ನ್ಯಾಯಕ್ಕಾಗಿ ವಕೀಲರ ಸಂಘ ಪ್ರತಿಭಟನೆ

ವಕೀಲರ ವಿರುದ್ಧ UAPA ದುರ್ಬಳಕೆ: ನ್ಯಾಯಕ್ಕಾಗಿ ವಕೀಲರ ಸಂಘ ಪ್ರತಿಭಟನೆ

- Advertisement -
- Advertisement -

ತ್ರಿಪುರಾದಲ್ಲಿ ನಡೆದ ಕೋಮುಗಲಭೆ ಕುರಿತು ಸತ್ಯಶೋಧನೆ ನಡೆಸಿದ ತಂಡದ ಭಾಗವಾಗಿದ್ದ ಇಬ್ಬರು ವಕೀಲರಿಗೆ ಕಾನೂನು ಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (UAPA) ಹಾಗೂ ಐಪಿಸಿ ಅಡಿಯಲ್ಲಿ ನೋಟಿಸ್‌ ನೀಡಿರುವುದನ್ನು ಖಂಡಿಸಿ ‘ನ್ಯಾಯಕ್ಕಾಗಿ ಅಖಿಲ ಭಾರತ ವಕೀಲರ ಸಂಘ’ದ(AILAJ) ಕರ್ನಾಟಕ ರಾಜ್ಯ ಘಟಕವು ಪ್ರತಿಭಟನೆ ನಡೆಸಿದೆ.

ರಾಷ್ಟ್ರೀಯ ಮಾನವ ಹಕ್ಕುಗಳ ಸಂಘಟನೆಗಳ ಒಕ್ಕೂಟದ ಕಾರ್ಯದರ್ಶಿ ಅಡ್ವೊಕೇಟ್‌ ಅನ್ಸರ್‌ ಇಂದೋರಿ ಮತ್ತು ನಾಗರೀಕ ಹಕ್ಕುಗಳ ಸಂಘಟನೆಯಾದ ಪೀಪಲ್ಸ್‌ ಯೂನಿಯನ್‌ ಫಾರ್‌ ಸಿವಿಲ್‌ ಲಿಬರ್ಟಿಸ್‌ (ಪಿಯುಸಿಎಲ್‌, ದೆಹಲಿ)ನ ವಕೀಲರಾದ ಮುಖೇಶ್‌ ಅವರಿಗೆ ತ್ರಿಪುರಾ ಪೊಲೀಸರು ನೋಟಿಸ್‌ ಕಳುಹಿಸಿದ್ದಾರೆ. ಆ ನೋಟಿಸ್‌ನಲ್ಲಿ ‘ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟಿಸಿರುವ ಕಲ್ಪಿತ ಮತ್ತು ಸುಳ್ಳು ಹೇಳಿಕೆಗಳು/ ಕಾಮೆಂಟ್‌ಗಳನ್ನು ತಕ್ಷಣವೇ ಅಳಿಸಬೇಕು’ ಎಂದು ಹೇಳಿದ್ದು, ನವೆಂಬರ್‌ 10ರೊಳಗೆ ಪಶ್ಚಿಮ ಅಗರ್ತಲಾ ಪೊಲೀಸ್‌ ಠಾಣೆಯ ಮುಂದೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ಗಳು ತಿಳಿಸಿವೆ.

ಯುಎಪಿಎ ಹೊರತಾಗಿ, ಸೆಕ್ಷನ್‌ 153 ಎ ಮತ್ತು ಬಿ (ಧರ್ಮ, ಜನಾಂಗ, ಜನ್ಮಸ್ಥಳ, ವಾಸಸ್ಥಳ, ಭಾಷೆ ಇತ್ಯಾದಿಗಳ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು), 469 (ಮಾಹಿತಿಗೆ ಹಾನಿ ಮಾಡುವ ಉದ್ದೇಶಕ್ಕಾಗಿ ನಕಲು ಮಾಡುವುದು), 120 (ಶಾಂತಿ ಭಂಗವನ್ನು ಪ್ರಚೋದಿಸುವ ಉದ್ದೇಶದಿಂದ ಉದ್ದೇಶಪೂರ್ವಕ ಅವಮಾನ) ಹಾಗೂ ಐಪಿಸಿಯ 120 ಬಿ (ಕ್ರಿಮಿನಲ್‌ ಪಿತೂರಿಗಾಗಿ ಶಿಕ್ಷೆ) ಇವೆಲ್ಲದರಡಿಯಲ್ಲಿ ನೋಟಿಸ್‌ ನೀಡಲಾಗಿದೆ.

ಇದನ್ನೂ ಓದಿರಿ: ಒರಿಸ್ಸಾ: ದಲಿತರ ಗುಡಿಸಲುಗಳಿಗೆ ಬೆಂಕಿ; ಹತ್ತು ಮಂದಿಗೆ ಗಾಯ

ಈ ಕುರಿತು ಮಾತನಾಡಿದ ವಕೀಲರಾದ ಮುಖೇಶ್‌, ‘ವಾಸ್ತವತೆಯನ್ನು ತಿಳಿಯಲು ತ್ರಿಪುರಾಕ್ಕೆ ಹೋದ ಸತ್ಯಶೋಧನಾ ತಂಡದ  ಭಾಗವಾಗಿದ್ದೇನೆ. ಸಾಮಾಜಿಕವಾಗಿ ನಾನು ನೋಡಿದ್ದನ್ನು ಹಂಚಿಕೊಂಡಿದ್ದೇನೆ’ ಎಂದು ಹೇಳಿದ್ದಾರೆ.

ಸುಪ್ರೀಂ ಕೋರ್ಟ್ ವಕೀಲ ಎಹ್ತೇಶಾಮ್ ಹಶ್ಮಿ, ವಕೀಲ ಅಮಿತ್ ಶ್ರೀವಾಸ್ತವ್ (ಸಮನ್ವಯ ಸಮಿತಿ, ಪ್ರಜಾಪ್ರಭುತ್ವಕ್ಕಾಗಿ ವಕೀಲರು), ವಕೀಲ ಅನ್ಸಾರ್ ಇಂದೋರಿ ಮತ್ತು ವಕೀಲ ಮುಖೇಶ್ ಅವರನ್ನು ಒಳಗೊಂಡ ಸತ್ಯಶೋಧನಾ ತಂಡವು ಮಂಗಳವಾರ ದೆಹಲಿಯ ಪ್ರೆಸ್ ಕ್ಲಬ್ ನಲ್ಲಿ ವರದಿಯನ್ನು ಬಿಡುಗಡೆ ಮಾಡಿದೆ.

ಸತ್ಯಶೋಧನಾ ವರದಿ ಏನು ಹೇಳುತ್ತದೆ?

‘ಹ್ಯುಮ್ಯಾನಿಟಿ ಅಂಡರ್‌ ಅಟ್ಯಾಕ್‌ ಇನ್ ತ್ರಿಪುರ; #ಮುಸ್ಲಿಂ ಲೀವ್ಸ್‌ ಮ್ಯಾಟರ್‌’ ಶೀರ್ಷಿಕೆಯಡಿ ಬಿಡುಗಡೆಯಾದ ಸತ್ಯಶೋಧನಾ ವರದಿಯು ತ್ರಿಪುರಾದಲ್ಲಿನ ಬಿಜೆಪಿ ಸರ್ಕಾರವು ಹಿಂಸಾಚಾರವನ್ನು ನಿಲ್ಲಿಸಬಹುದಿತ್ತು ಆದರೆ ಅವರು ರಾಜ್ಯದಲ್ಲಿ ಗಲಭೆ ನಡೆಸಲು ಹಿಂದುತ್ವದ ಗುಂಪುಗಳಿಗೆ ಮುಕ್ತ ಅವಕಾಶ ನೀಡುವ ದಾರಿಯನ್ನು ಆರಿಸಿಕೊಂಡರು ಎಂಬುದನ್ನು ತಿಳಿಸಿದೆ.

ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ), ಬಜರಂಗದಳ ಮತ್ತು ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ನಂತಹ ಹಿಂದೂ ರಾಷ್ಟ್ರೀಯತಾವಾದಿ ಸಂಘಟನೆಗಳು ಜೆಸಿಬಿಗಳೊಂದಿಗೆ ರ್‍ಯಾಲಿಗಳನ್ನು ನಡೆಸಿವೆ ಮತ್ತು ಹಿಂಸೆಗೆ ಪ್ರಚೋದನೆ ನೀಡಿವೆ ಎಂದು ವರದಿಯಲ್ಲಿದೆ.

ವಕೀಲರ ಮೇಲಿನ ಈ ಆರೋಪವನ್ನು ನ್ಯಾಯಕ್ಕಾಗಿ ವಕೀಲರ ಸಂಘ ಖಂಡಿಸಿದ್ದು, ಈ ನೋಟಿಸ್‌ಗಳನ್ನು ವಾಪಸ್‌ ಪಡೆಯಬೇಕು. ಪ್ರಜಾಪ್ರಭುತ್ವದ ಕತ್ತು ಹಿಸುಕುವನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದ್ದಾರೆ.

ರಾಹುಲ್‌ ಗಾಂಧಿ ಟೀಕೆ

ತ್ರಿಪುರಾ ರಾಜ್ಯದಲ್ಲಿ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ (UAPA) ಅಡಿಯಲ್ಲಿ ಜನರನ್ನು ಬಂಧಿಸುವ ಮೂಲಕ ಸತ್ಯವನ್ನು ಮೌನಗೊಳಿಸಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೋಮವಾರ ಹೇಳಿದ್ದಾರೆ.

ತ್ರಿಪುರಾದಲ್ಲಿ ಕೋಮು ಘರ್ಷಣೆಗಳು ಮತ್ತು ಮಸೀದಿಗಳ ಮೇಲಿನ ದಾಳಿಗಳ ಕುರಿತು ಪತ್ರಕರ್ತರು, ವಕೀಲರು ಮತ್ತು ಸಾಮಾಜಿಕ ಕಾರ್ಯಕರ್ತರ ವಿರುದ್ಧ ಪೊಲೀಸರು ಯುಎಪಿಎಯನ್ನು ಜಾರಿಗೊಳಿಸಿದ ನಂತರ ರಾಹುಲ್ ಗಾಂಧಿ ಈ ಪ್ರತಿಕ್ರಿಯೆ ನೀಡಿದ್ದಾರೆ.

“ತ್ರಿಪುರಾ ಹೊತ್ತಿ ಉರಿಯುತ್ತಿದೆ” ಎಂಬ ಹ್ಯಾಶ್‌ಟ್ಯಾಗ್ ಬಳಸಿ ಟ್ವೀಟ್ ಮಾಡಿರುವ ಅವರು, ತ್ರಿಪುರಾ ಹೊತ್ತಿ ಉರಿಯುತ್ತಿದೆ ಎಂದರೆ, ಅದನ್ನು ಸರಿಪಡಿಸುವ ಕ್ರಮ ಕೈಗೊಳ್ಳಬೇಕು ಎಂಬುದರ ಕರೆ ಅದು. ಆದರೆ, ಬಿಜೆಪಿಯು ತನ್ನ ನೆಚ್ಚಿನ ಕೆಲಸ ಮಾಹಿತಿದಾರರನ್ನು ಹೊಡೆದುರುಳಿಸುವ ಕೆಲಸಕ್ಕೆ ಮುಂದಾಗಿದೆ ಎಂದು ಟೀಕಿಸಿದ್ದಾರೆ.


ಇದನ್ನೂ ಓದಿರಿ: ತ್ರಿಪುರ ಕೋಮು ಗಲಭೆ: 68 ಜನರ ಟ್ವಿಟರ್‌ ಖಾತೆ ಅಮಾನತುಗೊಳಿಸುವಂತೆ ಟ್ವಿಟರ್‌ಗೆ ಪತ್ರ ಬರೆದ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...