Homeಚಳವಳಿಕೇರಳ ದಲಿತ ವಿದ್ಯಾರ್ಥಿನಿ ಹೋರಾಟಕ್ಕೆ ಜಯ: ಜಾತಿ ತಾರತಮ್ಯವೆಸಗಿದ್ದ ಪ್ರಾಧ್ಯಾಪಕನ ವಜಾ

ಕೇರಳ ದಲಿತ ವಿದ್ಯಾರ್ಥಿನಿ ಹೋರಾಟಕ್ಕೆ ಜಯ: ಜಾತಿ ತಾರತಮ್ಯವೆಸಗಿದ್ದ ಪ್ರಾಧ್ಯಾಪಕನ ವಜಾ

ಉಪವಾಸ ಸತ್ಯಾಗ್ರಹ ಅಂತ್ಯಗೊಳಿಸಿದ ಬಳಿಕ ವಿವಿ ಮುಂದೆ ಜೈಭೀಮ್ ಘೋಷಣೆಗಳು ಮೊಳಗಿವೆ. ಯಾವುದೇ ರೀತಿಯ ಜಾತಿ ತಾರತಮ್ಯವನ್ನು ಸಹಿಸಿಕೊಳ್ಳುವುದಿಲ್ಲ ಎಂದು ವಿದ್ಯಾರ್ಥಿಗಳು ಎಚ್ಚರಿಕೆ ನೀಡಿದ್ದಾರೆ.

- Advertisement -
- Advertisement -

ಪ್ರಾಧ್ಯಾಪಕರ ಜಾತಿ ತಾರತಮ್ಯದಿಂದಾಗಿ 10 ವರ್ಷವಾದರೂ ತನ್ನ ಪಿಎಚ್‌ಡಿ ಪೂರ್ಣಗೊಳಿಸಲು ಸಾಧ್ಯವಾಗಿಲ್ಲ ಎಂದು ಆರೋಪಿಸಿ ಕೇರಳದ ದೀಪಾ ಕೆ ಮೋಹನನ್ ಎಂಬ ದಲಿತ ಸಂಶೋಧನಾ ವಿದ್ಯಾರ್ಥಿನಿ ಅಕ್ಟೋಬರ್ 29 ರಿಂದ ನಡೆಸುತ್ತಿದ್ದ ಉಪವಾಸ ಸತ್ಯಾಗ್ರಹವನ್ನು ಸೋಮವಾರ ಸಂಜೆ ಕೊನೆಗೊಳಿಸಿದ್ದಾರೆ. ವಿದ್ಯಾರ್ಥಿನಿಯ ಹಕ್ಕೊತ್ತಾಯದಂತೆ ಜಾತಿ ತಾರತಮ್ಯವೆಸಗಿದ ಪ್ರಾಧ್ಯಾಪಕರನ್ನು ವಜಾಗೊಳಿಸುವುದಾಗಿ ವಿಶ್ವವಿದ್ಯಾಲಯ ತಿಳಿಸಿದ ನಂತರ ದೀಪಾ ತನ್ನ ಹೋರಾಟ ಅಂತ್ಯಗೊಳಿಸಿದ್ದು ಇದು ಸಾಂವಿಧಾನಿಕ ಮೌಲ್ಯಗಳಿಗೆ ಸಂದ ಜಯ ಎಂದಿದ್ದಾರೆ.

ಕೇರಳದ ಕೊಟ್ಟಾಯಂನಲ್ಲಿರುವ ಮಹಾತ್ಮ ಗಾಂಧಿ ವಿಶ್ವವಿದ್ಯಾಲಯದ ಉಪ ಕುಲಪತಿಗಳಾದ ಡಾ. ಸಬು ಥಾಮಸ್‌ರವರು ಜಾತಿ ತಾರತಮ್ಯವೆಸಗಿದ ಡಾ. ನಂದಕುಮಾರ್ ಕಲರಿಕ್ಕಲ್ ರನ್ನು ವಿವಿಯಿಂದ ಕೈಬಿಡುವುದಾಗಿ ಘೋಷಿಸಿದ್ದಾರೆ. ಡಾ. ನಂದಕುಮಾರ್ ಕಲರಿಕ್ಕಲ್ ಅವರನ್ನು IIUCNN ನಿಂದ ಸಂಪೂರ್ಣವಾಗಿ ತೆಗೆದುಹಾಕಲಾಗಿದೆ ಎಂಬ ಪತ್ರಕ್ಕೆ ಸಹಿ ಕೂಡ ಮಾಡಿದ್ದಾರೆ.

ದೀಪಾರವರ ಪಿಎಚ್‌ಡಿ ಪೂರ್ಣಗೊಳಿಸಲು ಅಗತ್ಯವಿರುವ ಕ್ರಮಗಳನ್ನು ವಿವಿ ತೆಗೆದುಕೊಳ್ಳುತ್ತದೆ. ಸದ್ಯಕ್ಕೆ ಸ್ಥಗಿತಗೊಂಡಿರುವ ಅವರ ಫೆಲೋಶಿಪ್ ಅನ್ನು ಕೂಡಲೇ ಬಿಡುಗಡೆ ಮಾಡುತ್ತದೆ ಎಂದು ಉಪ ಕುಲಪತಿಗಳು ತಿಳಿಸಿದ್ದಾರೆ.

ಉಪವಾಸ ಸತ್ಯಾಗ್ರಹ ಅಂತ್ಯಗೊಳಿಸಿದ ಬಳಿಕ ವಿವಿ ಮುಂದೆ ಜೈಭೀಮ್ ಘೋಷಣೆಗಳು ಮೊಳಗಿವೆ. ಯಾವುದೇ ರೀತಿಯ ಜಾತಿ ತಾರತಮ್ಯವನ್ನು ಸಹಿಸಿಕೊಳ್ಳುವುದಿಲ್ಲ ಎಂದು ವಿದ್ಯಾರ್ಥಿಗಳು ಎಚ್ಚರಿಕೆ ನೀಡಿದ್ದಾರೆ.

ಸೋಮವಾರ ವಿವಿಯಲ್ಲಿ ನಡೆದ ಸಭೆಯಲ್ಲಿ ದೀಪಾ ಕೆ ಮೋಹನನ್ ರವರ ಮೂರು ಹಕ್ಕೊತ್ತಾಯಗಳು ಈಡೇರಿದ ಕಾರಣದಿಂದ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸುತ್ತಿದ್ದಾರೆ ಎಂದು ಭೀಮ್ ಆರ್ಮಿ ಕೇರಳ ಘಟಕ ತಿಳಿಸಿದೆ. ಆರಂಭದಿಂದಲೂ ವಿದ್ಯಾರ್ಥಿನಿಯ ಹೋರಾಟಕ್ಕೆ ಭೀಮ್ ಆರ್ಮಿ ಸಂಪೂರ್ಣ ಬೆಂಬಲ ಘೋಷಿಸಿತ್ತು.

ಹೋರಾಟದ ಹಿನ್ನೆಲೆ

ಇಂಟರ್ನ್ಯಾಷನಲ್ ಮತ್ತು ಇಂಟರ್ ಯೂನಿವರ್ಸಿಟಿ ಸೆಂಟರ್ ಫಾರ್ ನ್ಯಾನೊಸೈನ್ಸ್ ಮತ್ತು ನ್ಯಾನೊಟೆಕ್ನಾಲಜಿ (IIUCNN) ವಿಭಾಗದ ನಿರ್ದೇಶಕರಾದ ನಂದಕುಮಾರ್ ಕಲರಿಕಲ್ ಜಾತಿ ತಾರತಮ್ಯವೆಸಗಿ ತನ್ನ ಪಿಎಚ್‌ಡಿ ಪದವಿಗೆ ಅಡ್ಡಿಯಾಗಿದ್ದಾರೆ ಎಂದು ಆರೋಪಿಸಿ ದೀಪಾ ಕೆ ಮೋಹನನ್‌ರವರು ಅಕ್ಟೋಬರ್ 29 ರಿಂದ ವಿವಿ ಎದುರು ಉಪವಾಸ ಸತ್ಯಾಗ್ರಹ ಆರಂಭಿಸಿದ್ದರು.

ಮೆಡಿಕಲ್ ಮೈಕ್ರೋಬಯಾಲಜಿಯಲ್ಲಿ ಸ್ನಾತಕೋತ್ತರ ಪದವಿ ಮುಗಿಸಿರುವ ದೀಪಾ, ನಂತರ 2011 ರಲ್ಲಿ MG ಯುನಿವರ್ಸಿಟಿ (MGU) ಗೆ ಸೇರಿದರು. ಬಳಿಕ, ತಾವು ಯೂನಿವರ್ಸಿಟಿಗೆ ಸೇರಿದ ಮೊದಲ ವರ್ಷದಿಂದಲೂ ನಂದಕುಮಾರ್ ಕಲರಿಕಲ್ ಅವರು ದಲಿತೆ ಎಂಬ ಕಾರಣಕ್ಕೆ ತನ್ನ ಶಿಕ್ಷಣಕ್ಕೆ ಅಡ್ಡಿಪಡಿಸುತ್ತಿದ್ದಾರೆ ಎಂದು ಹೇಳುತ್ತಾರೆ.

ದೀಪಾ ಅವರು ಇನ್ಸ್ಟಿಟ್ಯೂಟ್‌ನಲ್ಲಿ ಸಂಶೋಧನೆ ಪ್ರಾರಂಭಿಸಿದಾಗ ಜಂಟಿ ನಿರ್ದೇಶಕರಾಗಿದ್ದ ಮತ್ತು ಈಗ IIUCNN ನಲ್ಲಿ ನಿರ್ದೇಶಕರಾಗಿರುವ ನಂದಕುಮಾರ್ ಆಕೆ ಲ್ಯಾಬ್‌ಗೆ ಪ್ರವೇಶಿಸುವುದನ್ನು, ಲ್ಯಾಬ್‌ನಲ್ಲಿ ಕೆಮಿಕಲ್‌ಗಳು ಮತ್ತು ಪಾಲಿಮರ್‌ಗಳನ್ನು ಬಳಸುವುದನ್ನು ನಿರಾಕರಿಸಿದ್ದರು. ಕೂರಲು ಕುರ್ಚಿ ಸಹ ನೀಡುತ್ತಿರಲಿಲ್ಲ ಮಾತ್ರವಲ್ಲದೆ ಅವರಿಗೆ ಬರುವ ಸ್ಟೈಫಂಡ್ ಅನ್ನು ಕೂಡ ತಡೆಹಿಡಿಯಲು ಮುಂದಾಗಿದ್ದರು ಎನ್ನಲಾಗಿದೆ.

ಒಮ್ಮೆ ತಾನು ಲ್ಯಾಬ್‌ನಲ್ಲಿ ಏಕಾಂಗಿಯಾಗಿದ್ದಾಗ, ತನ್ನನ್ನು ಕೂಡಿ ಹಾಕಿದ್ದರು. ತನ್ನ ಬ್ಯಾಚ್‌ನಲ್ಲಿರುವ ಏಕೈಕ ದಲಿತ ಸ್ಕಾಲರ್‌ ಆಗಿರುವ ತನ್ನೊಂದಿಗೆ ಅಸಭ್ಯವಾಗಿ ಮತ್ತು ನಿಂದನೀಯವಾಗಿ ವರ್ತಿಸಿದ್ದಾರೆ. ಸಮಯಕ್ಕೆ ಸರಿಯಾಗಿ ಪಿಎಚ್‌ಡಿ ಪಡೆಯದಂತೆ ತಡೆಯಲು ಎಲ್ಲಾ ರೀತಿಯಲ್ಲೂ ಯತ್ನಿಸುತ್ತಿದ್ದಾರೆ ಎಂದು ದೀಪಾ ಆರೋಪಿಸಿದ್ದರು.

ತನ್ನ ಸಂಶೋಧನಾ ಮಾರ್ಗದರ್ಶಿಯನ್ನು ಬದಲಾಯಿಸಬೇಕು, ಎಲ್ಲಾ ಇತರ ಪಿಎಚ್‌ಡಿ ವಿದ್ಯಾರ್ಥಿಗಳಂತೆ ತನಗೆ ಸಂಶೋಧನೆಯನ್ನು ಪೂರ್ಣಗೊಳಿಸಲು ಸಾಮಗ್ರಿಗಳನ್ನು ಒದಗಿಸಬೇಕು ಮತ್ತು ನನ್ನ ವಿದ್ಯಾಭ್ಯಾಸಕ್ಕೆ ಅಡ್ಡಿಯಾದ ನಂದಕುಮಾರ್ ಕಲರಿಕಲ್ ಅವರನ್ನು ಸಂಸ್ಥೆಯಿಂದ ತೆಗೆದುಹಾಕಬೇಕು ಎಂಬ ಮೂರು ಹಕ್ಕೊತ್ತಾಯಗಳು ದೀಪಾರವರದ್ದಾಗಿದ್ದವು.

ನವೆಂಬರ್ 1 ರಂದು ವಿಶ್ವವಿದ್ಯಾನಿಲಯವು ದೀಪಾರೊಂದಿಗೆ ಸಭೆ ನಡೆಸಿ ಅವರ ಮೊದಲ ಎರಡು ಬೇಡಿಕೆಗಳನ್ನು ಪೂರೈಸಲು ಒಪ್ಪಿಕೊಂಡದೆ. ಆದರೆ ತಾಂತ್ರಿಕ ಕಾರಣಗಳಿಂದ ನಂದಕುಮಾರ್ ಅವರನ್ನು IIUCNN ನಿಂದ ತೆಗೆದುಹಾಕಲು ನಿರಾಕರಿಸಿತ್ತು. ಪ್ರತಿಭಟನೆ ತೀವ್ರಗೊಂಡ ನಂತರ ಸೋಮವಾರ ಅವರ ಮೂರನೇ ಹಕ್ಕೊತ್ತಾಯವನ್ನು ವಿವಿ ಒಪ್ಪಿಕೊಂಡಿದೆ.

ದೀಪಾ ಅವರು 2015ರಲ್ಲಿ ನಂದಕುಮಾರ್ ವಿರುದ್ಧ ಜಾತಿ ತಾರತಮ್ಯದ ದೂರು ಸಲ್ಲಿಸಿದ್ದರು. ಆಗ ವಿಶ್ವವಿದ್ಯಾನಿಲಯವು ಆರೋಪಗಳನ್ನು ಪರಿಶೀಲಿಸಲು ಎನ್ ಜಯಕುಮಾರ್ ಮತ್ತು ಕೆಎಸ್ ಇಂದು ಅವರ ದ್ವಿಸದಸ್ಯ ಸಮಿತಿಯನ್ನು ರಚಿಸಿತ್ತು. ಸಮಿತಿಯು ದೀಪಾ ಅವರ ಆರೋಪ ನಿಜವೆಂದು ವರದಿ ನೀಡಿತು. ಅಲ್ಲದೆ, ದೀಪಾ ಅವರ ಸಂಶೋಧನೆಯನ್ನು ಪೂರ್ಣಗೊಳಿಸಲು ಅಗತ್ಯವಿರುವ ಎಲ್ಲಾ ಸೌಲಭ್ಯಗಳನ್ನು ವಿಶ್ವವಿದ್ಯಾಲಯವು ಒದಗಿಸಬೇಕು ಎಂದು ಸಮಿತಿ ಶಿಫಾರಸು ಮಾಡಿತ್ತು.

ಅದರ ನಂತರವೂ ಏನೂ ಬದಲಾಗಿಲ್ಲ. ದೀಪಾ ದೂರು ನೀಡಲು ರಾಜ್ಯಪಾಲರನ್ನು ಭೇಟಿ ಮಾಡಲು ಯತ್ನಿಸಿದಾಗ ಅವರನ್ನು ಪೊಲೀಸರು ಬಂಧಿಸಿ ಎರಡು ದಿನಗಳ ಕಾಲ ಠಾಣೆಯಲ್ಲಿ ಇರಿಸಿದ್ದರು. ನಂದಕುಮಾರ್ ಕೇರಳದ ಸಿಪಿಐ(ಎಂ)ನ ಉನ್ನತ ನಾಯಕರ ನಿಕಟವರ್ತಿಯಾಗಿರುವುದು ಇದಕ್ಕೆ ಕಾರಣ ಎಂದು ದೀಪಾ ಈ ಹಿಂದೆ ಆರೋಪಿಸಿದ್ದರು. ಇದಕ್ಕಾಗಿಯೇ, ಸಿಪಿಐ(ಎಂ)ನ ವಿದ್ಯಾರ್ಥಿ ಘಟಕವಾಗಿರುವ ಸ್ಟೂಡೆಂಟ್ಸ್ ಫೆಡರೇಶನ್ ಆಫ್ ಇಂಡಿಯಾ (ಎಸ್‌ಎಫ್‌ಐ) ದಂತಹ ವಿದ್ಯಾರ್ಥಿ ಒಕ್ಕೂಟಗಳು ಸಹ ತನ್ನನ್ನು ಬೆಂಬಲಿಸಿಲ್ಲ ಎಂದು ದೀಪಾ ಹೇಳಿದ್ದಾರೆ.

ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯಡಿ 2016ರಲ್ಲಿ ನಂದಕುಮಾರ್ ವಿರುದ್ಧ ದೀಪಾ ಪೊಲೀಸ್ ದೂರು ದಾಖಲಿಸಿದ್ದರು. ತದನಂತರ, ಆತ ನನ್ನ ವಿರುದ್ಧ ಹೆಚ್ಚು ಸೇಡು ತೀರಿಸಿಕೊಂಡರು. ಅವರು ನನ್ನನ್ನು IIUCNN ನಿಂದ ವಜಾಗೊಳಿಸುವಂತೆ ಹಲವು ಬಾರಿ ವಿಶ್ವವಿದ್ಯಾಲಯಕ್ಕೆ ಪತ್ರಗಳನ್ನು ಬರೆದಿದ್ದಾರೆ. ಅಧ್ಯಯನ ಕೇಂದ್ರದಲ್ಲಿ ಎಲ್ಲವನ್ನೂ ನಿರ್ಧರಿಸುವವರು ಅವರೇ. ವಿಸಿ ಅವರನ್ನು ರಕ್ಷಿಸುತ್ತಿರುವುದರಿಂದ ನಾನು ಉಪವಾಸ ಸತ್ಯಾಗ್ರಹವನ್ನು ಮುಂದುವರಿಸುತ್ತಿದ್ದೇನೆ” ಎಂದು ದೀಪಾ ಹೇಳಿದ್ದಾರೆ.

ಭೀಮ್ ಆರ್ಮಿ ಕೇರಳ, ಬಿರ್ಸಾ ಅಂಬೇಡ್ಕರ್ ಫುಲೆ ಸ್ಟೂಡೆಂಟ್ಸ್ ಅಸೋಸಿಯೇಷನ್ ​​ಮತ್ತು ಅಂಬೇಡ್ಕರ್ ಸ್ಟೂಡೆಂಟ್ ಅಸೋಸಿಯೇಷನ್ ​​ಸೇರಿದಂತೆ ಹಲವು ಸಂಘಟನೆಗಳು ದೀಪಾ ಅವರಿಗೆ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿದ್ದವು.


ಇದನ್ನೂ ಓದಿ: ಜಾತಿ ತಾರತಮ್ಯ ಆರೋಪ: ದಲಿತ ವಿದ್ಯಾರ್ಥಿನಿಗೆ 10 ವರ್ಷ ಕಳೆದರೂ ಸಿಗದ ಪಿಎಚ್‌ಡಿ ಪದವಿ – ಉಪವಾಸ ಸತ್ಯಾಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...