Homeಚಳವಳಿಅಕ್ಷಯ್‌ ನಟನೆಯ ‘ಸೂರ್ಯವಂಶಿ’ ಪ್ರದರ್ಶನಕ್ಕೆ ತಟ್ಟಿದ ರೈತರ ಆಕ್ರೋಶ

ಅಕ್ಷಯ್‌ ನಟನೆಯ ‘ಸೂರ್ಯವಂಶಿ’ ಪ್ರದರ್ಶನಕ್ಕೆ ತಟ್ಟಿದ ರೈತರ ಆಕ್ರೋಶ

- Advertisement -
- Advertisement -

ಪಂಜಾಬ್‌ನಲ್ಲಿ ಅಕ್ಷಯ್ ಕುಮಾರ್ ಅಭಿನಯದ ಸೂರ್ಯವಂಶಿ ಚಿತ್ರದ ಪ್ರದರ್ಶನವನ್ನು ವಿರೋಧಿಸಿ ನಡೆಯುತ್ತಿರುವ ರೈತ ಸಂಘಟನೆಯ ಪ್ರತಿಭಟನೆ ಮುಂದುವರೆದಿದೆ.

ಸೂರ್ಯವಂಶಿ ಸಿನಿಮಾವನ್ನು ಚಿತ್ರಮಂದಿರಗಳಿಂದ ಹಿಂತೆಗೆದುಕೊಳ್ಳದಿದ್ದರೆ ಅಥವಾ ಪಂಜಾಬ್ ಸರ್ಕಾರವು ನಿಷೇಧಿಸದಿದ್ದರೆ ಪ್ರತಿಭಟನೆಯನ್ನು ತೀವ್ರಗೊಳಿಸಲಾಗುವುದು ಎಂದು ಭಾರತೀಯ ಕಿಸಾನ್ ಯೂನಿಯನ್ (ಕಡಿಯನ್) ರಾಷ್ಟ್ರೀಯ ವಕ್ತಾರ ರವನೀತ್ ಸಿಂಗ್ ಬ್ರಾರ್ ದಿ ಪ್ರಿಂಟ್‌ಗೆ ತಿಳಿಸಿದ್ದಾರೆ.

ಅಮೃತಸರದಲ್ಲಿ ಜನಿಸಿದ ಅಕ್ಷಯ್ ಕುಮಾರ್ ಅವರು ಈ ವರ್ಷದ ಆರಂಭದಲ್ಲಿ “ಪ್ರೊಪೊಗಾಂಡ ವಿರುದ್ಧ ಭಾರತ” ಅಭಿಯಾನದ ಪರವಾಗಿ ಟ್ವೀಟ್ ಮಾಡಿದ್ದರು. ರೈತ ಚಳವಳಿಯನ್ನು ಬೆಂಬಲಿಸಿದವರ ಮೇಲೆ ಇಲ್ಲ ಸಲ್ಲದ ಆರೋಪ ಹೊರಿಸಿ, ‘ಪ್ರೊಪಗಾಂಡ ವಿರುದ್ಧ ಭಾರತ’ ಎಂಬ ಅಭಿಯಾನವನ್ನು ಸರ್ಕಾರದ ಪರ ಇರುವ ಸೆಲೆಬ್ರಟಿಗಳು ನಡೆಸಿದ್ದರು.

ಫೆಬ್ರವರಿಯಲ್ಲಿ, ಪಾಪ್‌ಸ್ಟಾರ್ ರಿಹಾನ್ನಾ ಮತ್ತು ಪರಿಸರ ಹೋರಾಟಗಾರ್ತಿ ಗ್ರೆಟಾ ಥನ್‌ಬರ್ಗ್ ಸೇರಿದಂತೆ ಹಲವಾರು ಅಂತರರಾಷ್ಟ್ರೀಯ ಮಟ್ಟದ ಪ್ರಮುಖರು ಕೃಷಿ ಕಾನೂನುಗಳ ವಿರುದ್ಧದ ಪ್ರತಿಭಟನೆಯನ್ನು ಬೆಂಬಲಿಸಿ ಟ್ವೀಟ್ ಮಾಡಿದ್ದರು. ಇದನ್ನು ಬಾಲಿವುಡ್ ಮತ್ತು ಕ್ರೀಡಾ ಸೆಲೆಬ್ರಿಟಿಗಳು ‘ಪ್ರೊಪಗಾಂಡ’ ಎಂದು ಬಿಂಬಿಸಲು ಯತ್ನಿಸಿದ್ದರು.

“ಭಾರತದ ವಿರುದ್ಧ ಅಂತಾರಾಷ್ಟ್ರೀಯ ಬೆಂಬಲವನ್ನು ಕ್ರೋಢೀಕರಿಸಲು ಪಟ್ಟಭದ್ರ ಹಿತಾಸಕ್ತಿ ಗುಂಪುಗಳು ಯತ್ನಿಸಿವೆ” ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಬಿಂಬಿಸಲು ಯತ್ನಿಸಿತ್ತು. ಸಚಿವಾಲಯದ ಟ್ವೀಟ್‌ ಅನ್ನು ರೀಟ್ವೀಟ್‌ ಮಾಡಿ, ಅಕ್ಷಯ್‌ಕುಮಾರ್‌ ಸರ್ಕಾರದ ಪರ ವಾದಿಸಿದ್ದರು.

ಇದನ್ನೂ ಓದಿರಿ: ಕೇರಳ ದಲಿತ ವಿದ್ಯಾರ್ಥಿನಿ ಹೋರಾಟಕ್ಕೆ ಜಯ: ಜಾತಿ ತಾರತಮ್ಯವೆಸಗಿದ್ದ ಪ್ರಾಧ್ಯಾಪಕನ ವಜಾ

ನವೆಂಬರ್ 2020ರಲ್ಲಿ ಪಂಜಾಬ್‌ನಿಂದ ಹೊರಟು ದೆಹಲಿಯ ಗಡಿಯನ್ನು ತಲುಪಿದ ರೈತರ ಆಂದೋಲನವನ್ನು ಅಕ್ಷಯ್‌‌ಕುಮಾರ್ ಬೆಂಬಲಿಸದಿರುವ ಬಗ್ಗೆ ಅಸಮಾಧಾನ ವ್ಯಕ್ತವಾಯಿತು.

“ಈ ವಿಷಯದ ಬಗ್ಗೆ ನಾವು ಅಕ್ಷಯ್ ಕುಮಾರ್ ಅವರ ಮೌನವನ್ನು ಪ್ರಶ್ನಿಸಿದೆವು. ಅವರು ಮೋದಿ ಸರ್ಕಾರದ ಪರವಾಗಿ ಟ್ವೀಟ್ ಮಾಡಿರುವುದು ಆಶ್ಚರ್ಯ ಉಂಟು ಮಾಡಿತು. ಅಕ್ಷಯ್ ಕುಮಾರ್ ಅವರು ‘ಕೇಸರಿ’ಯಂತಹ ಹಲವು ಸಿನಿಮಾಗಳಲ್ಲಿ ಪಂಜಾಬಿ-ಸಿಖ್ ದೇಶಭಕ್ತರಾಗಿ, ಸಿಖ್ ಪೇಟ ಧರಿಸಿ ಅಭಿನಯಿಸಿದ್ದಾರೆ” ಎಂದಿರುವ ರವನೀತ್‌, “ಈ ಚಿತ್ರಗಳು ಸೂಪರ್ ಹಿಟ್ ಆಗಿದ್ದವು. ಪಂಜಾಬ್‌ನಲ್ಲಿ ಅವರು ಹೆಚ್ಚು ಜನಪ್ರಿಯರಾಗಿದ್ದರು. ಆದರೆ ಅಕ್ಷಯ್‌‌ಕುಮಾರ್‌ ನಮಗೆ ಪ್ರತಿಯಾಗಿ ನೀಡಬೇಕಾದದ್ದು ಇದೇನಾ?” ಎಂದು ಪ್ರಶ್ನಿಸಿದ್ದಾರೆ.

ಸೂರ್ಯವಂಶಿ ಸಿನಿಮಾದಲ್ಲಿ ರನ್ವೀರ್‌ ಸಿಂಗ್‌, ಅಜಯ್‌ ದೇವಗನ್‌, ಕತ್ರಿನಾ ಕೈಫ್‌‌ ಮೊದಲಾದವರು ಅಭಿನಯಿಸಿದ್ದಾರೆ. ನವೆಂಬರ್‌‌ 5ರಂದು ಸಿನಿಮಾ ಬಿಡುಗಡೆಯಾಗಿದೆ. ರೈತರ ಪ್ರತಿಭಟನೆಯ ಬಳಿಕ ಹಲವು ಕಡೆ ಸೂರ್ಯವಂಶಿ ಪ್ರದರ್ಶನವನ್ನು ರದ್ದುಗೊಳಿಸಲಾಗಿದೆ.

ನವೆಂಬರ್ 5ರಂದು, ಕಿಸಾನ್ ಆಂದೋಲನದ ಅಧಿಕೃತ ಫೇಸ್‌ಬುಕ್ ಪುಟವಾದ ಕಿಸಾನ್ ಏಕ್ತಾ ಮೋರ್ಚಾ ಕೂಡ ಅದರ ಪ್ರದರ್ಶನವನ್ನು ವಿರೋಧಿಸುವುದಾಗಿ ಹೇಳಿದೆ.

ಸೂರ್ಯವಂಶಿ ವಿರುದ್ಧ ಪ್ರತಿಭಟನೆ ಶನಿವಾರ ಆರಂಭವಾಗಿದೆ ಎಂದು ಬ್ರಾರ್ ತಿಳಿಸಿದ್ದಾರೆ. “ಈ ಚಿತ್ರವನ್ನು ಪ್ರದರ್ಶಿಸುತ್ತಿರುವ ಪಂಜಾಬ್‌ನ ಪ್ರತಿಯೊಂದು PVR (ಖಾಸಗಿ ಥಿಯೇಟರ್ ಸರಣಿ) ಹೊರಗೆ ನಾವು ಧರಣಿ ನಡೆಸಿದ್ದೇವೆ” ಎಂದು ಅವರು ಹೇಳಿದ್ದಾರೆ.

“ಬಿಕೆಯು ನೇತೃತ್ವದ ಪ್ರತಿಭಟನೆಯು ಸ್ವತಂತ್ರ/ವೈಯಕ್ತಿಕವಾದದ್ದು.  ಆದರೆ, ನಮ್ಮ ಸಭೆಯಲ್ಲಿ ಎಸ್‌ಕೆಎಂ ನಾಯಕರು ಈ ಬಗ್ಗೆ ಚರ್ಚಿಸಲಿದ್ದು, ನಂತರ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು” ಎಂದು ಕಿಸಾನ್‌ ಸಂಯುಕ್ತ ಮೋರ್ಚಾ ಸದಸ್ಯ, ಕ್ರಾಂತಿಕಾರಿ ಕಿಸಾನ್ ಯೂನಿಯನ್ ಪಂಜಾಬ್‌ನ ನಾಯಕರಾದ ಡಾ.ದರ್ಶನ್ ಪಾಲ್ ತಿಳಿಸಿದ್ದಾರೆ.

ಎರಡು ತಿಂಗಳ ಹಿಂದೆ ಪಟಿಯಾಲದ ಥಿಯೇಟರ್‌ನ ಹೊರಗೆ ಅಕ್ಷಯ್ ಕುಮಾರ್ ಅವರ ಬೆಲ್ ಬಾಟಮ್ ಪ್ರದರ್ಶನದ ವಿರುದ್ಧ ಪ್ರತಿಭಟನೆಗಳು ನಡೆದಿದ್ದವು.


ಇದನ್ನೂ ಓದಿರಿ: ಲಕ್ನೋದಲ್ಲಿ ಕಿಸಾನ್ ಮಹಾಪಂಚಾಯತ್: ಬಿಜೆಪಿ ವಿರುದ್ಧ ರೈತರ ಸಮರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...