Homeಕರ್ನಾಟಕBJP ಪರ ಸಂಘಟನೆ ‘ಯುವಾ ಬ್ರಿಗೇಡ್‌‌’ ಸಭೆಗೆ ಶಿಕ್ಷಕರನ್ನು ಕಳುಹಿಸುವಂತೆ ಯಾದಗಿರಿ ಜಿ. ಪಂ ನಿಂದ...

BJP ಪರ ಸಂಘಟನೆ ‘ಯುವಾ ಬ್ರಿಗೇಡ್‌‌’ ಸಭೆಗೆ ಶಿಕ್ಷಕರನ್ನು ಕಳುಹಿಸುವಂತೆ ಯಾದಗಿರಿ ಜಿ. ಪಂ ನಿಂದ ಸುತ್ತೋಲೆ – ಖಂಡನೆ

- Advertisement -
- Advertisement -

ಬಿಜೆಪಿ ಪರ ಚುನಾವಣಾ ಪ್ರಚಾರ ಮಾಡುತ್ತಿದ್ದ ಹಾಗೂ ಅದರ ಪರವಾಗಿ ಪ್ರೊಪಗಾಂಡಾ ಸೃಷ್ಟಿಸುವ ಗುಂಪಾದ ನಮೋ ಬ್ರಿಗೇಡ್‌ನ ಹೊಸ ರೂಪ ‘ಯುವಾ ಬ್ರಿಗೇಡ್‌‌’ ನಡೆಸುವ ಕಾರ್ಯಕ್ರಮವೊಂದಕ್ಕೆ, ಯಾದಗಿರಿಯ ಜಿಲ್ಲೆಯ ಶಾಲಾ ಶಿಕ್ಷಕರನ್ನು ಭಾಗವಹಿಸಲು ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಾಹಕ (ಸಿಇಒ) ಅಧಿಕಾರಿ ಶಿಲ್ಪಾ ಶರ್ಮಾ ಸುತ್ತೋಲೆ ಹೊರಡಿಸಿದ್ದಾರೆ. ನವೆಂಬರ್‌ 6 ರ ಶನಿವಾರ ಹೊರಡಿಸಲಾಗಿರುವ ಈ ಸುತ್ತೋಲೆಗೆ ಶಿಕ್ಷಣ ತಜ್ಞರಿಂದ ತೀವ್ರ ಆಕ್ಷೇಪ ವ್ಯಕ್ತವಾಗಿದೆ.

ಸಿಇಒ ಶಿಲ್ಪಾ ಶರ್ಮಾ ಅವರು ಹೊರಡಿಸಿರುವ ಸುತ್ತೋಲೆಯಲ್ಲಿ, ಕಾರ್ಯಕ್ರಮಕ್ಕೆ ಜಿಲ್ಲೆಯ ಶಾಲೆಗಳಿಂದ ಒಬ್ಬ ಅಥವಾ ಇಬ್ಬರು ಶಿಕ್ಷಕರನ್ನು ಕಳುಹಿಸಬೇಕು. ಜೊತೆಗೆ ಭಾಗವಹಿಸುವ ಶಿಕ್ಷಕರಿಗೆ ನಿಯಮಾನುಸಾರ ಕರ್ತವ್ಯಯ ಅವಧಿ ಎಂದು ಪರಿಗಣಿಸಬೇಕು ಎಂದು ಹೇಳಿದೆ.

ಇದನ್ನೂ ಓದಿ: ‘ಕರ್ನಾಟಕ ಯುವ ನೀತಿ-2021’ ರೂಪಿಕರಣ ಸಮಿತಿಯಲ್ಲಿ ‘ಚಕ್ರವರ್ತಿ ಸೂಲಿಬೆಲೆ’!

ನಮೋ ಬ್ರಿಗೇಡ್‌ ಹೆಸರಿನಲ್ಲಿ ಬಿಜೆಪಿಗೆ ಚುನಾವಣಾ ಪ್ರಚಾರ ಕಾರ್ಯದಲ್ಲಿ ನೆರವಾಗಿದ್ದ ಸಂಘಟನೆಯು ನಾಲ್ಕು ವರ್ಷಗಳ ಹಿಂದೆ ಯುವಾ ಬ್ರಿಗೇಡ್‌‌ ಎಂದು ಹೆಸರು ಬದಲಿಸಿತ್ತು. ಈ ಸಂಘಟನೆಯು ಯಾದಗಿರಿ ನಗರದಲ್ಲಿ ಗುರುವಾರದಂದು ‘ಪ್ರೇರಣಾ ಪ್ರವಾಹ’ ಎಂಬ ಕಾರ್ಯಗಾರವನ್ನು ಶಿಕ್ಷಕ-ಶಿಕ್ಷಕಿಯರನ್ನು ಗುರಿಯಾಗಿಸಿ ನಡೆಸುತ್ತಿದೆ.

ವಿಶೇಷವೇನೆಂದರೆ ಯಾದಗಿರಿ ಜಿಲ್ಲಾಧಿಕಾರಿ ಈ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಶಿಕ್ಷಕರು ಭಾಗವಹಿಸಬೇಕು ಎಂದು ಸುತ್ತೋಲೆ ಹೊರಡಿಸಿರುವ ಜಿಲ್ಲಾ ಪಂಚಾಯತ್‌ ಸಿಇಒ ಶಿಲ್ಪಾ ಶರ್ಮಾ ಅವರು ಕಾರ್ಯಕ್ರಮ ಸಮಾರೋಪದ ಮುಖ್ಯ ಅಥಿತಿಯಾಗಿದ್ದಾರೆ. ಜೊತೆಗೆ ಬಿಜೆಪಿ ಬೆಂಬಲಿಗ ಚಕ್ರವರ್ತಿ ಸೂಲಿಬೆಲೆ ‘ಹೊಸ ಶಿಕ್ಷಣ ನೀತಿಗೆ ಸಜ್ಜಾಗೋಣ’ ಎಂಬ ರಾಜಕೀಯ ವಿಷಯದಲ್ಲಿ ಸಭೆಯಲ್ಲಿ ಮಾತನಾಡಲಿದ್ದಾರೆ.

ಈ ಕಾರ್ಯಗಾರಕ್ಕೆ ಜಿಲ್ಲೆಯ ಶಿಕ್ಷಕರನ್ನು ಕಳುಹಿಸಿಕೊಡಬೇಕು ಎಂದು ಯುವಾ ಬ್ರಿಗೇಡ್‌‌ ನ ಜಿಲ್ಲಾ ಸಂಚಾಲಕರಾದ ಶ್ರೀಕಾಂತ ಹಳ್ಳಿ ಎಂಬವರು ಜಿಲ್ಲಾ ಪಂಚಾಯತ್‌ಗೆ ಮನವಿ ಮಾಡಿದ್ದರಿಂದ, ಸಿಇಒ ಅದನ್ನು ಪರಿಗಣಿಸಿ ಸುತ್ತೋಲೆ ಹೊರಡಿಸಿದ್ದಾರೆ.

ಇದನ್ನೂ ಓದಿ: ಕೋಮು ಪ್ರಚೋದನೆ ಮಾಡಿದ ಸೂಲಿಬೆಲೆ: ಟ್ವಿಟರ್‌ನಲ್ಲಿ ಬುದ್ದಿವಾದ ಹೇಳಿದ ಪೊಲೀಸ್‌ ಅಧಿಕಾರಿ

ರಾಜಕೀಯ ಕಾರ್ಯಕ್ರಮವೊಂದಕ್ಕೆ ಶಾಲೆಯ ಶಿಕ್ಷಕರು ತೆರಳಬೇಕು ಎಂದು ಸರ್ಕಾರಿ ಅಧಿಕಾರಿಯೊಬ್ಬರು ಸುತ್ತೋಲೆ ಹೊರಡಿಸಿರುವ ಬಗ್ಗೆ ಶಿಕ್ಷಣ ತಜ್ಞರು ಸೇರಿದಂತೆ ಹಲವಾರು ಜನರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡಿದ ಶಿಕ್ಷಣ ತಜ್ಞ ಡಾ. ವಿ.ಪಿ. ನಿರಂಜನಾರಾಧ್ಯ, “ಕೊರೊನಾ ಮುಗಿದು ಈಗಷ್ಟೇ ಶಾಲೆಗಳು ಪ್ರಾರಂಭವಾಗಿದೆ. ಶಾಲೆಗಳು ನಡೆಯುವಾಗ ಶಿಕ್ಷಕರನ್ನು ತರಬೇತಿಗೆ ಹಾಕುವಂತಹದ್ದು ಸರಿಯಲ್ಲ ಎಂಬುವುದು ಶಿಕ್ಷಣ ಇಲಾಖೆಯ ಚರ್ಚೆ ನಡೆಯುವಾಗ ಬರುವ ಮಾತಾಗಿದೆ. ಶಿಕ್ಷಣ ಹಕ್ಕು ಕಾಯ್ದೆಯ ಪ್ರಕಾರ, ಹಿರಿಯ ಪ್ರಾಥಮಿಕ ಶಾಲೆಗಳಾದರೆ ಕನಿಷ್ಠ 200 ಕಲಿಕಾ ಅವಧಿ, ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ 220 ಕಲಿಕಾ ಅವಧಿ ಇರಲೇ ಬೇಕಾಗುತ್ತದೆ. ಈಗಾಗಲೆ ಶಿಕ್ಷಕರನ್ನು ತರಬೇತಿಗೆ ಹಾಕಿ ಹಾಕಿ ಕಲಿಕಾ ದಿನಗಳು ಬಹಳ ಕಡಿಮೆಯಾಗಿದೆ. ಶಿಕ್ಷಣ ಇಲಾಖೆಯಲ್ಲಿ ಈಗಾಗಲೇ ಶಿಕ್ಷಕರ ತರಬೇತಿಗೆಂದೇ ಹಲವು ಸಂಸ್ಥೆಗಳಿವೆ. ಇಷ್ಟೆಲ್ಲಾ ಇದ್ದರೂ ಹೊರಗಡೆಯಿಂದ ಯಾಕೆ ತರಬೇತಿ ಕೊಡಬೇಕು? ಇದರ ಅವಶ್ಯಕತೆ ಏನು?” ಎಂದು ಅವರು ಪ್ರಶ್ನಿಸಿದ್ದಾರೆ.

“ಈಗ ಕಾರ್ಯಕ್ರಮ ಮಾಡುತ್ತಿರುವ ವ್ಯಕ್ತಿಯ ಬಗ್ಗೆ ಅನೇಕ ವಿರೋಧಗಳು ಇವೆ. ಅವರ ಹಿನ್ನಲೆ, ಅವರು ಪ್ರತಿನಿಧಿಸುವಂತಹ ಪಕ್ಷ ಸೇರಿದಂತೆ ಹಲವು ತಕರಾರುಗಳಿಗೆ ಇವೆ. ಪಕ್ಷ ರಾಜಕಾರಣವನ್ನು ಯಾಕೆ ಶಾಲಾ ಶಿಕ್ಷಣದಲ್ಲಿ ತರಬೇಕು? ಹಾಗಾಗಿ ಅದು ತಪ್ಪು ನಿರ್ಧಾರ. ಈಗ ಇವರ ಕಾರ್ಯಕ್ರಮಕ್ಕೆ ಶಿಕ್ಷಕರನ್ನು ಕಳುಹಿಸಿದರೆ, ಮುಂದೊಂದು ದಿನ ಬೇರೆ ಪಕ್ಷದವರೂ ಬಂದು ನಾವು ಕಾರ್ಯಕ್ರಮ ಮಾಡುತ್ತೇವೆ ನಮಗೂ ಶಿಕ್ಷಕರನ್ನು ಕಳುಹಿಸಿಕೊಡಿ ಎಂದು ಕೇಳುತ್ತಾರೆ. ಇದು ಬಹಳ ಕೆಟ್ಟ ಸಂಪ್ರದಾಯವಾಗುತ್ತದೆ, ಹಾಗಾಗಿ ಶಿಕ್ಷಕರನ್ನು ಕಾರ್ಯಕ್ರಮಕ್ಕೆ ಕಳುಹಿಸುವಂತೆ ಸುತ್ತೋಲೆ ಹೊರಡಿಸಿದ ಅಧಿಕಾರಿ ವಿರುದ್ದ ತಕ್ಷಣ ಕ್ರಮಕೈಗೊಳ್ಳಬೇಕು. ಜೊತೆಗೆ ಸುತ್ತೋಲೆಯನ್ನು ರದ್ದು ಪಡಿಸಬೇಕು” ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಕೋಮು ಪ್ರಚೋದನೆ ಮಾಡಿದ ಸೂಲಿಬೆಲೆ: ಟ್ವಿಟರ್‌ನಲ್ಲಿ ಬುದ್ದಿವಾದ ಹೇಳಿದ ಪೊಲೀಸ್‌ ಅಧಿಕಾರಿ

ಸಾಮಾಜಿಕ ಕಾರ್ಯಕರ್ತ ಹರ್ಷಕುಮಾರ್‌ ಕುಗ್ವೆ ಮಾತನಾಡಿ, “ಚಕ್ರವರ್ತಿ ಸೂಲಿಬೆಲೆ ಕಳೆದ ಹಲವಾರು ವರ್ಷಗಳಿಂದ ರಾಜ್ಯದ ಜನತೆಯನ್ನು ದಿಕ್ಕು ತಪ್ಪಿಸುವುದರಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ. ಅವರು ಒಂದು ಪಕ್ಷದ ಬೆಂಬಲಕ್ಕಾಗಿ ಹಸಿ ಸುಳ್ಳುಗಳನ್ನು ಹೇಳಿ ಜನರ ತಲೆಕೆಡಿಸುತ್ತಿರುವ ವ್ಯಕ್ತಿ. ಹಾಗಾಗಿಯೆ ರಾಜ್ಯದ ಜನರು ಅವರಿಗೆ ‘ಹೆಂಗ್‌ಪುಂಗ್ಲಿ’ ಎಂಬ ಬಿರುದನ್ನೂ ನೀಡಿದ್ದಾರೆ. ಇಂತಹ ಜನರು ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸುವ ಶಿಕ್ಷಕರಿಗೆ ಕಾರ್ಯಾಗಾರ ಮಾಡುವುದು ತುಂಬಾ ದೊಡ್ಡ ದುರಂತ. ಇಡೀ ಕಾರ್ಯಕ್ರಮ ರಾಜಕೀಯ ಪ್ರೊಪಗಾಂಡ ಕಾರ್ಯಕ್ರಮವಾಗಿದೆ. ಇದಕ್ಕೆ ಬೆಂಬಲ ನೀಡುತ್ತಿರುವಂತಹ ಸರ್ಕಾರಿ ಅಧಿಕಾರಿಗಳು ಯಾವುದೆ ಪ್ರಜ್ಞೆ ಇಲ್ಲದ ಮುಠ್ಠಾಳರು” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಾವು ಹೊರಡಿಸಿರುವ ಸುತ್ತೋಲೆ ಬಗ್ಗೆ ಸ್ಪಷ್ಟೀಕರಣಕ್ಕಾಗಿ ಯಾದಗಿರಿ ಜಿಲ್ಲಾ ಪಂಚಾಯತ್‌ ಸಿಇಒ ಶಿಲ್ಪಾ ಶರ್ಮಾ ಅವರನ್ನು ಸಂಪರ್ಕಿಸಲು ನಾನುಗೌರಿ.ಕಾಂ ಪ್ರಯತ್ನಿಸಿದೆ. ಆದರೆ ಅವರು ಸಂಪರ್ಕಕ್ಕೆ ಲಭ್ಯವಾಗಿಲ್ಲ. ಅವರ ಪ್ರತಿಕ್ರಿಯೆ ಸಿಕ್ಕ ಕೂಡಲೇ ಇಲ್ಲಿ ಅಪ್‌ಡೇಟ್‌ ಮಾಡಲಾಗುವುದು.

ಇದನ್ನೂ ಓದಿ: ಇಸ್ಲಾಂ ಮತ್ತು ಅಂಬೇಡ್ಕರ್‌‌ ಬಗೆಗಿನ ಸುಳ್ಳುಗಳು; ಮಹಾ ಮಾನವತಾವಾದಿಗೆ ‘ಸೂಲಿಬೆಲೆ’ ಮಾಡಿದ ಅವಮಾನ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...