Homeಚಳವಳಿಲಕ್ನೋದಲ್ಲಿ ಕಿಸಾನ್ ಮಹಾಪಂಚಾಯತ್: ಬಿಜೆಪಿ ವಿರುದ್ಧ ರೈತರ ಸಮರ

ಲಕ್ನೋದಲ್ಲಿ ಕಿಸಾನ್ ಮಹಾಪಂಚಾಯತ್: ಬಿಜೆಪಿ ವಿರುದ್ಧ ರೈತರ ಸಮರ

ಸಂಯುಕ್ತ ಕಿಸಾನ್ ಮೋರ್ಚಾದ ಈ ಮಹಾಪಂಚಾಯತ್ ರೈತ ವಿರೋಧಿ ಸರ್ಕಾರ ಮತ್ತು ಮೂರು ಕರಾಳ ಕಾನೂನುಗಳ ಶವಪೆಟ್ಟಿಗೆಗೆ ಕೊನೆಯ ಮೊಳೆ - ರಾಕೇಶ್ ಟಿಕಾಯತ್

- Advertisement -
- Advertisement -

ಒಕ್ಕೂಟ ಸರ್ಕಾರದ ವಿವಾದಾತ್ಮಕ ಕೃಷಿ ಕಾಯ್ದೆಗಳನ್ನು ಹಿಂಪಡೆಯಲು ಒತ್ತಾಯಿಸಿ ಮತ್ತು ಎಂಎಸ್‌ಪಿ ಖಾತ್ರಿ ಕಾನೂನು ಜಾರಿಗೆ ಆಗ್ರಹಿಸಿ ಕಳೆದ ಒಂದು ವರ್ಷದಿಂದ ದೆಹಲಿ ಗಡಿಗಳಲ್ಲಿ ನಡೆಯುತ್ತಿರುವ ರೈತ ಹೋರಾಟ ಮತ್ತಷ್ಟು ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಈ ಕಾನೂನುಗಳ ಜಾರಿಗೆ ಬಿಜೆಪಿಯೇ ನೇರ ಕಾರಣ ಎಂದು ಆರೋಪಿಸಿರುವ ರೈತರು ಬಿಜೆಪಿಯನ್ನು ರಾಜಕೀಯವಾಗಿ ಸೋಲಿಸಲು ಸಜ್ಜಾಗಿದ್ದಾರೆ.

ಇತ್ತೀಚಿನ ಉಪ ಚುನಾವಣೆಗಳಲ್ಲಿ ಬಿಜೆಪಿ ಪಕ್ಷಕ್ಕಾದ ಸೋಲು ರೈತರನ್ನು ಹುರದುಂಬಿಸಿದೆ. ಈಗ ಬಿಜೆಪಿ ಆಳ್ವಿಕೆಯಲ್ಲಿರುವ ದೇಶದ ಅತಿ ದೊಡ್ಡ ರಾಜ್ಯವಾದ ಉತ್ತರ ಪ್ರದೇಶದ ರಾಜಧಾನಿಗೆ ಲಗ್ಗೆಯಿಡಲು ರೈತರು ನಿರ್ಧರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ನವೆಂಬರ್ 22 ರಂದು ಲಕ್ನೋದಲ್ಲಿ ಐತಿಹಾಸಿನ ಕಿಸಾನ್ ಮಹಾಪಂಚಾಯತ್ ಆಯೋಜಿಸಲಾಗಿದೆ ಎಂದು ಬಿಕೆಯು ನಾಯಕ ರಾಕೇಶ್ ಟಿಕಾಯತ್ ತಿಳಿಸಿದ್ದಾರೆ.

2022 ರ ಆರಂಭದಲ್ಲಿ ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು ಅದಕ್ಕೆ ಪೂರ್ವಭಾವಿಯಾಗಿ ರೈತ ಹೋರಾಟದ ಚಟುವಟಿಕೆಗಳು ಗರಿಗೆದರಿವೆ. ಈ ಮಹಾಪಂಚಾಯತ್ ಸರ್ಕಾರದ ಶವಪೆಟ್ಟಿಗೆಗೆ ಹೊಡೆಯುವ ಕೊನೆಯ ಮೊಳೆ ಎಂದು ಸಾಬೀತು ಮಾಡುತ್ತೇವೆ ಎಂದು ರಾಕೇಶ್ ಟಿಕಾಯತ್ ಘೋಷಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, “ನವೆಂಬರ್ 22 ರಂದು ಲಕ್ನೋದಲ್ಲಿ ಆಯೋಜಿಸಲಾದ ಕಿಸಾನ್ ಮಹಾಪಂಚಾಯತ್ ಐತಿಹಾಸಿಕವಾಗಿದೆ. ಸಂಯುಕ್ತ ಕಿಸಾನ್ ಮೋರ್ಚಾದ ಈ ಮಹಾಪಂಚಾಯತ್ ರೈತ ವಿರೋಧಿ ಸರ್ಕಾರ ಮತ್ತು ಮೂರು ಕರಾಳ ಕಾನೂನುಗಳ ಶವಪೆಟ್ಟಿಗೆಗೆ ಕೊನೆಯ ಮೊಳೆ ಎಂದು ಸಾಬೀತುಪಡಿಸುತ್ತದೆ. ಈಗ ಪೂರ್ವಾಂಚಲದಲ್ಲೂ ಅನ್ನದಾತರ ಚಳವಳಿ ತೀವ್ರಗೊಳ್ಳಲಿದೆ” ಎಂದು ತಿಳಿಸಿದ್ದಾರೆ.

14 ರಾಜ್ಯ ಹಾಗೂ ಒಂದು ಕೇಂದ್ರಾಡಳಿತ ಪ್ರದೇಶದ 30 ವಿಧಾನಸಭಾ ಕ್ಷೇತ್ರಗಳು, ಮೂರು ಲೋಕಸಭಾ ಕ್ಷೇತ್ರಗಳಿಗೆ ಇತ್ತೀಚೆಗೆ ಉಪಚುನಾವಣೆ ನಡೆದಿತ್ತು. 7 ವಿಧಾನಸಭಾ ಮತ್ತು ಒಂದು ಲೋಕಸಭಾ ಹೊರತುಪಡಿಸಿ ಉಳಿದೆಲ್ಲಾ ಕಡೆ ಬಿಜೆಪಿ ಸೋಲನ್ನು ಅನುಭವಿಸಿತ್ತು. “ಈ ಫಲಿತಾಂಶವು ಬಿಜೆಪಿ ಸರ್ಕಾರದ ದುರಾಡಳಿತಕ್ಕೆ ನೀಡಿದ ಉತ್ತರವಾಗಿದೆ. ರೈತ ವಿರೋಧಿ ಕಾಯ್ದೆಗಳಿಗೆ ಉತ್ತರವನ್ನು ಉಪಚುನಾವಣೆಯ ಮೂಲಕ ಜನತೆ ನೀಡಿದ್ದಾರೆ. ಇದು ಬಿಜೆಪಿಗೆ ಎಚ್ಚರಿಕೆಯ ಕರೆಘಂಟೆಯಾಗಿದೆ. ಹರಿಯಾಣ, ಹಿಮಾಚಲ ಪ್ರದೇಶ, ರಾಜಸ್ತಾನದ ಫಲಿತಾಂಶಗಳು ಬಿಜೆಪಿಯ ವಿರುದ್ಧವಾಗಿ ಬಂದಿವೆ” ಎಂದು ಸಂಯುಕ್ತ ಕಿಸಾನ್‌ ಮೋರ್ಚಾ ಪ್ರತಿಕ್ರಿಯಿಸಿತ್ತು.

ಮಿಷನ್ ಉತ್ತರ ಪ್ರದೇಶ ಮತ್ತು ಉತ್ತರ ಖಂಡ

ಮಾರ್ಚ್ ಏಪ್ರಿಲ್ ತಿಂಗಳಿನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ, ಅಸ್ಸಾಂ ಮತ್ತು ಪುದಿಚೆರಿ ರಾಜ್ಯಗಳ ವಿಧಾನಸಭಾ ಚುನಾವಣೆ ನಡೆದಿತ್ತು. ಅಸ್ಸಾಂ ಮತ್ತು ಪುದಿಚೆರಿ ಬಿಟ್ಟರೆ ಉಳಿದೆಲ್ಲ ಕಡೆ ಬಿಜೆಪಿ ಸೋಲನ್ನು ಅನುಭವಿಸಿತ್ತು. ಇದರ ನಂತರ ಸಂಯುಕ್ತ ಕಿಸಾನ್ ಮೋರ್ಚಾ ಮಿಷನ್ ಉತ್ತರ ಪ್ರದೇಶ ಮತ್ತು ಉತ್ತರ ಖಂಡ ಯೋಜನೆ ಘೋಷಿಸಿದೆ. 2022 ರಲ್ಲಿ ಚುನಾವಣೆ ನಡೆಯಲಿರುವ ಈ ಎರಡು ರಾಜ್ಯಗಳಲ್ಲಿ ಬಿಜೆಪಿ ಸೋಲಿಸುವುದಾಗಿ ರೈತರು ಘೋಷಿಸಿದ್ದಾರೆ.

ಬಿಜೆಪಿಯನ್ನು ತಿರಸ್ಕರಿಸುವಂತೆ ಉತ್ತರಪ್ರದೇಶ ಮತ್ತು ಉತ್ತರ ಖಂಡದ ರೈತರನ್ನು ಮನವೊಲಿಸುವುದು ಇದರ ಗುರಿಯಾಗಿದೆ. ಪ್ರಸ್ತುತ ಪಶ್ಚಿಮ ಉತ್ತರ ಪ್ರದೇಶ ಮತ್ತು ದಕ್ಷಿಣ ಉತ್ತರ ಖಂಡದಲ್ಲಿ ಮಾತ್ರ ರೈತಾಂದೋಲನ ವ್ಯಾಪಕತೆಯನ್ನು ಹೊಂದಿದೆ. ಇದನ್ನು ಎರಡೂ ರಾಜ್ಯಗಳುದ್ದಕ್ಕೂ ವಿಸ್ತರಿಸುವುದು ಈ ‘ಮಿಷನ್ ಯುಪಿ-ಯುಕೆ’ಯ ಗುರಿಯಾಗಿದೆ.

ರೈತ ಮುಖಂಡ ಯೋಗೇಂದ್ರ ಯಾದವ್ ಮಾತನಾಡಿ, “ನಾವೀಗ ಈ ಪ್ರತಿಭಟನೆಯನ್ನು ರಾಷ್ಟ್ರಾದ್ಯಂತ ವಿಸ್ತರಿಸುವ ಹಂತಕ್ಕೆ ಬಂದಿದ್ದೇವೆ. ಒಂದು ಚಿಕ್ಕ ಭಾಗದಿಂದ ಇಡೀ ದೇಶಕ್ಕೆ ಹೋರಾಟ ವಿಸ್ತರಿಸುತ್ತಿದೆ. ಉತ್ತರ ಭಾರತದಲ್ಲಿ ಅದರಲ್ಲೂ ಪಂಜಾಬ್, ಹರಿಯಾಣ, ರಾಜಸ್ತಾನ, ಉತ್ತರಾಖಂಡ, ಉತ್ತರ ಪ್ರದೇಶಗಳಲ್ಲಿ ರೈತ ಪ್ರತಿಭಟನೆ ತಾನಾಗೇ ವಿಸ್ತರಿಸಿದೆ. ಈಗ ಈ ಪ್ರತಿಭಟನೆ ದೇಶಾದ್ಯಂತ ವಿಸ್ತರಿಸಬೇಕಿದೆ. ಅದರ ಭಾಗವಾಗಿ ಮಿಷನ್ ಉತ್ತರ ಪ್ರದೇಶ, ಮಿಷನ್ ಉತ್ತರಖಂಡ ಯೋಜನೆ ಘೋಷಿಸಿದ್ದೇವೆ ಎಂದಿದ್ದರು.

ಪಂಜಾಬ್‌

ಪಂಜಾಬಿನ ಚುನಾವಣೆಗೆ ಇದೇ ರಣನೀತಿ ಅನ್ವಯವಾಗುವುದಿಲ್ಲ ಎನ್ನುತ್ತಾರೆ ರೈತ ಮುಖಂಡರು. ಏಕೆಂದರೆ ಅಲ್ಲಿ ಬಿಜೆಪಿ ಮತ್ತು ಅದರ ಮಿತ್ರ ಪಕ್ಷ ಅಕಾಲಿ ದಳ ಇಂದು ಪ್ರತಿಸ್ಪರ್ಧಿಯಾಗೇ ಉಳಿದಿಲ್ಲ. ಪಂಜಾಬ್ ಮತ್ತು ಹರ್ಯಾಣ ಎರಡೂ ರಾಜ್ಯಗಳಲ್ಲಿ ಬಿಜೆಪಿ ನಾಮಾವಶೇಷವಾಗಿಬಿಟ್ಟಿದೆ. ರೈತಾಂದೋಲನ ಈಗಾಗಲೇ ಇದನ್ನು ಆಗುಮಾಡಿಬಿಟ್ಟಿದೆ. ಬಿಜೆಪಿಯನ್ನು ಸೋಲಿಸಿ ಎಂಬ ಕರೆಗೆ ವಿಶೇಷ ಅರ್ಥವೇನಿಲ್ಲ. ಪಂಜಾಬಿನಲ್ಲಿ ಈ ಬಾರಿಯ ಸ್ಪರ್ಧೆ ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷದ ನಡುವೆ ನಡೆಯಲಿದೆ. ಯಾರನ್ನು ಸೋಲಿಸಬೇಕು? ಎಂಬುದು ಇಲ್ಲಿ ಮುಖ್ಯವಲ್ಲದಿರುವುದರಿಂದ ಯಾರನ್ನು ಗೆಲ್ಲಿಸಬೇಕು? ಎಂಬ ಚರ್ಚೆ ರಾಜಕೀಯ ನಿಲುವುಗಳ ಕೇಂದ್ರವಾಗಲಿದೆ. ಈ ಚರ್ಚೆ ಮತ್ತು ನಿಲುವುಗಳು ಭಿನ್ನ ಅಭಿಪ್ರಾಯಗಳಾಗಿ ಮೂಡಿ, ಭಿನ್ನಾಭಿಪ್ರಾಯಗಳಾಗಿ ಬೆಳೆಯುವ ಸಾಧ್ಯತೆ ಇದೆ. ರೈತಾಂದೋಲನದ ಐಕ್ಯತೆಗೆ ಧಕ್ಕೆ ತರುವ ಎಲ್ಲಾ ಸಾಧ್ಯತೆ ಇದೆ. ಈ ಅನಾಹುತವನ್ನು ತಡೆಯುವ ಬಗೆ ಹೇಗೆ ಎಂಬ ಚಿಂತೆ ರೈತ ಮುಂದಾಳುಗಳನ್ನು ಕಾಡುತ್ತಿದೆ. ಐಕ್ಯತೆಯನ್ನು ಕಾಯ್ದಿಟ್ಟುಕೊಳ್ಳಲು “ನೋ ಎಲೆಕ್ಷನ್ ಟಿಲ್ ರೆಸೊಲೂಷನ್” ಎಂಬ ಕರೆಕೊಡುವ ಕುರಿತು ಚಿಂತನೆ ನಡೆದಿದೆ. ಅಂದರೆ ರೈತರ ಪ್ರಶ್ನೆ ಬಗೆಹರಿಯುವ ತನಕ ಪಂಜಾಬಿನಲ್ಲಿ ಚುನಾವಣೆಯೇ ಬೇಡ ಎಂಬ ನಿಲುವನ್ನು ತಾಳಬೇಕು ಎಂಬುದು ಕೆಲವು ಮುಖಂಡರ ಪ್ರಸ್ತಾಪವಾಗಿದೆ. ಇದಿನ್ನು ಪಂಜಾಬಿನ 32 ರೈತ ಸಂಘಟನೆಗಳ ಒಕ್ಕೂಟದಲ್ಲಿ ಚರ್ಚೆಯಾಗಿ ಅಂತಿಮ ತೀರ್ಮಾನ ತೆಗೆದುಕೊಳ್ಳಬೇಕಿದೆ. ಒಂದು ವೇಳೆ ರೈತ ಸಂಘಟನೆಗಳು ಏಕಾಭಿಪ್ರಾಯಕ್ಕೆ ತಲುಪಿದಲ್ಲಿ ಇದೊಂದು ಹೊಸ ರೀತಿಯ ರಾಜಕಾರಣಕ್ಕೆ ದಾರಿಮಾಡಲಿದೆ. ರೈತರ ಮಾತನ್ನು ಧಿಕ್ಕರಿಸಿ ಚುನಾವಣೆಗೆ ಹೋಗುವ ಧೈರ್ಯವನ್ನು ಕಾಂಗ್ರೆಸ್ ಆಗಲೀ, ಆಮ್ ಆದ್ಮಿ ಪಾರ್ಟಿಯಾಗಲೀ ತೋರಲು ಸಾಧ್ಯವೇ ಇಲ್ಲ. ಪ್ರತಿಪಕ್ಷಗಳು ಚುನಾವಣೆಗಳನ್ನು ಬಹಿಷ್ಕರಿಸಿದರೆ ಬಿಜೆಪಿ ಮತ್ತು ಅಕಾಲಿದಳಗಳು ಇಕ್ಕಟ್ಟಿಗೆ ಸಿಲುಕುತ್ತವೆ. ಬಲವಂತವಾಗಿ ಚುನಾವಣೆ ಮಾಡಿಸಲು ಹೊರಟರೆ ತೀವ್ರ ಸ್ವರೂಪದ ರೈತ ಪ್ರತಿರೋಧವನ್ನು ಎದುರಿಸಬೇಕಾಗಿ ಬರಲಿದೆ. ಏನಾಗಲಿದೆ ಕಾದು ನೋಡಬೇಕಿದೆ.


ಇದನ್ನೂ ಓದಿ: ರೈತಾಂದೋಲನ ಮುಂದೇನು? – ನೂರ್ ಶ್ರೀಧರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...