Homeಮುಖಪುಟಬ್ರಾಹ್ಮಣ, ಬನಿಯಾ ಸಮುದಾಯದವರು ನನ್ನ ಜೇಬಿನಲ್ಲಿದ್ದಾರೆ: ಬಿಜೆಪಿ ನಾಯಕ ಮುರಳೀಧರ ರಾವ್‌

ಬ್ರಾಹ್ಮಣ, ಬನಿಯಾ ಸಮುದಾಯದವರು ನನ್ನ ಜೇಬಿನಲ್ಲಿದ್ದಾರೆ: ಬಿಜೆಪಿ ನಾಯಕ ಮುರಳೀಧರ ರಾವ್‌

- Advertisement -
- Advertisement -

ಬಿಜೆಪಿ ನಾಯಕ ಪಿ. ಮುರಳೀಧರ ರಾವ್‌ ಅವರ ‘ಬ್ರಾಹ್ಮಣ ಮತ್ತು ಬನಿಯಾ ಸಮುದಾಯದ ಜನರು ನನ್ನ ‘ಜೇಬಿನಲ್ಲಿನದ್ದಾರೆ’ ಎಂಬ ಹೇಳಿಕೆಯು ಭಾರೀ ಗದ್ದಲಕ್ಕೆ ಕಾರಣವಾಗಿದ್ದು, ರಾವ್‌ ಅವರು ಆ ಸಮುದಾಯಗಳಿಗೆ ಕ್ಷಮೆಯಾಚಿಸಬೇಕು ಎಂದು ಮಧ್ಯಪ್ರದೇಶ ಕಾಂಗ್ರೆಸ್ ಪಕ್ಷವು ಒತ್ತಾಯಿಸಿದೆ.

ಮಧ್ಯಪ್ರದೇಶದ ಉಸ್ತುವಾರಿ ಹಾಗೂ ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿರುವ ರಾವ್‌ ಅವರ ಹೇಳಿಕೆಯನ್ನು ವಿರೋಧಿಸಿ ಕಾಂಗ್ರೆಸ್‌ ಪಕ್ಷವು ವಾಗ್ದಾಳಿ ನಡೆಸಿದ್ದು,  ಬಿಜೆಪಿ ನಾಯಕರು ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದೆ. ಇದಕ್ಕೆ ಪ್ರತಿಕ್ರಿಯಿಸಿದ ರಾವ್‌, ವಿರೋಧ ಪಕ್ಷವು ತನ್ನ ಹೇಳಿಕೆಯನ್ನು ‘ತಿರುಚಿದೆ’ ಎಂದು ಹೇಳಿದ್ದಾರೆ.

ಭೋಪಾಲ್‌ನಲ್ಲಿರುವ ಬಿಜೆಪಿಯ ರಾಜ್ಯ ಪ್ರಧಾನ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ್ದ ಅವರು ಪಕ್ಷ ಮತ್ತು ಸರ್ಕಾರವು ಪರಿಶಿಷ್ಠ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಮೇಲೆ ವಿಶೇಷ ಗಮನಹರಿಸಲಿವೆ. ನಮ್ಮ ಕಾಳಜಿ ಈ ಸಮುದಾಯದ ಜನರಿಗೆ ಉದ್ಯೋಗ ಮತ್ತು ಶಿಕ್ಷಣವನ್ನು ಒದಗಿಸುವುದು. ಈ ಮೂಲಕ ಹಿಂದುಳಿದಿರುವ ಸಮುದಾಯಗಳ ಸಮಸ್ಯೆಗಳನ್ನು ಪರಿಹರಿಸುವ ಕುರಿತು ಕೆಲಸ ಮಾಡುತ್ತೇವೆ ಹೊರತು ವೋಟ್‌ ಬ್ಯಾಂಕ್‌ಗಾಗಿ ಅಲ್ಲ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಪತ್ರಕರ್ತರೊಬ್ಬರು ಮಾತನಾಡಿ, ಬಿಜೆಪಿ ಪಕ್ಷದ ಘೋಷಣೆಯು ‘ಎಲ್ಲರೊಂದಿಗೆ, ಪ್ರತಿಯೊಬ್ಬರ ಅಭಿವೃದ್ಧಿಗಾಗಿ’ (ಸಾಥ್‌, ಸಬ್‌ ಕಾ ವಿಕಾಸ್‌) ಆಗಿರುವ ಸಮಯದಲ್ಲಿ, ರಾವ್‌ ಅವರು ಎಸ್‌ಸಿ/ಎಸ್‌ಟಿಗಳಿಗೆ ವಿಶೇಷ ಗಮನ ನೀಡುವ ಬಗ್ಗೆ ಮಾತನಾಡುತ್ತಿದ್ದೀರ. ಆದರೆ ಬಿಜೆಪಿಯು ‘ಬ್ರಾಹ್ಮಣ-ಬನಿಯಾ’ಗಳ ಪಕ್ಷವಾಗಿದೆ ಎಂಬ ಗ್ರಹಿಕೆ ಇದೆ. ಅದರ ಬಗ್ಗೆ ನೀವು ಏನು ಹೇಳುತ್ತೀರಿ?’ ಎಂದು ಪ್ರಶ್ನಿಸಿದರು.

ಪತ್ರಕರ್ತರ ಪ್ರಶ್ನೆಗೆ ಮುರಳೀಧರ ರಾವ್‌, ತಮ್ಮ ಕುರ್ತಾದ ಜೇಬಿನತ್ತ ತೋರಿಸುತ್ತಾ, ‘ಬ್ರಾಹ್ಮಣರು ಮತ್ತು ಬನಿಯಾಗಳು ನನ್ನ ಜೇಬಿನಲ್ಲಿದ್ದಾರೆ. ಪಕ್ಷದ ಕಾರ್ಯಕರ್ತರು ಮತ್ತು ವೋಟ್‌ ಬ್ಯಾಂಕ್‌ ಇದೇ ವರ್ಗದವರು ಹೆಚ್ಚಾಗಿರುವುದರಿಂದ ನೀವು (ಮಾಧ್ಯಮ) ನಮ್ಮನ್ನು ಬ್ರಾಹ್ಮಣ ಮತ್ತು ಬನಿಯಾ ಪಕ್ಷ ಎಂದು ಕರೆದಿದ್ದೀರಿ’ ಎಂದು ಪ್ರತಿಕ್ರಿಯಿಸಿದರು.

‘ಕೆಲವು ವಿಭಾಗಗಳಿಗೆ ಸೇರಿದವರ ಸಂಖ್ಯೆ ಹೆಚ್ಚಿದ್ದಾಗ ಜನರು ಪಕ್ಷ ಅವರದ್ದೇ ಎಂದು ಹೇಳುತ್ತಿದ್ದರು. ನಮ್ಮ ಪಕ್ಷದಲ್ಲಿ ಎಸ್‌ಸಿ/ಎಸ್‌ಟಿ ಸಮುದಾಯದವರ ಪ್ರಾತಿನಿಧ್ಯ ಕಡಿಮೆಯಿದ್ದು, ಅವರನ್ನು ನಮ್ಮೊಟ್ಟಿಗೆ ಸೇರಿಸಿಕೊಳ್ಳುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದೇವೆ. ನಾವು ಎಲ್ಲರನ್ನು ತಲುಪುತ್ತಿದದ್ದು ಬಿಜೆಪಿಯನ್ನು ಎಲ್ಲಾ ವರ್ಗದ ಪಕ್ಷವನ್ನಾಗಿ ಮಾಡುತ್ತಿದ್ದೇವೆ’ ಎಂದು ಮುರಳೀಧರ ರಾವ್‌ ಅವರು ಹೇಳಿದರು.

ರಾವ್ ಅವರ ವಿವಾದಾತ್ಮಕ ಹೇಳಿಕೆಯ 6 ಸೆಕೆಂಡುಗಳ ವೀಡಿಯೋವನ್ನು ವಿರೋಧ ಪಕ್ಷದ ಹಲವಾರು ನಾಯಕರು ಸೇರಿದಂತೆ ಜನರು ಸಾಮಾಜಿಕ ಜಾಲತಾಣಗಳಲ್ಲಿ  ಹಂಚಿಕೊಂಡಿದ್ದು, ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಕಮಲ್ ನಾಥ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

ಈ ಕುರಿತು ಹೇಳಿಕೆ ನೀಡಿರುವ ಮಾಜಿ ಮುಖ್ಯಮಂತ್ರಿ, ಬಿಜೆಪಿಯು ‘ಸಬ್ ಕಾ ಸಾಥ್ ಸಬ್ ಕಾ ವಿಕಾಸ್’ ಎಂಬ ಘೋಷಣೆಯನ್ನು ನೀಡಿದೆ ಮತ್ತು ಅವರ ಪಕ್ಷದ ಪ್ರಧಾನ ಕಾರ್ಯದರ್ಶಿ ಬ್ರಾಹ್ಮಣರು ಮತ್ತು ಬನಿಯಾಗಳು ತಮ್ಮ ಜೇಬಿನಲ್ಲಿದ್ದಾರೆ ಎಂದು ಹೇಳುತ್ತಿದ್ದಾರೆ’ ಎಂದು ಹೇಳಿದರು.

‘ಬಿಜೆಪಿಯು ಬ್ರಾಹ್ಮಣ ಮತ್ತು ಬನಿಯಾ ಸಮುದಾಯಗಳನ್ನು ತನಗೆ ಬೇಕಾದಂತೆ ಆಡಿಸುತ್ತಿದೆ. ಅದು ಈ ವರ್ಗಗಳಿಗೆ ಮಾಡಿದ ಅವಮಾನವಾಗಿದೆ. ಬಿಜೆಪಿ ಕಟ್ಟುವಲ್ಲಿ ಪ್ರಮುಖ ಪಾತ್ರ ವಹಿಸಿರುವ ಈ ವರ್ಗಗಳಿಗೆ ಯಾವ ರೀತಿಯ ಗೌರವ ನೀಡುತ್ತಿದೆ? ಬಿಜೆಪಿ ನಾಯಕರು ಅಧಿಕಾರದ ದುರಹಂಕಾರಕ್ಕೆ ಒಳಗಾಗಿದ್ದಾರೆ’ ಎಂದರು.

‘ಬಿಜೆಪಿ ಈ ಸಮುದಾಯಗಳಿಗೆಗ ಕ್ಷಮೆಯಾಚಿಸಬೇಕು’ ಎಂದು ಕಮಲ್‌ ನಾಥ್ ಹೇಳಿದರು. ಸಬ್ ಕಾ ಸಾಥ್, ಸಬ್ ಕಾ ವಿಕಾಸ್’ ಬಗ್ಗೆ ಮಾತನಾಡುವ ಪಕ್ಷ ಈಗ ಅಧಿಕಾರಕ್ಕಾಗಿ ಕೆಲವು ವರ್ಗಗಳ ಮೇಲೆ ಕೇಂದ್ರೀಕರಿಸುತ್ತಿದೆ,” ಎಂದು ಅವರು ಆರೋಪಿಸಿದರು.

ನಂತರ, ವೀಡಿಯೊ ಹೇಳಿಕೆಯಲ್ಲಿ ಮಾತನಾಡಿದ, ರಾವ್ ಅವರು ಕಾಂಗ್ರೆಸ್‌ಗೆ ಸತ್ಯ ಮತ್ತು ಹೇಳಿಕೆಗಳನ್ನು ’ತಿರುಚುವ’ ಅಭ್ಯಾಸವಿದೆ ಎಂದು ಹೇಳಿದರು.

‘ನಾವು ಸಮಾಜದ ವರ್ಗಗಳ ನಡುವೆ ತಾರತಮ್ಯ ಮಾಡುವುದಿಲ್ಲ. ಎಲ್ಲಾ ಭಾರತೀಯರು ಅಭಿವೃದ್ಧಿಯ ಭಾಗವಾಗಬೇಕು. ಕಾಂಗ್ರೆಸ್ ದ್ರೋಹ ಬಗೆದಿದೆ ಮತ್ತು ಸಮಾಜದ ಎಲ್ಲಾ ವರ್ಗಗಳನ್ನು ಒಡೆದಿದೆ, ಎಸ್‌ಟಿಗಳು ಹಿಂದುಳಿದಿದ್ದರೆ, ಅವರಿಗೆ ಕಾಂಗ್ರೆಸ್ ಅನ್ಯಾಯ ಮಾಡಿದೆ ಎಂಬುದಷ್ಟೇ ಕಾರಣ.” ಎಂದು ಬಿಜೆಪಿ ಮುಖಂಡರು ತಿಳಿಸಿದರು.


ಇದನ್ನು ಓದಿ: ಕೇರಳ ದಲಿತ ವಿದ್ಯಾರ್ಥಿನಿ ಹೋರಾಟಕ್ಕೆ ಜಯ: ಜಾತಿ ತಾರತಮ್ಯವೆಸಗಿದ್ದ ಪ್ರಾಧ್ಯಾಪಕನ ವಜಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...