Homeಮುಖಪುಟಬ್ರಾಹ್ಮಣ, ಬನಿಯಾ ಸಮುದಾಯದವರು ನನ್ನ ಜೇಬಿನಲ್ಲಿದ್ದಾರೆ: ಬಿಜೆಪಿ ನಾಯಕ ಮುರಳೀಧರ ರಾವ್‌

ಬ್ರಾಹ್ಮಣ, ಬನಿಯಾ ಸಮುದಾಯದವರು ನನ್ನ ಜೇಬಿನಲ್ಲಿದ್ದಾರೆ: ಬಿಜೆಪಿ ನಾಯಕ ಮುರಳೀಧರ ರಾವ್‌

- Advertisement -
- Advertisement -

ಬಿಜೆಪಿ ನಾಯಕ ಪಿ. ಮುರಳೀಧರ ರಾವ್‌ ಅವರ ‘ಬ್ರಾಹ್ಮಣ ಮತ್ತು ಬನಿಯಾ ಸಮುದಾಯದ ಜನರು ನನ್ನ ‘ಜೇಬಿನಲ್ಲಿನದ್ದಾರೆ’ ಎಂಬ ಹೇಳಿಕೆಯು ಭಾರೀ ಗದ್ದಲಕ್ಕೆ ಕಾರಣವಾಗಿದ್ದು, ರಾವ್‌ ಅವರು ಆ ಸಮುದಾಯಗಳಿಗೆ ಕ್ಷಮೆಯಾಚಿಸಬೇಕು ಎಂದು ಮಧ್ಯಪ್ರದೇಶ ಕಾಂಗ್ರೆಸ್ ಪಕ್ಷವು ಒತ್ತಾಯಿಸಿದೆ.

ಮಧ್ಯಪ್ರದೇಶದ ಉಸ್ತುವಾರಿ ಹಾಗೂ ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿರುವ ರಾವ್‌ ಅವರ ಹೇಳಿಕೆಯನ್ನು ವಿರೋಧಿಸಿ ಕಾಂಗ್ರೆಸ್‌ ಪಕ್ಷವು ವಾಗ್ದಾಳಿ ನಡೆಸಿದ್ದು,  ಬಿಜೆಪಿ ನಾಯಕರು ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದೆ. ಇದಕ್ಕೆ ಪ್ರತಿಕ್ರಿಯಿಸಿದ ರಾವ್‌, ವಿರೋಧ ಪಕ್ಷವು ತನ್ನ ಹೇಳಿಕೆಯನ್ನು ‘ತಿರುಚಿದೆ’ ಎಂದು ಹೇಳಿದ್ದಾರೆ.

ಭೋಪಾಲ್‌ನಲ್ಲಿರುವ ಬಿಜೆಪಿಯ ರಾಜ್ಯ ಪ್ರಧಾನ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ್ದ ಅವರು ಪಕ್ಷ ಮತ್ತು ಸರ್ಕಾರವು ಪರಿಶಿಷ್ಠ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಮೇಲೆ ವಿಶೇಷ ಗಮನಹರಿಸಲಿವೆ. ನಮ್ಮ ಕಾಳಜಿ ಈ ಸಮುದಾಯದ ಜನರಿಗೆ ಉದ್ಯೋಗ ಮತ್ತು ಶಿಕ್ಷಣವನ್ನು ಒದಗಿಸುವುದು. ಈ ಮೂಲಕ ಹಿಂದುಳಿದಿರುವ ಸಮುದಾಯಗಳ ಸಮಸ್ಯೆಗಳನ್ನು ಪರಿಹರಿಸುವ ಕುರಿತು ಕೆಲಸ ಮಾಡುತ್ತೇವೆ ಹೊರತು ವೋಟ್‌ ಬ್ಯಾಂಕ್‌ಗಾಗಿ ಅಲ್ಲ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಪತ್ರಕರ್ತರೊಬ್ಬರು ಮಾತನಾಡಿ, ಬಿಜೆಪಿ ಪಕ್ಷದ ಘೋಷಣೆಯು ‘ಎಲ್ಲರೊಂದಿಗೆ, ಪ್ರತಿಯೊಬ್ಬರ ಅಭಿವೃದ್ಧಿಗಾಗಿ’ (ಸಾಥ್‌, ಸಬ್‌ ಕಾ ವಿಕಾಸ್‌) ಆಗಿರುವ ಸಮಯದಲ್ಲಿ, ರಾವ್‌ ಅವರು ಎಸ್‌ಸಿ/ಎಸ್‌ಟಿಗಳಿಗೆ ವಿಶೇಷ ಗಮನ ನೀಡುವ ಬಗ್ಗೆ ಮಾತನಾಡುತ್ತಿದ್ದೀರ. ಆದರೆ ಬಿಜೆಪಿಯು ‘ಬ್ರಾಹ್ಮಣ-ಬನಿಯಾ’ಗಳ ಪಕ್ಷವಾಗಿದೆ ಎಂಬ ಗ್ರಹಿಕೆ ಇದೆ. ಅದರ ಬಗ್ಗೆ ನೀವು ಏನು ಹೇಳುತ್ತೀರಿ?’ ಎಂದು ಪ್ರಶ್ನಿಸಿದರು.

ಪತ್ರಕರ್ತರ ಪ್ರಶ್ನೆಗೆ ಮುರಳೀಧರ ರಾವ್‌, ತಮ್ಮ ಕುರ್ತಾದ ಜೇಬಿನತ್ತ ತೋರಿಸುತ್ತಾ, ‘ಬ್ರಾಹ್ಮಣರು ಮತ್ತು ಬನಿಯಾಗಳು ನನ್ನ ಜೇಬಿನಲ್ಲಿದ್ದಾರೆ. ಪಕ್ಷದ ಕಾರ್ಯಕರ್ತರು ಮತ್ತು ವೋಟ್‌ ಬ್ಯಾಂಕ್‌ ಇದೇ ವರ್ಗದವರು ಹೆಚ್ಚಾಗಿರುವುದರಿಂದ ನೀವು (ಮಾಧ್ಯಮ) ನಮ್ಮನ್ನು ಬ್ರಾಹ್ಮಣ ಮತ್ತು ಬನಿಯಾ ಪಕ್ಷ ಎಂದು ಕರೆದಿದ್ದೀರಿ’ ಎಂದು ಪ್ರತಿಕ್ರಿಯಿಸಿದರು.

‘ಕೆಲವು ವಿಭಾಗಗಳಿಗೆ ಸೇರಿದವರ ಸಂಖ್ಯೆ ಹೆಚ್ಚಿದ್ದಾಗ ಜನರು ಪಕ್ಷ ಅವರದ್ದೇ ಎಂದು ಹೇಳುತ್ತಿದ್ದರು. ನಮ್ಮ ಪಕ್ಷದಲ್ಲಿ ಎಸ್‌ಸಿ/ಎಸ್‌ಟಿ ಸಮುದಾಯದವರ ಪ್ರಾತಿನಿಧ್ಯ ಕಡಿಮೆಯಿದ್ದು, ಅವರನ್ನು ನಮ್ಮೊಟ್ಟಿಗೆ ಸೇರಿಸಿಕೊಳ್ಳುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದೇವೆ. ನಾವು ಎಲ್ಲರನ್ನು ತಲುಪುತ್ತಿದದ್ದು ಬಿಜೆಪಿಯನ್ನು ಎಲ್ಲಾ ವರ್ಗದ ಪಕ್ಷವನ್ನಾಗಿ ಮಾಡುತ್ತಿದ್ದೇವೆ’ ಎಂದು ಮುರಳೀಧರ ರಾವ್‌ ಅವರು ಹೇಳಿದರು.

ರಾವ್ ಅವರ ವಿವಾದಾತ್ಮಕ ಹೇಳಿಕೆಯ 6 ಸೆಕೆಂಡುಗಳ ವೀಡಿಯೋವನ್ನು ವಿರೋಧ ಪಕ್ಷದ ಹಲವಾರು ನಾಯಕರು ಸೇರಿದಂತೆ ಜನರು ಸಾಮಾಜಿಕ ಜಾಲತಾಣಗಳಲ್ಲಿ  ಹಂಚಿಕೊಂಡಿದ್ದು, ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಕಮಲ್ ನಾಥ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

ಈ ಕುರಿತು ಹೇಳಿಕೆ ನೀಡಿರುವ ಮಾಜಿ ಮುಖ್ಯಮಂತ್ರಿ, ಬಿಜೆಪಿಯು ‘ಸಬ್ ಕಾ ಸಾಥ್ ಸಬ್ ಕಾ ವಿಕಾಸ್’ ಎಂಬ ಘೋಷಣೆಯನ್ನು ನೀಡಿದೆ ಮತ್ತು ಅವರ ಪಕ್ಷದ ಪ್ರಧಾನ ಕಾರ್ಯದರ್ಶಿ ಬ್ರಾಹ್ಮಣರು ಮತ್ತು ಬನಿಯಾಗಳು ತಮ್ಮ ಜೇಬಿನಲ್ಲಿದ್ದಾರೆ ಎಂದು ಹೇಳುತ್ತಿದ್ದಾರೆ’ ಎಂದು ಹೇಳಿದರು.

‘ಬಿಜೆಪಿಯು ಬ್ರಾಹ್ಮಣ ಮತ್ತು ಬನಿಯಾ ಸಮುದಾಯಗಳನ್ನು ತನಗೆ ಬೇಕಾದಂತೆ ಆಡಿಸುತ್ತಿದೆ. ಅದು ಈ ವರ್ಗಗಳಿಗೆ ಮಾಡಿದ ಅವಮಾನವಾಗಿದೆ. ಬಿಜೆಪಿ ಕಟ್ಟುವಲ್ಲಿ ಪ್ರಮುಖ ಪಾತ್ರ ವಹಿಸಿರುವ ಈ ವರ್ಗಗಳಿಗೆ ಯಾವ ರೀತಿಯ ಗೌರವ ನೀಡುತ್ತಿದೆ? ಬಿಜೆಪಿ ನಾಯಕರು ಅಧಿಕಾರದ ದುರಹಂಕಾರಕ್ಕೆ ಒಳಗಾಗಿದ್ದಾರೆ’ ಎಂದರು.

‘ಬಿಜೆಪಿ ಈ ಸಮುದಾಯಗಳಿಗೆಗ ಕ್ಷಮೆಯಾಚಿಸಬೇಕು’ ಎಂದು ಕಮಲ್‌ ನಾಥ್ ಹೇಳಿದರು. ಸಬ್ ಕಾ ಸಾಥ್, ಸಬ್ ಕಾ ವಿಕಾಸ್’ ಬಗ್ಗೆ ಮಾತನಾಡುವ ಪಕ್ಷ ಈಗ ಅಧಿಕಾರಕ್ಕಾಗಿ ಕೆಲವು ವರ್ಗಗಳ ಮೇಲೆ ಕೇಂದ್ರೀಕರಿಸುತ್ತಿದೆ,” ಎಂದು ಅವರು ಆರೋಪಿಸಿದರು.

ನಂತರ, ವೀಡಿಯೊ ಹೇಳಿಕೆಯಲ್ಲಿ ಮಾತನಾಡಿದ, ರಾವ್ ಅವರು ಕಾಂಗ್ರೆಸ್‌ಗೆ ಸತ್ಯ ಮತ್ತು ಹೇಳಿಕೆಗಳನ್ನು ’ತಿರುಚುವ’ ಅಭ್ಯಾಸವಿದೆ ಎಂದು ಹೇಳಿದರು.

‘ನಾವು ಸಮಾಜದ ವರ್ಗಗಳ ನಡುವೆ ತಾರತಮ್ಯ ಮಾಡುವುದಿಲ್ಲ. ಎಲ್ಲಾ ಭಾರತೀಯರು ಅಭಿವೃದ್ಧಿಯ ಭಾಗವಾಗಬೇಕು. ಕಾಂಗ್ರೆಸ್ ದ್ರೋಹ ಬಗೆದಿದೆ ಮತ್ತು ಸಮಾಜದ ಎಲ್ಲಾ ವರ್ಗಗಳನ್ನು ಒಡೆದಿದೆ, ಎಸ್‌ಟಿಗಳು ಹಿಂದುಳಿದಿದ್ದರೆ, ಅವರಿಗೆ ಕಾಂಗ್ರೆಸ್ ಅನ್ಯಾಯ ಮಾಡಿದೆ ಎಂಬುದಷ್ಟೇ ಕಾರಣ.” ಎಂದು ಬಿಜೆಪಿ ಮುಖಂಡರು ತಿಳಿಸಿದರು.


ಇದನ್ನು ಓದಿ: ಕೇರಳ ದಲಿತ ವಿದ್ಯಾರ್ಥಿನಿ ಹೋರಾಟಕ್ಕೆ ಜಯ: ಜಾತಿ ತಾರತಮ್ಯವೆಸಗಿದ್ದ ಪ್ರಾಧ್ಯಾಪಕನ ವಜಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...