Homeಕರ್ನಾಟಕBJP ಪರ ಸಂಘಟನೆ ‘ಯುವಾ ಬ್ರಿಗೇಡ್‌‌’ ಸಭೆಗೆ ಶಿಕ್ಷಕರನ್ನು ಕಳುಹಿಸುವಂತೆ ಯಾದಗಿರಿ ಜಿ. ಪಂ ನಿಂದ...

BJP ಪರ ಸಂಘಟನೆ ‘ಯುವಾ ಬ್ರಿಗೇಡ್‌‌’ ಸಭೆಗೆ ಶಿಕ್ಷಕರನ್ನು ಕಳುಹಿಸುವಂತೆ ಯಾದಗಿರಿ ಜಿ. ಪಂ ನಿಂದ ಸುತ್ತೋಲೆ – ಖಂಡನೆ

- Advertisement -
- Advertisement -

ಬಿಜೆಪಿ ಪರ ಚುನಾವಣಾ ಪ್ರಚಾರ ಮಾಡುತ್ತಿದ್ದ ಹಾಗೂ ಅದರ ಪರವಾಗಿ ಪ್ರೊಪಗಾಂಡಾ ಸೃಷ್ಟಿಸುವ ಗುಂಪಾದ ನಮೋ ಬ್ರಿಗೇಡ್‌ನ ಹೊಸ ರೂಪ ‘ಯುವಾ ಬ್ರಿಗೇಡ್‌‌’ ನಡೆಸುವ ಕಾರ್ಯಕ್ರಮವೊಂದಕ್ಕೆ, ಯಾದಗಿರಿಯ ಜಿಲ್ಲೆಯ ಶಾಲಾ ಶಿಕ್ಷಕರನ್ನು ಭಾಗವಹಿಸಲು ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಾಹಕ (ಸಿಇಒ) ಅಧಿಕಾರಿ ಶಿಲ್ಪಾ ಶರ್ಮಾ ಸುತ್ತೋಲೆ ಹೊರಡಿಸಿದ್ದಾರೆ. ನವೆಂಬರ್‌ 6 ರ ಶನಿವಾರ ಹೊರಡಿಸಲಾಗಿರುವ ಈ ಸುತ್ತೋಲೆಗೆ ಶಿಕ್ಷಣ ತಜ್ಞರಿಂದ ತೀವ್ರ ಆಕ್ಷೇಪ ವ್ಯಕ್ತವಾಗಿದೆ.

ಸಿಇಒ ಶಿಲ್ಪಾ ಶರ್ಮಾ ಅವರು ಹೊರಡಿಸಿರುವ ಸುತ್ತೋಲೆಯಲ್ಲಿ, ಕಾರ್ಯಕ್ರಮಕ್ಕೆ ಜಿಲ್ಲೆಯ ಶಾಲೆಗಳಿಂದ ಒಬ್ಬ ಅಥವಾ ಇಬ್ಬರು ಶಿಕ್ಷಕರನ್ನು ಕಳುಹಿಸಬೇಕು. ಜೊತೆಗೆ ಭಾಗವಹಿಸುವ ಶಿಕ್ಷಕರಿಗೆ ನಿಯಮಾನುಸಾರ ಕರ್ತವ್ಯಯ ಅವಧಿ ಎಂದು ಪರಿಗಣಿಸಬೇಕು ಎಂದು ಹೇಳಿದೆ.

ಇದನ್ನೂ ಓದಿ: ‘ಕರ್ನಾಟಕ ಯುವ ನೀತಿ-2021’ ರೂಪಿಕರಣ ಸಮಿತಿಯಲ್ಲಿ ‘ಚಕ್ರವರ್ತಿ ಸೂಲಿಬೆಲೆ’!

ನಮೋ ಬ್ರಿಗೇಡ್‌ ಹೆಸರಿನಲ್ಲಿ ಬಿಜೆಪಿಗೆ ಚುನಾವಣಾ ಪ್ರಚಾರ ಕಾರ್ಯದಲ್ಲಿ ನೆರವಾಗಿದ್ದ ಸಂಘಟನೆಯು ನಾಲ್ಕು ವರ್ಷಗಳ ಹಿಂದೆ ಯುವಾ ಬ್ರಿಗೇಡ್‌‌ ಎಂದು ಹೆಸರು ಬದಲಿಸಿತ್ತು. ಈ ಸಂಘಟನೆಯು ಯಾದಗಿರಿ ನಗರದಲ್ಲಿ ಗುರುವಾರದಂದು ‘ಪ್ರೇರಣಾ ಪ್ರವಾಹ’ ಎಂಬ ಕಾರ್ಯಗಾರವನ್ನು ಶಿಕ್ಷಕ-ಶಿಕ್ಷಕಿಯರನ್ನು ಗುರಿಯಾಗಿಸಿ ನಡೆಸುತ್ತಿದೆ.

ವಿಶೇಷವೇನೆಂದರೆ ಯಾದಗಿರಿ ಜಿಲ್ಲಾಧಿಕಾರಿ ಈ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಶಿಕ್ಷಕರು ಭಾಗವಹಿಸಬೇಕು ಎಂದು ಸುತ್ತೋಲೆ ಹೊರಡಿಸಿರುವ ಜಿಲ್ಲಾ ಪಂಚಾಯತ್‌ ಸಿಇಒ ಶಿಲ್ಪಾ ಶರ್ಮಾ ಅವರು ಕಾರ್ಯಕ್ರಮ ಸಮಾರೋಪದ ಮುಖ್ಯ ಅಥಿತಿಯಾಗಿದ್ದಾರೆ. ಜೊತೆಗೆ ಬಿಜೆಪಿ ಬೆಂಬಲಿಗ ಚಕ್ರವರ್ತಿ ಸೂಲಿಬೆಲೆ ‘ಹೊಸ ಶಿಕ್ಷಣ ನೀತಿಗೆ ಸಜ್ಜಾಗೋಣ’ ಎಂಬ ರಾಜಕೀಯ ವಿಷಯದಲ್ಲಿ ಸಭೆಯಲ್ಲಿ ಮಾತನಾಡಲಿದ್ದಾರೆ.

ಈ ಕಾರ್ಯಗಾರಕ್ಕೆ ಜಿಲ್ಲೆಯ ಶಿಕ್ಷಕರನ್ನು ಕಳುಹಿಸಿಕೊಡಬೇಕು ಎಂದು ಯುವಾ ಬ್ರಿಗೇಡ್‌‌ ನ ಜಿಲ್ಲಾ ಸಂಚಾಲಕರಾದ ಶ್ರೀಕಾಂತ ಹಳ್ಳಿ ಎಂಬವರು ಜಿಲ್ಲಾ ಪಂಚಾಯತ್‌ಗೆ ಮನವಿ ಮಾಡಿದ್ದರಿಂದ, ಸಿಇಒ ಅದನ್ನು ಪರಿಗಣಿಸಿ ಸುತ್ತೋಲೆ ಹೊರಡಿಸಿದ್ದಾರೆ.

ಇದನ್ನೂ ಓದಿ: ಕೋಮು ಪ್ರಚೋದನೆ ಮಾಡಿದ ಸೂಲಿಬೆಲೆ: ಟ್ವಿಟರ್‌ನಲ್ಲಿ ಬುದ್ದಿವಾದ ಹೇಳಿದ ಪೊಲೀಸ್‌ ಅಧಿಕಾರಿ

ರಾಜಕೀಯ ಕಾರ್ಯಕ್ರಮವೊಂದಕ್ಕೆ ಶಾಲೆಯ ಶಿಕ್ಷಕರು ತೆರಳಬೇಕು ಎಂದು ಸರ್ಕಾರಿ ಅಧಿಕಾರಿಯೊಬ್ಬರು ಸುತ್ತೋಲೆ ಹೊರಡಿಸಿರುವ ಬಗ್ಗೆ ಶಿಕ್ಷಣ ತಜ್ಞರು ಸೇರಿದಂತೆ ಹಲವಾರು ಜನರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡಿದ ಶಿಕ್ಷಣ ತಜ್ಞ ಡಾ. ವಿ.ಪಿ. ನಿರಂಜನಾರಾಧ್ಯ, “ಕೊರೊನಾ ಮುಗಿದು ಈಗಷ್ಟೇ ಶಾಲೆಗಳು ಪ್ರಾರಂಭವಾಗಿದೆ. ಶಾಲೆಗಳು ನಡೆಯುವಾಗ ಶಿಕ್ಷಕರನ್ನು ತರಬೇತಿಗೆ ಹಾಕುವಂತಹದ್ದು ಸರಿಯಲ್ಲ ಎಂಬುವುದು ಶಿಕ್ಷಣ ಇಲಾಖೆಯ ಚರ್ಚೆ ನಡೆಯುವಾಗ ಬರುವ ಮಾತಾಗಿದೆ. ಶಿಕ್ಷಣ ಹಕ್ಕು ಕಾಯ್ದೆಯ ಪ್ರಕಾರ, ಹಿರಿಯ ಪ್ರಾಥಮಿಕ ಶಾಲೆಗಳಾದರೆ ಕನಿಷ್ಠ 200 ಕಲಿಕಾ ಅವಧಿ, ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ 220 ಕಲಿಕಾ ಅವಧಿ ಇರಲೇ ಬೇಕಾಗುತ್ತದೆ. ಈಗಾಗಲೆ ಶಿಕ್ಷಕರನ್ನು ತರಬೇತಿಗೆ ಹಾಕಿ ಹಾಕಿ ಕಲಿಕಾ ದಿನಗಳು ಬಹಳ ಕಡಿಮೆಯಾಗಿದೆ. ಶಿಕ್ಷಣ ಇಲಾಖೆಯಲ್ಲಿ ಈಗಾಗಲೇ ಶಿಕ್ಷಕರ ತರಬೇತಿಗೆಂದೇ ಹಲವು ಸಂಸ್ಥೆಗಳಿವೆ. ಇಷ್ಟೆಲ್ಲಾ ಇದ್ದರೂ ಹೊರಗಡೆಯಿಂದ ಯಾಕೆ ತರಬೇತಿ ಕೊಡಬೇಕು? ಇದರ ಅವಶ್ಯಕತೆ ಏನು?” ಎಂದು ಅವರು ಪ್ರಶ್ನಿಸಿದ್ದಾರೆ.

“ಈಗ ಕಾರ್ಯಕ್ರಮ ಮಾಡುತ್ತಿರುವ ವ್ಯಕ್ತಿಯ ಬಗ್ಗೆ ಅನೇಕ ವಿರೋಧಗಳು ಇವೆ. ಅವರ ಹಿನ್ನಲೆ, ಅವರು ಪ್ರತಿನಿಧಿಸುವಂತಹ ಪಕ್ಷ ಸೇರಿದಂತೆ ಹಲವು ತಕರಾರುಗಳಿಗೆ ಇವೆ. ಪಕ್ಷ ರಾಜಕಾರಣವನ್ನು ಯಾಕೆ ಶಾಲಾ ಶಿಕ್ಷಣದಲ್ಲಿ ತರಬೇಕು? ಹಾಗಾಗಿ ಅದು ತಪ್ಪು ನಿರ್ಧಾರ. ಈಗ ಇವರ ಕಾರ್ಯಕ್ರಮಕ್ಕೆ ಶಿಕ್ಷಕರನ್ನು ಕಳುಹಿಸಿದರೆ, ಮುಂದೊಂದು ದಿನ ಬೇರೆ ಪಕ್ಷದವರೂ ಬಂದು ನಾವು ಕಾರ್ಯಕ್ರಮ ಮಾಡುತ್ತೇವೆ ನಮಗೂ ಶಿಕ್ಷಕರನ್ನು ಕಳುಹಿಸಿಕೊಡಿ ಎಂದು ಕೇಳುತ್ತಾರೆ. ಇದು ಬಹಳ ಕೆಟ್ಟ ಸಂಪ್ರದಾಯವಾಗುತ್ತದೆ, ಹಾಗಾಗಿ ಶಿಕ್ಷಕರನ್ನು ಕಾರ್ಯಕ್ರಮಕ್ಕೆ ಕಳುಹಿಸುವಂತೆ ಸುತ್ತೋಲೆ ಹೊರಡಿಸಿದ ಅಧಿಕಾರಿ ವಿರುದ್ದ ತಕ್ಷಣ ಕ್ರಮಕೈಗೊಳ್ಳಬೇಕು. ಜೊತೆಗೆ ಸುತ್ತೋಲೆಯನ್ನು ರದ್ದು ಪಡಿಸಬೇಕು” ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಕೋಮು ಪ್ರಚೋದನೆ ಮಾಡಿದ ಸೂಲಿಬೆಲೆ: ಟ್ವಿಟರ್‌ನಲ್ಲಿ ಬುದ್ದಿವಾದ ಹೇಳಿದ ಪೊಲೀಸ್‌ ಅಧಿಕಾರಿ

ಸಾಮಾಜಿಕ ಕಾರ್ಯಕರ್ತ ಹರ್ಷಕುಮಾರ್‌ ಕುಗ್ವೆ ಮಾತನಾಡಿ, “ಚಕ್ರವರ್ತಿ ಸೂಲಿಬೆಲೆ ಕಳೆದ ಹಲವಾರು ವರ್ಷಗಳಿಂದ ರಾಜ್ಯದ ಜನತೆಯನ್ನು ದಿಕ್ಕು ತಪ್ಪಿಸುವುದರಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ. ಅವರು ಒಂದು ಪಕ್ಷದ ಬೆಂಬಲಕ್ಕಾಗಿ ಹಸಿ ಸುಳ್ಳುಗಳನ್ನು ಹೇಳಿ ಜನರ ತಲೆಕೆಡಿಸುತ್ತಿರುವ ವ್ಯಕ್ತಿ. ಹಾಗಾಗಿಯೆ ರಾಜ್ಯದ ಜನರು ಅವರಿಗೆ ‘ಹೆಂಗ್‌ಪುಂಗ್ಲಿ’ ಎಂಬ ಬಿರುದನ್ನೂ ನೀಡಿದ್ದಾರೆ. ಇಂತಹ ಜನರು ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸುವ ಶಿಕ್ಷಕರಿಗೆ ಕಾರ್ಯಾಗಾರ ಮಾಡುವುದು ತುಂಬಾ ದೊಡ್ಡ ದುರಂತ. ಇಡೀ ಕಾರ್ಯಕ್ರಮ ರಾಜಕೀಯ ಪ್ರೊಪಗಾಂಡ ಕಾರ್ಯಕ್ರಮವಾಗಿದೆ. ಇದಕ್ಕೆ ಬೆಂಬಲ ನೀಡುತ್ತಿರುವಂತಹ ಸರ್ಕಾರಿ ಅಧಿಕಾರಿಗಳು ಯಾವುದೆ ಪ್ರಜ್ಞೆ ಇಲ್ಲದ ಮುಠ್ಠಾಳರು” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಾವು ಹೊರಡಿಸಿರುವ ಸುತ್ತೋಲೆ ಬಗ್ಗೆ ಸ್ಪಷ್ಟೀಕರಣಕ್ಕಾಗಿ ಯಾದಗಿರಿ ಜಿಲ್ಲಾ ಪಂಚಾಯತ್‌ ಸಿಇಒ ಶಿಲ್ಪಾ ಶರ್ಮಾ ಅವರನ್ನು ಸಂಪರ್ಕಿಸಲು ನಾನುಗೌರಿ.ಕಾಂ ಪ್ರಯತ್ನಿಸಿದೆ. ಆದರೆ ಅವರು ಸಂಪರ್ಕಕ್ಕೆ ಲಭ್ಯವಾಗಿಲ್ಲ. ಅವರ ಪ್ರತಿಕ್ರಿಯೆ ಸಿಕ್ಕ ಕೂಡಲೇ ಇಲ್ಲಿ ಅಪ್‌ಡೇಟ್‌ ಮಾಡಲಾಗುವುದು.

ಇದನ್ನೂ ಓದಿ: ಇಸ್ಲಾಂ ಮತ್ತು ಅಂಬೇಡ್ಕರ್‌‌ ಬಗೆಗಿನ ಸುಳ್ಳುಗಳು; ಮಹಾ ಮಾನವತಾವಾದಿಗೆ ‘ಸೂಲಿಬೆಲೆ’ ಮಾಡಿದ ಅವಮಾನ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...