Homeಚಳವಳಿವರವರ ರಾವ್‌ ಕೃತಿ ಪ್ರಕಟಣೆ ವಿಳಂಬ: ಸರ್ಕಾರಕ್ಕೆ ಹೆದರಿತೇ ಪೆಂಗ್ವಿನ್‌ ಪ್ರಕಾಶನ ಸಂಸ್ಥೆ?

ವರವರ ರಾವ್‌ ಕೃತಿ ಪ್ರಕಟಣೆ ವಿಳಂಬ: ಸರ್ಕಾರಕ್ಕೆ ಹೆದರಿತೇ ಪೆಂಗ್ವಿನ್‌ ಪ್ರಕಾಶನ ಸಂಸ್ಥೆ?

ವರವರ ರಾವ್ ಅವರ ಕೆಲವು ಕವಿತೆಗಳನ್ನು ಪೆಂಗ್ವಿನ್ ಸಂಸ್ಥೆ ಸೆನ್ಸಾರ್‌ ಮಾಡಲು ಮುಂದಾಗಿದೆ ಎಂದು ದಿ ಕ್ವಿಂಟ್ ಜಾಲತಾಣ ವರದಿ ಮಾಡಿದೆ.

- Advertisement -
- Advertisement -

ತೆಲುಗು ಕವಿ ವರವರ ರಾವ್ ಅವರು ಕವಿತೆಗಳನ್ನು ಬರೆಯಲು ಪ್ರಾರಂಭಿಸಿದಾಗ ಅವರಿಗೆ 20 ವರ್ಷ. ಆರು ದಶಕಗಳ ನಂತರ, 81 ವರ್ಷ ವಯಸ್ಸಿನ ವರವರ ರಾವ್‌ ಅವರ ಕವನಗಳನ್ನು ಪ್ರಕಟಿಸಲು ಮುಂದಾಗಿದ್ದ ಪೆಂಗ್ವಿನ್ ರಾಂಡಮ್‌ ಹೌಸ್‌ ತನ್ನ ಯೋಜನೆಯನ್ನು ಸ್ಥಗಿತಗೊಳಿಸಿದೆ. ವರವರರಾವ್ ಅವರ ವಿರುದ್ಧ ಹೊರಿಸಲಾದ “ಆರೋಪಗಳ ಸ್ವರೂಪ”ದ ಕುರಿತು ಕಳವಳವನ್ನು ಪೆಂಗ್ವಿನ್‌ ವ್ಯಕ್ತಪಡಿಸಿರುವುದಾಗಿ ‘ದಿ ಕ್ವಿಂಟ್’ ವರದಿ ಮಾಡಿದೆ.

ಭೀಮಾ ಕೋರೆಗಾಂವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಅಡಿಯಲ್ಲಿ ರಾವ್ ಅವರನ್ನು ನವೆಂಬರ್ 2018ರಲ್ಲಿ ಬಂಧಿಸಲಾಯಿತು. ಈಗ ವೈದ್ಯಕೀಯ ಜಾಮೀನಿನ ಮೇಲೆ ಮುಂಬೈನಲ್ಲಿ ವಾಸವಿದ್ದಾರೆ.

65 ಕವಿತೆಗಳನ್ನು ಹೊಂದಿರುವ ‘ವರವರ ರಾವ್: ದಿ ರೆವಲ್ಯೂಷನರಿ ಪೊಯೆಟ್’ ಹೆಸರಲ್ಲಿ ಕೃತಿಯನ್ನು ಜೂನ್ ಮತ್ತು ಜುಲೈ 2021ರ ನಡುವೆ ಪ್ರಕಟಿಸಲು ನಿರ್ಧರಿಸಲಾಗಿತ್ತು. ಆದರೆ ಜುಲೈ 2021ರ ವೇಳೆಗೆ, ಪೆಂಗ್ವಿನ್ ತನ್ನ ಕಾನೂನು ತಂಡದ ಶಿಫಾರಸಿನ ಮೇರೆಗೆ, ‘ನ್ಯಾಯಾಲಯವು ಪ್ರಕರಣವನ್ನು ಪರಿಶೀಲಿಸಿದ ನಂತರವೇ ಪುಸ್ತಕ ಪ್ರಕಟಿಸಲು ನಿರ್ಧರಿಸಿದೆ’ ಎಂದು ತಿಳಿದುಬಂದಿದೆ.

ಪ್ರಕಾಶಕರು ಈ ವಿಷಯದ ಬಗ್ಗೆ ನಂತರದಲ್ಲಿ ಕಾನೂನು ಅಭಿಪ್ರಾಯವನ್ನು ತೆಗೆದುಕೊಳ್ಳಬೇಕಾಗಿದ್ದರೂ ಅದು ಕಾರ್ಯರೂಪಕ್ಕೆ ಬಂದಿಲ್ಲ ಎಂದು ಪೆಂಗ್ವಿನ್‌ನ ವಿಶ್ವಾಸಾರ್ಹ ಮೂಲಗಳು ತಿಳಿಸಿರುವುದಾಗಿ ‘ದಿ ಕ್ವಿಂಟ್‌’ ಜಾಲತಾಣ ವರದಿ ಮಾಡಿದೆ.

ಇದನ್ನೂ ಓದಿರಿ: ಮತ್ತೆ ರೈತ ಮಹಾಪಂಚಾಯತ್‌ಗಳ ಆರಂಭ: ಮುಂಬೈ, ಲಕ್ನೋಗಳಲ್ಲಿ ಅಬ್ಬರಿಸಲಿರುವ ರೈತರು

ಕೋರೆಗಾಂವ್ ಕದನದ ದ್ವಿಶತಮಾನೋತ್ಸವ ಸ್ಮರಣಾರ್ಥ ಕಾರ್ಯಕ್ರಮದಂದು ನಡೆದ ಹಿಂಸಾಚಾರಕ್ಕೆ ಎಡಪಂಥೀಯ ಸಂಘಟನೆಗಳು ಮತ್ತು ಕಾರ್ಯಕರ್ತರು ಕಾರಣರು ಎಂದು ಆರೋಪಿಸಿ ಪ್ರಕರಣ ದಾಖಲಿಸಲಾಗಿದೆ. ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಪ್ರಕರಣದ ತನಿಖೆ ನಡೆಸುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನವು 2018 ಮತ್ತು 2019ರ ಅವಧಿಯಲ್ಲಿ ನಡೆದಿದ್ದರೂ, ವಿಚಾರಣೆ ಯಾವಾಗ ಪ್ರಾರಂಭವಾಗುತ್ತದೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.

ಪೆಂಗ್ವಿನ್ ತನ್ನ ಕಾನೂನು ತಂಡದ ಶಿಫಾರಸಿಗೆ ಅಂಟಿಕೊಂಡರೆ ರಾವ್ ಅವರ ಪುಸ್ತಕದ ಪ್ರಕಟಣೆಯು ಅನಿರ್ದಿಷ್ಟವಾಗಿ ಸ್ಥಗಿತಗೊಳ್ಳಬಹುದು ಎಂಬುದು ಸ್ಪಷ್ಟ. ಇದರ ನಡುವೆ ಪ್ರಕಟಣೆಯನ್ನು ವಿಳಂಬಗೊಳಿಸುವ ಮೊದಲು, “ಕಡಿಮೆ ವಿವಾದಾತ್ಮಕ” ಕವಿತೆಗಳನ್ನು ಆಯ್ಕೆ ಮಾಡುವ ಪ್ರಯತ್ನಗಳು ನಡೆಯುತ್ತಿವೆ ಕ್ವಿಂಟ್‌ ತಿಳಿಸಿದೆ.

ರಾವ್ ಅವರ ಬರವಣಿಗೆಯು ತೀವ್ರ ಎಡಪಂಥವನ್ನು ಪ್ರತಿಪಾದಿಸಿದ್ದು, ಮಾನವ ಹಕ್ಕುಗಳ ಉಲ್ಲಂಘನೆಯ ವಿರುದ್ಧ ಧ್ವನಿ ಎತ್ತಿದೆ. ಪೆಂಗ್ವಿನ್‌ನ ಕಮಿಷನಿಂಗ್ ಎಡಿಟರ್ ಎಲಿಜಬೆತ್ ಕುರುವಿಲ್ಲಾ ಅವರು ಪ್ರಕಟಣೆಯ ವಿಳಂಬದ ಬಗ್ಗೆ ದಿ ಕ್ವಿಂಟ್‌ಗೆ ಪ್ರತಿಕ್ರಿಯಿಸಿದ್ದು, “ಕೋವಿಡ್ ಸಾಂಕ್ರಾಮಿಕದಿಂದಾಗಿ ರಾವ್ ಸೇರಿದಂತೆ ಹಲವರ ಕೃತಿಗಳನ್ನು ಪ್ರಕಟಿಸುವುದು ವಿಳಂಬವಾಗುತ್ತಿದೆ” ಎಂದಿದ್ದಾರೆ.

ರಾವ್ ಅವರ 100ಕ್ಕಿಂತ ಹೆಚ್ಚು ಕವಿತೆಗಳು ಜನಪ್ರಿಯವಾಗಿವೆ, ಪೆಂಗ್ವಿನ್ ಪ್ರಕಾಶಕರು 65 ಕವನಗಳನ್ನು ಪ್ರಕಟಣೆಗಾಗಿ ಪರಿಗಣಿಸಿದ್ದಾರೆ. ಈ ಪೈಕಿ ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಬಂಧನವಾದ ನಂತರ ಮೂರು ಕವಿತೆಗಳನ್ನು ಬರೆಯಲಾಗಿದೆ. ಯೆರವಾಡ ಜೈಲಿನಲ್ಲಿದ್ದಾಗ ಬರೆದ ಕವಿತೆಗಳನ್ನು ಪ್ರಕಾಶಕರು ಕೈಬಿಟ್ಟಿದ್ದಾರೆ.

ಉಳಿದ 62 ಕವಿತೆಗಳಲ್ಲಿ, ಪ್ರಕಾಶಕರು ಕಾನೂನು ತೊಡಕುಗಳನ್ನು ತಡೆಗಟ್ಟಲು ಸುಮಾರು ಹನ್ನೆರಡು ಕವನಗಳನ್ನು ಬಿಡಲು ಬಯಸಿದ್ದರು. ರಾವ್ ಅವರ ಕವಿತೆಗಳು ಎನ್ಐಎ ಪರಿಶೀಲನೆಗೆ ಒಳಗಾಗಬಹುದು. ಪುಸ್ತಕವು ಹೊರಬಂದರೆ ಪೆಂಗ್ವಿನ್ ಸಂಸ್ಥೆಯನ್ನು ಪರಿಶೀಲನೆಗೆ ಒಳಪಡಿಸಬಹುದು ಎಂಬುದು ಪ್ರಕಾಶಕರ ಭಯ ಎಂದು ಮೂಲಗಳು ಹೇಳಿವೆ.


ಇದನ್ನೂ ಓದಿರಿ: ಒರಿಸ್ಸಾ: ದಲಿತರ ಗುಡಿಸಲುಗಳಿಗೆ ಬೆಂಕಿ; ಹತ್ತು ಮಂದಿಗೆ ಗಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...