Homeಮುಖಪುಟಮಾನವ ಹಕ್ಕುಗಳ ವಿರುದ್ಧವಾಗಿ ನಡೆದುಕೊಳ್ಳುತ್ತಿರುವ ಮಾನವ ಹಕ್ಕುಗಳ ಆಯೋಗ: ತೀವ್ರ ಖಂಡನೆ

ಮಾನವ ಹಕ್ಕುಗಳ ವಿರುದ್ಧವಾಗಿ ನಡೆದುಕೊಳ್ಳುತ್ತಿರುವ ಮಾನವ ಹಕ್ಕುಗಳ ಆಯೋಗ: ತೀವ್ರ ಖಂಡನೆ

NHRCಯು ಭಯೋತ್ಪಾದನೆ ಮತ್ತು ನಕ್ಸಲಿಸಂನಂತಹ ದುಷ್ಟರ ವಿರುದ್ಧ ಹೋರಾಡಲು ಮಾನವ ಹಕ್ಕುಗಳು ತಡೆಗೋಡೆಯಾಗಿವೆಯೇ? ಎಂಬ ವಿಷಯದ ಕುರಿತು ಚರ್ಚಾಸ್ಪರ್ಧೆ ಹಮ್ಮಿಕೊಂಡಿದೆ.

- Advertisement -
- Advertisement -

ಕಳೆದ ವರ್ಷ ಸಾರ್ವಜನಿಕ ವೇದಿಕೆಯೊಂದರಲ್ಲಿ ಸುಪ್ರೀಂ ಕೋರ್ಟ್ ನ್ಯಾಯಾಧೀಶರಾಗಿದ್ದ ಅರುಣ್ ಮಿಶ್ರಾರವರು ಭಾರತದ ಪ್ರಧಾನಿ ನರೇಂದ್ರ ಮೋದಿಯವರನ್ನು ಅತಿಯಾಗಿ ಹೊಗಳಿ ತೀವ್ರ ಟೀಕೆಗೆ ಗುರಿಯಾಗಿದ್ದು ನಿಮಗೆಲ್ಲ ನೆನಪಿರಬಹುದು. ಅದೇ ಅರುಣ್ ಮಿಶ್ರಾರವರು ಸುಪ್ರೀಂ ಕೋರ್ಟ್ ನ್ಯಾಯಾಧೀಶ ಸ್ಥಾನದಿಂದ ನಿವೃತ್ತರಾದ ಕೂಡಲೇ ಅವರನ್ನು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರನ್ನಾಗಿ ಮೋದಿ ಸರ್ಕಾರ ನೇಮಿಸಿತ್ತು. ಅವರೀಗ ಮಾನವ ಹಕ್ಕುಗಳ ವಿರುದ್ಧವಾಗಿರುವ ಕಾರ್ಯಕ್ರಮವೊಂದನ್ನು ಆಯೋಜಿಸಿ ಮತ್ತೆ ತೀವ್ರ ಟೀಕೆಗೆ ಗುರಿಯಾಗಿದ್ದಾರೆ.

ಇಂದು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗವು “ಭಯೋತ್ಪಾದನೆ ಮತ್ತು ನಕ್ಸಲಿಸಂನಂತಹ ದುಷ್ಟರ ವಿರುದ್ಧ ಹೋರಾಡಲು ಮಾನವ ಹಕ್ಕುಗಳು ತಡೆಗೋಡೆಯಾಗಿವೆಯೇ? ಎಂಬ ವಿಷಯದ ಕುರಿತು ಚರ್ಚಾಸ್ಪರ್ಧೆಯನ್ನು ಹಮ್ಮಿಕೊಳ್ಳುವ ಮೂಲಕ ವಿವಾದ ಹುಟ್ಟು ಹಾಕಿದೆ. ಇಂದು ಆಯೋಗದ ಅಧಿಕೃತ ಟ್ವಿಟರ್ ಹ್ಯಾಂಡಲ್‌ನಲ್ಲಿ ಈ ಶೀರ್ಷಿಕೆಯನ್ನು ಘೋಷಿಸಿದ ಕೂಡಲೇ ಹಲವಾರು ವಲಯಗಳಿಂದ ವ್ಯಾಪಕ ಅಸಮಾಧಾನ ವ್ಯಕ್ತವಾಗಿದೆ.

ಆರ್‌ಟಿಐ ಕಾರ್ಯಕರ್ತರಾಗಿದ್ದು ಇತ್ತೀಚಿಗೆ ಟಿಎಂಸಿ ಸೇರಿರುವ ಸಾಕೇತ್ ಗೋಖಲೆಯವರು “ನಾವು ಎಷ್ಟು ಕೆಳಮಟ್ಟಕ್ಕೆ ಇಳಿದಿದ್ದೇವೆ. ಭಾರತದ ‘ಮಾನವ ಹಕ್ಕುಗಳನ್ನು ರಕ್ಷಿಸುವ ಸ್ವತಂತ್ರ ಸಂಸ್ಥೆ’ ಎಂದು ಹೇಳಲಾಗುವ ಆಯೋಗವು ‘ಚಿತ್ರಹಿಂಸೆ ಮತ್ತು ಹೆಚ್ಚುವರಿ ನ್ಯಾಯಾಂಗ ಹತ್ಯೆಗಳಿಗೆ ಮಾನವ ಹಕ್ಕುಗಳು ತಡೆಗೋಡೆಯಾಗಿದವೆ’ ಎಂದು ಚರ್ಚಿಸುತ್ತಿದೆ. ನಿಮ್ಮ ಬಗ್ಗೆ ನಾಚಿಕೆಯೆನಿಸುತ್ತಿದೆ. NHRC ನೀವು ಏನೇನೂ ಅಲ್ಲ” ಎಂದು ಕಿಡಿಕಾರಿದ್ದಾರೆ.

ಅಮ್ನೆಸ್ಟಿ ಇಂಟರ್‌ನ್ಯಾಷನಲ್‌ ಸಂಸ್ಥೆಯ ಭಾರತದ ಮಾಜಿ ಮುಖ್ಯಸ್ಥರಾಗಿದ್ದ ಆಕಾರ್ ಪಟೇಲ್‌ರವರು ವ್ಯಂಗ್ಯವಾಗಿ ಟ್ವೀಟ್ ಮಾಡಿದ್ದು, “ಹೌದು ನಾವು ಸಂಪೂರ್ಣವಾಗಿ ಮಾನವ ಹಕ್ಕುಗಳನ್ನು ನಾಶ ಮಾಡಬೇಕು” ಎಂದು ಬರೆದಿದ್ದಾರೆ.

ಮಾನವ ಹಕ್ಕುಗಳು ಮತ್ತು ಘನತೆ ಬಹಳ ಪವಿತ್ರವಾದವು. ಆದರೆ ಭಾರತದಲ್ಲಿ ಪೊಲೀಸ್‌ ಠಾಣೆಗಳಲ್ಲೇ ಅತಿ ಹೆಚ್ಚು ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತಿವೆ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ನ್ಯಾಯಮೂರ್ತಿ ಎನ್ ವಿ ರಮಣ ಕಳೆದ ಆಗಸ್ಟ್‌ನಲ್ಲಿ ಆತಂಕ ವ್ಯಕ್ತಪಡಿಸಿದ್ದಾರೆ. ನಕ್ಸಲಿಸಂ, ಭಯೋತ್ಪಾದನೆಯ ಹೆಸರಿನಲ್ಲಿಯೇ ಅತಿ ಹೆಚ್ಚು ಮಾನವ ಹಕ್ಕುಗಳು ಉಲ್ಲಂಘನೆಯಾಗುತ್ತಿವೆ ಎಂದು ದಾಖಲೆಗಳು ಹೇಳುತ್ತವೆ. ಇಂತಹ ಸಂದರ್ಭದಲ್ಲಿ ಮಾನವ ಹಕ್ಕುಗಳನ್ನು ಕಾಪಾಡಲು ವ್ಯಾಪಕವಾಗಿ ಕೆಲಸ ಮಾಡಲೇಂದು ಇರುವ ಸಂಸ್ಥೆಯೊಂದು ಮಾನವ ಹಕ್ಕುಗಳು ತಡೆಗೋಡೆಯಾಗಿವೆ ಎಂದು ಚರ್ಚಾಸ್ಪರ್ಧೆ ಇಟ್ಟಿರುವುದು ದುರಂತ ಎಂದು ಹಲವರು ಕಿಡಿಕಾರಿದ್ದಾರೆ.


ಇದನ್ನೂ ಓದಿ: ಪೊಲೀಸ್‌ ಠಾಣೆಗಳಲ್ಲೇ ಅತಿ ಹೆಚ್ಚು ಮಾನವ ಹಕ್ಕುಗಳ ಉಲ್ಲಂಘನೆ: CJI ರಮಣ ಆತಂಕ


ಆಗಸ್ಟ್‌ನಲ್ಲಿ ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರವು ದೆಹಲಿಯ ವಿಜ್ಞಾನ ಭವನದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಸಮಾರಂಭವೊಂದರಲ್ಲಿ ಮಾತನಾಡಿದ ಸಿಜೆಐ ರಮಣರವರು, “ಕಸ್ಟಡಿ ಚಿತ್ರಹಿಂಸೆ ಮತ್ತು ಇತರ ಪೊಲೀಸ್ ದೌರ್ಜನ್ಯಗಳು ನಮ್ಮ ಸಮಾಜದಲ್ಲಿ ಇನ್ನೂ ಚಾಲ್ತಿಯಲ್ಲಿರುವ ಸಮಸ್ಯೆಗಳು. ಇತ್ತೀಚಿನ ವರದಿಗಳ ಪ್ರಕಾರ, ಸೌಲಭ್ಯವುಳ್ಳ ವರ್ಗ ಸಹ ಪೊಲೀಸರ ಥರ್ಡ್ ಗ್ರೇಡ್ ಚಿಕಿತ್ಸೆಯಿಂದ (ಪೊಲೀಸರಿಂದ ಹಲ್ಲೆ, ಕಿರುಕುಳ) ತಪ್ಪಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ” ಎಂದು ಹೇಳಿಕೆ ನೀಡಿ ಮಾನವ ಹಕ್ಕುಗಳ ಉಲ್ಲಂಘನೆ ಬಗ್ಗೆ ಗಮನ ಸೆಳೆದಿದ್ದರು. ಆದರೆ ಅದಕ್ಕೆ ವಿರುದ್ಧವಾಗಿ ಪೊಲೀಸ್ ಮತ್ತು ಸೇನೆಗೆ ಹೆಚ್ಚಿನ ಅಧಿಕಾರ ಸಿಗಬೇಕು, ಮಾನವ ಹಕ್ಕುಗಳ ಬಗ್ಗೆ ಗಮನ ಕೊಡಬಾರದು ಎಂದು NHRC ವಾದಿಸುತ್ತಿದೆ.

NHRC ಯ ಅಧ್ಯಕ್ಷರಾಗಿರುವ ಇದೇ ಅರುಣ್ ಮಿಶ್ರಾರವರು ಸುಪ್ರೀಂ ಕೋರ್ಟ್ ನ್ಯಾಯಾಧೀಶರಾಗಿದ್ದಾಗ 2020ರ ಫೆಬ್ರವರಿ 22 ರಂದು ಅಂತಾರಾಷ್ಟ್ರೀಯ ನ್ಯಾಯಾಂಗ ಸಮ್ಮೇಳನದ ಉದ್ಘಾಟನಾ ಸಮಾರಂಭದ ವಂದಾನಾರ್ಪಣೆ ಭಾಷಣದಲ್ಲಿ “ಅಂತರರಾಷ್ಟ್ರೀಯ ಮಟ್ಟದಲ್ಲಿ ಮೆಚ್ಚುಗೆ ಪಡೆದ ದೂರದೃಷ್ಟಿಯ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರ ಉಸ್ತುವಾರಿ ಅಡಿಯಲ್ಲಿ ಭಾರತವು ಅಂತರರಾಷ್ಟ್ರೀಯ ಸಮುದಾಯದ ಜವಾಬ್ದಾರಿಯುತ ಮತ್ತು ಅತ್ಯಂತ ಸ್ನೇಹಪರ ಸದಸ್ಯ ರಾಷ್ಟ್ರವಾಗಿದೆ. ಮೋದಿ ಜಾಗತಿಕವಾಗಿ ಯೋಚಿಸುವ ಮತ್ತು ಸ್ಥಳೀಯವಾಗಿ ಕಾರ್ಯನಿರ್ವಹಿಸುವ ಬಹುಮುಖ ಪ್ರತಿಭೆ” ಎಂದು ಬಣ್ಣಿಸಿದ್ದರು.

ಆಗ ಇಂತಹ ಹೇಳಿಕೆಗಳು ನ್ಯಾಯಾಂಗದ ಸ್ವಾತಂತ್ರ್ಯದ ಬಗ್ಗೆ ತಪ್ಪು ಅಭಿಪ್ರಾಯಗಳು ಮೂಡುವಂತಾಗಲು ಕಾರಣವಾಗುತ್ತವೆ ಎಂದು ಹಲವರು ವಿರೋಧ ವ್ಯಕ್ತಪಡಿಸಿದ್ದರು. ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್ ಈ ಹೇಳಿಕೆಯ ವಿರುದ್ಧ ನಿರ್ಣಯ ಅಂಗೀಕರಿಸಿತ್ತು.


ಇದನ್ನೂ ಓದಿ: ಪ್ರಧಾನಿ ಮೋದಿ ಹೊಗಳಿದ ನ್ಯಾಯಮೂರ್ತಿ ಅರುಣ್ ಮಿಶ್ರಾ ವರ್ತನೆಗೆ ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್ ​​ಖಂಡನೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...