Homeಮುಖಪುಟಆರ್ಯನ್ ಖಾನ್‌ರಂತೆ ಕ್ರೂಸ್ ಶಿಪ್ ಪಾರ್ಟಿಗೆ ನನ್ನನ್ನು ಆಹ್ವಾನಿಸಲಾಗಿತ್ತು: ಮಹಾರಾಷ್ಟ್ರ ಸಚಿವ ಅಸ್ಲಾಮ್ ಶೇಖ್

ಆರ್ಯನ್ ಖಾನ್‌ರಂತೆ ಕ್ರೂಸ್ ಶಿಪ್ ಪಾರ್ಟಿಗೆ ನನ್ನನ್ನು ಆಹ್ವಾನಿಸಲಾಗಿತ್ತು: ಮಹಾರಾಷ್ಟ್ರ ಸಚಿವ ಅಸ್ಲಾಮ್ ಶೇಖ್

- Advertisement -
- Advertisement -

ಅಕ್ಟೋಬರ್ 2 ರಂದು ಮುಂಬೈ ಕರಾವಳಿಯಲ್ಲಿ ನಡೆದ ಕ್ರೂಸ್ ಶಿಪ್ ಪಾರ್ಟಿಗೆ ಕಾಶಿಫ್ ಖಾನ್ ಎಂಬಾತ ನನ್ನನ್ನು ಆಹ್ವಾನಿಸಿದ್ದ ಎಂದು ಮಂಗಳವಾರ ಮಹಾರಾಷ್ಟ್ರದ ಸಚಿವ ಮತ್ತು ಕಾಂಗ್ರೆಸ್ ನಾಯಕ ಅಸ್ಲಾಮ್ ಶೇಖ್ ಹೇಳಿದ್ದಾರೆ.

ಈ ಪಾರ್ಟಿಯಲ್ಲಿ ಡ್ರಗ್ಸ್ ಬಳಕೆ ಕುರಿತು ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ಅಧಿಕಾರಿಗಳು ದಾಳಿ ನಡೆಸಿದ್ದರು. ಬಾಲಿವುಡ್ ನಟ ಶಾರುಖ್ ಖಾನ್ ಅವರ ಪುತ್ರ ಆರ್ಯನ್ ಖಾನ್ ಅವರನ್ನು ಈ ದಾಳಿಯಲ್ಲಿ ಬಂಧಿಸಲಾಗಿತ್ತು.

ಕ್ರೂಸ್ ಶಿಫ್ ಪಾರ್ಟಿಯ ಸಂಘಟಕರಾದ ಕಾಶಿಫ್ ಖಾನ್ ಅವರು ಕಾಂಗ್ರೆಸ್ ನಾಯಕ ಅಸ್ಲಾಮ್ ಶೇಖ್ ಮತ್ತು ರಾಜ್ಯ ಸರ್ಕಾರದ ಉನ್ನತ ಸಚಿವರ ಮಕ್ಕಳನ್ನು ಆ ಪಾರ್ಟಿಗೆ ಹಾಜರಾಗುವಂತೆ ಮಾಡಲು ತುಂಬಾ ಶ್ರಮಿಸಿದ್ದರು ಎಂದು ಎನ್‌ಸಿಪಿ ಸಚಿವ ನವಾಬ್ ಮಲಿಕ್ ಆರೋಪಿಸಿದ್ದರು. ಇದಾದ ಒಂದು ದಿನದ ನಂತರ ಅಸ್ಲಾಮ್ ಶೇಖ್ ಅವರ ಹೇಳಿಕೆ ಬಂದಿದೆ.

ಇದನ್ನೂ ಓದಿ: ಡ್ರಗ್ಸ್ ಪ್ರಕರಣದಲ್ಲಿ ಪ್ರತಿಕ್ರಿಯೆ ನೀಡದಂತೆ ಸಚಿವ ನವಾಬ್ ಮಲಿಕ್ ವಿರುದ್ಧ ಪಿಐಎಲ್

“ವೈಯಕ್ತಿಕವಾಗಿ ನನಗೆ ಕಾಶಿಫ್ ಖಾನ್ ಎಂಬ ವ್ಯಕ್ತಿ ತಿಳಿದಿಲ್ಲ. ನಾನು ಅವರನ್ನು ಈ ಮೊದಲು ಭೇಟಿ ಮಾಡಿಲ್ಲ. ಮುಂಬೈನ ಸಚಿವನಾಗಿರುವುದರಿಂದ ನನ್ನನ್ನು ವಿವಿಧ ಕಾರ್ಯಕ್ರಮಗಳಿಗೆ ಆಹ್ವಾನಿಸಲಾಗುತ್ತದೆ. ಇದು ಕೂಡ ಅಂತಹ ಆಹ್ವಾನಗಳಲ್ಲಿ ಒಂದಾಗಿದೆ. ಅವರ ಜೊತೆ ಫೋನ್‌ನಲ್ಲಿ ಮಾತಾಡಿರುವ ನೆನಪಿಲ್ಲ. ಏಕೆಂದರೆ ಆತ ನನಗೆ ವೈಯಕ್ತಿಕವಾಗಿ ಗೊತ್ತಿಲ್ಲ. ಆತನ ನಂಬರ್‌ ಕೂಡ ನನ್ನ ಬಳಿ ಇಲ್ಲ. ಆದರೆ, ಯಾವುದೋ ಕಾರ್ಯಕ್ರಮದಲ್ಲಿ ಭೇಟಿಯಾಗಿ ಪಾರ್ಟಿಗೆ ಆಹ್ವಾನಿಸಿದ್ದರು. ಅದು ಅಲ್ಲಿಗೆ ಮುಗಿಯಿತು” ಎಂದು ಸಚಿವರು ಸುದ್ದಿಗಾರರಿಗೆ ತಿಳಿಸಿದ್ದಾರೆ.

’ಸುಮಾರು ಎರಡು ವರ್ಷಗಳ ಹಿಂದೆ ಮಹಾ ವಿಕಾಸ್ ಅಘಾಡಿ ಬಣ ರಚನೆಯಾದಾಗಿನಿಂದ ಮಹಾರಾಷ್ಟ್ರ ಸರ್ಕಾರ ಮತ್ತು ಅದರ ಮಂತ್ರಿಗಳನ್ನು ದೂಷಿಸಲು ಸಂಘಟಿತ ಪ್ರಯತ್ನಗಳನ್ನು ಮಾಡಲಾಗಿದೆ ಎಂದು ಸಚಿವ ಅಸ್ಲಾಮ್ ಶೇಖ್ ಬಿಜೆಪಿ ಮತ್ತು ಕೇಂದ್ರವನ್ನು ಗುರಿಯಾಗಿಸಿ ವಾಗ್ದಾಳಿ ನಡೆಸಿದ್ದಾರೆ.

ಕ್ರೂಸ್ ಶಿಪ್ ಪಾರ್ಟಿ ಮೇಲಿನ ದಾಳಿಯ ಮೇಲೆ ಎಲ್ಲಾ ಗಮನವನ್ನು ಕೇಂದ್ರೀಕರಿಸಲಾಗಿದೆ. ಆದರೆ, ಸೆಪ್ಟೆಂಬರ್‌ನಲ್ಲಿ ಗುಜರಾತ್‌ನಲ್ಲಿ ಬಹುಕೋಟಿ ಮಾದಕವಸ್ತು ವಶಪಡಿಸಿಕೊಂಡ ಬಗ್ಗೆ ಇದೇ ರೀತಿಯ ಗಮನ ನೀಡಿಲ್ಲ ಎಂದು ಹೇಳಿದ್ದಾರೆ.

ಮಹಾರಾಷ್ಟ್ರ ಸರ್ಕಾರ ಮತ್ತು ಬಾಲಿವುಡ್‌ಗೆ ಮಸಿ ಬಳಿಯಲು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಪಿತೂರಿ ನಡೆಸುತ್ತಿದೆ. ಡ್ರಗ್ಸ್ ಪ್ರಕರಣವೇ ನಕಲಿ ಎಂದು ಒಕ್ಕೂಟ ಸರ್ಕಾರ ಮತ್ತು ಎನ್‌ಸಿಬಿ ವಿರುದ್ಧ ಸಚಿವ ನವಾಬ್ ಮಲಿಕ್ ಆರೋಪಿಸಿದ್ದಾರೆ.


ಇದನ್ನೂ ಓದಿ: ‘ನಿಮ್ಮ ಅತ್ತಿಗೆ ಡ್ರಗ್ಸ್ ದಂಧೆಯಲ್ಲಿ ತೊಡಗಿದ್ದಾರಾ?’: NCB ಅಧಿಕಾರಿಗೆ ನವಾಬ್ ಮಲಿಕ್ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...