Homeಚಳವಳಿಮತ್ತೆ ರೈತ ಮಹಾಪಂಚಾಯತ್‌ಗಳ ಆರಂಭ: ಮುಂಬೈ, ಲಕ್ನೋಗಳಲ್ಲಿ ಅಬ್ಬರಿಸಲಿರುವ ರೈತರು

ಮತ್ತೆ ರೈತ ಮಹಾಪಂಚಾಯತ್‌ಗಳ ಆರಂಭ: ಮುಂಬೈ, ಲಕ್ನೋಗಳಲ್ಲಿ ಅಬ್ಬರಿಸಲಿರುವ ರೈತರು

ಮಹಾರಾಷ್ಟ್ರದ 100 ಕ್ಕೂ ಹೆಚ್ಚು ರೈತ ಸಂಘಟನೆಗಳು ನವೆಂಬರ್ 28, ರಂದು ಮುಂಬೈನ ಆಜಾದ್ ಮೈದಾನದಲ್ಲಿ 'ಕಿಸಾನ್ ಮಜ್ದೂರ್ ಮಹಾಪಂಚಾಯತ್‌' ಆಚರಿಸಲು ನಿರ್ಧರಿಸಿವೆ.

- Advertisement -
- Advertisement -

ಒಕ್ಕೂಟ ಸರ್ಕಾರದ ವಿವಾದಾತ್ಮಕ ಕೃಷಿ ಕಾಯ್ದೆಗಳನ್ನು ಹಿಂಪಡೆಯಲು ಒತ್ತಾಯಿಸಿ ಮತ್ತು ಎಂಎಸ್‌ಪಿ ಖಾತ್ರಿ ಕಾನೂನು ಜಾರಿಗೆ ಆಗ್ರಹಿಸಿ ರೈತರು ದೆಹಲಿಯ ಗಡಿಗಳಲ್ಲಿ ನಡೆಸುತ್ತಿರುವ ಹೋರಾಟಕ್ಕೆ ಒಂದು ವರ್ಷ ತುಂಬುತ್ತಿದೆ. ಈ ಹಿನ್ನೆಲೆಯಲ್ಲಿ ದೇಶಾದ್ಯಂತ ರೈತ ಹೋರಾಟ ಮತ್ತೆ ಗರಿಗೆದರಲಿದೆ. ಒಂದು ವರ್ಷದ ನೆನೆಪಿನಲ್ಲಿ ಮಹಾರಾಷ್ಟ್ರದ ಮುಂಬೈ ಮತ್ತು ಉತ್ತರ ಪ್ರದೇಶದ ಲಕ್ನೋಗಳಲ್ಲಿ ರೈತ ಮಹಾಪಂಚಾಯತ್‌ ಹೋರಾಟ ಹಮ್ಮಿಕೊಳ್ಳಲಾಗಿದೆ.

ಮಹಾರಾಷ್ಟ್ರದ 100 ಕ್ಕೂ ಹೆಚ್ಚು ರೈತ ಸಂಘಟನೆಗಳು ನವೆಂಬರ್ 28, 2021 ರಂದು ಮುಂಬೈನ ಆಜಾದ್ ಮೈದಾನದಲ್ಲಿ ‘ಕಿಸಾನ್ ಮಜ್ದೂರ್ ಮಹಾಪಂಚಾಯತ್‌’ ಆಚರಿಸಲು ನಿರ್ಧರಿಸಿವೆ. ಸಂಯುಕ್ತ ಶೇತ್ಕರ್ ಕಾಮಗಾರ್ ಮೋರ್ಚಾ ವೇದಿಕೆಯ ಅಡಿಯಲ್ಲಿ ಈ ಹೋರಾಟ ನಡೆಯಲಿದೆ.

ಥಾಣೆ, ಪಾಲ್ಘರ್ ಮತ್ತು ನಾಸಿಕ್ ಜಿಲ್ಲೆಗಳ ರೈತರು ಮತ್ತು ಕಾರ್ಮಿಕರು ಈ ಹೋರಾಟದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲಿದ್ದು ಸುಮಾರು 60,000 ಜನರು ಭಾಗವಹಿಸುವ ನಿರೀಕ್ಷೆಯಿದೆಯೆಂದು ಸಬ್‌ರಂಗ್ ಪತ್ರಿಕೆ ವರದಿ ಮಾಡಿದೆ.

ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ಒಕ್ಕೂಟದ ರಾಷ್ಟ್ರೀಯ ನಾಯಕರೊಂದಿಗೆ ಡಿವೈಎಫ್‌ಐ, ಎಸ್‌ಎಫ್‌ಐ ಮತ್ತು ಶಿಕ್ಷಕರ ಮೋರ್ಚಾದಂತಹ ಟ್ರೇಡ್ ಯೂನಿಯನ್‌ಗಳು ಮತ್ತು ವಿದ್ಯಾರ್ಥಿ ಸಂಘಟನೆಗಳು ಸಹ ಕಾರ್ಯಕ್ರಮದಲ್ಲಿ ಭಾಗವಹಿಸಲಿವೆ.

ಮಹಾಪಂಚಾಯತ್‌ಗೆ ಒಂದು ದಿನ ಮುಂಚಿತವಾಗಿ, ಉತ್ತರ ಪ್ರದೇಶದ ಲಖಿಂಪುರ ಖೇರಿ ಹತ್ಯಾಕಾಂಡದಲ್ಲಿ ಹುತಾತ್ಮರ ನೆನಪಿನ ಕಳಶ ಯಾತ್ರೆಗಳು ನವೆಂಬರ್ 27 ರಂದು ನಗರಕ್ಕೆ ಆಗಮಿಸಲಿವೆ. ಮರುದಿನ ಸಂಜೆ ಗೇಟ್‌ವೇ ಆಫ್ ಇಂಡಿಯಾದಲ್ಲಿ ಒಗ್ಗೂಡಿ ಹುತಾತ್ಮರ ಚಿತಾಭಸ್ಮವನ್ನು ಅರಬ್ಬಿ ಸಮುದ್ರದಲ್ಲಿ ವಿಸರ್ಜಿಸಲಾಗುವುದು ಎನ್ನಲಾಗಿದೆ.

ಮೇಧಾ ಪಾಟ್ಕರ್, ಪ್ರತಿಭಾ ಶಿಂಧೆ, ನಾಮದೇವ್ ಗಾವಡೆ, ಮಿಲಿಂದ್ ರಾನಡೆ, ಕಿಸಾನ್ ಗುಜಾರ್, ಡಾ ಅಜಿತ್ ನವಲೆ, ಡಾ ಎಸ್ ಕೆ ರೇಗೆ, ಶೈಲೇಂದ್ರ ಕಾಂಬಳೆ ಮುಂತಾದವರು ಹೋರಾಟದಲ್ಲಿ ಭಾಗಿಯಾಗಲಿದ್ದಾರೆ.

ಇನ್ನು ಲಕ್ನೋದಲ್ಲಿ ನವೆಂಬರ್ 22 ರಂದು ಮಹಾಪಂಚಾಯತ್ ಹಮ್ಮಿಕೊಳ್ಳಲಾಗುವುದು ಎಂದು ಬಿಕೆಯು ಮುಖಂಡ ರಾಕೇಶ್ ಟಿಕಾಯತ್ ತಿಳಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, “ನವೆಂಬರ್ 22 ರಂದು ಲಕ್ನೋದಲ್ಲಿ ಆಯೋಜಿಸಲಾದ ಕಿಸಾನ್ ಮಹಾಪಂಚಾಯತ್ ಐತಿಹಾಸಿಕವಾಗಿದೆ. ಸಂಯುಕ್ತ ಕಿಸಾನ್ ಮೋರ್ಚಾದ ಈ ಮಹಾಪಂಚಾಯತ್ ರೈತ ವಿರೋಧಿ ಸರ್ಕಾರ ಮತ್ತು ಮೂರು ಕರಾಳ ಕಾನೂನುಗಳ ಶವಪೆಟ್ಟಿಗೆಗೆ ಕೊನೆಯ ಮೊಳೆ ಎಂದು ಸಾಬೀತುಪಡಿಸುತ್ತದೆ. ಈಗ ಪೂರ್ವಾಂಚಲದಲ್ಲೂ ಅನ್ನದಾತರ ಚಳವಳಿ ತೀವ್ರಗೊಳ್ಳಲಿದೆ” ಎಂದು ಘೋಷಿಸಿದ್ದಾರೆ.


ಇದನ್ನೂ ಓದಿ: ಲಕ್ನೋದಲ್ಲಿ ಕಿಸಾನ್ ಮಹಾಪಂಚಾಯತ್: ಬಿಜೆಪಿ ವಿರುದ್ಧ ರೈತರ ಸಮರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...